ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿ ದಕ್ಷಿಣ ಕರ್ನಾಟಕದ 7 ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶ ಹೊಂದಿರುವ ಎತ್ತಿನಹೊಳೆ ಏತ ನೀರಾವರಿ ಯೋಜನೆಯ ಮುಂದಿನ ಹಂತಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಯೋಜನೆಯ ಮೊದಲ ಹಂತದಲ್ಲಿ ಹಲವು ಕಾಮಗಾರಿಗಳು ಅನಧಿಕೃತವಾಗಿದೆ. ಇಂಥ ಕಾಮಗಾರಿಗಳಿಂದ ಪರಿಸರದ ಮೇಲೆ ಭಾರೀ ಅನಾಹುತವಾಗಿದೆ ಎಂದು ಹೇಳಿರುವ ಕೇಂದ್ರ ಪರಿಸರ ಇಲಾಖೆಯ ಸಲಹಾ ಸಮಿತಿಯು, ಕೆಲಸಗಳನ್ನು ಆಳವಾಗಿ ಪರಿಶೀಲಿಸದ ಹೊರತೂ ಯೋಜನೆಯ ಮುಂದುವರೆದ ಭಾಗಕ್ಕೆ ಅನುಮತಿ ನೀಡದಂತೆ ಸಲಹೆ ನೀಡಿದೆ. ಅ.27ರಂದು ನಡೆದ ನಡೆದ ಕೇಂದ್ರ ಪರಿಸರ ಇಲಾಖೆಯ ಸಭೆಯಲ್ಲಿ ಎತ್ತಿನಹೊಳೆ ಮೊದಲ ಹಂತದ ಯೋಜನೆಯ ಕುರಿತು ದಾಖಲಾದ ಹಲವು ಆರೋಪಗಳ ಕುರಿತು ಸಲಹಾ ಸಮಿತಿ ಬೆಳಕು ಚೆಲ್ಲಿದೆ. ಅದರಲ್ಲಿ, ಮೊದಲ ಹಂತದ ಯೋಜನೆಯಿಂದಾಗಿಯೇ ಜೈವಿಕವಾಗಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಪಶ್ಚಿಮ ಘಟ್ಟದ ಹಲವು ಪ್ರದೇಶಗಳಲ್ಲಿ ಭೂಕುಸಿದಂಥ ಘಟನೆ ಸಂಭವಿಸಿದೆ. ಇಷ್ಟೆಲ್ಲ ಕಾಮಗಾರಿ ಹೊರತಾಗಿಯೂ ನಿಗದಿತ ಪ್ರದೇಶಕ್ಕೆ ಕುಡಿಯುವ ನೀರು ಪೂರೈಕೆ ಮಾಡುವುದು ಸಾಧ್ಯವಾಗಿಲ್ಲ. ಹೀಗಾಗಿ ಯೋಜನೆಗೆ ಮತ್ತಷ್ಟು ಅನುಮತಿಗೂ ಮುನ್ನ, ಈಗಾಗಲೇ ಕೈಗೊಂಡಿರುವ ಕಾಮಗಾರಿಯ ಪೂರ್ವಾಪರ ಪರಿಶೀಲನೆ ಅತ್ಯಂತ ಅಗತ್ಯ’ ಎಂದು ಹೇಳಿದೆ.

10:41 PM (IST) Nov 10
ಹನಿಮೂನ್ ನಾಟಕವಾಡಿ ಮನೆಗೆ ಮರಳಿದ ಕರ್ಣ ಮತ್ತು ನಿತ್ಯಾಗೆ ಮನೆಯವರಿಂದ ಅನಿರೀಕ್ಷಿತ ಪ್ರಶ್ನೆಗಳು ಎದುರಾಗುತ್ತವೆ. ಇದೇ ವೇಳೆ ಹೊಟ್ಟೆನೋವಿನಿಂದ ಬಳಲುತ್ತಿರುವ ನಿತ್ಯಾಳ ರಹಸ್ಯವು ನಾಡಿ ಪರೀಕ್ಷೆಯ ಮೂಲಕ బయಲಾಗುವ ಆತಂಕಕಾರಿ சூழல் ನಿರ್ಮಾಣವಾಗಿದೆ.
10:08 PM (IST) Nov 10
09:42 PM (IST) Nov 10
ಶುದ್ಧ ನೀರು ಎಂದು ಭಾವಿಸಿ ಸೇವಿಸುವ RO ವಾಟರ್, ದೇಹಕ್ಕೆ ಬೇಕಾದ ಕ್ಯಾಲ್ಸಿಯಂ ಮತ್ತು ಮೆಗ್ನೀಶಿಯಂನಂತಹ ಅಗತ್ಯ ಖನಿಜಗಳನ್ನು ತೆಗೆದುಹಾಕುತ್ತದೆ. ತಜ್ಞರು ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಈ ನೀರು ಮೀನು ಮತ್ತು ಗಿಡಗಳಿಗೆ ಹಾನಿಕಾರಕವಾಗಿದ್ದು, ಮನುಷ್ಯರ ಮೇಲೆ ನಿಧಾನ ವಿಷದಂತೆ ಪರಿಣಾಮ ಬೀರಬಹುದು
09:23 PM (IST) Nov 10
ಆರ್ಎಸ್ಎಸ್ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಚಿವ ಪ್ರಿಯಾಂಕ್ ಖರ್ಗೆಯವರು ಸಂವಿಧಾನಕ್ಕೆ ಅಗೌರವ ತೋರಿ 100 ವರ್ಷಗಳಾಗಿವೆ ಎಂದು ಟ್ವೀಟ್ ಮಾಡಿದ್ದಾರೆ. ಆದರೆ, ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿರುವುದರಿಂದ, ಈ ವರ್ಷದ ವ್ಯತ್ಯಾಸದಿಂದಾಗಿ ಅವರು ಜಾಲತಾಣಗಳಲ್ಲಿ ಭಾರಿ ಟ್ರೋಲ್ಗೆ ಒಳಗಾಗಿದ್ದಾರೆ.
08:50 PM (IST) Nov 10
ದೆಹಲಿ ಬ್ಲಾಸ್ಟ್ ಪ್ರಕರಣ, ಬೆಂಗಳೂರು ಸೇರಿ ಕರ್ನಾಟಕದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅನುಮಾನಸ್ಪದ ವ್ಯಕ್ತಿಗಳು, ಸ್ಥಳಗಳ ಮೇಲೆ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ. ವಾಹನ ತಪಾಸಣೆ ಸೇರಿದಂತೆ ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲು ಸೂಚನೆ
06:29 PM (IST) Nov 10
ವಿಡಿಯೋ ಮಾಡ್ಸಿದ್ದು ನಾನಲ್ಲ, ಶೇರ್ ಮಾತ್ರ;ಪರಪ್ಪನ ಅಗ್ರಹಾರ ಪ್ರಕರಣದಲ್ಲಿ ನಟ ಧನ್ವೀರ್ಗೆ ಪೊಲೀಸ್ ಡ್ರಿಲ್, ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ನಟ ಧನ್ವೀರ್ ಮೊಬೈಲ್ ಫೋನ್ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.
05:28 PM (IST) Nov 10
ಸಿಹಿ ಕಹಿ ಚಂದ್ರು ಮತ್ತು ಗೀತಾ ಅವರ ಜೋಡಿ ಕನ್ನಡದ ಕಿರುತೆರೆಯಲ್ಲಿ ಹಲವು ಯಶಸ್ವೀ ಧಾರಾವಾಹಿಗಳನ್ನು ನಿರ್ಮಿಸಿ ದಾಖಲೆ ಬರೆದಿದ್ದಾರೆ. ಅವರ ನಿರ್ಮಾಣ ಸಂಸ್ಥೆ ಕಿರುತೆರೆ ರಂಗದಲ್ಲಿ ಅಚ್ಚಳಿಯದ ಹೆಸರು ಮಾಡಿರೋ ಸಂಸ್ಥೆ ಎಂಬುದನ್ನು ಯಾರೂ ಎಂದೂ ಮರೆಯಲಾಗದು. ಹೆಚ್ಚಿನ ಮಾಹಿತಿಗೆ ಈ ಸ್ಟೋರಿ ನೋಡಿ..
05:15 PM (IST) Nov 10
Bigg Boss Kannada Season 12 Show: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಧ್ರುವಂತ್ ಅವರಿಗೆ ಮಾತೇ ಮುಳ್ಳಾದಂತಿದೆ. ಗಿಲ್ಲಿ ನಟ, ಕಾವ್ಯ ಶೈವ, ರಕ್ಷಿತಾ ಶೆಟ್ಟಿ ವಿರುದ್ಧ ಮಾತನಾಡಿರುವ ಧ್ರುವಂತ್ ಈಗ, ರಾಶಿಕಾ ಶೆಟ್ಟಿ ವಿರುದ್ಧ ಮಾತನಾಡಿ ಸಿಕ್ಕಿ ಹಾಕಿಕೊಂಡಿದ್ದಾರೆ.
05:03 PM (IST) Nov 10
ಜೆಡಿಎಸ್ 25ರ ಸಂಭ್ರಮದಲ್ಲಿ ಜಿಟಿ ದೇವೇಗೌಡಗೆ ಶಾಕ್ ಕೊಟ್ಟ HDK, ಕೋರ್ ಕಮಿಟಿಯಿಂದ ಔಟ್ , ಹೊಸ ಕೋರ್ ಕಮಿಟಿ ಸದಸ್ಯರು, ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ಗೆ ಪುನ್ಚೇತನ ನೀಡುವ ನಿಟ್ಟಿನಲ್ಲಿ ಹೊಸ ತಂಡ ಕಟ್ಟಲಾಗಿದೆ.
03:41 PM (IST) Nov 10
ಅಮೃತವರ್ಷಿಣಿ ಧಾರಾವಾಹಿಯ ಅಮೃತಾ ಪಾತ್ರಧಾರಿ ನಟಿ ರಜಿನಿ ಅವರು ಮದುವೆಯಾಗಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಮದುವೆಯಾಗಿದೆ, ಮದುವೆಯ ಸುಂದರ ಫೋಟೋಗಳು ಇವೆ. ಫೋಟೋಗಳನ್ನು ನೋಡಿ..
03:35 PM (IST) Nov 10
ಪತ್ನಿ ಕಿರುಕುಳಕ್ಕೆ ಗಂಡನ ದುರಂತ ಅಂತ್ಯ ಪ್ರಕರಣ, ಅನೈತಿಕ ಸಂಬಂಧ ಆರೋಪದಲ್ಲೂ ಟ್ವಿಸ್ಟ್, ಆರೋಪಗಳು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಪತ್ನಿ ಕಿರುಕುಳ ಆರೋಪವನ್ನು ನಿರಾಕರಿಸಿದ್ದಾರೆ. ಆದರೆ ಅನೈತಿಕ ಸಂಬಂಧ ಆರೋಪ ಹಿಂದೆ ಹಲವು ಅನುಮಾನ ಕಾಡುತ್ತಿದೆ.
03:31 PM (IST) Nov 10
Namaz at Bengaluru airport: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಮುಸ್ಲಿಂ ಸಮುದಾಯದವರು ನಮಾಜ್ ಮಾಡಿದ ವೀಡಿಯೋ ವೈರಲ್ ಆಗಿದೆ. ಅತ್ಯಂತ ಭದ್ರತೆಯ ಪ್ರದೇಶದಲ್ಲಿ ಇದಕ್ಕೆ ಹೇಗೆ ಅವಕಾಶ ನೀಡಲಾಯಿತು ಎಂದು ಬಿಜೆಪಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.
02:16 PM (IST) Nov 10
ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ 2025ರ ವಿಶ್ವಕಪ್ ಗೆಲ್ಲಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಸ್ಮೃತಿ ಮಂಧನಾ ಅವರ ನಿವ್ವಳ ಆಸ್ತಿ ಮೌಲ್ಯ ಎಷ್ಟು ಗೊತ್ತಾ? ಮ್ಯಾಚ್ ಫೀಸ್, ಬಿಸಿಸಿಐ ಕಾಂಟ್ರ್ಯಾಕ್ಟ್, ಡಬ್ಲ್ಯುಪಿಎಲ್, ಬ್ರ್ಯಾಂಡ್ ಎಂಡಾರ್ಸ್ಮೆಂಟ್ಗಳ ಮೂಲಕ..
01:46 PM (IST) Nov 10
ಬೆಂಗಳೂರಿನ ಗಿರಿನಗರದಲ್ಲಿ, ಪತ್ನಿಯ ಕಿರುಕುಳದಿಂದ ಬೇಸತ್ತು ಬ್ಯಾಂಕ್ ಉದ್ಯೋಗಿ ಗಗನ್ ರಾವ್ ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ. ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಇವರ ಸಾವಿಗೆ ಪತ್ನಿಯೇ ಕಾರಣ ಎಂದು ಮೃತನ ಕುಟುಂಬಸ್ಥರು ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
12:40 PM (IST) Nov 10
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಹೊರಗಡೆ ಜನರ ಅಭಿಪ್ರಾಯ ಏನಿದೆ ಎನ್ನೋದನ್ನು ಅಶ್ವಿನಿ ಗೌಡ ಅವರು ಕಿಚ್ಚ ಸುದೀಪ್ ಮುಂದೆ ಹೇಳಿದ್ದಾರೆ. ಇದು ಸೂರಜ್, ರಾಶಿಕಾ ಶೆಟ್ಟಿಗೆ ತುಂಬ ಮುಖ್ಯವಾದ ವಿಷಯ ಎನ್ನಬಹುದು.
11:59 AM (IST) Nov 10
11:27 AM (IST) Nov 10
Amruthavarshini Serial Actress Rajini Marriage: 'ಅಮೃತವರ್ಷಿಣಿ', ‘ನೀ ಇರಲು ಜೊತೆಯಲಿ’ ಧಾರಾವಾಹಿ ನಟಿ ರಜಿನಿ ಅವರು ಸದ್ದಿಲ್ಲದೆ ಮದುವೆಯಾಗಿದ್ದಾರೆ. ಅರುಣ್ ಗೌಡ ಹಾಗೂ ರಜಿನಿ ಅವರು ಮದುವೆಯಾಗಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
11:23 AM (IST) Nov 10
ಮುಂಬರುವ ಐಪಿಎಲ್ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹೊಸ ಮಾಲೀಕರು ಮತ್ತು ಹೊಸ ನಾಯಕನ ನೇತೃತ್ವದಲ್ಲಿ ಆಡುವ ಸಾಧ್ಯತೆ ದಟ್ಟವಾಗಿದೆ. ಆರ್ಸಿಬಿ ನಾಯಕ ರಜತ್ ಪಾಟಿದಾರ್ ಐಪಿಎಲ್ 2026 ರಲ್ಲಿ ಆಡುವುದು ಕಷ್ಟ ಎನ್ನಲಾಗಿದೆ. ಏನಾಯಿತು ಎಂಬ ಪೂರ್ತಿ ವಿವರ ಇಲ್ಲಿದೆ.
11:02 AM (IST) Nov 10
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ, ನಾಲ್ಕು ವರ್ಷ ಪ್ರೀತಿಸಿ ಮದುವೆಯಾಗಿದ್ದ ಪತಿಯೇ ತನ್ನ ಆರು ತಿಂಗಳ ಗರ್ಭಿಣಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ಘೋರ ಕೃತ್ಯದಿಂದಾಗಿ ಗರ್ಭದಲ್ಲಿದ್ದ ಶಿಶು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ.
09:59 AM (IST) Nov 10
ಕೇಂದ್ರ ಸರ್ಕಾರದ ಸ್ವಚ್ಛತಾ ಅಭಿಯಾನ 5.0 ಅಡಿಯಲ್ಲಿ, ಸರ್ಕಾರಿ ಕಚೇರಿಗಳ ಅನುಪಯುಕ್ತ ವಸ್ತುಗಳನ್ನು ಮಾರಾಟ ಮಾಡಿ 800 ಕೋಟಿ ರೂ. ಆದಾಯ ಗಳಿಸಲಾಗಿದೆ. ಈ ಮೊತ್ತವು ಇಸ್ರೋದ ಚಂದ್ರಯಾನ-3 ಯೋಜನೆಗೆ ತಗುಲಿದ ವೆಚ್ಚಕ್ಕಿಂತ ಹೆಚ್ಚಾಗಿದ್ದು, ಈ ಅಭಿಯಾನದಲ್ಲಿ ಸುಮಾರು 232 ಲಕ್ಷ ಚದರ ಅಡಿ ಜಾಗ ತೆರವು.
09:26 AM (IST) Nov 10
ದೆಹಲಿಯಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್ ಏರ್ಪಡಿಸಿರುವ ಔತಣ ಕೂಟಕ್ಕೆ ತಮಗೆ ಆಹ್ವಾನವಿಲ್ಲ ಮತ್ತು ತಾವು ಹೋಗುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ದಲಿತ ಸಿಎಂ ಚರ್ಚೆಯ ಕುರಿತ ಪ್ರಶ್ನೆಗೆ, ಅಂತಹ ಪ್ರಶ್ನೆಗಳು ಖುಷಿ ಕೊಡುತ್ತವೆ ಎಂದರು.
08:56 AM (IST) Nov 10
Bigg Boss Kannada Season 12 Show Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ ಕಂಡರೆ ಧ್ರುವಂತ್ಗೆ ಆಗೋದಿಲ್ಲ. ಧ್ರುವಂತ್ಗೆ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ ಅವರು ಒಂದೆರಡು ಪಟ್ಟ ಕೊಟ್ಟಿದ್ದರು. ಈಗ ಧ್ರುವಂತ್ ಅವನ್ನು ತಿರುಗಿಸಿ ಕೊಟ್ಟಿದ್ದಾರೆ.
08:52 AM (IST) Nov 10
Belagavi DCC Bank: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಜಾರಕಿಹೊಳಿ ಬಣ ಸ್ಪಷ್ಟ ಬಹುಮತ ಹೊಂದಿದೆ. ಆದಾಗ್ಯೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವೇಶ, ಕತ್ತಿ-ಸವದಿ ಬಣದ ಲಿಂಗಾಯತ ಕಾರ್ಡ್ ಬಳಕೆ ಪ್ರಯತ್ನ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ.
08:33 AM (IST) Nov 10
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಅಶ್ವಿನಿ ಗೌಡ ಅವರ ಬಗ್ಗೆ ವಾರ ಪೂರ್ತಿ ಒಂದಲ್ಲ ಒಂದು ಆರೋಪ ಇರುತ್ತದೆ. ಈ ಬಾರಿ ಬಹುಮುಖ್ಯವಾದ ವಿಚಾರವನ್ನು ಕಿಚ್ಚ ಸುದೀಪ್ ಅವರು ಮಾತನಾಡಿಲ್ಲ, ಅದಕ್ಕೂ ಕಾರಣ ಇದೆ.
08:31 AM (IST) Nov 10
07:57 AM (IST) Nov 10
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ರಿಷಾ ಗೌಡ, ಗಿಲ್ಲಿ ನಟ ನಡುವೆ ಆಗಾಗ ಜಗಳ ಆಗುತ್ತಿರುತ್ತದೆ. ಇತ್ತೀಚೆಗೆ ನಡೆದ ಘಟನೆಯಲ್ಲಿ ಬಿಗ್ ಬಾಸ್ ನಿಯಮದ ಉಲ್ಲಂಘನೆ ಆಗಿದೆ. ಅಷ್ಟೇ ಅಲ್ಲದೆ ಹುಡುಗಿ ವಿಚಾರದಲ್ಲಿ ಗಿಲ್ಲಿ ನಟ ಸರಿ ಅಲ್ಲ ಎಂದು ಕಿಚ್ಚ ಸುದೀಪ್ ತಿಳಿ ಹೇಳಿದ್ದಾರೆ.
07:42 AM (IST) Nov 10
07:37 AM (IST) Nov 10
ಸರ್ಕಾರಗಳ ದುರಾಡಳಿತ, ಕನ್ನಡದ ಕಾಯ್ದೆಗಳು ಅನುಷ್ಠಾನಗೊಳ್ಳದಂತೆ ವಿಫಲಗೊಳಿಸುತ್ತಿರುವ ವ್ಯವಸ್ಥೆ ವಿರುದ್ಧ ಹೋರಾಡದಂತೆ ಕನ್ನಡಪರ ಹೋರಾಟಗಾರರ ಮೇಲೆ ಕೇಸುಗಳೆಂಬ ಅಸ್ತ್ರಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.