'ದೇವಸ್ಥಾನದ ತೀರ್ಥಕ್ಕಿಂತ ಬಾರ್‌ ತೀರ್ಥವೇ ಜನರಿಗೆ ಬೇಕಾಗಿದೆ'

Kannadaprabha News   | Asianet News
Published : May 06, 2020, 08:21 AM ISTUpdated : May 18, 2020, 06:14 PM IST
'ದೇವಸ್ಥಾನದ ತೀರ್ಥಕ್ಕಿಂತ ಬಾರ್‌ ತೀರ್ಥವೇ ಜನರಿಗೆ ಬೇಕಾಗಿದೆ'

ಸಾರಾಂಶ

ಮದ್ಯ ಅಂಗಡಿಗಳನ್ನು ರಾಜ್ಯ ಸರ್ಕಾರ ತೆರದಿದೆ| ದೇವಸ್ಥಾನವನ್ನು ಏಕೆ ತೆರೆದಿಲ್ಲ ಎಂದು ಜನರು ಪ್ರಶ್ನಿಸದೆ ಇರುವುದು ದುರ್ದೈವದ ಸಂಗತಿ: ಕಾಗಿನೆಲೆಯ ಕನಕಪೀಠದ ನಿರಂಜನಾನಂದಪುರಿ ಸ್ವಾಮೀಜಿ|

ಹಾವೇರಿ(ಮೇ.06): ಕೊರೋನಾ ವೈರಸ್‌ ಭೀತಿಯ ನಡುವೆಯೂ 42 ದಿನಗಳಿಂದ ಸ್ಥಗಿತಗೊಂಡಿದ್ದ ಮದ್ಯದಂಗಡಿಗಳನ್ನು ರಾಜ್ಯ ಸರ್ಕಾರ ಸೋಮವಾರದಿಂದ ಪುನರಾರಂಭಿಸಿದೆ. 

ಈ ಬಗ್ಗೆ ಮಾತನಾಡಿದ ಕಾಗಿನೆಲೆಯ ಕನಕಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು, ಮದ್ಯ ಅಂಗಡಿಗಳನ್ನು ರಾಜ್ಯ ಸರ್ಕಾರ ತೆರದಿದೆ. ಆದರೆ, ದೇವಸ್ಥಾನವನ್ನು ಏಕೆ ತೆರೆದಿಲ್ಲ ಎಂದು ಜನರು ಪ್ರಶ್ನಿಸದೆ ಇರುವುದು ದುರ್ದೈವದ ಸಂಗತಿ ಎಂದು  ಬೇಸರ ವ್ಯಕ್ತಪಡಿಸಿದ್ದಾರೆ. 

ಗ್ರೀನ್‌ಝೋನಲ್ಲಿದ್ದ ಹಾವೇರಿಗೆ ಕಂಟಕವಾದ ಮುಂಬೈ ಲಾರಿ

ಈ ಕುರಿತು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಅವರು ಅಸಮಾಧಾನ ವ್ಯಕ್ತಪಡಿಸಿರುವ ಶ್ರೀಗಳು, ಎರಡು ದಿನಗಳಿಂದ ಮದ್ಯದಂಗಡಿಗಳನ್ನು ತೆರೆಯಲಾಗಿದೆ. ಆದರೆ, ದೇವಸ್ಥಾನ ತೆರೆದಿಲ್ಲ. ಈ ಕುರಿತು ಭಕ್ತರು ಯಾರೂ ಪ್ರಶ್ನಿಸಿಲ್ಲ. ಇದನ್ನು ನೋಡಿದರೆ ನಮ್ಮ ಜನರಿಗೆ ದೇವಸ್ಥಾನದ ತೀರ್ಥಕ್ಕಿಂತ ಮದ್ಯದಂಗಡಿಯಲ್ಲಿ ಸಿಗುವ ತೀರ್ಥವೇ ಮುಖ್ಯವಾಗಿರಬೇಕು ಎಂದು ಹೇಳಿಕೊಂಡಿದ್ದಾರೆ.
 

PREV
click me!

Recommended Stories

ಉತ್ಖನನ ವೇಳೆ ನಿಧಿ ದೊರೆತರೆ ಲಕ್ಕುಂಡಿ ಗ್ರಾಮವೇ ಸ್ಥಳಾಂತರ?
Breaking: ಕನ್ನಡ ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ: ಕಳಚಿಬಿದ್ದ ಸ್ವಾತಂತ್ರ್ಯ ಹೋರಾಟ ಮತ್ತು ಏಕೀಕರಣದ ಕೊಂಡಿ!