Published : Sep 10, 2025, 06:24 AM ISTUpdated : Sep 10, 2025, 11:52 PM IST

Karnataka News Live: ಇದು ಉಕ್ಕಲಿರುವ ಹಾಲು, ಸಾಂಬಾರ್ ಉಳಿಸಿದ್ದು ಹೌದಾ? ಟಿವಿ ಜಾಹೀರಾತು ಮಹಿಳಾಮಣಿಗಳ ಫ್ರೆಂಡಾ, ದುಶ್ಮನ್ನಾ?

ಸಾರಾಂಶ

ಭದ್ರಾವತಿ : ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ನಾನು ಚಿರಋಣಿ. ನಿಮ್ಮ ಈ ಪ್ರೀತಿ ನೋಡುತ್ತಿದ್ದರೆ ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುವ ಆಸೆ ಉಂಟಾಗುತ್ತಿದೆ ಎಂದು ಭದ್ರಾವತಿಯ ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದ್ದಾರೆ. ಸದ್ಯ ಅವರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ ಆದರೆ ಸಂಗಮೇಶ್ವರ್ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ‘ಸಂಗಮೇಶ್ ಅವರೇ, ಮುಂದಿನ ಜನ್ಮಕ್ಕೆ ಕಾಯಬೇಡಿ. ಈಗಲೇ ಹೋಗಿ ಬಿಡಿ. ನಿಮ್ಮ ಕ್ಷೇತ್ರದ ಉಳಿದ ಮತದಾರರಿಗೆ ಯಾಕೆ ಅವಮಾನ ಮಾಡುತ್ತೀರಿ. ನಿಮ್ಮದೇ ಸಮುದಾಯಕ್ಕೆ ಏಕೆ ಅವಮಾನ ಮಾಡುತ್ತೀರಿ ಎಂದು ಟಾಂಗ್ ನೀಡಿದ್ದಾರೆ.

Advertisement

11:52 PM (IST) Sep 10

ಇದು ಉಕ್ಕಲಿರುವ ಹಾಲು, ಸಾಂಬಾರ್ ಉಳಿಸಿದ್ದು ಹೌದಾ? ಟಿವಿ ಜಾಹೀರಾತು ಮಹಿಳಾಮಣಿಗಳ ಫ್ರೆಂಡಾ, ದುಶ್ಮನ್ನಾ?

ಎದುರು ಮನೆ, ಪಕ್ಕದ ಮನೆ ಹೆಂಗಸರಲ್ಲಿ ಶೀತಲ ಸಮರ ಶುರುವಾಗಿರುತ್ತದೆ. ಗಂಡ ಮನೆಗೆ ಬರೋದೆ ತಡ, ಮನೆಯಲ್ಲಿ ಟಿವಿ ಸದಾ ಆನ್ ಇರುತ್ತದೆ. ಜಾಹಿರಾತು ಬರುವುದೇ ತಡ, ಹೆಂಡತಿ ದೊಡ್ಡ ದನಿಯಲ್ಲಿ ,ಪಕ್ಕದ ಮನೆ ಪದ್ಮಕ್ಕನ ಮನೆಲ್ಲಿರೋದು ಇದೆ ಫ್ರಿಜ್..ಎದುರುಗಡೆ ಮನೆ ಹೇಮನ ಮನೆಯಲ್ಲಿರೋದು..

Read Full Story

11:21 PM (IST) Sep 10

ದಾವಣಗೆರೆ ಪಾರ್ಕ್‌ನಲ್ಲಿ ಇದ್ದಕ್ಕಿದ್ದಂತೆ ಎದ್ದು ಹೊಡೆದಾಡಿಕೊಂಡ ಜೋಡಿ; ವಿಡಿಯೋ ವೈರಲ್

ದಾವಣಗೆರೆಯ ವಾಟರ್ ಟ್ಯಾಂಕ್ ಪಾರ್ಕ್‌ನಲ್ಲಿ ಯುವಕ-ಯುವತಿಯರ ಜಗಳದ ವಿಡಿಯೋ ವೈರಲ್ ಆಗಿದೆ. ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಈ ಜಗಳ ನಡೆದಿದೆ ಎನ್ನಲಾಗಿದ್ದು, ಯುವಕ ಯುವತಿಯ ಚಿನ್ನಾಭರಣ ಅಡವಿಟ್ಟು ಸಾಲ ಪಡೆದಿದ್ದ ಎನ್ನಲಾಗಿದೆ. ಪೂರ್ತಿ ಮಾಹಿತಿಗಾಗಿ ವಿಡಿಯೋ ನೋಡಿ.

Read Full Story

10:59 PM (IST) Sep 10

100ಕ್ಕೆ 63 ಜನ ಸರ್ಕಾರಿ ಕಚೇರಿಯಲ್ಲಿ ಲಂಚ ಕೊಡುತ್ತಿದ್ದಾರೆ - ಸಚಿವ ಎಚ್.ಕೆ. ಪಾಟೀಲ್ ಬೇಸರ

ನಮ್ಮ ರಾಜ್ಯ ಎಷ್ಟೇ ಅಭಿವೃದ್ಧಿ ಆಗಿದೆ ಎಂದು ನಾವು ಹೇಳಿಕೊಂಡರೂ, 100ಕ್ಕೆ 63ರಷ್ಟು ಜನ ಸರ್ಕಾರಿ ಕಚೇರಿ ಕೆಲಸ ಮಾಡಿಸಿಕೊಳ್ಳಲು ಲಂಚ ಕೊಡುತ್ತಾರೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವೇ? ಎಂದು ಸಚಿವ ಎಚ್.ಕೆ. ಪಾಟೀಲ್ ಬೇಸರ ವ್ಯಕ್ತಪಡಿಸಿದರು.

Read Full Story

10:28 PM (IST) Sep 10

ಗಣೇಶ ವಿಸರ್ಜನೆ ಗಲಾಟೆಗೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ - ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬೇಕಾದ ಎಲ್ಲ ಕ್ರಮವನ್ನೂ ಸರ್ಕಾರ ಕೈಗೊಂಡಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

Read Full Story

10:24 PM (IST) Sep 10

ಧರ್ಮಸ್ಥಳ ಬುರುಡೆ ಕೇಸ್ - ಸುಳ್ಳು ಹೇಳೋದ್ರಲ್ಲಿ ಸುಜಾತಾ ಭಟ್ ಮೀರಿಸಿದ ಯೂಟೂಬರ್ ಸುಮಂತ್!

ಧರ್ಮಸ್ಥಳ ಪ್ರಕರಣದಲ್ಲಿ ಯೂಟ್ಯೂಬರ್ ಚಂದನ್ ಗೌಡ ಬುರುಡೆ ಗ್ಯಾಂಗ್‌ನಿಂದ ಹಣ ಪಡೆದಿದ್ದಾನೆ ಎಂದು ಸುಮಂತ್ ಹೇಳಿದ್ದನು. ಆದರೆ, ಇದೀಗ ಚಂದನ್‌ರನ್ನು ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ ಎಂದು ಸುಮಂತ್ ಹೇಳಿರುವ ಆಡಿಯೋ ಒಂದು ವೈರಲ್ ಆಗಿದ್ದು, ಇದೀಗ ಧರ್ಮಸ್ಥಳದ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

Read Full Story

10:07 PM (IST) Sep 10

ಗಣೇಶ ಮೆರವಣಿಗೆ ವೇಳೆ ಪ್ರಚೋದಿಸುವವರನ್ನು ದೂರವಿಡಿ - ಸಚಿವ ಚಲುವರಾಯಸ್ವಾಮಿ

ಸಾಮೂಹಿಕ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮುಸಲ್ಮಾನರು ದೂರ ಇರುವುದು ಒಳ್ಳೆಯದು. ಪ್ರಚೋದನೆ ನೀಡುವವರನ್ನೂ ಪೊಲೀಸರಿಗೆ ಹಿಡಿದುಕೊಡುವಂತೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

Read Full Story

09:40 PM (IST) Sep 10

ರಾಜ್ಯದಲ್ಲಿ ಔರಂಗಜೇಬ್ ಸರ್ಕಾರ - ಸಿದ್ಧರಾಮಯ್ಯ ವಿರುದ್ಧ ಶಾಸಕ ಯತ್ನಾಳ್ ವಾಗ್ದಾಳಿ!

ರಾಜ್ಯದಲ್ಲಿ ಔರಂಗಜೇಬ ಸರ್ಕಾರ ಇದ್ದಂತಿದೆ. ಚಿತ್ರದುರ್ಗ ಜಿಲ್ಲೆಯೇನೂ ಪಾಕಿಸ್ತಾನ ಅಲ್ಲ ಎಂದು ಶರಣ್ ಪಂಪ್‌ವೆಲ್‌ಗೆ ಜಿಲ್ಲೆಗೆ ಪ್ರವೇಶ ನಿರ್ಬಂಧ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.

Read Full Story

09:32 PM (IST) Sep 10

ಗಣಪತಿ ಹುಂಡಿಯಲ್ಲಿ ಸೌಜನ್ಯಾ ಜಪ! ಧರ್ಮಸ್ಥಳವನ್ನು ಕಾಪಾಡಪ್ಪಾ ಎಂದು ಚೀಟಿ ಬರೆದ ಭಕ್ತರು!

ಚಿಕ್ಕಮಗಳೂರಿನ ಹಿಂದೂ ಮಹಾಸಭಾ ಗಣಪತಿಯ ಹುಂಡಿ ಎಣಿಕೆಯಲ್ಲಿ ಹಣದ ಜೊತೆಗೆ ಸೌಜನ್ಯಾ ಪ್ರಕರಣದ ನ್ಯಾಯ, ಧರ್ಮಸ್ಥಳದ ರಕ್ಷಣೆ ಕುರಿತ ಭಕ್ತರ ಪತ್ರಗಳು ಪತ್ತೆಯಾಗಿವೆ. ಹಲವು ಪತ್ರಗಳ ಬೇಡಿಕೆ ಇಲ್ಲಿವೆ ನೋಡಿ..

Read Full Story

09:15 PM (IST) Sep 10

ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ - ಕಾಂಗ್ರೆಸ್ ತುಷ್ಟಿಕರಣ ರಾಜಕೀಯಕ್ಕೆ ಸಂಸದ ರಾಘವೇಂದ್ರ ಕಿಡಿ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಸ್ವಚ್ಛಂದವಾಗಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳು ಅತ್ಯಂತ ಆತಂಕಕಾರಿಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

Read Full Story

09:09 PM (IST) Sep 10

ಚಂದ್ರ ಗ್ರಹಣ ವೀಕ್ಷಣೆ ವೇಳೆ ಆಗಸದಲ್ಲಿ ಪತ್ತೆಯಾದ ನಿಗೂಢ ವಸ್ತು, ದಿಕ್ಕು ಬದಲಿಸಿದ ಅಧ್ಯಯನ

ಇತ್ತೀಚೆಗೆ ಘಟಿಸಿದ ರಾಹು ಗ್ರಸ್ಥ ಚಂದ್ರಗ್ರಹಣ ಬಹುತೇಕರು ನೋಡಿದ್ದಾರೆ. ಈ ಚಂದ್ರಗ್ರಹಣವನ್ನು ವಿಜ್ಞಾನಿಗಳು ಟೆಲಿಸ್ಕೋಪ್ ಮೂಲಕ ಅಧ್ಯಯನಕ್ಕಾಗಿ ಸೂಕ್ಷ್ಮವಾಗಿ ಗಮನಿಸಿದ್ದಾರೆ. ಆದರೆ ಈ ಗ್ರಹಣದ ವೇಳೆ ಆಗಸದಲ್ಲಿ ನಿಗೂಢ ವಸ್ತುವೊಂದು ಪತ್ತೆಯಾಗಿದೆ.

Read Full Story

08:58 PM (IST) Sep 10

ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರದ ಅಭಯ, ಪೊಲೀಸರಿಗೂ ರಕ್ಷಣೆ ಇಲ್ಲ - ಸಂಸದ ಬೊಮ್ಮಾಯಿ ಆರೋಪ

ಕಳೆದ ಎರಡು ವರ್ಷ ವಾಡಿಗೆಗಿಂತ ಹೆಚ್ಚು ಮಳೆ ಆಗಿದೆ.ರೈತರ ಬೆಳೆ‌ ನಷ್ಟ ವಾಗಿದೆ, ಬಡವರ ಮನೆ ಬಿದ್ದಿವೆ. ಇಷ್ಟೆಲ್ಲಾ ಆದರೂ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

Read Full Story

08:58 PM (IST) Sep 10

ಭಾರತದ ಹೊಸ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮಾಸಿಕ ಸಂಬಳವೆಷ್ಟು?

ಸಿ.ಪಿ. ರಾಧಾಕೃಷ್ಣನ್ ಅವರು ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ಮಾಸಿಕ ಸಂಬಳ, ಐಷಾರಾಮಿ ನಿವಾಸ, ಭದ್ರತೆ ಸೇರಿದಂತೆ ಹಲವು ಸವಲತ್ತುಗಳು ಲಭ್ಯವಾಗಲಿವೆ. ಹಾಗಾದರೆ, ಉಪರಾಷ್ಟ್ರಪತಿಗೆ ಮಾಸಿಕವಾಗಿ ಎಷ್ಟು ಸಂಬಳ ಇರುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Read Full Story

08:33 PM (IST) Sep 10

ಮದ್ದೂರು ಗಲಾಟೆ - ತಪ್ಪಿತಸ್ಥರಿಗೆ ಯಾವುದೇ ರಕ್ಷಣೆ ಇಲ್ಲ - ಗೃಹ ಸಚಿವ ಪರಮೇಶ್ವರ್

ಮದ್ದೂರಿನಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಯಾರು ಕಾರಣಕರ್ತರಾಗಿದ್ದಾರೋ, ಯಾರು ತಪ್ಪಿತಸ್ಥರಿದ್ದಾರೋ ಅವರನ್ನು ಯಾವುದೇ ಕಾರಣಕ್ಕೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ.

Read Full Story

08:17 PM (IST) Sep 10

ಕರ್ನಾಟಕದಲ್ಲಿ ಶೇ.3 ಅಧಿಕ ಮುಂಗಾರು ಮಳೆ; ಜೂ.1ರಿಂದ ಸೆ.10ರವರೆಗಿನ ಮಳೆ ವರದಿ ಇಲ್ಲಿದೆ ನೋಡಿ!

2025ರ ನೈಋತ್ಯ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಮಳೆಯಾಗಿದೆ ಎಂದು KSNDMC ವರದಿ ಮಾಡಿದೆ. ಜೂನ್ ನಿಂದ ಸೆಪ್ಟೆಂಬರ್ 10ರವರೆಗೆ ವಾಡಿಕೆಯಂತೆ ಮಳೆಯಾಗಿದೆ. ಆಗಸ್ಟ್‌ನಲ್ಲಿ ಹೆಚ್ಚು ಸೆಪ್ಟೆಂಬರ್‌ನಲ್ಲಿ ಕೊರತೆಯಾಗಿದೆ. ಒಟ್ಟಾರೆ ಮಳೆ ಪ್ರಮಾಣವು ಸಾಮಾನ್ಯಕ್ಕಿಂತ ಶೇ.3ರಷ್ಟು ಹೆಚ್ಚಾಗಿದೆ.

Read Full Story

08:13 PM (IST) Sep 10

ಪ್ರತಿ ಬಾರಿ ಆ್ಯಪಲ್ 9.41ಕ್ಕೆ ಐಫೋನ್ ಲಾಂಚ್ ಮಾಡುವುದೇಕೆ? ರಹಸ್ಯ ಬಹಿರಂಗ

ಆ್ಯಪಲ್ ಐಫೋನ್ ಇರಲಿ ಯಾವುದೇ ಉತ್ಪನ್ನ ಇರಲಿ. ಲಾಂಚ್ ಅಥವಾ ಡಿಸ್‌ಪ್ಲೇ ಸಮಯ 9.41. ವರ್ಷ ಅದೆಷ್ಟೇ ಉರುಳಿದರೂ ಈ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಸಮಯದ ಹಿಂದಿನ ರಹಸ್ಯ ಬಯಲಾಗಿದೆ.

Read Full Story

07:34 PM (IST) Sep 10

ಕಾಂಗ್ರೆಸ್ ಸರ್ಕಾರದಿಂದ ಮುಸಲ್ಮಾನ್ ರಾಜ್ಯ ಸ್ಥಾಪನೆ - ಕೆ.ಎಸ್‌.ಈಶ್ವರಪ್ಪ

ಹಿಂದೂಸ್ತಾನದ ಅನ್ನ ತಿಂದು ಪಾಕಿಸ್ತಾನಕ್ಕೆ ಜೈಕಾರ ಹಾಕ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವುದಾದರೆ ದೇಶ ಬಿಟ್ಟು ತೊಲಗಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗುಡುಗಿದರು.

Read Full Story

07:26 PM (IST) Sep 10

ಅಕ್ಟೋಬರ್‌ನಿಂದ ದೇಶಾದ್ಯಂತ ಮತದಾರ ಪಟ್ಟಿ ಪರಿಷ್ಕರಣೆಗೆ ಚುನಾವಣಾ ಆಯೋಗ ತಯಾರಿ

ಬಿಹಾರದಲ್ಲಿ ಕೋಲಾಹಲ ಎಬ್ಬಿಸಿದ ಮತದಾರರ ಪಟ್ಟಿ ಪರಿಷ್ಕರಣೆ (SIR) ಇದೀಗ ದೇಶ್ಯಾದ್ಯಂತ ನಡೆಯಲಿದೆ. ಅಕ್ಟೋಬರ್ ತಿಂಗಳಿನಿಂದ ದೇಶದಲ್ಲೇ ನಕಲಿ ಮತದಾರರು ಪಟ್ಟಿಯಿಂದ ಡಿಲೀಟ್ ಆಗಲಿದೆ.

Read Full Story

06:52 PM (IST) Sep 10

ನಟ ಪ್ರಥಮ್‌ಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿಗಳಾದ ರೌಡಿಶೀಟರ್ ಬೇಕರಿ ರಘು, ಯಶಸ್ವಿನಿ ಬಂಧನ!

ನಟ ದರ್ಶನ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ನಟ ಪ್ರಥಮ್‌ಗೆ ಡ್ರ್ಯಾಗರ್ ತೋರಿಸಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ರೌಡಿಶೀಟರ್ ಬೇಕರಿ ರಘು ಮತ್ತು ಯಶಸ್ವಿನಿಯನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದರಿಂದ ಈ ಬಂಧನ ನಡೆದಿದೆ.

Read Full Story

06:47 PM (IST) Sep 10

ಐದು ಖ್ಯಾತ ನಿರ್ದೇಶಕರಿಂದ ‘ದೈವ’ ಚಿತ್ರದ ಟೀಸರ್ ಭರ್ಜರಿ ಲಾಂಚ್ - ಪಕ್ಕಾ ದೇಸಿ ಕಥಾಹಂದರವಂತೆ!

'ದೈವ' ಎಂದ ಕೂಡಲೇ ಇದು ಪೌರಾಣಿಕ ಚಿತ್ರವಲ್ಲ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಒಂದು ಕಮರ್ಷಿಯಲ್ ಸಿನಿಮಾ. ಈಗಾಗಲೇ ಚಿತ್ರೀಕರಣ ಮುಗಿದಿರುವ ಈ ಚಿತ್ರ ಈಗ ರೀರೆಕಾರ್ಡಿಂಗ್‌ನಿಂದ ಸಿಂಗಾರಗೊಳ್ಳುತ್ತಿದೆ.

Read Full Story

06:17 PM (IST) Sep 10

ಕೊಲ್ಲೂರು ಮೂಕಾಂಬಿಕೆಗೆ ವಜ್ರದ ಕಿರೀಟ ಸಮರ್ಪಿಸಿದ ಸಂಗೀತ ಮಾಂತ್ರಿಕ ಇಳಯರಾಜ!

ಸಂಗೀತ ಮಾಂತ್ರಿಕ ಇಳಯರಾಜ ಅವರು ಕೊಲ್ಲೂರು ಮೂಕಾಂಬಿಕಾ ದೇವಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ವಜ್ರಖಚಿತ ಕಿರೀಟ ಮತ್ತು ಆಭರಣಗಳನ್ನು ಸಮರ್ಪಿಸಿದ್ದಾರೆ. ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗವನ್ನೂ ಅರ್ಪಿಸಿ, ದೇವಿಯ ಅನುಗ್ರಹದಿಂದ ತಮ್ಮ ಜೀವನದಲ್ಲಿ ನಡೆದ ಪವಾಡಗಳನ್ನು ಸ್ಮರಿಸಿಕೊಂಡರು.

Read Full Story

06:17 PM (IST) Sep 10

ಧರ್ಮಸ್ಥಳ ಬುರುಡೆ ಪ್ರಕರಣ - ಎಸ್ಐಟಿ ತನಿಖೆಯ ರೋಚಕ ತಿರುವು, ಸೌಜನ್ಯ ಮಾವ ವಿಠಲ್ ಗೌಡಗೆ ಬಂಗ್ಲೆಗುಡ್ಡೆ ಹತ್ತಿಸಿದ ಎಸ್‌ಐಟಿ!

ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಯಲ್ಲಿ ಎಸ್‌.ಐ.ಟಿ ತಂಡವು ಪ್ರಮುಖ ಸಾಕ್ಷಿದಾರರಾದ ವಿಠಲ್ ಗೌಡ, ಪ್ರದೀಪ್, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ಯೂಟ್ಯೂಬರ್ ಅಭಿಷೇಕ್, ಮನಾಫ್ ಅವರನ್ನು ವಿಚಾರಣೆ ನಡೆಸಿದೆ. ಸ್ಥಳ ಮಹಜರು ಮತ್ತು CrPC ಸೆಕ್ಷನ್ 161 ಅಡಿ ಹೇಳಿಕೆಗಳನ್ನು ದಾಖಲಿಸಲಾಗಿದೆ.  

Read Full Story

05:21 PM (IST) Sep 10

ವಿಶ್ವಾದ್ಯಂತ ಒಂದೇ ದಿನ ರಿಷಬ್‌ ಶೆಟ್ಟಿ 'ಕಾಂತಾರ ಚಾಪ್ಟರ್ 1' ಬಿಡುಗಡೆ

ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿನ ಸಿನಿಮಾ ಡಿಸ್ಟ್ರಿಬ್ಯೂಷನ್‌ ಕುರಿತ ಮಾಹಿತಿಯನ್ನು ಹೊಂಬಾಳೆ ಫಿಲಂಸ್ ನೀಡಿದ್ದು, ಡ್ರೀಮ್ ಸ್ಕ್ರೀನ್ಸ್ ಇಂಟರ್‌ನ್ಯಾಷನಲ್‌ ಈ ಎರಡು ದೇಶಗಳಲ್ಲಿ ಸಿನಿಮಾ ವಿತರಣೆ ಮಾಡಲಿದೆ.

Read Full Story

05:19 PM (IST) Sep 10

ರಿಷಬ್ ಶೆಟ್ಟಿ ಕಾಂತಾರಾ 1 ಪ್ಯಾನ್ ವರ್ಲ್ಡ್ ಸಿನಿಮಾ, 30ಕ್ಕೂ ಹೆಚ್ಚು ದೇಶ 7 ಭಾಷೆಯಲ್ಲಿ ರಿಲೀಸ್

ರಿಷಬ್ ಶೆಟ್ಟಿಯ ಕಾಂತಾರಾ ಚಾಪ್ಟರ್ 1 ಸಿನಿಮಾಗಾಗಿ ದೇಶವೇ ಕಾಯುತ್ತಿದೆ.  ಇದರ ನಡುವೆ ಕನ್ನಡ ಸಿನಿಮಾ ಇದೀಗ ಪ್ಯಾನ್ ವರ್ಲ್ಡ್ ಸಿನಿಮಾ ಆಗಿ ಬಿಡುಗಡೆಯಾಗುತ್ತಿರುವ ಮಾಹಿತಿ ಹೊರಬಿದ್ದಿದೆ. ಕಾಂತಾರಾ 1 ಸಿನಿಮಾ 30ಕ್ಕೂ ಹೆಚ್ಚು ದೇಶ 7 ಭಾಷೆಯಲ್ಲಿ ರಿಲೀಸ್ ಆಗುತ್ತಿದೆ.

Read Full Story

05:09 PM (IST) Sep 10

ಸಂಸದ ಈರಣ್ಣ ಕಡಾಡಿಗೆ ದೆಹಲಿ ಕರ್ನಾಟಕದ ಭವನದಲ್ಲಿ ರೂಮು ಕೊಡದೇ ನೀವ್ಯಾರು? ಎಂದು ಕೇಳಿದ ಸಿಬ್ಬಂದಿ!

ದೆಹಲಿಯ ಕರ್ನಾಟಕ ಭವನದಲ್ಲಿ ಸಂಸದ ಈರಣ್ಣ ಕಡಾಡಿ ಅವರು ರೂಮು ಕೇಳಿದರೆ, ಅಲ್ಲಿನ ಸಿಬ್ಬಂದಿ ನೀವ್ಯಾರು ಎಂದು ಕೇಳಿದ್ದಕ್ಕೆ ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೂಲಸೌಕರ್ಯಗಳ ಕೊರತೆ, ಅಸಮರ್ಪಕ ಆಹಾರ ಮತ್ತು ವಸತಿ ವ್ಯವಸ್ಥೆಗಳ ಬಗ್ಗೆ  ಸಿಬ್ಬಂದಿಗಳ ನಿರ್ಲಕ್ಷ್ಯವನ್ನು ಟೀಕಿಸಿದ್ದಾರೆ.

Read Full Story

04:25 PM (IST) Sep 10

ಬಿಪಿಎಲ್ ಕಾರ್ಡ್‌ಗಳ ಮೇಲೆ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಅನರ್ಹ ಬಿಪಿಎಲ್ ಪಡಿತರ ಚೀಟಿ ರದ್ದತಿಗೆ ಸಿಎಂ ಸೂಚನೆ. ಅನ್ನಭಾಗ್ಯ ಯೋಜನೆಯಲ್ಲಿ ಪೌಷ್ಟಿಕ ಆಹಾರ ಕಿಟ್‌ಗಳ ಪರಿಚಯ. ಪರಿಶಿಷ್ಟ ಜಾತಿ-ಪಂಗಡಗಳಿಗೆ ಹೊಸ ನ್ಯಾಯಬೆಲೆ ಅಂಗಡಿಗಳ ಹಕ್ಕು.
Read Full Story

04:17 PM (IST) Sep 10

'ಬಿಜೆಪಿಯವರು ಮಾಡಲು ಬೇರೇನೂ ಕೆಲಸವಿಲ್ಲ..; ಮದ್ದೂರು ಚಲೋ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಸೆಪ್ಟೆಂಬರ್ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲಬುರಗಿಗೆ ಭೇಟಿ ನೀಡಲಿದ್ದು, ಸೆ.17 ರಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಯ 'ಮದ್ದೂರು ಚಲೋ' ಕಾರ್ಯಕ್ರಮವನ್ನು ಟೀಕಿಸಿದ್ದಾರೆ

Read Full Story

04:09 PM (IST) Sep 10

ಭಾರತದಿಂದ ವಿಮಾನ ಹತ್ತಿ ದುಬೈನಲ್ಲಿ ಹೊಸ ಐಫೋನ್ ಖರೀದಿಸಿ ವಾಪಾಸ್ಸಾದರೂ ಹಣ ಉಳಿತಾಯ

ಹೊಸ ಐಫೋನ್ 17 ಬಿಡುಗಡೆಯಾಗಿದೆ. ಕಡಿಮೆ ಬೆಲೆಗೆ ಐಫೋನ್ 17 ಖರೀದಿಸಲು ಒಂದು ಉಪಾಯವಿದೆ. ಭಾರತದಿಂದ ವಿಮಾನ ಹತ್ತಿ ದುಬೈಗೆ ತೆರಳಿ ಐಫೋನ್ ಖರೀದಿಸಿ ಭಾರತಕ್ಕೆ ಮರಳಿದರೂ ಹಣ ಉಳಿತಾಯ ಮಾಡಲು ಸಾಧ್ಯವಿದೆ.

Read Full Story

04:05 PM (IST) Sep 10

ಕೊಪ್ಪಳದಲ್ಲಿ ₹2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ; ಹುಬ್ಬಳ್ಳಿಯ ಎನ್‌ಜಿಇಎಫ್‌ ಪುನಶ್ಚೇತನ!

ಕೊಪ್ಪಳದಲ್ಲಿ ಮುಕಂದ ಸುಮಿ ಜೊತೆಗೂಡಿ ₹2,345 ಕೋಟಿ ಹೂಡಿಕೆಯ ಉಕ್ಕು ಘಟಕ ಸ್ಥಾಪಿಸುವುದಾಗಿ ಸುಮಿಟೊಮೊ ಖಚಿತಪಡಿಸಿದೆ. ಯಸ್ಕಾವಾ ಬೆಂಗಳೂರಿನಲ್ಲಿ ಮೋಷನ್ ಕಂಟ್ರೋಲ್ ಘಟಕ ಸ್ಥಾಪಿಸಲಿದೆ. ಹುಬ್ಬಳ್ಳಿ ಎನ್‌ಜಿಇಎಫ್‌ ಪುನಶ್ಚೇತನಕ್ಕೆ ಜೆಎಫ್‌ಇ ಷೋಜಿ ಜೊತೆ ಸರ್ಕಾರ ಮಾತುಕತೆ ನಡೆಸಿದೆ.

Read Full Story

03:55 PM (IST) Sep 10

ಮೈ ಬೆಸ್ಟ್ ಫ್ರೆಂಡ್ ಮೋದಿ ಎನ್ನುತ್ತಲೇ ಯುರೋಪ್ ಜೊತೆ ಸೇರಿ ಭಾರತದ ವಿರುದ್ಧ ಟ್ರಂಪ್ ಭಾರೀ ಪ್ಲ್ಯಾನ್?

ಅಮೆರಿಕದ ಅಧ್ಯಕ್ಷ ಟ್ರಂಪ್ ಮತ್ತೆ ರಷ್ಯಾ ವಿರುದ್ಧ ತಮ್ಮ ನಿಲುವನ್ನು ಕಠಿಣಗೊಳಿಸಿದ್ದಾರೆ. ಈ ಬಾರಿ ಅವರ ಗುರಿ ರಷ್ಯಾದಿಂದ ತೈಲ ಖರೀದಿಸುವ ಮೂಲಕ ರಷ್ಯಾದ ಆರ್ಥಿಕತೆಯನ್ನು ಬಲಪಡಿಸುವ ದೇಶಗಳ ಮೇಲೆ ನೇರ ದಾಳಿ ನಡೆಸಿದ್ದಾರೆ.

Read Full Story

03:11 PM (IST) Sep 10

ಮೊದಲ ಸುದ್ದಿಗೋಷ್ಠಿಯಲ್ಲೇ ಕುಸಿದು ಬಿದ್ದ ಆಸ್ಪತ್ರೆ ದಾಖಲಾದ ಆರೋಗ್ಯ ಸಚಿವೆ, ವಿಡಿಯೋ

ಪ್ರಧಾನಿ ಸೇರಿದಂತೆ ಹಲವು ನಾಯಕರ ಸುದ್ದಿಗೋಷ್ಠಿಯಲ್ಲಿ ನಿಂತಿದ್ದ ಆರೋಗ್ಯ ಸಚಿವೆ ಏಕಾಏಕಿ ಕುಸಿದು ಬಿದ್ದ ಘಟನೆ ನಡೆದಿದೆ. ಬಿಪಿ ಸಮಸ್ಯೆಯಿಂದ ಅಸ್ವಸ್ಥಗೊಂಡ ಆರೋಗ್ಯ ಸಚಿವೆ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ಪೆ ದಾಖಲಿಸಲಾಗಿದೆ.

Read Full Story

03:00 PM (IST) Sep 10

ರಾಜ್ಯ ಸರ್ಕಾರ ಸೂಚಿಸಿದರೆ ಕನ್ನಡಿಗರ ರಕ್ಷಣೆಗೆ ನೇಪಾಳಕ್ಕೆ ಹೋಗಲು ಸಿದ್ಧ - ಸಂತೋಶ್ ಲಾಡ್

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯುತ್ತಿದ್ದು, ಕನ್ನಡಿಗರು ಸರ್ಕಾರದ ಸೂಚನೆ ಪಾಲಿಸುವಂತೆ ಸಲಹೆ ನೀಡಿದ್ದಾರೆ.

Read Full Story

02:53 PM (IST) Sep 10

ಬಾಹ್ಯಾಕಾಶಕ್ಕೆ ಕಳಿಸಲಾಗಿದ್ದ ಮೆಂತೆ ಮತ್ತು ಹೆಸರು ಕಾಳು ಮತ್ತೆ ಧಾರವಾಡ ಕೃಷಿ ವಿವಿಗೆ‌ ವಾಪಸ್!

ಬಾಹ್ಯಾಕಾಶಕ್ಕೆ ಕಳುಹಿಸಲಾಗಿದ್ದ ಮೆಂತೆ ಮತ್ತು ಹೆಸರು ಕಾಳುಗಳು ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ವಾಪಸ್ ಬಂದಿವೆ. ಬಾಹ್ಯಾಕಾಶದಲ್ಲೇ ಮೊಳಕೆಯೊಡೆದ ಈ ಕಾಳುಗಳ ಮೇಲೆ ಸಂಶೋಧನೆ ನಡೆಯಲಿದ್ದು, ಭವಿಷ್ಯದಲ್ಲಿ ಅಂತರಿಕ್ಷಯಾನಿಗಳಿಗೆ ಆಹಾರವಾಗುವ ಸಾಧ್ಯತೆಯನ್ನು ಪರಿಶೀಲಿಸಲಾಗುವುದು.
Read Full Story

02:24 PM (IST) Sep 10

ಮುಂದಿನ'ಸಂಗಮೇಶ್ ಈಗ್ಲೇ ನನ್ನ ಬಳಿ ಬರಲಿ ಕನ್ವರ್ಟ್ ಮಾಡ್ತೇನೆ..' ಮುಂದಿನ ಜನ್ಮದಲ್ಲಿ ಮುಸ್ಲಿಂನಾಗಿ ಹುಟ್ಟಬೇಕು ಎಂದ ಕಾಂಗ್ರೆಸ್ ಶಾಸಕ ಸಂಗಮೇಶ್‌ಗೆ ಸಾದಿಕ್ ಪಾಶಾ ಸವಾಲು

ಶಾಸಕ ಬಿ.ಕೆ. ಸಂಗಮೇಶ್ ಅವರ 'ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವೆ' ಎಂಬ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಮುಸ್ಲಿಂ ಮುಖಂಡರು ಮತಾಂತರದ ಸವಾಲು ಹಾಕಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
Read Full Story

02:18 PM (IST) Sep 10

ನೇಪಾಳ ಬರ್ನಿಂಗ್ - ಸೋಶಿಯಲ್ ಮೀಡಿಯಾ ಹುಚ್ಚೋ? ವ್ಯವಸ್ಥೆಯ ವಿರುದ್ಧ ಕಿಚ್ಚೋ?

ಭಾರತದ ನೆರೆ ರಾಷ್ಟ್ರಗಳು ಒಂದೊಂದಾಗಿ ಹೊತ್ತಿ ಉರಿಯುತ್ತಿದೆ ಶ್ರೀಲಂಕಾ, ಬಾಂಗ್ಗಾದೇಶ ಇದೀಗ ನೇಪಾಳ. ಸೋಶಿಯಲ್ ಮೀಡಿಯಾ ನಿಷೇಧ ಈ ಮಟ್ಟಕ್ಕೆ ಹಿಂಸಾಚಾರಕ್ಕೆ ಕಾರಣವಾಯಿತಾ?

Read Full Story

01:48 PM (IST) Sep 10

ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಿದವರನ್ನೇ ಅಮಾಯಕರೆಂದ ಎಂ ಲಕ್ಷ್ಮಣ್! ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ

ಮದ್ದೂರಿನ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆ ಬಗ್ಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಂಧಿತರು ನಿಜವಾದ ಅಪರಾಧಿಗಳಲ್ಲ, ಬಿಜೆಪಿ ಒತ್ತಡಕ್ಕೆ ಮಣಿದು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. 

Read Full Story

01:13 PM (IST) Sep 10

ಆಧಾರ್ ಕಾರ್ಡ್‌ ಹೆಸರು ವಿಳಾಸ ಅಪ್ಡೇಟ್ ಮಾಡೋದು ಹೇಗೆ? ಎಷ್ಟು ಶುಲ್ಕ? ಇಲ್ಲಿದೆ ಪೂರ್ಣ ವಿವರ

ಆಧಾರ್ ಕಾರ್ಡ್‌ನಲ್ಲಿ ಜನ್ಮ ದಿನಾಂಕವನ್ನು ಬದಲಾಯಿಸಲು, ನೀವು ಹತ್ತಿರದ ಆಧಾರ್ ಕೇಂದ್ರಕ್ಕೆ ಭೇಟಿ ನೀಡಿ, ಫಾರ್ಮ್ ಅನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಬೇಕು. ಆಧಾರ್ ಬದಲಾಯಿಸಲು ನೀವು ಎಷ್ಟು ಪಾವತಿಸಬೇಕೆಂದು ನೋಡೋಣ.

Read Full Story

12:59 PM (IST) Sep 10

ದಸರಾ ಉದ್ಘಾಟನಾ ವಿವಾದ - ಬಾನು ಬೆನ್ನಿಗೆ ನಿಂತ ರಾಜ್ಯದ ಲೇಖಕಿಯರು, ನಾಳೆ ಮಹತ್ವದ ಸುದ್ದಿಗೋಷ್ಠಿ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿವಾದಕ್ಕೆ ಪ್ರತಿಕ್ರಿಯೆಯಾಗಿ, ಪ್ರಮುಖ ಲೇಖಕಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಆಯ್ಕೆಯ ಸಮರ್ಥನೆ, ಬಾನು ಅವರ ಸಾಹಿತ್ಯ ಕೊಡುಗೆ ಮತ್ತು ಸಾಮಾಜಿಕ ಹೋರಾಟದ ಬಗ್ಗೆ ವಿವರಿಸಲಿದ್ದಾರೆ.

Read Full Story

12:39 PM (IST) Sep 10

ಪಾಕಿಸ್ತಾನ ಪರ ಘೋಷಣೆ ಕೂಗಿದ್ರೂ ಅರೆಸ್ಟ್ ಇಲ್ಲ, 500 ಜನ ದೇಶಭಕ್ತರ ಮೇಲೆ ಕೇಸು, ಸಿಎಂ ಸಿದ್ದರಾಮಯ್ಯ ನೀವು ದೇಶದ್ರೋಹಿಗಳ ಪರ ಇದ್ದೀರಾ? - ಕೆಎಸ್ ಈಶ್ವರಪ್ಪ ಗರಂ

ಮದ್ದೂರಿನ ಗಣೇಶ ಮೆರವಣಿಗೆಯ ಮೇಲಿನ ಕಲ್ಲು ತೂರಾಟ ಪೂರ್ವನಿಯೋಜಿತ ಸಂಚು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಮಸೀದಿಗಳಲ್ಲಿ ಮೊದಲೇ ಕಲ್ಲುಗಳನ್ನು ಸಂಗ್ರಹಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. ಈ ಘಟನೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಯಿತು.
Read Full Story

11:41 AM (IST) Sep 10

Ramesh Aravind Birthday - ಸ್ವಲ್ಪವೂ ಬೇಸರ ತರಿಸದ 'ಕನ್ನಡದ ತ್ಯಾಗರಾಜ'ನ‌ ಸೂಪರ್ ಹಿಟ್ 10 ಸಿನಿಮಾಗಳಿವು!

‘ಸುಂದರ ಸ್ವಪ್ನಗಳು’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಮೇಶ್‌ ಅರವಿಂದ್‌ಗೆ ಇಂದು ಜನ್ಮದಿನದ ಸಂಭ್ರಮ. 60ನೇ ವಯಸ್ಸಿಗೆ ಕಾಲಿಟ್ಟಿರೋ ರಮೇಶ್‌ 140 ಸಿನಿಮಾಗಳಲ್ಲಿ ನಟಿಸಿದ್ದು, 10 ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಎಮೋಶನಲ್‌ ದೃಶ್ಯಗಳಿಗೆ ಜೀವ ತುಂಬುವ ರಮೇಶ್‌ ಅರವಿಂದ್‌, ಅದ್ಭುತವಾದ ನಟ

Read Full Story

11:41 AM (IST) Sep 10

ಸಿಎಂ ಡಿಸಿಎಂ ಬೆನ್ನಿಗಿದ್ದಾರೆ ಎಂಬ ಭಂಡ ಧೈರ್ಯ, ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಪಾಕಿಸ್ತಾನ ಜಿಂದಾಬಾದ್ ಘೋಷಣೆ - ಪ್ರಹ್ಲಾದ್ ಜೋಶಿ ಕಿಡಿ

ಮಸೀದಿಯಿಂದ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆ ಕುರಿತು ಪ್ರಹ್ಲಾದ್ ಜೋಶಿ ಮತ್ತು ಸುಧಾಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನ ತುಷ್ಟೀಕರಣ ನೀತಿಯೇ ಇದಕ್ಕೆಲ್ಲ ಕಾರಣ ಎಂದು ಆರೋಪಿಸಿದ್ದಾರೆ. 

Read Full Story

More Trending News