ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಸಚಿವ

Kannadaprabha News   | Asianet News
Published : Dec 14, 2020, 09:31 AM IST
ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಸಚಿವ

ಸಾರಾಂಶ

ಕೆಲ ದಿನಗಳ ಹಿಂದಷ್ಟೇ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ  ಚುನಾವಣಾ ನಿವೃತ್ತಿ ಬಗ್ಗೆ ಮಾತನಾಡಿದ್ದರು. ಇದೀಗ ಸಚಿವರೋರ್ವರು ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. 

ಹೊಸಪೇಟೆ (ಡಿ.14): ಜನರು ಒತ್ತಾಯ ಮಾಡಿದರೆ ಅಷ್ಟೇ ಮುಂದೆ ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯುವೆ. ಇಲ್ಲದಿದ್ದರೆ, ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವೆ ಎಂದು ಅರಣ್ಯ ಹಾಗೂ ಪರಿಸರ ಸಚಿವ ಆನಂದ್‌ ಸಿಂಗ್‌ ತಿಳಿಸಿದ್ದಾರೆ. 

ನಗರದಲ್ಲಿ  ವಕೀಲರ ಸಂಘದ ಸಮಾರಂಭದಲ್ಲಿ ಮಾತನಾಡಿದ ಅವರು, 2018ರ ವಿಧಾನಸಭೆ ಚುನಾವಣೆ ಬಳಿಕ ಕಣಕ್ಕೆ ಇಳಿಯುವುದಿಲ್ಲ ಎಂದು ಹೇಳಿದ್ದೆ. ಆದರೆ, ಉಪಚುನಾವಣೆ ಹಿನ್ನೆಲೆ ಸ್ಪರ್ಧೆ ಮಾಡಿದ್ದೆ.

 ಈಗಲೂ ಆಗ ಹೇಳಿದ ಹೇಳಿಕೆಗೆ ಬದ್ಧನಾಗಿರುವೆ. ಆದರೆ ಜನರು ಒತ್ತಾಯ ಮಾಡಿದರೆ ಮಾತ್ರ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವೆ ಎಂದರು.

ನಿಮ್ಮ ಸುತ್ತಮುತ್ತಲಿನ ಪರಿಸರ ಹಾಳಾಗ್ತಾ ಇದೆಯಾ? ಕಮಾಂಡ್ ಕಂಟ್ರೋಲ್‌ಗೆ ಕರೆ ಮಾಡಿ ...

ಕೆಲ ದಿನಗಳ ಹಿಂದಷ್ಟೇ ಮಾಜಿ ಸಿಎಂ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಅವರು ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದರು. ಇದೀಗ ಸಚಿವ ಆನಂದ್ ಸಿಂಗ್ ಸಹ ರಾಜಕೀಯ ನಿವೃತ್ತಿಯ ಮಾತನಾಡಿದ್ದಾರೆ.

PREV
click me!

Recommended Stories

ಆಡಂಬರವಿಲ್ಲದೇ ಸಾಧಕರಿಗೆ ಗೌರವ: ಖಾಜಾಬಿ ಮತ್ತು ಭರಮಪ್ಪ ಕುಂಬಾರರಿಗೆ ಕಾಯಕಶೀಲ ಪ್ರಶಸ್ತಿ!
ಘನತ್ಯಾಜ್ಯ ಟೆಂಡರ್ ಅವ್ಯವಹಾರ: ರದ್ದುಪಡಿಸಲು ಛಲವಾದಿ ನಾರಾಯಣಸ್ವಾಮಿ ಒತ್ತಾಯ