ನಾವು ಅಣ್ಣ ತಮ್ಮಂದಿರಂತೆ ಎಂದ ಸಚಿವ ಸುಧಾಕರ್

By Suvarna NewsFirst Published Aug 13, 2020, 7:37 AM IST
Highlights

ಬೆಂಗಳೂರಿನ ಡಿಜೆ ಹಳ್ಳಿಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ನಾವೆಲ್ಲಾ ಅಣ್ಣ ತಮ್ಮಂದಿರಂತೆ ಇರೋಣ. ಇದಕ್ಕೆ ಧರ್ಮದ ಬಣ್ಣ ಹಚ್ಚುವುದು ಬೇಡ ಎಂದು ಹೇಳಿದ್ದಾರೆ.

ಬೆಂಗಳೂರು (ಆ.13): ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ನಡೆದಿರುವ ಘಟನೆ ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಯಾವುದೇ ಧರ್ಮಕ್ಕೂ ಧಕ್ಕೆಯಾಗಬಾರದು. ನಾವೆಲ್ಲಾ ಅಣ್ಣ ತಮ್ಮಂದಿರಂತೆ ಇರೋಣ. ಎಲ್ಲರೂ ಶಾಂತಿ ಕಾಪಾಡಿ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮನವಿ ಮಾಡಿದ್ದಾರೆ. 

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ‘ಡಿ.ಜೆ.ಹಳ್ಳಿ ಘಟನೆ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಧರ್ಮಕ್ಕೂ ಧಕ್ಕೆಯಾಗಬಾರದು. ನಾವೆಲ್ಲಾ ಅಣ್ಣ ತಮ್ಮಂದಿರಂತೆ ಇರೋಣ. 

ಕೆ.ಜಿ. ಹಳ್ಳಿ ಆರೋಪಿಗಳನ್ನ ಸುಮ್ನೆ ಬಿಡಲ್ಲ: ಸಚಿವ ಅಶೋಕ್‌ ಶಪಥ

ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಪೊಲೀಸ್‌ ಅಧಿಕಾರಿಗಳು ಗಲಾಟೆಯನ್ನು ಸಂಪೂರ್ಣ ನಿಯಂತ್ರಿಸಿದ್ದಾರೆ. ಶಾಂತಿಯಿಂದ ಇರಿ ಎಂದು ಎಲ್ಲರಿಗೂ ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.

 

ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ನಡೆದಿರುವ ಘಟನೆ ಅತ್ಯಂತ ಖಂಡನೀಯ. ಇಂತಹ ಸಮಾಜ ಘಾತುಕ ಚಟುವಟಿಕೆಗಳನ್ನು ಸರ್ಕಾರ ಸಹಿಸುವುದಿಲ್ಲ ಮತ್ತು ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಸಂದರ್ಭದಲ್ಲಿ ಜನತೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕೆಂದು ಮನವಿ ಮಾಡುತ್ತೇನೆ. pic.twitter.com/az4MN7mVwV

— Dr Sudhakar K (@mla_sudhakar)
click me!