ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಪ್ರಭಾವಿ ಮುಖಂಡ

Published : Jan 17, 2021, 10:34 AM IST
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಪ್ರಭಾವಿ ಮುಖಂಡ

ಸಾರಾಂಶ

ಜೆಡಿಎಸ್ ಪ್ರಭಾವಿ ಮುಖಂಡರೋರ್ವರು ಇದೀಗ ಪಕ್ಷ ತೊರೆದು ಕೈ ಹಿಡಿದಿದ್ದಾರೆ. ಪ್ರಮುಖ ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. 

ತುರುವೇಕೆರೆ (ಜ.17): ತಾಲೂಕಿನ ಸಮಾಜ ಸೇವಕ ಗುಡ್ಡೇನಹಳ್ಳಿಯ ಮಂಜುನಾಥ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್ ಕೆ ನಾಗೇಶ್ ಪ್ರಸನ್ನಕುಮಾರ್ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಚೌದ್ರಿ ಟಿ ರಂಗಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. 

ತಾಲೂಕಿನಲ್ಲಿ ಜೆಡಿಎಸದ ಪಕ್ಷ ಸಧೃಡಗೊಳ್ಳಲು ತಮ್ಮ ತಂದೆ ಉಮೇಶಣ್ಣ ಹಾಗೂ ತಾವೂ ಸೇರದಿಂತೆ ಹಲವಾರು ಮುಖಂಡರು ಶ್ರಮಪಟ್ಟಿದ್ದೆವು. ಆದರೆ ಮಾಜಿ ಶಾಸಕ ಎಂ.ಟಿ ಕೃಷ್ಣಪ್ಪನವರು ಪಕ್ಷಕ್ಕೆ ದುಡಿದವರನ್ನು ಕಡೆಗಣಿಸಿದರು. 

ಸಚಿವರೇ, ಪಕ್ಷ ಸಂಘಟನೆಗೆ ಟೈಂ ಕೊಡಿ: ಅಮಿತ್‌ ಶಾ ...

ಅವರು ಶಾಸಕರಾಗಲು ನಮ್ಮೆಲ್ಲರ ಶ್ರಮ ಇದೆ.ಆದರೆ ಕನಿಷ್ಠ ಸೌಜನ್ಯವನ್ನೂ ತೋರಿಸದೇ ತಾತ್ಸಾರ ಮನೋಭಾವದಿಂದ ನೋಡಿದರು.  ಇದರಿಂದ ನೊಂದು ಕಾಂಗ್ರೆಸ್ ಸೇರಿದ್ದಾಗಿ ಹೇಳಿದರು. 

ಪಕ್ಷ ಸೇರ್ಪಡೆ ವೇಳೆ ಕಾಂಗ್ರೆಸಿನ ಹಲವು ಮುಖಂಡರು ಇದ್ದರು.  

PREV
click me!

Recommended Stories

ಆರ್‌ಸಿಬಿ ಫ್ಯಾನ್ಸ್‌ಗೆ ಬಿಗ್‌ ಅಪ್ಡೇಟ್‌; ಹೊಸತನ ಬಂದರೂ, ಹಳೆಯ ಗುರುತು ಬಿಟ್ಟುಕೊಡದ ಬಿರ್ಲಾ!
ದೇವರೇ.. ದರ್ಶನ್ ಸಂಕಷ್ಟ ದೂರವಾಗಲಿ: ಮಗನಿಗಾಗಿ ವಿಶೇಷ ಪೂಜೆ ಸಲ್ಲಿಸಿದ ತಾಯಿ ಮೀನಾ ತೂಗುದೀಪ