ನೆರೆ ಪರಿಹಾರಕ್ಕೆ 1 ಕೋಟಿ ರೂ. ಬಿಡುಗಡೆ ಮಾಡಿದ ರಾಜೀವ್ ಚಂದ್ರಶೇಖರ್

Published : Aug 09, 2019, 09:39 PM ISTUpdated : Aug 09, 2019, 09:56 PM IST
ನೆರೆ ಪರಿಹಾರಕ್ಕೆ 1 ಕೋಟಿ ರೂ. ಬಿಡುಗಡೆ ಮಾಡಿದ ರಾಜೀವ್ ಚಂದ್ರಶೇಖರ್

ಸಾರಾಂಶ

ಕರ್ನಾಟಕದ ಪ್ರವಾಹ ಪರಿಸ್ಥಿತಿ ನಿವಾರಣೆಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ತಮ್ಮ ನಿಧಿಯಿಂದ 1 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಮಲೆನಾಡು ಮತ್ತು ಉತ್ತರ ಕರ್ನಾಟಕ ಭಾಗ ಮಳೆಯಿಂದ ತತ್ತರಿಸಿ ಹೋಗಿದೆ.  

ಬೆಂಗಳೂರು[ಆ. 09]  ಉತ್ತರ ಕರ್ನಾಟಕ ಮತ್ತು ಮಲೆನಾಡು ಭಾಗ ಪ್ರವಾಹದಿಂದ ಮುಳುಗಡೆಯಾಗಿದ್ದು ಪರಿಹಾರಕ್ಕೆ ಸಂಸದ ರಾಜೀವ್ ಚಂದ್ರಶೇಖರ್ 1 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ.

ಎಂಪಿಎಲ್ ಎಡಿ ಅಂದರೆ ಸಂಸದರ ಪ್ರವೇಶಾಭಿವೃದ್ಧಿ ನಿಧಿಯಿಂದ 1 ಕೋಟಿ ರೂ. ಬಿಡುಗಡೆ ಮಾಡಿದ್ದು ಉದ್ದಿಮೆದಾರರು ಸಂತ್ರಸ್ತರ ನೆರವಿಗೆ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.

ಕೇರಳ ಪ್ರವಾಹಕ್ಕೆ 30 ಬಲಿ, ಕಾಸರಗೋಡು ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ನಮ್ಮ ರಾಜ್ಯದಲ್ಲಿ ಪ್ರವಾಹವು ವ್ಯಾಪಕ ಹಾನಿಯನ್ನುಂಟುಮಾಡಿದೆ ಮತ್ತು ಸಾವಿರಾರು ಜನರು ಮತ್ತು ಮನೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ನನ್ನ ರಾಜ್ಯಸಭಾ ನಿಧಿಯಿಂದ ಪ್ರವಾಹ ಪೀಡಿತರಿಗೆ 1 ಕೋಟಿ ರೂ ಘೋಷಿಸುತ್ತಿದ್ದೇನೆ ಈ ಕಷ್ಟದ ಪರಿಸ್ಥಿತಿಯಲ್ಲಿ ಜನತೆ ಮತ್ತು ಉದ್ಯಮಿಗಳು ಸಾಧ್ಯವಿರುವ ಎಲ್ಲ ರೀತಿಯ ಸಹಾಯ ನೀಡಬೇಕೆಂದು ವಿನಂತಿ ಎಂದು ಟ್ವಿಟರ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

 

PREV
click me!

Recommended Stories

ಅಪಘಾತಕ್ಕೀಡಾದ ಕುಟುಂಬಕ್ಕೆ ಪರಿಹಾರ ನೀಡುವಲ್ಲೂ ಪೊಲಿಟಿಕ್ಸ್! ಸಚಿವ ಜಮೀರ್ ಭೇಟಿ ರದ್ದಾಗಲು ರಾಜಕೀಯ ಕಾರಣವೇ?
Hubballi-Ankola National Highway ಅತಿಕ್ರಮಣದ ಪರಿಣಾಮ, ಮೃತ್ಯಕೂಪವಾದ ಹುಬ್ಬಳ್ಳಿ ಅಂಕೋಲಾ ಹೆದ್ದಾರಿ!