ಗೋವಾದಲ್ಲಿ ಪಾರ್ಟಿ ಮುಗಿಸಿ ವಾಪಸ್‌ ಬರೋ ವೇಳೆ ಅಪಘಾತ: ಕರ್ನಾಟಕದ ಮೂವರ ದುರ್ಮರಣ

Published : May 22, 2022, 10:35 AM ISTUpdated : May 22, 2022, 01:22 PM IST
ಗೋವಾದಲ್ಲಿ ಪಾರ್ಟಿ ಮುಗಿಸಿ ವಾಪಸ್‌ ಬರೋ ವೇಳೆ ಅಪಘಾತ: ಕರ್ನಾಟಕದ ಮೂವರ ದುರ್ಮರಣ

ಸಾರಾಂಶ

*  ಗೋವಾದ ಮಾಪುಸಾದ ಕುಚೇಲಿ ಬಳಿ ನಡೆದ ಘಟನೆ *  ಪಾರ್ಟಿ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ನಡೆದ ಅಪಘಾತ *   ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು   

ಬೆಳಗಾವಿ(ಮೇ.22): ಗೋವಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿಯ ಮೂವರು ಯುವಕರ ದುರ್ಮರಣಕ್ಕೀಡಾಗಿದ್ದಾರೆ. ಮರಕ್ಕೆ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಗೋವಾದ ಮಾಪುಸಾದ ಕುಚೇಲಿ ಬಳಿ ಇಂದು(ಭಾನುವಾರ) ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ. 

ದುರ್ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪಾರ್ಟಿ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಧಾರವಾಡಕ್ಕೆ ವಕ್ಕರಿಸಿದ ಶನಿಕಾಟ: ಕುಡುಕ ಚಾಲಕನ ಅವಾಂತರಕ್ಕೆ 8 ಮಂದಿ ಬಲಿ

ಮೃತರನ್ನ ಬೆಳಗಾವಿಯ ನಾಯರ್ ಅನಗೋಳ್ಕರ್ (28), ರೋಹನ್ ಗದಗ(26), ಸನ್ನು ಅನ್ವೇಕೆರ್ ಅಂತ ತಿಳಿದು ಬಂದಿದೆ. ಅಪಘಾತದಲ್ಲಿ ವಿಶಾಲ್ ಕಾರೇಕರ್(27)ಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ಬದಿಯಿದ್ದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಾಪುಸಾ ಉತ್ತರ ಗೋವಾದ ಮಾಪುಸಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಅಂತ ಮಾಹಿತಿ ಲಭ್ಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 
 

PREV
Read more Articles on
click me!

Recommended Stories

ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಗೆ ಪರಂ ಆಕ್ರೋಶ, ಬಲಿಷ್ಠ ಆರ್ಥಿಕತೆ ಅಂತೀರಿ, ಜನರ ಮೇಲೆ ಹೊರೆ ಹಾಕುವುದೇಕೆ?
ಬಜೆಟ್‌ನ ಘೋಷಣೆಗಳೆಲ್ಲ ಮೇ ಅಂತ್ಯದೊಳಗೇ ಜಾರಿಯಾಗಬೇಕು: ಸಿಎಂ ವಾರ್ನಿಂಗ್!