ಡಿ.ಕೆ.ಸುರೇಶ್‌ ವಿರುದ್ಧ ಎಚ್‌ಡಿಕೆ ಗರಂ : ನಂದೆ ಅಂತಾರೆಂದು ವ್ಯಂಗ್ಯ

Kannadaprabha News   | Asianet News
Published : Nov 20, 2020, 03:27 PM ISTUpdated : Nov 20, 2020, 03:56 PM IST
ಡಿ.ಕೆ.ಸುರೇಶ್‌ ವಿರುದ್ಧ ಎಚ್‌ಡಿಕೆ ಗರಂ : ನಂದೆ ಅಂತಾರೆಂದು ವ್ಯಂಗ್ಯ

ಸಾರಾಂಶ

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ  ಸಂಸದ ಡಿಕೆ ಸುರೇಶ್  ವಿರುದ್ಧ  ವಾಗ್ದಾಳಿ ನಡೆಸಿದ್ದಾರೆ. ವ್ಯಂಗ್ಯವಾಗಿ ಮಾತನಾಡಿದ್ದಾರೆ

ಚನ್ನಪಟ್ಟಣ (ನ.20):  ಸಂಸದ ಡಿ.ಕೆ.ಸುರೇಶ್‌ ವಿರುದ್ಧ ಗರಂ ಆಗಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ಪ್ರವಾಸ ಕೈಗೊಂಡ ವೇಳೆ ಸಹ ಅವರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

ಕ್ಷೇತ್ರಕ್ಕೆ 30 ಕೋಟಿ ರು. ವೆಚ್ಚದ ಹೆರಿಗೆ ಆಸ್ಪತ್ರೆಯನ್ನು ಸರ್ಕಾರದ ಜತೆ ಮಾತುಕತೆ ನಡೆಸಿ ಮಂಜೂರು ಮಾಡಿಸಿದ್ದೇನೆ. ದೆಹಲಿಯಿಂದ ಅನುಮತಿ ಬರಲಿದ್ದು, ಬಂದ ಬಳಿಕ ಇದನ್ನು ನಾನು ಮಾಡಿದ್ದು ಎಂದು ಸಂಸದರು ಹೇಳಿಕೊಳ್ಳಲಿದ್ದಾರೆ ಎಂದು ವ್ಯಂಗ್ಯವಾಡಿದರು.

ಜೆಡಿಎಸ್ ವಲಯದಿಂದ ಮಹತ್ವದ ಸುದ್ದಿ : ಬಿಜೆಪಿಗೆ ಕೈ ಜೋಡಿಸಲು ಮುಂದಾದ್ರ ಗೌಡ್ರು ...

ಕ್ಷೇತ್ರಕ್ಕೆ ಬೇಕಾದ ಅನುದಾನವನ್ನು ಬಿಡುಗಡೆ ಮಾಡಿಸಿದ್ದೇನೆ. ಗುದ್ದಲಿ ಪೂಜೆಗೆ ಬರುವ ಹವ್ಯಾಸವನ್ನೇ ನಾನು ಇಟ್ಟುಕೊಂಡಿಲ್ಲ, ಆದರೆ, ನಾನು ಅನುಷ್ಟಾನಗೊಳಿಸಿದ ಯೋಜನೆಗಳನ್ನು ನಾನು ಮಾಡಿದ್ದೇನೆ ಎಂದು ಕೆಲವರು ಹೇಳಿಕೊಳ್ಳುತ್ತಾರೆ. ಈ ಕಾರಣದಿಂದ ಪಕ್ಷದ ಮುಖಂಡರು ನಾನೇ ಬಂದು ಭೂಮಿಪೂಜೆ ನೆರವೇರಿಸುವಂತೆ ಒತ್ತಾಯಿಸಿದರು ಎಂದು ಹೆಸರೇಳದೆ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದರು.

ಸತ್ತೇಗಾಲ ಯೋಜನೆಯ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಸತ್ತೆಗಾಲ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ. ನಾನು ಅಲ್ಲಿಗೆ ಹೋಗಿ ಫೋಟೊ ತೆಗೆಸಿಕೊಳ್ಳಬೇಕಿಲ್ಲ ಎಂದು ರಾಜಕೀಯ ಎದುರಾಳಿಗಳ ವಿರುದ್ಧ ಪರೋಕ್ಷವಾಗಿ ಅಣಕ ವಾಡಿದರು.

PREV
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
ಎಚ್‌ಡಿಕೆ ಮನುವಾದಿ ಆಗಿದ್ದಾರೆ ಎಂದ ಸಿದ್ದು: ಸಿದ್ದರಾಮಯ್ಯ ಮಜಾವಾದಿ ಎಂದ ಎಚ್‌ಡಿಕೆ