ರಾಸಲೀಲೆ ಕೇಸ್ : 'ಸಿಡಿ ಇದೆ ಅಂತ ಹೆದರಿಸೋರನ್ನ ಒದ್ ಒಳಗೆ ಹಾಕಿ'

By Suvarna NewsFirst Published Mar 5, 2021, 12:14 PM IST
Highlights

ರಾಜ್ಯದಲ್ಲಿ ಈಗ ರಾಸಲೀಲೆ ಪ್ರಕರಣದ್ದೇ ಸದ್ದು ಜೋರಾಗಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಈ ರೀತಿ ಸಿಡಿ ಇದೆ ಅಂತ ಹೆದರಿಸೋರನ್ನ ಒದ್ ಒಳಗೆ ಹಾಕಿ ಎಂದು ಆಕ್ರೋಶ ಹೊರಹಾಕಿದ್ದಾರೆ. 

 ಮೈಸೂರು (ಮಾ.05): ರಾಜಕಾರಣಿಗಳ ಸಿಡಿ ಇದೆ ಎನ್ನುವವರು ಮೊದಲು ಅಂತವರನ್ನ ಒದ್ದು ಎರೋಪ್ಲೇನ್ ಹತ್ತಿಸಿ. ಅವರನ್ನ ಬಂಧಿಸಿ ಅವರ ಬಳಿ ಇರುವ ಸಿಡಿಗಳನ್ನ ಸರ್ಕಾರವೇ ಜನರ ಮುಂದೆ ಬಿಡುಗಡೆ ಮಾಡಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. 

ಮೈಸೂರಿನಲ್ಲಿಂದು ಮಾತನಾಡಿದ ಅವರು ಸಿಡಿ ಇದೆ ಎಂದು ಕೆಲವರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಇದು ಬ್ಲ್ಯಾಕ್‌ಮೇಲ್‌ನ ಕಾರ್ಯತಂತ್ರ. ಇದಕ್ಕೆ ಪುಷ್ಠಿ ಕೊಟ್ಟು ಬೆಳಸಬೇಡಿ.  ಅದ್ಯಾರೋ ಒಬ್ಬ ಮಾಜಿ ಸಿಎಂ ಅದೆಲ್ಲೋ ಹೋಗಿ ಬರುತ್ತಾರೆ. ಅದರ ಸಿಡಿ ನನ್ನ ಬಳಿ ಇದೆ ಅಂತಾನೆ ಎಂದರು.

ಜಾರಕಿಹೊಳಿ ರಾಸಲೀಲೆ : ಹೆಣ್ಣನ್ನ ಬಳಸಿಕೊಂಡಿದ್ದಲ್ಲಿ ಗಲ್ಲಿಗೆ ಹಾಕಲಿ ಎಂದ ಬಿಜೆಪಿ ಶಾಸಕ ..

ರಾಜ್ಯದಲ್ಲಿ ದೇವೇಗೌಡ, ಎಸ್‌ಎಂ ಕೃಷ್ಣ ಹಾದಿಯಾಗಿ ತುಂಭಾ ಜನ ಇದ್ದಾರೆ. ಯಾರು ಆ ಮಾಜಿ ಸಿಎಂ ಎಂದು ಬಾಯಿ ಬಿಡಿಸಿ. ಸುಮ್ಮನೆ ನಾವು ಹೊರಗೆ ಓಡಾಡುವಾಗ ಮುಜುಗರ ತರಬೇಡಿ.  ಹಿಂದೆ ಅದ್ಯಾವುದೋ ಆಂಕರ್ ವಿಚಾರದಲ್ಲೂ ನನ್ನ ಹೆಸರು ತಂದರು. ಆಗಲು ಸರಿಯಾಗಿ ಜಾಡಿಸಿದ್ದೇ‌ನೆ. ನನಗೆ ಈ ವಿಚಾರದಲ್ಲಿ ಯಾವುದೇ ಭಯವು ಇಲ್ಲ. ಈ ಪ್ರಕರಣದಲ್ಲಿ ನಾನು ತುಂಭಾ ಕ್ಲೀನ್ ಆಗಿದ್ದೇನೆ. ಆದರೆ ನನ್ನ ಉದ್ದೇಶ ಇಂತಹ ಬ್ಲ್ಯಾಕ್ ಮೇಲ್‌ಗಳು ನಿಲ್ಲಬೇಕು. ಇಂತಹ ಪ್ರಕರಣಗಳು ಹೇಸಿಗೆ ಬರುವಂತ ಸ್ಥಿತಿ ನಿರ್ಮಾಣ ಮಾಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು.

5 ಕೋಟಿ ಡೀಲ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ  ಸಿಡಿ ಪ್ರಕರಣದಲ್ಲಿ ನಡೆದಿದೆ 5 ಕೋಟಿ ಡೀಲ್. ಇದು ನನಗೆ ಬಂದಿರುವ ಮಾಹಿತಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು. 

ಮೈಸೂರಿನಲ್ಲಿಂದು ಮಾತನಾಡಿದ ಕುಮಾರಸ್ವಾಮಿ ಕಳೆದು ಮೂರು ತಿಂಗಳಿಂದ ಈ‌ ಡೀಲ್ ವ್ಯವಹಾರ ನಡೆದಿದೆ. ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿ ಇದ್ದಾರೆ. ಇದನ್ನ ತನಿಖೆ ಮಾಡಿಸುವ ಜವಬ್ದಾರಿ ಸರ್ಕಾರದ್ದು. ನಾನು ಈ ಪ್ರಕರಣ ನೋಡಿ ಖುಷಿ ಪಡುವವನಲ್ಲ.  ಸರ್ಕಾರ ಬೀಳಿಸಿದರು ಎನ್ನುವ ಕಾರಣಕ್ಕೆ ನಾನು ಒಂದು ಕಲ್ಲು ಹೊಡೆಯಬೇಕು ಅಂತ ಹೊಡೆಯೋದಿಲ್ಲ ಎಂದರು. 

ಇದೀಗ ಸಿಡಿ ಪ್ರಕರಣ ಸಂಬಂಧ ಹಲವು ರೀತಿಯ ವ್ಯಾಖ್ಯಾನ ಶುರುವಾಗಿದೆ. ಪ್ರಕರಣ ಹಳ್ಳ ಹಿಡಿಯುವಂತದ್ದಲ್ಲ. ಆ ಮಂತ್ರಿನಾ ರಾಜೀನಾಮೆ ಕೊಡಿಸಬೇಕೆಂಬ ಉದ್ದೇಶ ಇತ್ತು. ಇದೀಗಾ ಆ ರಾಜೀನಾಮೆ ಕೊಡಿಸುವಲ್ಲಿ ಅವರು ಸಫಲರಾಗಿದ್ದಾರೆ. ಇದೀಗ ಆ ಹೆಣ್ಣು ಮಗಳನ್ನ ಕಟ್ಟಿಕೊಂಡು ಅವರಿಗೆ ಏನು? ಅವರಿಬ್ಬರೇ ವಿಡಿಯೋ ಮಾಡಿಕೊಂಡಿದ್ದಾರೆ. ಆದರೆ ಆ ವಿಡಿಯೋ ಹೊರಗೆ ಕೊಟ್ಟವರು ಯಾರೆನ್ನುವುದು ಮಾತ್ರ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. 

ಇಂತಹ ವಿಚಾರದಲ್ಲಿ ಸುಮ್ಮನೆ ಕಲ್ಲು ಹೊಡೆಯಬಾರದು. ಇವತ್ತು ರಾಜಕೀಯ ತುಂಬಾ ಕಲುಷಿತವಾಗಿದೆ. ಕೆಸರು ನಮ್ಮ‌ ಮೇಲೆ ನಾವೇ ಎರಚಿಕೊಂಡ ಹಾಗೆ.  ಇಂತಹ ಪ್ರಕರಣದಿಂದ ನಮ್ಮ‌ನ್ನು ಜನ ತಪ್ಪಾಗಿ ತಿಳಿದು ಕೊಳ್ಳುತ್ತಾರೆ. ಮೊದಲು ಇಂತವರನ್ನ ಒದ್ದು ಒಳಗೆ ಹಾಕಿ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. 

click me!