ಕೇವಲ ₹2000 ಬರಪರಿಹಾರಕ್ಕೆ ಸವಣೂರು ರೈತರು ಆಕ್ರೋಶ, ಹಣ ಸಂಗ್ರಹಿಸಿ ಸರ್ಕಾರಕ್ಕೆ ವಾಪಸ್ ನೀಡಲು ನಿರ್ಧಾರ!

Published : Dec 12, 2023, 08:57 AM IST
ಕೇವಲ ₹2000 ಬರಪರಿಹಾರಕ್ಕೆ ಸವಣೂರು ರೈತರು ಆಕ್ರೋಶ, ಹಣ ಸಂಗ್ರಹಿಸಿ ಸರ್ಕಾರಕ್ಕೆ ವಾಪಸ್ ನೀಡಲು ನಿರ್ಧಾರ!

ಸಾರಾಂಶ

ಬರ ಪರಿಹಾರವಾಗಿ ಕೇವಲ ₹2 ಸಾವಿರ ನೀಡಿರುವ ಸರ್ಕಾರದ ಕ್ರಮ ಖಂಡಿಸಿ ಹಾವೇರಿ ಜಿಲ್ಲೆ ಸವಣೂರಿನಲ್ಲಿ ಸೋಮವಾರ ರೈತರು ಪ್ರತಿಭಟನೆ ನಡೆಸಿದರು. ಸವಣೂರು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಮುಖಂಡರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿದ್ದರೂ ಈವರೆಗೆ ಪರಿಹಾರ ನೀಡಿರಲಿಲ್ಲ. ಈಗ ರೈತರ ಖಾತೆಗೆ ಕೇವಲ ₹2 ಸಾವಿರ ಹಾಕಿದ್ದಾರೆ. ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸವಣೂರು (ಡಿ.12): ಬರ ಪರಿಹಾರವಾಗಿ ಕೇವಲ ₹2 ಸಾವಿರ ನೀಡಿರುವ ಸರ್ಕಾರದ ಕ್ರಮ ಖಂಡಿಸಿ ಹಾವೇರಿ ಜಿಲ್ಲೆ ಸವಣೂರಿನಲ್ಲಿ ಸೋಮವಾರ ರೈತರು ಪ್ರತಿಭಟನೆ ನಡೆಸಿದರು.

ಸವಣೂರು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಮುಖಂಡರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿದ್ದರೂ ಈವರೆಗೆ ಪರಿಹಾರ ನೀಡಿರಲಿಲ್ಲ. ಈಗ ರೈತರ ಖಾತೆಗೆ ಕೇವಲ ₹2 ಸಾವಿರ ಹಾಕಿದ್ದಾರೆ. ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ತಾವೇ ಹಣ ಸಂಗ್ರಹಿಸಿ ನೀಡಲು ಮುಂದಾಗಿ, ಪ್ರತಿ ರೈತರೂ ಒಂದೊಂದು ಸಾವಿರದಂತೆ ಸುಮಾರು ₹30 ಸಾವಿರ ದೇಣಿಗೆ ಹಣ ಸಂಗ್ರಹಿಸಿದರು. ಸಂಗ್ರಹಿಸಿದ ಹಣವನ್ನು ಉಪವಿಭಾಗಾಧಿಕಾರಿ ಮಹಮ್ಮದ್‌ ಖಿಜರ್‌ ಹಾಗೂ ತಹಸೀಲ್ದಾರ್‌ ಭರತ್‌ ಅವರಿಗೆ ನೀಡಲು ಮುಂದಾದರು. ಆದರೆ, ಮನವಿಯನ್ನು ಮಾತ್ರ ಸ್ವೀಕರಿಸಲು ಒಪ್ಪಿದ ಅಧಿಕಾರಿಗಳು, ಹಣ ಪಡೆಯಲು ನಿರಾಕರಿಸಿದರು.

ಬರ ನಿರ್ವಹಣೆಗೆ ಕೇಂದ್ರ ಸರ್ಕಾರಕ್ಕೆ ಮೂರು ಪತ್ರ ಬರೆದ್ರೂ ಸಹಕರಿಸುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಿತ್ತಾಟದಲ್ಲಿ ರೈತರನ್ನು ನಿರ್ಲಕ್ಷ್ಯ ಮಾಡಲಾಗಿದೆ. ಕೇಂದ್ರ ಸರ್ಕಾರ ಹೆಕ್ಟೇರ್‌ಗೆ ₹8 ಸಾವಿರ ಮತ್ತು ರಾಜ್ಯ ಸರ್ಕಾರವೂ ಅಷ್ಟೇ ಮೊತ್ತವನ್ನು ಸೇರಿಸಿ ಪ್ರತಿ ಹೆಕ್ಟೇರ್‌ಗೆ ₹16 ಸಾವಿರ ಬರ ಪರಿಹಾರ ನೀಡಬೇಕು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಬರಬೇಕು. ಶೀಘ್ರದಲ್ಲಿ ಬರ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರೈತರು ಎಚ್ಚರಿಸಿದರು. 

PREV
Read more Articles on
click me!

Recommended Stories

ಕಾರವಾರದಲ್ಲಿ ಭಾರತೀಯ ನೌಕಾ ದಿನಾಚರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ!
ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ: ಸಿ.ಟಿ.ರವಿ ಆಗ್ರಹ