ಬೃಹತ್‌ ಗಾಂಜಾ ಕೇಸ್‌: ಸಿಪಿಐ, ಪಿಎಸ್‌ಐ ಸೇರಿ ಐವರು ಅಮಾನತು

Kannadaprabha News   | Asianet News
Published : Sep 13, 2020, 08:46 AM IST
ಬೃಹತ್‌ ಗಾಂಜಾ ಕೇಸ್‌:  ಸಿಪಿಐ, ಪಿಎಸ್‌ಐ ಸೇರಿ ಐವರು ಅಮಾನತು

ಸಾರಾಂಶ

ಕಲಬರುಗಿಯಲ್ಲಿ ಸಿಕ್ಕ ಭಾರೀ ಪ್ರಮಾಣದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. 

ಕಲಬುರಗಿ (ಸೆ.13) : ಕಾಳಗಿ ಸಮೀಪದ ಲಚ್ಚು ನಾಯಾಕ ತಾಂಡಾದ ಕುರಿದೊಡ್ಡಿ ಮೇಲೆ ಬೆಂಗಳೂರು ಶೇಷಾದ್ರಿಪುರಂ ಪೊಲೀಸರು ದಾಳಿ 13 ಕ್ವಿಂಟಲ್‌ ಗಾಂಜಾ ಪತ್ತೆ ಹಚ್ಚಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್‌ ಇಲಾಖೆ ಬೃಹತ್‌ ಗಾಂಜಾ ದಾಸ್ತಾನಿದ್ದರೂ ಪತ್ತೆಹಚ್ಚುವಲ್ಲಿ ವಿಫಲರಾಗಿದ್ದಾರೆಂದು ಕಾಳಗಿ ಸಿಪಿಐ ಸೇರಿದಂತೆ ನಾಲ್ವರನ್ನು ಅಮಾನತು ಮಾಡಿದೆ.

ಕಾಳಗಿ ಸಿಪಿಐ ಭೋಜರಾಜ ರಾಠೋಡ, ಪಿಎಸ್‌ಐ ಬಸವರಾಜ ಚಿತಕೋಟೆ, ಎಎಸ್‌ಐ ನೀಲಕಂಠಪ್ಪ ಹೆಬ್ಬಾಳ, ಪೇದೆಗಳಾದ ಶರಣಪ್ಪ ಹಾಗೂ ಅನಿಲ್‌ ಭಂಡಾರಿ ಅವರನ್ನು ಅಮಾನತು ಮಾಡಿ ಜಿಲ್ಲಾ ಎಸ್ಪಿ ಡಾ.ಸೀಮಿ ಮರಿಯಮ್‌ ಜಾಜ್‌ರ್‍ ಆದೇಶ ಹೊರಡಿಸಿದ್ದಾರೆ.

ಕುರಿದೊಡ್ಡಿಯಲ್ಲಿದ್ದ ಗಾಂಜಾ ಪತ್ತೆ ಹಚ್ಚಿದ ರೋಚಕ ಸ್ಟೋರಿ! .

ಜಿಲ್ಲೆಯ ಕಾಳಗಿ ಬಳಿಯ ಲಕ್ಷ್ಮಣನಾಯಕ ತಾಂಡಾದ ಕುರಿ ಫಾಮ್‌ರ್‍ ಹೌಸ್‌ಗೆ ಈಚೆಗೆ ರಾಜಧಾನಿ ಪೊಲೀಸರು ದಾಳಿ ನಡೆಸಿ, ಅಪಾರ ಪ್ರಮಾಣದ ಗಾಂಜಾ ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ ಪ್ರಕರಣ ರಾಜ್ಯದ ಗಮನ ಸೆಳೆದಿತ್ತು.

PREV
click me!

Recommended Stories

ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
ಸರ್ಕಾರಿ ಶಾಲೆ ಟಾಯ್ಲೆಟ್‌ ಸ್ವಚ್ಛತೆಗೆ ಉದ್ಯಮಿ ನೆರವು