ಶಿಷ್ಯೆಗಾಗಿ ಸರ್ವೆಗೆ ಮುಂದಾದ IAS ಅಧಿಕಾರಿ : ಸಾ.ರಾ ರಾಜಕೀಯ ನಿವೃತ್ತಿ ಸವಾಲ್

Kannadaprabha News   | Asianet News
Published : Sep 07, 2021, 07:32 AM ISTUpdated : Sep 07, 2021, 08:44 AM IST
ಶಿಷ್ಯೆಗಾಗಿ ಸರ್ವೆಗೆ ಮುಂದಾದ IAS ಅಧಿಕಾರಿ : ಸಾ.ರಾ ರಾಜಕೀಯ ನಿವೃತ್ತಿ ಸವಾಲ್

ಸಾರಾಂಶ

ತನ್ನ ವಿರುದ್ಧ ಸರ್ವೆ ಆಯುಕ್ತ ಮೌನೀಶ್‌ ಮುದ್ಗಿಲ್‌ಗೆ ಭೂ ಒತ್ತುವರಿ ಆರೋಪ ತನಿಖೆ ನಡೆಸುತ್ತಿರುವುದನ್ನು ಸ್ವಾಗತಿಸುತ್ತೇನೆ. ಅವರು ತಮ್ಮ ಶಿಷ್ಯೆಗಾಗಿ ತರಾತುರಿಯಲ್ಲಿ ತನಿಖೆಗೆ ಮುಂದಾಗಿದ್ದಾರೆ ಶಾಸಕ ಸಾ.ರಾ. ಮಹೇಶ್‌ ವ್ಯಂಗ್ಯ

ಮೈಸೂರು (ಸೆ.07):  ತನ್ನ ವಿರುದ್ಧ ಸರ್ವೆ ಆಯುಕ್ತ ಮೌನೀಶ್‌ ಮುದ್ಗಿಲ್‌ಗೆ ಭೂ ಒತ್ತುವರಿ ಆರೋಪದ ಕುರಿತು ತನಿಖೆ ನಡೆಸುತ್ತಿರುವುದನ್ನು ಸ್ವಾಗತಿಸುತ್ತೇನೆ. ಅವರು ತಮ್ಮ ಶಿಷ್ಯೆಗಾಗಿ ತರಾತುರಿಯಲ್ಲಿ ತನಿಖೆಗೆ ಮುಂದಾಗಿದ್ದಾರೆ ಎಂದು ಶಾಸಕ ಸಾ.ರಾ. ಮಹೇಶ್‌ ವ್ಯಂಗ್ಯವಾಡಿದ್ದಾರೆ.

ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ತನ್ನ ಮೇಲೆ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂಬುದಾಗಿ ಸವಾಲು ಹಾಕಿದ್ದಾರೆ.

ಈಗ ಮತ್ತೋರ್ವ ಐಎಎಸ್ ಅಧಿಕಾರಿ ವಿರುದ್ಧ ಸಾ ರಾ ಅಸಮಾಧಾನ

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಕಾಏಕಿ ಸರ್ವೇ ಮಾಡಿ ತನಿಖೆ ನಡೆಸುತ್ತಿರುವುದು ಕಾನೂನಿಗೆ ವಿರುದ್ಧವಾದದ್ದು ಎಂದರು.

ಇದೇವೇಳೆ ರೋಹಿಣಿ ಸಿಂಧೂರಿಯವರು ಕಾರಿನಲ್ಲಿ ಹೋಗುವಾಗ ಆಕ್ಸಿಡೆಂಟ್‌ ಮಾಡಿ ತಿರುಚಿರುವ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ಸದನದಲ್ಲಿ ಚರ್ಚಿಸುತ್ತೇನೆ. ಭ್ರಷ್ಟತೆ ಮತ್ತು ಪ್ರಾಮಾಣಿಕತೆ ನಡುವೆ ನಡೆಯುತ್ತಿರುವ ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ. ಮೌನೇಶ್‌ ಮುದ್ಗಿಲ್‌ ಮತ್ತು ರೋಹಿಣಿ ಸಿಂಧೂರಿ ಅವರ ಬ್ಲಾಕ್‌ಮೇಲ್‌ಗೆ ಹೆದರುವವನು ನಾನಲ್ಲ ಎಂದರು.

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!