ಇಂದು ಯುಗಾದಿ ಹಬ್ಬದ ಸಂಭ್ರಮ. ರಾಜ್ಯದೆಲ್ಲೆಡೆ ಹಬ್ಬದ ವಾತಾವರಣ ಕಳೆಗೆಟ್ಟಿದೆ. ಬೆಂಗಳೂರಿನಲ್ಲಿ ಹಬ್ಬದ ಖರೀದಿ ಜೋರಾಗಿ ನಡೆಯುತ್ತಿದೆ. ಕೆಆರ್ ಮಾರುಕಟ್ಟೆಯಲ್ಲಿ ಕಿಕ್ಕಿರಿದು ಜನ ತುಂಬಿದ್ದಾರೆ. ಹೂವು,ಹಣ್ಣು, ಮಾವಿನ ಸೊಪ್ಪು, ಬೇವಿನಸೊಪ್ಪು ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಮಧ್ಯರಾತ್ರಿಯಿಂದಲೇ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ ಆರಂಭಗೊಂಡಿದೆ. ಮತ್ತೊಂದೆಡೆ ರಾಜ್ಯದಲ್ಲಿ ರಾಜಕೀಯ ರಂಗು ಪಡೆದುಕೊಂಡಿದೆ. ಒಂದೆಡೆ ಉಪ ಚುನಾವಣೆ ಕಾವು ಏರತೊಡಗಿದರೆ ಮತ್ತೊಂದೆಡೆ ಮಂಡ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿ ಬಿಕ್ಕಟ್ಟು ತೀವ್ರಗೊಳ್ಳುತ್ತಿದೆ.

12:37 PM (IST) Mar 19
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹವಾಮಾನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಪೋತದಾರ ಸೇರಿದಂತೆ ಹವಾಮಾನ ತಜ್ಞರು ಆಲಿಕಲ್ಲು ಮಳೆ ಹವಾಮಾನ ವೈಪರೀತ್ಯದ ಪರಿಣಾಮಗಳಲ್ಲಿ ಒಂದು ಎನ್ನುತ್ತಾರೆ.
12:07 PM (IST) Mar 19
12:07 PM (IST) Mar 19
Love Mocktail 3 Review: ಲವ್ ಮಾಕ್ಟೇಲ್ ಸಿನಿಮಾ ಹಿಟ್ ಆಗಿತ್ತು. 2ನೇ ಪಾರ್ಟ್ ಕೂಡ ರೆಡಿ ಆಗಿ ರಿಲೀಸ್ ಆಗಿತ್ತು, 3ನೇ ಪಾರ್ಟ್ ಕೂಡ ರಿಲೀಸ್ ಆಗಿದೆ. ಎರಡು ಪಾರ್ಟ್ಗಳಲ್ಲಿದ್ದ ಮನರಂಜನೆ, ಎಮೋಶನಲ್, ಆಕ್ಷನ್, ಲವ್ಸ್ಟೋರಿ ಪಾರ್ಟ್ 3ರಲ್ಲಿ ಇದೆ ಎಂದು ಡಾರ್ಲಿಂಗ್ ಕೃಷ್ಣ ಹೇಳಿದ್ದರು.
11:58 AM (IST) Mar 19
ಜಗದ್ಗುರು ಶಿವಾನಂದ ಮಠ ಸ್ವಾಮೀಜಿ, ರಾಯಚೂರು ಮುಖ್ಯ ಶಿಕ್ಷಕ ದೇವೇಂದ್ರಪ್ಪ ದುರಂತ ಅಂತ್ಯ, ಬೆಳಗ್ಗೆಯಿಂದ ಸಂಜೆ ವರೆಗೆ ಶಿಕ್ಷಕ ವೃತ್ತಿ,ಸಂಜೆಯಿಂದ ರಾತ್ರಿ ವರೆಗೆ ಸ್ವಾಮೀಜಿಯಾಗಿ ಪ್ರವಚನ ನೀಡುತಿದದ್ದ ದೇವೇಂದ್ರಪ್ಪ ಆತ್ಮ**ತ್ಯೆ ಮಾಡಿಕೊಂಡಿದ್ದಾರೆ.
11:38 AM (IST) Mar 19
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಬೆಳೆ ನಾಶವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆಯೇ, ಆನೆಗಳು ತಮ್ಮ ಮರಿಗಳನ್ನು ಕಾಳಜಿಯಿಂದ ನೋಡಿಕೊಳ್ಳುತ್ತಿರುವ ಅಪರೂಪದ ದೃಶ್ಯ ಡ್ರೋನ್ನಲ್ಲಿ ಸೆರೆಯಾಗಿದೆ.
11:34 AM (IST) Mar 19
11:02 AM (IST) Mar 19
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ ದಾಸಕರಿಯಪ್ಪ ಆಯ್ಕೆಯಾಗಿದ್ದಾರೆ. ಯುಗಾದಿ ಹಬ್ಬಕ್ಕೆ ಹೂವು ಖರೀದಿಸಲು ಮಾರುಕಟ್ಟೆಗೆ ಹೋಗಿದ್ದಾಗ ಅವರಿಗೆ ಈ ಸುದ್ದಿ ತಿಳಿದಿದ್ದು, ತಂದೆಯನ್ನು ನೆನೆದು ಭಾವುಕರಾದರು.
10:49 AM (IST) Mar 19
ಡಿಜೆ ಹಳ್ಳಿ ಅಪ್ರಾಪ್ತೆ ಕೊಲೆ ಕೇಸ್ ಸ್ಫೋಟಕ ಮಾಹಿತಿ, ಆರೋಪಿ ಶಬೀಲ್ ಕೌರ್ಯಕ್ಕೆ ಬೆಚ್ಚಿ ಬಿದ್ದ ಬೆಂಗಳೂರು, ಅಪ್ರಾಪ್ತೆಯನ್ನು ಪಾಳು ಬಿದ್ದ ಮನೆಗೆ ಕರೆಯಿಸಿ ಅತೀ ಭೀಕರವಾಗಿ ಕೊಲೆ ಮಾಡಿದ ಘಟನೆ ಬಹಿರಂಗವಾಗಿದೆ.
10:24 AM (IST) Mar 19
ಉಡುಪಿಯಲ್ಲಿ ಎಲ್ಪಿಜಿ ಗ್ಯಾಸ್ ಕೆವೈಸಿ ಅಪ್ಡೇಟ್ ಮಾಡುವ ನೆಪದಲ್ಲಿ ಸೈಬರ್ ವಂಚಕರು ಹೊಸ ಜಾಲ ಬೀಸಿದ್ದು, ಇಬ್ಬರು ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ. ಗ್ಯಾಸ್ ಅಧಿಕಾರಿಗಳೆಂದು ನಂಬಿಸಿ, ಬ್ಯಾಂಕ್ ವಿವರ ಪಡೆದು ಹಣ ದೋಚಿದ್ದು, ಈ ಬಗ್ಗೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
10:18 AM (IST) Mar 19
ರೌಡಿಶೀಟರ್ ಜೊತೆ ಪಾರ್ಟಿ ಮಾಡಿ ರೀಲ್ಸ್ ಬಿಲ್ಡಪ್ ಪಡದೆ ಡಾಗ್ ಸತೀಶ್ಗೆ ಸಂಕಷ್ಟ, ಕೇಸ್ ದಾಖಲು, ವಿಡಿಯೋ ಮಾಡಿ ತನ್ನ ರೇಂಜ್ ಬೇರೆ ಎಂದು ಬಿಂಬಿಸಿದ್ದ ಡಾಗ್ ಸತೀಶ್ ವಿರುದ್ದ ದೂರು ದಾಖಲಾಗಿದ್ದು, ಠಾಣೆಗೆ ತೆರಳಿ ವಿಚಾರಣೆ ಎದುರಿಸಬೇಕಿದೆ.
09:32 AM (IST) Mar 19
ಕರ್ನಾಟಕ ಉಪ ಚುನಾವಣೆ ಟಿಕೆಟ್ ಘೋಷಣೆ, ಅಚ್ಚರಿ ತೀರ್ಮಾನ ಕೈಗೊಂಡ ಬಿಜೆಪಿ, ಕಾವು ಪಡೆದುಕೊಂಡಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಅಚ್ಚರಿ ನಿರ್ಧಾರ ಕೈಗೊಂಡಿದೆ.
09:31 AM (IST) Mar 19
ಯುಗಾದಿ ಹಬ್ಬವು ವಸಂತ ಋತುವಿನ ಆಗಮನದೊಂದಿಗೆ ಪ್ರಕೃತಿಯಲ್ಲಿ ಹೊಸ ಚೈತನ್ಯವನ್ನು ತರುತ್ತದೆ. ವೈಜ್ಞಾನಿಕ ಹಿನ್ನೆಲೆ ಹೊಂದಿರುವ ಈ ಹಬ್ಬದಲ್ಲಿ ಬೇವು-ಬೆಲ್ಲ ಸೇವನೆಯು ಜೀವನದ ಸುಖ-ದುಃಖಗಳನ್ನು ಸಮಭಾವದಿಂದ ಸ್ವೀಕರಿಸುವ ಪಾಠವನ್ನು ಕಲಿಸುತ್ತದೆ.
09:12 AM (IST) Mar 19
Exclusive Interview with PC Rao ಬೆಂಗಳೂರಿನಲ್ಲಿ ಗ್ಯಾಸ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ! 100 ಕೋಟಿಗೂ ಅಧಿಕ ನಷ್ಟ, ಮೆನು ಕಡಿತ. ಇದರ ಪರಿಣಾಮಗಳೇನು? ಪಿ.ಸಿ. ರಾವ್ ಅವರ ವಿಶೇಷ ಸಂದರ್ಶನ ಓದಿ.
08:41 AM (IST) Mar 19
ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಆರೇಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದೆ. ಇದರ ನಡುವೆ ಮಳೆ ಅಲರ್ಟ್ ಕೂಡ ನೀಡಲಾಗಿದ್ದು, ರೈತರು ಮತ್ತೆ ಆತಂಕಗೊಂಡಿದ್ದಾರೆ.
08:37 AM (IST) Mar 19
ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಹಲವು ಹಳ್ಳಿಗಳಲ್ಲಿ, ಕೆಲವು ಸಮುದಾಯಗಳು ತಲೆಮಾರುಗಳಿಂದ ಯುಗಾದಿ ಹಬ್ಬವನ್ನು ಆಚರಿಸುವುದಿಲ್ಲ. ಹಬ್ಬ ಆಚರಿಸಿದರೆ ಕೇಡಾಗುತ್ತದೆ ಎಂದು ನಂಬುತ್ತಾರೆ. ಈ ವಿಚಿತ್ರ ಪರಂಪರೆಯ ಹಿಂದಿನ ನಿಖರ ಕಾರಣ ಯಾರಿಗೂ ತಿಳಿದಿಲ್ಲ
08:14 AM (IST) Mar 19
ರಾಜ್ಯದಲ್ಲಿ ನಡೆಯುವ ಜಯಂತಿ ಹಾಗೂ ಉತ್ಸವಗಳಲ್ಲಿ ಡಿಜೆ ಸೌಂಡ್ ಮತ್ತು ಐಟಂ ಸಾಂಗ್ಗಳನ್ನು ನಿಷೇಧಿಸುವಂತೆ ವಿಧಾನಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ಒತ್ತಾಯಿಸಿದ್ದಾರೆ. ಡಿಜೆ ಸದ್ದಿನಿಂದಾಗುವ ಆರೋಗ್ಯ ಸಮಸ್ಯೆ ಹಾಗೂ ಸಾಂಸ್ಕೃತಿಕ ಅಸಹ್ಯದ ಬಗ್ಗೆ ಚರ್ಚೆಯ ವಿವರ ತಿಳಿಯಿರಿ
08:00 AM (IST) Mar 19
07:42 AM (IST) Mar 19
ಧರ್ಮಸ್ಥಳದಲ್ಲಿ 1990 ರಿಂದ 2021ರ ನಡುವೆ ನಡೆದಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣಗಳಿಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
07:35 AM (IST) Mar 19
ಪಂಚ ರಾಜ್ಯ ಚುನಾವಣೆ ಬಳಿಕ ಕರ್ನಾಟಕದಲ್ಲಿ ಅಧಿಕಾರ ಬದಲಾವಣೆ? ಕಾಂಗ್ರೆಸ್ ಸಂಸದ ಹೇಳಿದ್ದೇನು?, ಡಿನ್ನರ್ ಮೀಟಿಂಗ್ ಸಾಮಾನ್ಯ ಪ್ರಕ್ರಿಯೆ ಇದರಲ್ಲಿ ರಾಜಕೀಯವಿಲ್ಲ ಎಂದಿರುವ ಸೋನಿಲ್ ಬೋಸ್, ಪಂಚ ರಾಜ್ಯ ಚುನಾವಣೆ ಬಳಿಕ ನಡೆಯುವ ಕೆಲ ಮಹತ್ವದ ನಿರ್ಧಾರಗಳ ಕುರಿತು ಬೆಳಕು ಚೆಲ್ಲಿದ್ದಾರೆ.
07:31 AM (IST) Mar 19
ತೀವ್ರ ವಿವಾದ ಸೃಷ್ಟಿಸಿರುವ ಕನ್ನಡದ ‘ಕೆಡಿ’ ಚಿತ್ರ ‘ಸರ್ಸೆ ಸೆರಗು ಸರ್ಸೆ’ ಹಾಗೂ ಅದರ ಹಿಂದಿ ಅವತರಣಿಗೆ ‘ಸರ್ಕೆ ಚುನರ್ ತೇರಿ ಸರ್ಕೆ’ ಗದ್ದಲ ಇದೀಗ ಸಂಸತ್ತಿನ ಮೆಟ್ಟಿಲೇರಿದ್ದು, ಅಲ್ಲೂ ಹಾಡಿನ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿದೆ.
07:22 AM (IST) Mar 19
07:00 AM (IST) Mar 19
ಯುಗಾದಿ ಹಬ್ಬದ ಹಿನ್ನಲೆಯಲ್ಲಿ ಹೂವು ಹಣ್ಣು ಸೇರಿದಂತೆ ಹಬ್ಬದ ವಸ್ತುಗಳ ಬೆಲೆ ಗಗನಕ್ಕೇರಿದೆ. ಆದರೆ ಜನರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಬೆಂಗಳೂರಿನ ಕೆಆರ್ ಮಾರುಕಟ್ಟೆ ಸೇರಿದಂತೆ ಹಲವು ಮಾರುಕಟ್ಟೆಗಳಲ್ಲಿ ಜನರು ತುಂಬಿದ್ದಾರೆ.