ಭಕ್ತರಿಗೆ ಶುಭಸುದ್ದಿ ಕೊಟ್ಟ ಮುಜರಾಯಿ ಇಲಾಖೆ, ಎಲ್ಲ ಸೇವೆಗಳಿಗೂ ಅವಕಾಶ

Published : Aug 27, 2020, 05:45 PM IST
ಭಕ್ತರಿಗೆ ಶುಭಸುದ್ದಿ ಕೊಟ್ಟ ಮುಜರಾಯಿ ಇಲಾಖೆ, ಎಲ್ಲ ಸೇವೆಗಳಿಗೂ ಅವಕಾಶ

ಸಾರಾಂಶ

ಕೊರೋನಾ ಅನ್ ಲಾಕ್/ ಭಕ್ತರಿಗೆ ಶುಭಸುದ್ದಿ ನೀಡಿದ ಮುಜರಾಯಿ ಇಲಾಖೆ/ ಸೆಪ್ಟೆಂಬರ್ ಪ್ರಾರಂಭದಿಂದ ಎಲ್ಲಾ ಸೇವೆಗಳು ಪ್ರಾರಂಭ ಮಾಡಲು ಚಿಂತನೆ/ ಮುಜರಾಯಿ ಇಲಾಖೆ ಮುಂದಿದೆ ಪ್ರಸ್ತಾವನೆ/ಸರ್ಕಾರ ಅನುಮತಿ ನೀಡಿದ ಕೂಡಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆಗಳಿಗೆ ಅವಕಾಶ

ಬೆಂಗಳೂರು(ಆಆ. 27)  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನ್ ಲಾಕ್ ಘೋಷಣೆ ಮಾಡಿದ್ದು ಒಂದೊಂದೆ ಸಡಿಲಿಕೆ ನೀಡಿಕೊಂಡು ಬಂದಿವೆ.  ಇದೀಗ ಭಕ್ತರಿಗೆ ಮುಜರಾಯಿ ಇಲಾಖೆ ಶುಭಸುದ್ದಿಯೊಂದನ್ನು ನೀಡಿದೆ.

ದೇವಾಲಯದಲ್ಲಿ ಎಲ್ಲ ರೀತಿಯ ಪೂಜೆಗೂ ಅವಕಾಶ ನೀಡಲು ಮುಜರಾಯಿ ಇಲಾಖೆ ಮುಂದಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಸೇವೆಗಳು ಸ್ಥಗಿತವಾಗಿದ್ದವು. ಸೆಪ್ಟೆಂಬರ್ ಪ್ರಾರಂಭದಿಂದ ಎಲ್ಲಾ ಸೇವೆಗಳು ಪ್ರಾರಂಭ ಮಾಡಲು ಚಿಂತನೆ ನಡೆಸಲಾಗಿದೆ ಎಂಬ  ಮಾಹಿತಿ ಸಿಕ್ಕಿದೆ.

ದೇಗುಲಗಳ ಆದಾಯಕ್ಕೆ ಭಾರೀ ಇಳಿಮುಖ

ಮುಜರಾಯಿ ಇಲಾಖೆ ಮುಂದೆ ಪ್ರಸ್ತಾವನೆ ಇದ್ದು  ಸರ್ಕಾರ ಅನುಮತಿ ನೀಡಿದ ಕೂಡಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆಗಳಿಗೆ ಅವಕಾಶ ಸಿಗಲಿದೆ. ಕೊರೊನಾ ಮಾರ್ಗಸೂಚಿ ಪಾಲನೆ ಮಾಡಿಕೊಂಡು ಸೇವೆಗಳ ಆರಂಭಕ್ಕೆ ಮುಜರಾಯಿ ಇಲಾಖೆ ಚಿಂತನೆ ನಡೆದಿದೆ.

ಕ್ಷೀರಾಭಿಷೇಕ, ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಉರುಳು ಸೇವೆ, ಮುಡಿ ಸೇವೆ ಸೇರಿದಂತೆ ಇನ್ನಿತರ ಸೇವೆಗಳು  ಆರಂಭವಾಗಲಿದೆ ಎಂದು ಮುಜರಾಯಿ ಇಲಾಖೆ ಮೂಲಗಳು ತಿಳಿಸಿವೆ.

PREV
click me!

Recommended Stories

Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!
ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ