Published : Dec 14, 2025, 06:37 AM ISTUpdated : Dec 15, 2025, 12:07 AM IST

Karnataka News Live: ತುರುವೇಕೆರೆ - ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!

ಸಾರಾಂಶ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪರ ಅವರ ಆಪ್ತ ಶಾಸಕರು ಬ್ಯಾಟಿಂಗ್‌ ಮುಂದುವರಿಸಿದ್ದಾರೆ. ಜನವರಿ 6ರಂದು ಡಿ.ಕೆ.ಶಿವಕುಮಾರ್‌ಗೆ ಸಿಎಂ ಪಟ್ಟಾಭಿಷೇಕವಾಗುವ ವಿಶ್ವಾಸವಿದೆ ಎಂದು ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ ಪುನರುಚ್ಚರಿಸಿದರೆ, ಡಿಕೆಶಿ ಸದ್ಯದಲ್ಲೇ ಸಿಎಂ ಸ್ಥಾನ ಅಲಂಕರಿಸಲಿದ್ದಾರೆ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಭವಿಷ್ಯ ನುಡಿದಿದ್ದಾರೆ. ಇನ್ನೊಂದೆಡೆ ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ, ಡಿಕೆಶಿಯವರು ನಮ್ಮ ಆರಾಧ್ಯದೈವ ಎಂಬುದರಲ್ಲಿ ಎರಡು ಮಾತಿಲ್ಲ. ಜನವರಿ 6 ಅಥವಾ 9ಕ್ಕೆ ಅವರು ಪ್ರಮಾಣವಚನ ಸ್ವೀಕರಿಸಿದರೆ, ಸಂಭ್ರಮ ಪಡುವುದರಲ್ಲಿ ನಾನೇ ಮೊದಲಿಗ ಎಂದಿದ್ದಾರೆ.

500 grams gold and Rs 10000 cash stolen from turuvekere temple

12:07 AM (IST) Dec 15

ತುರುವೇಕೆರೆ - ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!

ತುರುವೇಕೆರೆ ತಾಲೂಕಿನ ಅರೆಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ದೇವರ ಕತ್ತಿನಲ್ಲಿದ್ದ 500 ಗ್ರಾಂ ಬೆಳ್ಳಿಯ ಸರ ಹಾಗೂ ಹುಂಡಿಯಲ್ಲಿದ್ದ ಸುಮಾರು 10 ಸಾವಿರ ರೂ. ನಗದನ್ನು ಕಳ್ಳರು ದೋಚಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Read Full Story

11:12 PM (IST) Dec 14

ದಾವಣಗೆರೆ - ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ - ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!

ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ, ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ದಾವಣಗೆರೆಗೆ ತರಲಾಗುತ್ತಿದೆ. ಸಾರ್ವಜನಿಕರ ಅಂತಿಮ ದರ್ಶನಕ್ಕೆ ಹೈಸ್ಕೂಲ್ ಮೈದಾನದಲ್ಲಿ ವ್ಯವಸ್ಥೆ. ಕಲ್ಲೇಶ್ವರ ಮಿಲ್ ಆವರಣದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ.

Read Full Story

10:12 PM (IST) Dec 14

'ರಸ್ತೆ-ಚರಂಡಿ ನಿರ್ಮಾಣದಿಂದ ಬಡವರು ಉದ್ದಾರ ಆಗ್ತಾರಾ?' ಗ್ಯಾರಂಟಿ ಸ್ಕೀಂ ಟೀಕಿಸಿದ ವಿಪಕ್ಷಗಳಿಗೆ ಗೃಹಸಚಿವ ಪರಂ ತಿರುಗೇಟು!

ತುಮಕೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಕೇವಲ ರಸ್ತೆ, ಚರಂಡಿ ನಿರ್ಮಾಣದಿಂದ ಬಡವರ ಉದ್ದಾರ ಸಾಧ್ಯವಿಲ್ಲ, ಸಾವಿರಾರು ವರ್ಷಗಳ ಶೋಷಣೆ ಕೊನೆಗಾಣಿಸಲು ಗ್ಯಾರಂಟಿಗಳು ಅವಶ್ಯಕ ಎಂದರು.

Read Full Story

09:57 PM (IST) Dec 14

ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ

ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಶೋಕಾಚರಣೆ ಹಾಗೂ ನಾಯಕರ ಗೌರವಾರ್ಥ ಶಾಲೆಗಳಿಗೆ ರಜೆ ನೀಡಲಾಗಿದೆ.

Read Full Story

09:38 PM (IST) Dec 14

ಶಾಮನೂರು ಶಿವಶಂಕರಪ್ಪ ನಿಧನ - ಕಾಶಿ ಜಗದ್ಗುರು ಶ್ರೀಗಳ ಸಂತಾಪ,ವೀರಭದ್ರೇಶ್ವರ ಜಾತ್ರಾ ಮಹೋತ್ಸವ ರದ್ದು!

ಹಿರಿಯ ರಾಜಕಾರಣಿ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಕಾಶಿ ಜಗದ್ಗುರು ಡಾ.ಚಂದ್ರಶೇಖರ್ ಶಿವಾಚಾರ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವವನ್ನು ರದ್ದುಗೊಳಿಸಿದ್ದಾರೆ.
Read Full Story

09:18 PM (IST) Dec 14

ಕಾರು ಅಪಘಾತದಲ್ಲಿ ಮುಂಡಗೋಡು ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು, ಮತ್ತಿಬರಿಗೆ ಗಾಯ

ಕಾರು ಅಪಘಾತದಲ್ಲಿ ಮುಂಡಗೋಡು ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು, ಮತ್ತಿಬರಿಗೆ ಗಾಯ, ಸಣ್ಣ ಸೇತುವೆಗೆ ಡಿಕ್ಕಿ ಹೊಡೆದ ಕಾರು ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ ಅಪಘಾತದ ತೀವ್ರತೆ ಹೆಚ್ಚಾಗಿದೆ. ತಹಶಿಲ್ದಾರ್ ಕಚೇರಿ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

Read Full Story

08:42 PM (IST) Dec 14

ಶಾಮನೂರು ಶಿವಶಂಕರಪ್ಪ ನಿಧನ; ತಿರುಪತಿ ಪ್ರಯಾಣ ರದ್ದುಗೊಳಿಸಿ ತಕ್ಷಣವೇ ವಾಪಸ್ ಬರುತ್ತಿರುವ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್ ಕುಟುಂಬ!

ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು 95ನೇ ವಯಸ್ಸಿನಲ್ಲಿ ನಿಧನ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ, ತಿರುಪತಿ ಯಾತ್ರೆಯಲ್ಲಿದ್ದ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಪ್ರಯಾಣ ರದ್ದುಗೊಳಿಸಿ ಹಿಂತಿರುಗುತ್ತಿದ್ದು, ಪಾರ್ಥಿವ ಶರೀರ ದಾವಣಗೆರೆಗೆ ರವಾನಿಸಲು ಸಿದ್ಧತೆ

Read Full Story

08:29 PM (IST) Dec 14

ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?

ಹೊಸಕೋಟೆಗೆ ಮೆಟ್ರೋ ಸಂಪರ್ಕ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಇದರೊಂದಿಗೆ, ನಮ್ಮ ಮೆಟ್ರೋ ಜಾಲವನ್ನು 175 ಕಿ.ಮೀ.ಗೆ ವಿಸ್ತರಿಸಲಾಗುತ್ತಿದ್ದು, ಗುಲಾಬಿ, ನೀಲಿ ಸೇರಿದಂತೆ ಹೊಸ ಮಾರ್ಗಗಳಲ್ಲಿ ಚಾಲಕ ರಹಿತ ರೈಲುಗಳನ್ನು ಪರಿಚಯಿಸಲು ಬಿಎಂಆರ್‌ಸಿಎಲ್‌ ಸಿದ್ಧತೆ ನಡೆಸಿದೆ.

Read Full Story

08:23 PM (IST) Dec 14

ಬಿಗ್ ಬಾಸ್ - ಮೇಕಪ್ ಮಾಡ್ಕೊಳ್ಳೋ ಗ್ಯಾಪ್‌ನಲ್ಲಿ ಕಾವ್ಯಾಗೆ 'ಲವ್ ಪ್ರಪೋಸ್' ಮಾಡೇಬಿಟ್ಟ ಗಿಲ್ಲಿ ನಟ!

ಬಿಗ್ ಬಾಸ್ ಮನೆಯಲ್ಲಿ ಕ್ಯೂಟ್ ಜೋಡಿ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಸಂಬಂಧದ ಬಗ್ಗೆ ಎಲ್ಲರಿಗೂ ಗೊಂದಲವಿದೆ. ಇದೀಗ ಗಿಲ್ಲಿ ನಟ ಮೇಕಪ್ ಕೋಣೆಯಲ್ಲಿ ಕಾವ್ಯಾಗೆ 'ಐ ಲವ್ ಯು' ಎಂದು ಹೇಳಿ ಪ್ರೀತಿ ನಿವೇದನೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾವ್ಯಾ ಅಚ್ಚರಿ ಮತ್ತು ನಗುವಿನಿಂದ ಪ್ರತಿಕ್ರಿಯಿಸಿದ್ದಾರೆ.

Read Full Story

08:14 PM (IST) Dec 14

ಮೀಸಲಾತಿ ಯಾರಪ್ಪನ ಸ್ವತ್ತಲ್ಲ; ಕುರುಬರ ST ಸೇರ್ಪಡೆ ವಿಚಾರ, ವಿಎಸ್ ಉಗ್ರಪ್ಪ ಮಹತ್ವದ ಹೇಳಿಕೆ!

ಹಾವೇರಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕುರುಬ ಸಮುದಾಯವನ್ನು ಎಸ್‌ಟಿ ಮೀಸಲಾತಿಗೆ ಸೇರಿಸುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕುಲಶಾಸ್ತ್ರ ಅಧ್ಯಯನವಿಲ್ಲದೆ ಸೇರ್ಪಡೆ ಸಾಧ್ಯವೇ? ಒಬಿಸಿಯಿಂದ ಎಸ್‌ಟಿಗೆ ಬರುವಾಗ ಅವರ ಮೀಸಲಾತಿ ಪಾಲನ್ನೂ ತರಬೇಕು ಎಂಬ ಷರತ್ತನ್ನು ಮುಂದಿಟ್ಟಿದ್ದಾರೆ.

Read Full Story

08:11 PM (IST) Dec 14

ಹೊಸ ವರ್ಷದ ಆಫರ್‌ ನಲ್ಲಿ ಟಿವಿ, ಮೊಬೈಲ್ ಖರೀದಿಸಲು ಫ್ಲಾನ್ ಮಾಡಿದ್ರೆ ನಿಮಗಿದು ಶಾಕಿಂಗ್ ಸುದ್ದಿ!

ಜನವರಿಯಿಂದ ಎಲ್‌ಇಡಿ ಟೀವಿಗಳ ದರ ಹೆಚ್ಚಾಗುವ ಸಾಧ್ಯತೆಯಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೆಮೊರಿ ಚಿಪ್‌ಗಳ ಕೊರತೆ, ಚಿಪ್‌ಗಳ ಬೆಲೆ ಏರಿಕೆ ಮತ್ತು ರುಪಾಯಿ ಮೌಲ್ಯ ಕುಸಿತ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಈ ಬೆಲೆ ಏರಿಕೆಯು ಇತರ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಮೇಲೂ ಪರಿಣಾಮ ಬೀರಲಿದೆ.

Read Full Story

07:56 PM (IST) Dec 14

Bigg Boss - ಅಬ್ಬಬ್ಬಾ! ಗಿಲ್ಲಿ ಮೇಲೆ ಅಶ್ವಿನಿಗೆ ಇದೆಂಥ ಲವ್​? ನನ್ನ ಮನಸ್ಸು ಪರಿವರ್ತಿಸಿದ್ದೂ ಇವನೇ ಅಂದ ಧ್ರುವಂತ್​

ಬಿಗ್​ಬಾಸ್ ಮನೆಯಲ್ಲಿ ಸಂಬಂಧಗಳು ಯಾವ ಕ್ಷಣದಲ್ಲಿ ಬೇಕಾದರೂ ಬದಲಾಗಬಹುದು ಎಂಬುದಕ್ಕೆ ಹೊಸ ಸೇರ್ಪಡೆಯಾಗಿದೆ. ಹಾವು-ಮುಂಗುಸಿಯಂತಿದ್ದ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಇದೀಗ ಸ್ನೇಹಿತರಾಗಿದ್ದು, ಗಿಲ್ಲಿಯಿಂದಲೇ ತನ್ನ ಮನಸ್ಸು ಪರಿವರ್ತನೆಯಾಗಿದೆ ಎಂದು ಧ್ರುವಂತ್ ಹೇಳಿಕೊಂಡಿದ್ದಾರೆ. 

 

Read Full Story

07:47 PM (IST) Dec 14

ಶಾಕಿಂಗ್ - ರಾತ್ರಿಯಾದ್ರೆ ಬೆಡ್‌ರೂಂ ಬಳಿ ಬರ್ತಾನೆ ಸೈಕೋ! ಅಪರಿಚಿತನ ಕಾಟಕ್ಕೆ ಬೇಸತ್ತ ವೈದ್ಯೆ!

ಬೆಂಗಳೂರಿನಲ್ಲಿ ಮಹಿಳಾ ವೈದ್ಯೆಯೊಬ್ಬರು ಕಳೆದ ಮೂರು ತಿಂಗಳಿಂದ ಸೈಕೋ ವ್ಯಕ್ತಿಯೊಬ್ಬನಿಂದ ಮಾನಸಿಕ ಕಿರುಕುಳ ಅನುಭವಿಸುತ್ತಿದ್ದಾರೆ. ರಾತ್ರಿ ವೇಳೆ ಮನೆ ಬಳಿ, ವಿಶೇಷವಾಗಿ ಬೆಡ್‌ರೂಂ ಬಳಿ ಬಂದು ದಿಟ್ಟಿಸಿ ನೋಡುವ ಈತನ ಕಾಟದಿಂದ ಬೇಸತ್ತು ವೈದ್ಯೆ ಕೋರಮಂಗಲ ಪೊಲೀಸರಿಗೆ ದೂರು ನೀಡಿದ್ದಾರೆ

Read Full Story

07:31 PM (IST) Dec 14

ಬೆಡ್ತಿ-ವರದಾ ನದಿ ಜೋಡಣೆ ಯೋಜನೆ ಮಹತ್ವ ಬಿಚ್ಚಿಟ್ಟ ಜಲತಜ್ಞ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ!

ಬೆಡ್ತಿ-ವರದಾ ನದಿ ಜೋಡಣೆ ಯೋಜನೆಗೆ ತಪ್ಪು ಕಲ್ಪನೆಯಿಂದ ವಿರೋಧಿಸುವುದು ಬೇಡವೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಪರಿಷ್ಕೃತ ಯೋಜನೆಯಡಿ ಕೇವಲ 10% ನೀರನ್ನು ಮಾತ್ರ ಬಳಸಿಕೊಳ್ಳಲಾಗುವುದು ಮತ್ತು ಇದರಿಂದ ನದಿ ಹರಿವಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Read Full Story

07:17 PM (IST) Dec 14

ಭಾಗಮಂಡಲ ದೇವಾಲಯದ ಮುಂಭಾಗ ಅಂಗಡಿ ಮಳಿಗೆ ನಿರ್ಮಾಣಕ್ಕೆ ಭಕ್ತರು ತೀವ್ರ ವಿರೋಧ

ಕೊಡಗಿನ ಭಾಗಮಂಡಲದ ಭಗಂಡೇಶ್ವರ ದೇವಾಲಯದ ಆದಾಯ ಹೆಚ್ಚಿಸಲು ಜಿಲ್ಲಾಡಳಿತವು ದೇಗುಲದ ಮುಂದೆ ಅಂಗಡಿ ಮಳಿಗೆಗಳನ್ನು ನಿರ್ಮಿಸುತ್ತಿದೆ. ಆದರೆ, ಈ ನಿರ್ಮಾಣದಿಂದ ದೇವಾಲಯದ ಸೌಂದರ್ಯಕ್ಕೆ ಧಕ್ಕೆಯಾಗುತ್ತದೆ ಮತ್ತು ಇದು ನಿಯಮಬಾಹಿರ ಎಂದು ಸ್ಥಳೀಯರು ಹಾಗೂ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Read Full Story

07:16 PM (IST) Dec 14

ರಾಜ್ಯ ರಾಜಕಾರಣದ ಅಜಾತಶತ್ರು ಶಾಸಕ ಶಾಮನೂರು ಶಿವಶಂಕರಪ್ಪ ನಿಧನ!

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ, ಎಐವಿಎಂ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು 95 ನೇ ವಯಸ್ಸಿನಲ್ಲಿ ನಿಧನರಾದರು. ಅವರು 6 ಬಾರಿ ಶಾಸಕ, 1 ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದರು.

Read Full Story

07:05 PM (IST) Dec 14

Yajamana BTS - ಝಾನ್ಸಿಗೆ ಆ್ಯಕ್ಸಿಡೆಂಟ್​ ಆದಾಗ ಏನಾಯ್ತು? ಝುಂ ಎನ್ನೋ ಶಾಕಿಂಗ್​ ವಿಡಿಯೋ ವೈರಲ್​

 ಯಜಮಾನ ಸೀರಿಯಲ್​ನಲ್ಲಿ ಅಪಘಾತದಿಂದ ನೆನಪು ಕಳೆದುಕೊಂಡಿರುವ ಝಾನ್ಸಿಯನ್ನು ಒಲಿಸಿಕೊಳ್ಳಲು ರಾಘು ಅವಳ ಡ್ರೈವರ್ ಆಗಿ ಸೇರಿದ್ದಾನೆ. ಈ ಮೈ ಜುಮ್ಮೆನ್ನಿಸುವ ಅಪಘಾತದ ದೃಶ್ಯವನ್ನು ಹೇಗೆ ಚಿತ್ರೀಕರಿಸಲಾಯಿತು ಎಂಬುದರ ರಿಸ್ಕಿ ಶೂಟಿಂಗ್ ವಿಡಿಯೋವನ್ನು ನಟಿ ಮಧು ಭೈರಪ್ಪ ಹಂಚಿಕೊಂಡಿದ್ದಾರೆ.

Read Full Story

07:02 PM (IST) Dec 14

ಚಾಮರಾಜನಗರದಲ್ಲಿ ಬೇಟೆಗಾರರ ಬಂದೂಕಿನ ಸದ್ದು - ಚಿರತೆ, ನವಿಲು, ಕಾಡುಹಂದಿಗಳೇ ಟಾರ್ಗೆಟ್!

ಚಾಮರಾಜನಗರದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆ ಕಾಡು ಹಂದಿಯೊಂದನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದ್ದು, ಚಿರತೆಗಳನ್ನು ಬೇಟೆಯಾಡಲು ಬಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಬೇಟೆಗಾರರನ್ನು ಶೀಘ್ರವೇ ಬಂಧಿಸುವಂತೆ ಅರಣ್ಯ ಇಲಾಖೆಗೆ ಒತ್ತಾಯ.

Read Full Story

06:43 PM (IST) Dec 14

2028ಕ್ಕೆ ನಾನೇ ಸಿಎಂ, 11 ಜೆಸಿಬಿ ಪೂಜೆ ಮಾಡಿ ಪ್ರಮಾಣ ಸ್ವೀಕರಿಸ್ತೀನಿ, ಬೆಳಗಾವಿಯಲ್ಲಿ ಯತ್ನಾಳ್ ಅಬ್ಬರದ ಭಾಷಣ!

ಅಥಣಿಯಲ್ಲಿ ನಡೆದ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, 2028ರಲ್ಲಿ ತಾವೇ ಮುಖ್ಯಮಂತ್ರಿಯಾಗುವುದಾಗಿ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಸಚಿವ ಸಂತೋಷ್ ಲಾಡ್ ಅವರಿಗೆ ಸವಾಲು ಹಾಕಿದರು.

Read Full Story

06:38 PM (IST) Dec 14

Bigg Boss ನಿರೂಪಣೆ ಮಾಡೋದೇ ಇಲ್ಲ ಎಂದು ಶಾಕ್​ ಕೊಟ್ಟಿದ್ದ ಸುದೀಪ್​ ಒಪ್ಪಿಕೊಂಡಿದ್ಯಾಕೆ? ಕಿಚ್ಚ ಹೇಳಿದ್ದೇನು?

ಬಿಗ್​ಬಾಸ್​ ಸೀಸನ್ 11ರ ನಂತರ ನಿರೂಪಣೆ ಮಾಡುವುದಿಲ್ಲ ಎಂದು ಟ್ವೀಟ್ ಮಾಡಿ ಶಾಕ್ ನೀಡಿದ್ದ ಕಿಚ್ಚ ಸುದೀಪ್, ಇದೀಗ ಮತ್ತೆ ನಿರೂಪಣೆಗೆ ಮರಳಿದ್ದಾರೆ. ವೈಯಕ್ತಿಕ ಕಾರಣಗಳಿಂದ ಹಿಂದೆ ಸರಿದಿದ್ದ ಅವರು, ವಾಹಿನಿಯವರ ಮನವಿಗೆ ಸ್ಪಂದಿಸಿ ಮುಂದಿನ ನಾಲ್ಕು ವರ್ಷಗಳ ಕಾಲ ನಿರೂಪಣೆ ಮಾಡಲು ಒಪ್ಪಿಕೊಂಡಿದ್ದಾರೆ.  

Read Full Story

06:14 PM (IST) Dec 14

Bigg Boss - ತಿಂದ ಮನೆಗೆ ಕನ್ನ ಹಾಕೋರು ಇವ್ರು- ವರ್ತೂರು ಸಂತೋಷ್​ ಗರಂ; ಷೋ ಬಗ್ಗೆ ಹೇಳಿದ್ದೇನು?

ಬಿಗ್​ಬಾಸ್​ 10ರ ಸ್ಪರ್ಧಿ ವರ್ತೂರು ಸಂತೋಷ್, ಶೋ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿರುವ ಇತರ ಸ್ಪರ್ಧಿಗಳ ವಿರುದ್ಧ ಕಿಡಿಕಾರಿದ್ದಾರೆ. ಬಿಗ್​ಬಾಸ್​ ಮನೆಯಲ್ಲಿ ಊಟಕ್ಕೆ ಕೊರತೆ ಇರಲಿಲ್ಲ ಮತ್ತು ಶೋ ಸ್ಕ್ರಿಪ್ಟೆಡ್ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  

Read Full Story

05:50 PM (IST) Dec 14

ಯತ್ನಾಳ್ ಭಾಷಣಕ್ಕೆ ಟಾಂಗ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡ ಸಚಿವ ಸಂತೋಷ್ ಲಾಡ್!

ಬೆಳಗಾವಿಯ ಅಥಣಿಯಲ್ಲಿ, ಶಾಸಕ ಯತ್ನಾಳ್ ಭಾಷಣಕ್ಕೆ ಪ್ರತ್ಯುತ್ತರ ನೀಡಲು ಯತ್ನಿಸಿದ ಸಚಿವ ಸಂತೋಷ್ ಲಾಡ್, ಶಿವಾಜಿ ಮಹಾರಾಜರ ಇತಿಹಾಸದ ಬಗ್ಗೆ ಮಾತನಾಡಿದರು. ಇದರಿಂದ ಕೆರಳಿದ ಯುವಕರು 'ಜೈ ಶ್ರೀರಾಮ್' ಮತ್ತು 'ಜೈ ಶಿವಾಜಿ' ಘೋಷಣೆ ಕೂಗಿ ಅವರ ಭಾಷಣಕ್ಕೆ ಅಡ್ಡಿ, ಇದು ಸಚಿವರ ಅಸಮಾಧಾನಕ್ಕೆ ಕಾರಣವಾಯಿತು.

Read Full Story

05:27 PM (IST) Dec 14

ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ

ಸವಣೂರಿನಲ್ಲಿ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಘಟನೆಗೆ ಸರ್ಕಾರದ ಓಲೈಕೆ ರಾಜಕಾರಣ, ಪೊಲೀಸರ ನಿಷ್ಕ್ರಿಯತೆ ಕಾರಣ ಎಂದು ಸಂಸದ ಬಸವರಾಜ್ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ನ 'ಓಟ್ ಚೋರ್, ಗದ್ದಿ ಚೋಡ್' ಅಭಿಯಾನದಿಂದ ಯಾವುದೇ ಪ್ರಯೋಜನವಿಲ್ಲವೆಂದು ವ್ಯಂಗ್ಯವಾಡಿದರು.

Read Full Story

05:20 PM (IST) Dec 14

ಗಿಲ್ಲಿನಟ 90% ಸುಳ್ಳು 10% ಮಾತ್ರ ಸತ್ಯ; ಕಾವ್ಯಾ ನೋಟಕ್ಕೆ ನಾಚಿ ನೀರಾದ ಮಂಡ್ಯದ ಹೈದ!

ಬಿಗ್ ಬಾಸ್ ಮನೆಯಲ್ಲಿರುವ ಕ್ಯೂಟ್ ಜೋಡಿಯ ಪೈಕಿ ಗಿಲ್ಲಿ ಹೇಳಿದ ಒಂದು ಮಾತಿಗೆ ಕಾವ್ಯಾ ತುಂಬಾ ಆಶ್ಚರ್ಯದಿಂದ ನೋಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಆದ್ರೆ, ಶೇ.90 ಸುಳ್ಳು, ಶೇ.10 ನಿಜ ಹೇಳಿದ ಗಿಲ್ಲಿ ಮಾತ್ರ ನಾಚಿ ನೀರಾಗಿದ್ದಾನೆ.

Read Full Story

05:20 PM (IST) Dec 14

ನೀವು ನಮ್ಮ ಯಜಮಾನರಲ್ಲ - ಅಪಾರ್ಟ್‌ಮೆಂಟ್ ನಿವಾಸಿಗೆ ಎಚ್ಚರಿಕೆ ಕೊಟ್ಟ ಡಿಕೆಶಿಗೆ ಮೋಹನ್‌ದಾಸ್ ಪೈ ಖಂಡನೆ

ಅಪಾರ್ಟ್‌ಮೆಂಟ್‌ ಅಸೋಸಿಯೇಷನ್‌ ಅಧ್ಯಕ್ಷರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಬಹಿರಂಗ ಎಚ್ಚರಿಕೆಗೆ ಉದ್ಯಮಿ ಮೋಹನ್‌ದಾಸ್ ಪೈ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಮಂತ್ರಿಗಳನ್ನು ಪ್ರಶ್ನಿಸುವ ಹಕ್ಕು ನಾಗರಿಕರಿಗಿದೆ ಎಂದು ಪೈ ಪ್ರತಿಪಾದಿಸಿದ್ದಾರೆ.

Read Full Story

05:16 PM (IST) Dec 14

2026 Rahu Gochara - ಈ 3 ರಾಶಿಗಳ ಜನರ ಜೀವನವೇ ಬದಲು! ಹೊಸ ವರ್ಷದಲ್ಲಿ ಹರುಷದ ಹೊಳೆ

2026ರಲ್ಲಿ ರಾಹು ಗ್ರಹವು ಎರಡು ಪ್ರಮುಖ ರಾಶಿ ಪಲ್ಲಟಗಳನ್ನು ಮಾಡಲಿದ್ದು, ಇದು ಹಲವು ರಾಶಿಗಳ ಮೇಲೆ ಪರಿಣಾಮ ಬೀರಲಿದೆ. ಈ ಸಂಚಾರವು ವಿಶೇಷವಾಗಿ ಮಿಥುನ, ತುಲಾ ಮತ್ತು ಕುಂಭ ರಾಶಿಯವರಿಗೆ ವೃತ್ತಿ, ಹಣಕಾಸು ಮತ್ತು ವೈಯಕ್ತಿಕ ಜೀವನದಲ್ಲಿ ಅನುಕೂಲಕರ ಫಲಿತಾಂಶಗಳನ್ನು ತರುವ ನಿರೀಕ್ಷೆಯಿದೆ.
Read Full Story

04:57 PM (IST) Dec 14

ಲವ್​ ಅಜ್ಜಿಯ ಮಾಸ್ಟರ್​ ಪ್ಲ್ಯಾನ್​ನಿಂದ ರೋಚಕ ಟ್ವಿಸ್ಟ್​​ - Amruthadhaare Serial ಯಾವಾಗ ಮುಗಿಯತ್ತೆ?

'ಅಮೃತಧಾರೆ' ಧಾರಾವಾಹಿಯಲ್ಲಿ ಲವ್ ಅಜ್ಜಿಯ ಮರುಪ್ರವೇಶವಾಗಿದ್ದು, ದೂರವಾಗಿರುವ ಗೌತಮ್ ಮತ್ತು ಭೂಮಿಕಾರನ್ನು ಒಂದು ಮಾಡಲು ಸಾಯುವ ನಾಟಕವಾಡಿದ್ದಾಳೆ. ಅಜ್ಜಿಯ ಕೊನೆಯಾಸೆಯಂತೆ ಇಬ್ಬರೂ ಆಶ್ರಮಕ್ಕೆ ಬರಲಿದ್ದು, ಈ ಪ್ಲ್ಯಾನ್ ಯಶಸ್ವಿಯಾಗುವುದೇ ಎಂದು ಕಾದುನೋಡಬೇಕಿದೆ.
Read Full Story

04:47 PM (IST) Dec 14

ಮಾಟ ಮಂತ್ರ ಪರಿಹಾರದ ನಾಟಕ - ಮಲ್ಲೇಶ್ವರಂನಲ್ಲಿ ಚಿನ್ನಾಭರಣ ದೋಚಿದ ನಕಲಿ ಸ್ವಾಮಿಗಳು!

ದೇವಸ್ಥಾನದ ಅನ್ನದಾನಕ್ಕೆ ಸಹಾಯ ಕೇಳುವ ನೆಪದಲ್ಲಿ ಬಂದ ಇಬ್ಬರು ನಕಲಿ ಸ್ವಾಮಿಗಳು, ಮಾಟ ಮಂತ್ರದ ಪರಿಹಾರದ ನಾಟಕವಾಡಿ ಮಲ್ಲೇಶ್ವರಂನ ಮಹಿಳೆಗೆ 48 ಗ್ರಾಂ ಚಿನ್ನಾಭರಣ ದೋಚಿದ್ದಾರೆ. ಗೋಧಿ ಹಿಟ್ಟಿನಲ್ಲಿ ಚಿನ್ನ ಮುಚ್ಚಿಟ್ಟು, 38 ದಿನಗಳ ಕಾಲ ಪೂಜೆ ಮಾಡುವಂತೆ ನಂಬಿಸಿ ವಂಚಿಸಿದ್ದಾರೆ.

Read Full Story

04:29 PM (IST) Dec 14

ಕೆಲವೇ ದಿನಗಳು ಬಾಕಿ; ವೀಕ್ಷಕರ ಇಚ್ಛೆಯಂತೆ Bigg Boss Kannada 12 ಫಿನಾಲೆ ಸ್ಪರ್ಧಿಗಳಿವರು; ಗೆಲ್ಲೋರಾರು?

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಈಗಾಗಲೇ 77 ದಿನಗಳು ಕಳೆದಿವೆ. ಯಾರು ಫಿನಾಲೆ ತಲುಪುತ್ತಾರೆ? ಯಾರು ವಿಜೇತರಾಗುತ್ತಾರೆ ಎನ್ನುವ ಕುತೂಹಲ ಎಲ್ಲರಿಗೂ ಇದ್ದೇ ಇದೆ. ವೀಕ್ಷಕರ ಮತಗಳು ಅಥವಾ ಅಭಿಮಾನಿ ಪ್ರಕಾರ ಯಾರು ಫಿನಾಲೆಗೆ ಹೋಗುತ್ತಾರೆ? ಯಾರು ಗೆಲ್ಲುತ್ತಾರೆ? 

Read Full Story

04:24 PM (IST) Dec 14

ಟ್ರಾಫಿಕ್ ಸಮಸ್ಯೆ ಮಾತ್ರವಲ್ಲ, ಇಂಗಾಲ ಹೊರಸೂಸುವಿಕೆಯಲ್ಲಿ ಕೂಡ ದೇಶದಲ್ಲೇ ಅಗ್ರ ಸ್ಥಾನ ಪಡೆದ ಬೆಂಗಳೂರು!

ಫ್ರಾನ್ಸ್-ಭಾರತದ ಜಂಟಿ ಸಂಶೋಧನೆಯ ಪ್ರಕಾರ, ರಸ್ತೆ ಸಾರಿಗೆಯಿಂದ ಪ್ರತಿ ಕಿ.ಮೀ.ಗೆ ಅತಿ ಹೆಚ್ಚು CO₂ ಹೊರಸೂಸುವ ನಗರವಾಗಿ ಮುಂಬೈ ಹೊರಹೊಮ್ಮಿದೆ. ದೆಹಲಿ, ಬೆಂಗಳೂರು ಸೇರಿದಂತೆ ಪ್ರಮುಖ ಮಹಾನಗರಗಳು ನೈಟ್ರೋಜನ್ ಆಕ್ಸೈಡ್ (NOx) ಮತ್ತು ಕಾರ್ಬನ್ ಮಾನಾಕ್ಸೈಡ್ (CO) ಹೊರಸೂಸುವಿಕೆಯಲ್ಲಿ ಮುಂದಿದೆ.

Read Full Story

04:24 PM (IST) Dec 14

Bigg Boss ಸ್ಕ್ರಿಪ್ಟೆಡ್ಡಾ? ದೊಡ್ಮನೆಯ ಶಾಕಿಂಗ್​ ವಿಷ್ಯ ರಿವೀಲ್​ ಮಾಡಿದ ಟ್ಯಾಟೂ ಆರ್ಟಿಸ್ಟ್​ ಮನೋಜ್​ ಕುಮಾರ್​

ಬಿಗ್​ಬಾಸ್ ಶೋ ಸ್ಕ್ರಿಪ್ಟೆಡ್ ಎಂಬ ಆರೋಪ ಸಾಮಾನ್ಯವಾಗಿದ್ದು, ಈ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಲೇ ಇವೆ. ಇತ್ತೀಚೆಗೆ ಸ್ಪರ್ಧಿ ರಜತ್​ ಅವರಿಗೆ ಟ್ಯಾಟೂ ಹಾಕಲು ಮನೆಗೆ ಹೋಗಿದ್ದ ಕಲಾವಿದ ಮನೋಜ್ ಕುಮಾರ್, ತಮ್ಮ ಅನುಭವ ಹಂಚಿಕೊಂಡಿದ್ದಾರೆ.  

Read Full Story

03:49 PM (IST) Dec 14

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಸೀಮಂತ ಸಂಭ್ರಮ; ಶಾಸ್ತ್ರಬದ್ಧ ಸಂಪ್ರದಾಯ ಆಚರಣೆ!

ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸತೀಶ್ ನೇತೃತ್ವದಲ್ಲಿ, ತಮ್ಮ ಸಹೋದ್ಯೋಗಿ ತುಂಬು ಗರ್ಭಿಣಿ ಉಮಾ ಅವರಿಗೆ ಅದ್ಧೂರಿಯಾಗಿ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಿದರು. ಈ ಮೂಲಕಮಾನವೀಯ ಮೌಲ್ಯಗಳು ಮತ್ತು ಸಹೋದ್ಯೋಗಿಗಳ ನಡುವಿನ ಬಾಂಧವ್ಯವನ್ನು ಎತ್ತಿ ತೋರಿಸಿತು.

Read Full Story

03:45 PM (IST) Dec 14

BBK 12 - ಕಿಚ್ಚ ಸುದೀಪ್‌ ಮುಂದೆ ರಜತ್‌ ಬೆಂಡೆತ್ತಿದ ಅಶ್ವಿನಿ ಗೌಡ; ವೀಕ್ಷಕರಿಂದ ಭಾರೀ ಮೆಚ್ಚುಗೆ

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ರಜತ್‌, ಅಶ್ವಿನಿ ಗೌಡ ಮಧ್ಯೆ ದೊಡ್ಡ ಜಗಳ ಆಗಿದೆ. ಕಚಡಾ, ಮುದುಕಿ, ಥರ್ಡ್‌ ರೇಟೆಡ್‌ ಜೋಕ್‌ ಎಂದೆಲ್ಲ ಒಂದಿಷ್ಟು ಮಾತುಗಳು ಕೇಳಿ ಬಂದಿತ್ತು. ಈಗ ದೊಡ್ಮನೆಯಲ್ಲಿ ಸೂಪರ್‌ ಸಂಡೇ ವಿಥ್‌ ಸುದೀಪ ಎಪಿಸೋಡ್‌ನಲ್ಲಿ ಚರ್ಚೆ ಆಗಿದೆ. 

Read Full Story

02:53 PM (IST) Dec 14

ಮಗಳ ಸುರಕ್ಷತೆಗಾಗಿ ಅಮ್ಮನೇ ಅಪ್ಪನಾದ - ಗಂಡನ ಸಾವಿನ ನಂತರ ಗಂಡಿನಂತೆ ವೇಷ ಧರಿಸಿ ಬದುಕಿದ ತಾಯಿ

ವಿಧವೆ ತಾಯಿ ಅಥವಾ ಒಂಟಿಯಾಗಿ ಮಹಿಳೆಯೊಬ್ಬಳು ಮಕ್ಕಳನ್ನು ಅದರಲ್ಲೂ ಹೆಣ್ಣು ಮಗುವನ್ನು ಸಾಕುವುದು ಸುಲಭದ ಕೆಲಸವಲ್ಲ. ಹೆಣ್ಣೊಬ್ಬಳು ಒಂಟಿಯಾಗಿದ್ದಾಳೆ ಎಂದರೆ ಸಹಾಯದ ನೆಪದಲ್ಲಿ ಹತ್ತಿರ ಬರಲು ಬಯಸುವವರು ಸಾವಿರಾರು ಜನ ಹೀಗಿರುವಾಗ ವಿಧವೆ ತಾಯೊಬ್ಬಳು ಮಗಳ ರಕ್ಷಣೆಗಾಗಿ ವೇಷವನ್ನೇ ಬದಲಿಸಿ ಬದುಕಿದ್ದಾಳೆ.

Read Full Story

02:39 PM (IST) Dec 14

ನಾನು ಹೋಗ್ತಿದೀನಿ, ಇಲ್ಲಿಗೆ ಮತ್ತೆ ಬರೋಕಾಗಲ್ಲ-Bigg Boss ಶೋನಿಂದ ರಕ್ಷಿತಾ ಶೆಟ್ಟಿ, ಧ್ರುವಂತ್‌ ಔಟ್!; ಅಧಿಕೃತ

Bigg Boss Kannada Season 12 Elimination: ಈ ವಾರ ಡಬಲ್‌ ಎಲಿಮಿನೇಶನ್‌ ಇದೆ. ಈ ವಾರ ಒಬ್ಬರಲ್ಲ, ಇಬ್ಬರು ಮನೆಯಿಂದ ಹೊರಗಡೆ ಹೋಗ್ತಾರೆ ಎಂದು ಕಿಚ್ಚ ಸುದೀಪ್‌ ಅವರು ಘೋಷಣೆ ಮಾಡಿದ್ದಾರೆ. ಸಂಡೇ ವಿಥ್‌ ಸುದೀಪ್‌ ಎಪಿಸೋಡ್‌ನಲ್ಲಿ ಡಬಲ್‌ ಎಲಿಮಿನೇಶನ್‌ ಆಗಿದೆ ಎನ್ನಲಾಗಿದೆ.

Read Full Story

02:17 PM (IST) Dec 14

ದೇವರು ಒಂದು ಕೇಳಿದ್ರೆ, ಎರಡು ಕೊಟ್ಟು ಆಶೀರ್ವದಿಸಿದ - Ramachari Serial ನಟಿ ಐಶ್ವರ್ಯಾ ಮನೆಯಲ್ಲಿ ಡಬಲ್‌ ಸಂಭ್ರಮ

ಕನ್ನಡ ಕಿರುತೆರೆ ನಟಿ ಐಶ್ವರ್ಯಾ ಸಾಲೀಮಠ ಕೂಡ ಮಗುವಿನ ನಿರೀಕ್ಷೆಯಲ್ಲಿರುವ ವಿಷಯವನ್ನು ತಿಳಿಸಿದ್ದರು. ಈಗ ಇವರ ಖುಷಿ ಡಬಲ್‌ ಆಗಿದೆ. ಈ ವಿಷಯವನ್ನು ಅವರೇ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅನೇಕರು ಶುಭಾಶಯವನ್ನು ತಿಳಿಸಿದ್ದಾರೆ. ಹಾಗಾದರೆ ಏನದು?

Read Full Story

01:51 PM (IST) Dec 14

ಪ್ರತಿಭಾವಂತ ವಿದ್ಯಾರ್ಥಿನಿ ಪ್ರಿಯಾಂಕಾ ಇನ್ನಿಲ್ಲ; ಹೊಟ್ಟೆನೋವು ತಾಳಲಾರದೇ ಆತ್ಮ*ಹತ್ಯೆ!

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಹೊಸ ಹಂಪಾಪುರ ಗ್ರಾಮದಲ್ಲಿ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪ್ರಿಯಾಂಕ ತೀವ್ರ ಹೊಟ್ಟೆನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲು.

Read Full Story

01:51 PM (IST) Dec 14

ಹೊಸ ವರ್ಷ 2026ಕ್ಕೆ ಕೆಲವೇ ದಿನ, 2025ರಲ್ಲಿ ದೇಶಮಟ್ಟದಲ್ಲಿ ಸುದ್ದಿಯಾದ ಬೆಂಗಳೂರಿನ ಅಪರಾಧ ಲೋಕದ ಕರಾಳ ಅಧ್ಯಾಯಗಳಿವು!

2025ನೇ ವರ್ಷದಲ್ಲಿ ಬೆಂಗಳೂರು ಹಲವು ಗಂಭೀರ ಅಪರಾಧ ಪ್ರಕರಣಗಳಿಗೆ ಸಾಕ್ಷಿಯಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ, ರೇಣುಕಾಸ್ವಾಮಿ ಹತ್ಯೆ ಪ್ರಕರಣ, ಸಚಿವರ ಹನಿಟ್ರ್ಯಾಪ್ ಯತ್ನದಂತಹ ಘಟನೆಗಳು ರಾಜ್ಯವನ್ನೇ ಬೆಚ್ಚಿಬೀಳಿಸಿ, ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದವು.

Read Full Story

01:21 PM (IST) Dec 14

ಬೇಡವೆಂದರೂ ತವರುಮನೆಗೆ ಕರೆದುಕೊಂಡು ಹೋದ ಪತ್ನಿ ಕುಟುಂಬದ 6 ಜನರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಗಂಡ!

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ, ಗಂಡನ ಕಿರುಕುಳದಿಂದ ತವರು ಮನೆಗೆ ತೆರಳಿದ್ದ ಪತ್ನಿ ಹಾಗೂ ಆಕೆಯ ಕುಟುಂಬದ ಆರು ಮಂದಿಯ ಮೇಲೆ ಪತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ. ಡಿಸೆಂಬರ್ 10 ರಂದು ನಡೆದ ಈ ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ.

Read Full Story

01:04 PM (IST) Dec 14

ಏನಿಲ್ಲ, ಏನಿಲ್ಲ... ಎನ್ನುತ್ತಲೇ ಹೀಗೆ ಮಾಡಿದ Bigg Boss ಐಶ್ವರ್ಯ ಸಿಂಧೋಗಿ- ರಜತ್​ ಶಾಸ್ತ್ರಿ ಜೋಡಿ

ಬಿಗ್ ಬಾಸ್ ಕನ್ನಡ ಸೀಸನ್ 11ರ ನಂತರವೂ ತಮ್ಮ ಸ್ನೇಹವನ್ನು ಮುಂದುವರೆಸಿರುವ ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್ ಶಾಸ್ತ್ರಿ ಅವರ ಮದುವೆಯ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಮದುವೆಯ ಬಗ್ಗೆ ಸ್ಪಷ್ಟನೆ ನೀಡದ ಈ ಜೋಡಿ, ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ. 

Read Full Story

More Trending News