ಯುಗಾದಿ ಹಬ್ಬವನ್ನು ರಾಜ್ಯದಲ್ಲಿ ಸಂಭ್ರಮದಿಂದ ಆಚರಿಸಲಾಗಿದೆ. ಇಂದು ಹೊಸತಡಕು ಹಬ್ಬದ ಹಿನ್ನಲೆಯಲ್ಲಿ ಮಾಂಸದ ಅಂಗಡಿಗಳ ಮುಂದೆ ಮಾಂಸಪ್ರಿಯರು ಕ್ಯೂನಿಂತು ಖರೀದಿಸುತ್ತಿದ್ದಾರೆ. ಬೆಂಗಲೂರಿನ ಬಹುತೇಕ ಮಾಂಸದ ಅಂಗಡಿಗಳ ಮುಂದೆ ಬೆಳಗ್ಗೆ 4 ಗಂಟೆಯಿಂದಲೇ ಜನ ಸೇರಿದ್ದಾರೆ. ಜನಪ್ರಿಯ ಬ್ಯಾಟರಾಯನಪುರ ಪಾಪಣ್ಣ ಮಟನ್ ಸ್ಟಾಲ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ. ಮತ್ತೊಂದೆಡೆ ದಾವಣೆಗರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆ ಕಾವು ಏರತೊಡಗಿದೆ. ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಕಸರತ್ತು ತೀವ್ರಗೊಂಡಿದೆ. ಇಂದಿನ ಕ್ಷಣ ಕ್ಷಣದ ಲೈವ್ ಅಪ್ಡೇಟ್ ಇಲ್ಲಿದೆ.

09:24 AM (IST) Mar 20
08:38 AM (IST) Mar 20
Dhurandhar The Revenge: ರಣವೀರ್ ಸಿಂಗ್ ಅಭಿನಯದ 'ಧುರಂಧರ್' ಚಿತ್ರದ ಮೊದಲ ಭಾಗದಿಂದಲೂ 'ಬಡೇ ಸಾಹಬ್' ಯಾರು ಎಂಬ ಪ್ರಶ್ನೆ ಕಾಡುತ್ತಿತ್ತು. ಈಗ 'ಧುರಂಧರ್ 2' ಆ ರಹಸ್ಯವನ್ನು ಬಯಲು ಮಾಡಿದೆ. ವಿಶೇಷ ಅಂದ್ರೆ, ಈ ಪಾತ್ರದ ಬಗ್ಗೆ ಇದ್ದ ಎಲ್ಲಾ ಊಹಾಪೋಹಗಳನ್ನು ಚಿತ್ರತಂಡ ಸುಳ್ಳು ಮಾಡಿದೆ.
08:20 AM (IST) Mar 20
ರಣವೀರ್ ಸಿಂಗ್ ಅಭಿನಯದ 'Dhurandhar The Revenge' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಓಪನಿಂಗ್ ಪಡೆದಿದೆ. ಮೊದಲ ದಿನವೇ 100 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಆದರೂ, ಈ ಚಿತ್ರ ದೇಶದ ಟಾಪ್ 3 ಅತಿದೊಡ್ಡ ಓಪನರ್ ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ವಿಫಲವಾಗಿದೆ. ಅವು ಯಾವುವು?
08:00 AM (IST) Mar 20
ಭಾರತಕ್ಕೆ ಗ್ಯಾಸ್ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್, ಪ್ರತಿ ಲೀಟರ್ಗೆ 2 ರೂ ಹೆಚ್ಚಳ, ಇಸ್ರೇಲ್ ಹಾಗೂ ಇರಾನ್ ಯುದ್ಧದಿಂದ ಬೆಂಗಳೂರು ಸೇರಿದಂತೆ ಎಲ್ಲೆಡೆ ಗ್ಯಾಸ್ ಸಮಸ್ಯೆ ಎದುರಾದ ಬೆನ್ನಲ್ಲೇ ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ.
07:48 AM (IST) Mar 20
07:32 AM (IST) Mar 20
ಉಡುಪಿ ಜಿಲ್ಲೆಗೆ ಇಂದು ಸಾರ್ವತ್ರಿಕ ರಜೆ ಘೋಷಿಸಿದ ಜಿಲ್ಲಾಧಿಕಾರಿ, ಹಬ್ಬದ ಹಿನ್ನಲೆಯಲ್ಲಿ ಶಾಲಾ ಕಾಲೇಜು ಸೇರಿದಂತೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಇದರಿಂದ ಉಡುಪಿ ಜಿಲ್ಲೆಯಲ್ಲಿ ಹಬ್ಬದ ಸಂಭ್ರಮ ಡಬಲ್ ಆಗಿದೆ.
07:21 AM (IST) Mar 20
ತುಮಕೂರಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ, ಇಸ್ಪೀಟ್ ಆಟದ ಆರೋಪದ ಮೇಲೆ ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆಯು ಪೊಲೀಸ್ ದೌರ್ಜನ್ಯದಿಂದ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಎಸ್ಪಿ ಮನವೊಲಿಕೆ ಬಳಿಕ ಪ್ರತಿಭಟನೆ ಕೈಬಿಟ್ಟರು.
07:00 AM (IST) Mar 20
ಪಾಪಣ್ಣ ಮಟನ್ ಸ್ಟಾಲ್ನಲ್ಲಿ ಮಟನ್ ಬೆಲೆಯಲ್ಲಿ ಯಾವುದೇ ವ್ಯತ್ಯಸವಾಗಿಲ್ಲ. ಕೆಜಿಗೆ 900 ರೂಪಾಯಿ ದರದಲ್ಲೇ ಮಾರಾಟ ಮಾಡಲಾಗುತ್ತಿದೆ. ಹಬ್ಬದ ಹಿನ್ನಲೆಯಲ್ಲಿ ಯಾವುದೇ ಬೆಲೆ ಏರಿಕೆ ಮಾಡದೆ ಜನರಿಗೆ ಮಾಂಸ ಮಾರಟ ಮಾಡಲಾಗುತ್ತಿದೆ.