ಮತ್ತೊಮ್ಮೆ ಭಾರತ ವಿಶ್ವ ನಾಯಕನಾಗಿಸಲು ಕೈಜೋಡಿಸಿ: ಥಾವರಚಂದ

By Kannadaprabha NewsFirst Published Feb 5, 2023, 12:49 PM IST
Highlights

ಭವ್ಯವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ಮತ್ತೊಮ್ಮೆ ವಿಶ್ವದ ನಾಯಕನನ್ನಾಗಿ ಮಾಡುವ ಕರ್ತವ್ಯದ ಸಮಯವಾಗಿದೆ. ಪ್ರತಿಯೊಬ್ಬ ನಾಗರಿಕ ಸಕ್ರಿಯವಾಗಿ ತೊಡಗಿಸಿಕೊಂಡು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ರಾಜ್ಯಪಾಲ ಥಾವರಚಂದ ಗೆಹಲೋತ್‌ ಕರೆ ನೀಡಿದರು.

ಹೊಸಪೇಟೆ (ಫೆ.5) :

ಭವ್ಯವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ಮತ್ತೊಮ್ಮೆ ವಿಶ್ವದ ನಾಯಕನನ್ನಾಗಿ ಮಾಡುವ ಕರ್ತವ್ಯದ ಸಮಯವಾಗಿದೆ. ಪ್ರತಿಯೊಬ್ಬ ನಾಗರಿಕ ಸಕ್ರಿಯವಾಗಿ ತೊಡಗಿಸಿಕೊಂಡು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ರಾಜ್ಯಪಾಲ ಥಾವರಚಂದ ಗೆಹಲೋತ್‌ ಕರೆ ನೀಡಿದರು.

ವಿಜಯನಗರದ ಕೊಟ್ಟೂರಿನಲ್ಲಿ ಶ್ರೀತರಳಬಾಳು ಜಗದ್ಗುರು ಬೃಹನ್ಮಠ ಆಯೋಜಿಸಲಾಗಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

 

ಪ್ರಧಾನಿ ಮೋದಿ ಗುಜರಾತ್‌ನ ಕಟುಕ ಎಂದ ಪಾಕ್ ಸಚಿವನಿಗೆ ಭಾರತ ಸೇರಿ ವಿಶ್ವನಾಯಕರ ಮಂಗಳಾರತಿ!

ಶ್ರೀತರಳಬಾಳು ಜಗದ್ಗುರು ಬೃಹನ್ಮಠ, ಸದಾಚಾರ ಮತ್ತು ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ನಾಡು, ನಾಡಿನ ಪ್ರಸಿದ್ಧ ಮಠಗಳಲ್ಲಿ ಒಂದಾಗಿದೆ.ಅನೇಕ ವರ್ಷಗಳ ಇತಿಹಾಸವನ್ನು ಹೊಂದಿರುವ ಈ ಮಠ ಸಾಮಾಜಿಕ-ಶೈಕ್ಷಣಿಕ ಪ್ರಗತಿಗೆ ಗಣನೀಯ ಕೊಡುಗೆ ನೀಡಿದೆ. ಬೃಹನ್ಮಠದ ಮೊದಲ ಪ್ರೌಢಶಾಲೆಯನ್ನು 1946 ರಲ್ಲಿ ಸಿರಿಗೆರೆಯಲ್ಲಿ ಈ ಬೃಹನ್ಮಠದ 20ನೇ ಅರ್ಚಕ ಶ್ರೀಶಿವಕುರ್ಮಾ ಶಿವಾಚಾರ್ಯ ಮಹಾಸ್ವಾಮಿಜಿಯವರು ಎಲ್ಲರಿಗೂ ಅಮೂಲ್ಯವಾದ ಶಿಕ್ಷಣ ನೀಡುವ ಉದ್ದೇಶದಿಂದ ಪ್ರಾರಂಭಿಸಿದರು.

ಚಿಂತನಶೀಲ ಮತ್ತು ಸಂವೇದನಾಶೀಲ ಬೃಹನ್ಮಠದ 21ನೇ ಮಹಾಸ್ವಾಮೀಜಿ, ಡಾ. ಶಿವಮೂರ್ತಿ ಶಿವಾಚಾರ್ಯ ಅವರು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಪೋಷಕರಾಗಿದ್ದಾರೆ.ಸಮಾಜದಲ್ಲಿನ ಅಸಮಾನತೆ, ಬಡತನ, ಅನಕ್ಷರತೆ ಹೋಗಲಾಡಿಸಲು ನೀವು ಅನೇಕ ಸಕಾರಾತ್ಮಕ ಕ್ರಮಗಳನ್ನು ಕೈಗೊಂಡಿದ್ದೀರಿ ಮತ್ತು ಮಠದಿಂದ ಗ್ರಾಮೀಣಾಭಿವೃದ್ಧಿಗೆ ಅನೇಕ ಯೋಜನೆ ಮಾಡಲಾಗಿದೆ ಎಂದು ಹೇಳಿದರು.

ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಅವರು ವೈಜ್ಞಾನಿಕ ಮತ್ತು ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾಗಿದ್ದಾರೆ.ಅನೇಕ ಕಂಪ್ಯೂಟರ್‌ ಸಾಫ್ಟೆವೇರ್‌ ಅನ್ನು ಅಭಿವೃದ್ಧಿಪಡಿಸಿದ್ದು, ಅತ್ಯುನ್ನತ ಜ್ಞಾನ ಹೊಂದಿದ್ದಾರೆ. ಇಂತಹ ಮಹಾಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗವಹಿಸಿದ್ದು ಬಹಳ ಸಂತಸ ತಂದಿದೆ ಎಂದರು.

ಭಾರತೀಯ ಧರ್ಮ ಮತ್ತು ಸಂಸ್ಕೃತಿ ಇತ್ಯಾದಿಗಳು ಸನಾತನವಾಗಿದ್ದು, ನಮ್ಮ ಸಂತರು, ಆಚಾರ್ಯರು ಮತ್ತು ಋುಷಿಮುನಿಗಳು ಅನಾದಿ ಕಾಲದಿಂದಲೂ ನಿರಂತರವಾಗಿ ರಕ್ಷಿಸುತ್ತಾ ಬಂದಿದ್ದಾರೆ ಮತ್ತು ವಿಶ್ವ ವೇದಿಕೆಯಲ್ಲಿ ಧರ್ಮ,ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಧ್ವಜ ಹಾರಿಸಿದ್ದಾರೆ. ನಮ್ಮ ಧರ್ಮವು ಸರ್ವಧರ್ಮ ಸಮಭವ ಮತ್ತು ವಸುಧೈವ ಕುಟುಂಬಕಂ ಎಂಬ ಮನೋಭಾವದಿಂದ ಪ್ರೇರಿತವಾಗಿದೆ.ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಭ್ರಾತೃತ್ವ, ವಿಶ್ವ ಶಾಂತಿ ಮತ್ತು ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ ಎಂದು ತಿಳಿಸಿದರು.

45 ಗಂಟೆ, 20 ಸಭೆ, 10 ವಿಶ್ವನಾಯಕರ ಭೇಟಿ; ಜಿ20ಯಲ್ಲಿ ಇದು ಪ್ರಧಾನಿ ಮೋದಿ ವೇಳಾಪಟ್ಟಿ!

ಸಮಾರಂಭದಲ್ಲಿ ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ,ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಗವಿಸಿದ್ದೇಶ್ವರ ಮಹಾಸಂಸ್ಥಾನದ, ವಾಸವಿ ಮಠದ ಮಹಾಸ್ವಾಮಿ, ಶ್ರೀಸಚ್ಚಿದಾನಂದ ಸರಸ್ವತಿ, ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಸಂಸದರಾದ ಸಿದ್ದೇಶ್ವರ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

click me!