ಜೆಡಿಎಸ್ ಮುಖಂಡ ಎಚ್.ಡಿ ರೇವಣ್ಣರಿಂದ ಗಂಭೀರ ಆರೋಪ

Kannadaprabha News   | Asianet News
Published : Jan 09, 2020, 08:39 AM IST
ಜೆಡಿಎಸ್ ಮುಖಂಡ ಎಚ್.ಡಿ ರೇವಣ್ಣರಿಂದ ಗಂಭೀರ ಆರೋಪ

ಸಾರಾಂಶ

ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ವಿರುದ್ಧ ರೇವಣ್ಣ ಆರೋಪಿಸಿದ್ದು, ಹಾಸನ ಅಭಿವೃದ್ಧಿಗೆ ತಡೆ ನಿಡಲಾಗಿದೆ ಎಂದಿದ್ದಾರೆ.

ಹಾಸನ [ಜ.09]:  ಹೇಮಾವತಿ ಯೋಜನೆ, ಕಾವೇರಿ ಕಣಿವೆ ಸೇರಿದಂತೆ ಹಾಸನ ಜಿಲ್ಲೆಗೆ ಸಂಬಂಧಿಸಿದ ಅನೇಕ ನೀರಾವರಿ ಯೋಜನೆಗಳ ಸುಮಾರು  5 ಸಾವಿರ ಕೋಟಿ ರು.  ಕಾಮಗಾರಿಗಳನ್ನು ಸರ್ಕಾರ ತಡೆ ತಡೆಹಿಡಿದಿದೆ. 

ಈ ಮೂಲಕ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಆರೋಪಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ಯಾವುದೇ ಹೊಸ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಈ ಹಿಂದೆ ಅನುಮೋದನೆ ದೊರೆತಿದ್ದ ಅನೇಕ ಯೋಜನೆಗಳಿಗೆ ತಡೆ ಹಿಡಿದಿದೆ ಎಂದು ತಿಳಿಸಿದರು.

'ಶೋಭಾ ಹೇಳಿದ್ರು ಅಂಥ ಕೊಟ್ಟಿದ್ದೆಲ್ಲ ವಾಪಸ್ ತಗೋತಿರಾ BSY'...

ಕೃಷಿ, ತೋಟಗಾರಿಕೆ ಇಲಾಖೆಗಳಿಗೆ ಬಿಡುಗಡೆ ಮಾಡಲಾಗಿದ್ದ ಅನುದಾನಗಳನ್ನೂ ತಡೆ ಹಿಡಿಯಲಾಗಿದೆ. ಸುವರ್ಣ ಕರ್ನಾಟಕ ಮಾಡುತ್ತೇವೆ ಎಂದು ಹೊರಟ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದು ಹೀಗೆ ಮುಂದುವರಿದರೆ ಮುಂದೊಂದು ದಿನ ಅವರೇ ಸಮಸ್ಯೆಗೆ ಸಿಲುಕಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

PREV
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣ ಆಪರಾಧಿ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ, ಸರ್ಕಾರ ಮಹತ್ವದ ಆದೇಶ
Bengaluru: ಬಾರದ ಲೋಕಕ್ಕೆ ಪಯಣ ಬೆಳೆಸಿದ ಮಹಿಳಾ ಅಧಿಕಾರಿ ಎಸ್‌ಪಿ ಲಾವಣ್ಯ ಎನ್.