Published : Mar 21, 2026, 07:03 AM ISTUpdated : Mar 21, 2026, 10:49 PM IST

Karnataka News Live: ಕರಾವಳಿಯಿಂದ ಬೆಂಗಳೂರಿಗೆ ಮಾ. 22 ರಂದು ವಿಶೇಷ ರೈಲು ಘೋಷಣೆ, ಮಡ್ಗಾಂವ್‌ನಿಂದ ಮಂಗಳೂರು ಆಗಿ ರಾಜಧಾನಿಗೆ ಪಯಣ

ಸಾರಾಂಶ

ಕರ್ನಾಟಕ ಉಪ ಚುನಾವಣೆ ಕಣ ರಂಗೇರಿದೆ. ಕಾಂಗ್ರೆಸ್ ಇಂದು ಅಭ್ಯರ್ಥಿಗಳ ಘೋಷಣೆ ಮಾಡಲಿದೆ. ಬಾಗಲಕೋಟೆ ಹಾಗೂ ದಾವಣೆಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಸಚಿವ ಜಮೀರ್ ಅಹಮ್ಮದ್ ಬಿಗಿಪಟ್ಟು ಹಿಡಿದಿದ್ದಾರೆ. ಇತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಖಾಸಗಿ ಹೊಟೆಲ್‌ನಲ್ಲಿ ಸತತ ಸಭೆಗಳನ್ನು ನಡೆಸುತ್ತಿದ್ದಾರೆ. ರಾಜ್ಯದ ಚುನಾವಣಾ ಅಪ್‌ಡೇಟ್ ಸೇರಿದಂತೆ ಕ್ಷಣ ಕ್ಷಣದ ಲೈವ್ ನ್ಯೂಸ್ ಇಲ್ಲಿದೆ.

Indian Railway

10:49 PM (IST) Mar 21

ಕರಾವಳಿಯಿಂದ ಬೆಂಗಳೂರಿಗೆ ಮಾ. 22 ರಂದು ವಿಶೇಷ ರೈಲು ಘೋಷಣೆ, ಮಡ್ಗಾಂವ್‌ನಿಂದ ಮಂಗಳೂರು ಆಗಿ ರಾಜಧಾನಿಗೆ ಪಯಣ

ಯುಗಾದಿ ಮತ್ತು ರಂಜಾನ್ ಹಬ್ಬದ ನಂತರ ತಮ್ಮ ಊರುಗಳಿಂದ ಬೆಂಗಳೂರಿಗೆ ಮರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಿಶೇಷ ರೈಲು ಸೇವೆಯನ್ನು ಘೋಷಿಸಿದೆ. ಈ ರೈಲು ಮಡ್ಗಾಂವ್‌ನಿಂದ ಹೊರಟು ಕಾರವಾರ, ಉಡುಪಿ ಮತ್ತು ಮಂಗಳೂರು ಮಾರ್ಗವಾಗಿ ಬೆಂಗಳೂರು ತಲುಪಲಿದ್ದು, ಹಬ್ಬದ ಸೀಟುಗಳ ಕೊರತೆಯನ್ನು ನೀಗಿಸುವ ಗುರಿ ಹೊಂದಿದೆ.
Read Full Story

10:25 PM (IST) Mar 21

ಮಾರ್ಚ್‌ 22 ರಂದು ಬೆಂಗಳೂರಿಗೆ ವಿಶೇಷ ಮೆಮು ರೈಲು, ತುಮಕೂರಿನಿಂದ ಯಶವಂತಪುರ ಮಾರ್ಗವಾಗಿ ಬಾಣಸವಾಡಿಗೆ ಪ್ರಯಾಣ

ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ, ಸ್ವಗ್ರಾಮಗಳಿಂದ ಬೆಂಗಳೂರಿಗೆ ಮರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೇ ವಿಶೇಷ ಮೆಮು ರೈಲು ಸಂಚಾರವನ್ನು ಘೋಷಿಸಿದೆ. ಈ ರೈಲು ಭಾನುವಾರ ಸಂಜೆ ತುಮಕೂರು-ಯಶವಂತಪುರ-ಬಾಣಸವಾಡಿ ಮಾರ್ಗದಲ್ಲಿ ಸಂಚರಿಸಲಿದ್ದು, ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಗುರಿ ಹೊಂದಿದೆ.
Read Full Story

10:17 PM (IST) Mar 21

ಮೇ ಅಂತ್ಯಕ್ಕೆ ಎಲ್ಲ 33 ಕ್ರಸ್ಟ್‌ ಗೇಟ್‌ ಅಳವಡಿಕೆ ಪೂರ್ಣ - ಸಚಿವ ಎನ್.ಎಸ್.ಬೋಸರಾಜು

33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ‌. ಕಾಮಗಾರಿಯು ನಿರೀಕ್ಷಿತ ಸಮಯಕ್ಕಿಂತ ವೇಗವಾಗಿ ಸಾಗುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು.

Read Full Story

10:04 PM (IST) Mar 21

ಮುಸ್ಲಿಮರ ಮನವೊಲಿಸಿದ ಕಾಂಗ್ರೆಸ್‌ ನಾಯಕರು, ದಾವಣಗೆರೆಗೆ ಸಮರ್ಥ್‌ ಶಾಮನೂರು, ಉಮೇಶ್‌ ಮೇಟಿಗೆ ಬಾಗಲಕೋಟೆ ಟಿಕೆಟ್‌ ಫಿಕ್ಸ್‌!

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ  ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆಬಿದ್ದಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಅತೃಪ್ತ ಮುಖಂಡರ ಮನವೊಲಿಸಲಾಗಿದ್ದು, ಶಾಮನೂರು ಕುಟುಂಬದ ಮೊಮ್ಮಗ ಹಾಗೂ ಉಮೇಶ್ ಮೇಟಿಗೆ ಟಿಕೆಟ್ ಅಂತಿಮಗೊಂಡಿದೆ.

Read Full Story

09:45 PM (IST) Mar 21

ಕುದುರೆಮುಖ ಕಾಡಲ್ಲಿ 25 ಕಡೆ ಕಾಡ್ಗಿಚ್ಚು - ತನಿಖೆಗೆ ಸಚಿವ ಈಶ್ವರ್‌ ಖಂಡ್ರೆ ಆದೇಶ

ಕುದುರೆಮುಖ ರಾಷ್ಟ್ರೀಯ ಉದ್ಯಾನದ 25ಕ್ಕೂ ಹೆಚ್ಚಿನ ಕಡೆಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿರುವ ಕುರಿತು ತನಿಖೆ ಆರಂಭಿಸಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Read Full Story

09:18 PM (IST) Mar 21

ಹಾವೇರಿಯ ಬೆಟ್ಟದ ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ; ಸುಟ್ಟು ಭಸ್ಮವಾದ ನೂರಾರು ಎಕರೆ ಅರಣ್ಯ!

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಪ್ರಸಿದ್ಧ ಬೆಟ್ಟದ ಮಲ್ಲೇಶ್ವರ ಗುಡ್ಡಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ. ಈ ದುರ್ಘಟನೆಯಿಂದ ಅಪರೂಪದ ಸಸ್ಯ ಸಂಪತ್ತು ನಾಶವಾಗಿದ್ದು, ಕೃಷ್ಣಮೃಗ ಸೇರಿದಂತೆ ಅನೇಕ ವನ್ಯಜೀವಿಗಳು ಪ್ರಾಣಭಯದಲ್ಲಿವೆ. 

Read Full Story

08:35 PM (IST) Mar 21

20 ಕಡೆಗಳಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಾಣ - ಸಚಿವ ರಾಮಲಿಂಗಾರೆಡ್ಡಿ

ತಮ್ಮ 50 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಜನಸೇವೆಯೇ ಮುಖ್ಯ ಗುರಿಯಾಗಿಟ್ಟುಕೊಂಡು ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ಭಾಗಗಳಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Read Full Story

06:27 PM (IST) Mar 21

ಬಿಜೆಪಿ ಆನೆ ದಾಳಿಯಿಂದಾದ ಸಾವಿನಲ್ಲೂ ರಾಜಕೀಯ ಮಾಡುತ್ತಿದೆ - ಎ.ಎಸ್.ಪೊನ್ನಣ್ಣ ಅಸಮಾಧಾನ

ಆನೆ ದಾಳಿ ಮುಂದಿಟ್ಟುಕೊಂಡು ಆನೆ ದಾಳಿಯ ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ವಿರಾಜಪೇಟೆ ಶಾಸಕ, ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಕೊಡಗು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read Full Story

06:15 PM (IST) Mar 21

ಪ್ರಧಾನಿ ಮೋದಿಯವರು ಇಸ್ರೇಲ್‌ಗೆ ಹೋಗಿದ್ದೇಕೆ? - ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಕಿಡಿ

ನಮಗೆ ಸ್ವಾತಂತ್ರ್ಯ ಬಂದಾಗಿನಿಂದಲೂ ಅವತ್ತಿನ ಸೋವಿಯತ್ ಒಕ್ಕೂಟ ಇಂದಿನ ರಷ್ಯಾ ನಮ್ಮ ಸ್ನೇಹ ರಾಷ್ಟ್ರ. ನೆಹರು ಕಾಲದಿಂದಲೂ ಐತಿಹಾಸಿಕ ಸ್ನೇಹ ರಾಷ್ಟ್ರ. ಆದರೆ ಪ್ರಧಾನಿಯವರು ಇಂದು ಅದನ್ನು ಕೆಡಿಸಿದ್ದಾರೆ.

Read Full Story

05:43 PM (IST) Mar 21

ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಕೇಸ್‌ಗೆ ಬಿಗ್ ಟ್ವಿಸ್ಟ್ - ಪೊಲೀಸ್‌ ವರದಿ ಕೇಳಿ ಬೆಚ್ಚಿಬಿದ್ದ ಸಂತ್ರಸ್ಥೆಯರು!

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಮೇಲಿನ ಲೈಂಗಿಕ ಕಿರುಕುಳ ಆರೋಪವು ಸುಳ್ಳು ಮತ್ತು ಪ್ರಚೋದಿತ ಎಂದು ಪೊಲೀಸ್ ಪ್ರಾಥಮಿಕ ತನಿಖೆ ಹೇಳಿದೆ. ಆದರೆ, ಈ ವರದಿಯನ್ನು ತಿರಸ್ಕರಿಸಿರುವ ದೂರುದಾರ ಮಹಿಳೆ, ಇದು ಹಿರಿಯ ಅಧಿಕಾರಿಗಳ ಶಾಮೀಲಿನಿಂದ ಕೂಡಿದ ವರದಿ ಎಂದು ಆರೋಪಿಸಿದ್ದಾರೆ.

Read Full Story

05:12 PM (IST) Mar 21

ಪಾಕಿಸ್ತಾನದಲ್ಲಿ ಬ್ಯಾನ್ ಆದ್ರೂ 'ಧುರಂಧರ್ 2' ನೋಡಿದ ರಿಪೋರ್ಟರ್ - ವಿಡಿಯೋ ವೈರಲ್, ಸಿಕ್ಕಾಪಟ್ಟೆ ಟ್ರೋಲ್

ಪಾಕಿಸ್ತಾನದಲ್ಲಿ 'ಧುರಂಧರ್: ದಿ ರಿವೆಂಜ್' ಚಿತ್ರವನ್ನು ಬ್ಯಾನ್ ಮಾಡಲಾಗಿದೆ. ಆದರೆ ಅಲ್ಲಿ ನಡೆದ ಒಂದು ಘಟನೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಪಾಕಿಸ್ತಾನಿ ಪತ್ರಕರ್ತರೊಬ್ಬರು ನೋಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

Read Full Story

05:07 PM (IST) Mar 21

ಯಾದಗಿರಿ - ಚಾಲಕನಿಂದಲೇ ಸರ್ಕಾರಿ ಬಸ್ ಕಳ್ಳತನ! ಕುಡಿದ ಮತ್ತಿನಲ್ಲಿ KKRTC ಬಸ್ ಎಸ್ಕೇಪ್‌ ಮಾಡಿದ ಕಿಲಾಡಿ

ಯಾದಗಿರಿಯ ಸೈದಾಪುರದಲ್ಲಿ, ಕೆಕೆಆರ್‌ಟಿಸಿಯಿಂದ ವಜಾಗೊಂಡಿದ್ದ ಮಾಜಿ ಚಾಲಕ ಮಹಿಪಾಲರೆಡ್ಡಿ ಎಂಬಾತ ಕುಡಿದ ಮತ್ತಿನಲ್ಲಿ ಸರ್ಕಾರಿ ಬಸ್ಸನ್ನೇ ಕದ್ದೊಯ್ದಿದ್ದಾನೆ. ಬಸ್ಸನ್ನು ತನ್ನ ಸ್ವಗ್ರಾಮದ ದೇವಸ್ಥಾನದ ಮುಂದೆ ನಿಲ್ಲಿಸಿದ್ದಾನೆ.

Read Full Story

05:00 PM (IST) Mar 21

ಹುಳ ಬಿಟ್ಟ ಡಿವೈನ್ ಸ್ಟಾರ್ ಪೋಸ್ಟ್; ಹೊಂಬಾಳೆ ಫಿಲಂಸ್, ರಿಷಬ್ ಶೆಟ್ಟಿ ನಡುವೆ ಏನಾಯ್ತು..?

ಯುಗಾದಿ ಹಬ್ಬದಂದು ರಿಷಬ್ ಶೆಟ್ಟಿ 'ಕಾಂತಾರ ಅಧ್ಯಾಯ 2' ಇಲ್ಲಿಂದ ಶುರು ಎಂದು ಘೋಷಿಸಿದ್ದಾರೆ. ಹೊಂಬಾಳೆ ಫಿಲಂಸ್ ಬದಲು ತಮ್ಮದೇ ಬ್ಯಾನರ್ ಲೋಗೋ ಬಳಸಿರುವುದು, ಅವರು ಸ್ವಂತ ಬ್ಯಾನರ್‌ನಲ್ಲಿ ಸಿನಿಮಾ ಮಾಡುತ್ತಿದ್ದಾರೆಯೇ? ಹೊಂಬಾಳೆ ಜೊತೆಗಿನ ಸಂಬಂಧದಲ್ಲಿ ಬಿರುಕು ಮೂಡಿದೆಯೇ ಎಂಬ ಚರ್ಚೆಗೆ ಕಾರಣವಾಗಿದೆ.

Read Full Story

04:53 PM (IST) Mar 21

Chikkamagaluru - ಮಕ್ಕಳ ಮೇಲೆ ಪ್ರಿನ್ಸಿಪಾಲ್ ಹಲ್ಲೆ - ಸ್ಥಳಕ್ಕೆ ‌ಪೊಲೀಸರ ಭೇಟಿ, ಪರಿಶೀಲನೆ

ಮಕ್ಕಳು ಆಟವಾಡುತ್ತಿದ್ದರು ಎಂಬ ಕಾರಣಕ್ಕೆ ವಸತಿ ಶಾಲೆಯ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ಮಕ್ಕಳನ್ನ ಅಂಡರ್ ಗ್ರೌಂಡ್ ರೂಮಿನಲ್ಲಿ ಉಪವಾಸವಿಟ್ಟು ಮನಸ್ಸು ಇಚ್ಛೆ ಹಲ್ಲೇ ವಸತಿ ಶಾಲೆಯಲ್ಲಿ ನಡೆದಿದೆ.

Read Full Story

04:49 PM (IST) Mar 21

20ರ ಹರೆಯದಲ್ಲಿ ಸೋಷಿಯಲ್ ಆಗಿದ್ದ ಈ ನಟಿ 30ರಲ್ಲಿ ಇಷ್ಟೊಂದು ಬದಲಾಗಿದ್ದು ಹೇಗೆ? ಸೀಕ್ರೆಟ್ ರಿವೀಲ್..!

'ಬಾರ್ಬಿ', 'ದಿ ವುಲ್ಫ್ ಆಫ್ ವಾಲ್ ಸ್ಟ್ರೀಟ್' ಅಂತಹ ಸೂಪರ್ ಹಿಟ್ ಸಿನಿಮಾಗಳ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿರುವ ಈ ಸುಂದರಿ, ಈಗ ಗ್ಲಾಮರ್ ಲೋಕದ ಬೆಳಕಿಗಿಂತ ಹೆಚ್ಚಾಗಿ ತಮ್ಮ 'ಖಾಸಗಿ ಜೀವನ'ಕ್ಕೆ (Privacy) ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಹೌದು, ಆದ್ರೆ ಯಾಕೆ ಹೀಗೆ? ಈ ಸ್ಟೋರಿ ನೀಡಿ..

Read Full Story

04:42 PM (IST) Mar 21

300 ಕೋಟಿಯತ್ತ ದಾಪುಗಾಲು ಹಾಕುತ್ತಿರುವ ಧುರಂಧರ್‌ 2 - 173 ಕೋಟಿ ಭಾರತದಲ್ಲೇ ಕಲೆಕ್ಷನ್

ಗಳಿಕೆಯ ರೇಸ್‌ನಲ್ಲಿ ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌’ ಸಿನಿಮಾವನ್ನು ಹಿಂದಿಕ್ಕಿದೆ. ಮೊದಲ ದಿನ ರೂ.275 ಕೋಟಿ ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ನಟನೆಯ ‘ಪುಷ್ಪ 2’ ಮೊದಲ ಸ್ಥಾನದಲ್ಲಿದೆ.

Read Full Story

04:30 PM (IST) Mar 21

ಲವ್ ಮಾಕ್‌ಟೇಲ್ 3 ಸಿನಿಮಾ ವಿಮರ್ಶೆ - ತಂದೆ-ಮಗಳ ಬಂಧದ ಹೊಸ ಅರ್ಥ

ಭ್ರಮೆಯಲ್ಲಿ ಬದುಕುವ ಆದಿ, ಅಚಾನಕ್‌ ಆಗಿ ಆತನ ಬದುಕಿಗೆ ಬರುವ ಹೆಣ್ಣುಮಗುವಿನ ಕಥೆ ಈ ಸೀರೀಸ್‌ನ ಎರಡನೇ ಭಾಗದಲ್ಲಿತ್ತು. ಮೂರನೆಯ ಹಾಗೂ ಕೊನೆಯ ಭಾಗದಲ್ಲಿ ಹಾಗೆ ಬಂದ ಮಗು ಆದಿಯ ಜಗತ್ತಾಗುವ ಕಥೆ ಇದೆ.

Read Full Story

04:08 PM (IST) Mar 21

ಬಿಇಎಲ್‌ನಲ್ಲಿ ಎಂಜಿನಿಯರ್‌ಗಳಿಗೆ ಸುವರ್ಣಾವಕಾಶ! ಸಿವಿಲ್, ಆರ್ಕಿಟೆಕ್ಚರ್, ತೋಟಗಾರಿಕೆ ವಿಭಾಗದಲ್ಲಿ ಕೆಲಸ ಖಾಲಿ ಇದೆ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 2026ನೇ ಸಾಲಿನ ನೇಮಕಾತಿ ಅಡಿಯಲ್ಲಿ ಡೆಪ್ಯೂಟಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಿವಿಲ್, ಆರ್ಕಿಟೆಕ್ಚರ್, ಮತ್ತು ತೋಟಗಾರಿಕೆ ವಿಭಾಗಗಳಲ್ಲಿ ಒಟ್ಟು 35 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಏಪ್ರಿಲ್ 1, 2026ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
Read Full Story

03:21 PM (IST) Mar 21

ಬೆಂಗಳೂರಿನಲ್ಲಿ ಲ್ಯಾಂಬೋರ್ಗಿನಿ 'ಡ್ರಿಫ್ಟಿಂಗ್' ದರ್ಬಾರ್ - ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಪುಂಡಾಟ; RC ಕ್ಯಾನ್ಸಲ್‌ಗೆ ಪೊಲೀಸರ ನಿರ್ಧಾರ!

ಬೆಂಗಳೂರಿನ ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಲ್ಯಾಂಬೋರ್ಗಿನಿ ಕಾರು ಚಾಲಕನೊಬ್ಬ ಅಪಾಯಕಾರಿ ಡ್ರಿಫ್ಟಿಂಗ್ ಸ್ಟಂಟ್ ನಡೆಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

Read Full Story

03:17 PM (IST) Mar 21

ಚಿಕ್ಕಮಗಳೂರಿನಲ್ಲಿ ಆಟವಾಡ್ತಿದ್ದ ಮಕ್ಕಳನ್ನು ಕೂಡಿಹಾಕಿ ಉತ್ತರ ಭಾರತ ಪ್ರಿನ್ಸಿಪಾಲ್‌ನಿಂದ ಹಲ್ಲೆ!

ಶಾಲಾ ಮಕ್ಕಳನ್ನು ಅಂಡರ್ ಗ್ರೌಂಡ್ ರೂಮಿನಲ್ಲಿ ಕೂಡಿಹಾಕಿ ಪ್ರಾಚಾರ್ಯರು ಕ್ರೂರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಘಟನೆ ಬೆಳಕಿಗೆ ಬಂದಿದ್ದು ಹೇಗೆ?

Read Full Story

02:50 PM (IST) Mar 21

'ಒಂದು ಕಾಲದಲ್ಲಿ ಮನೆಗೆ ಬಿ ಫಾರಂ ಬರುತ್ತೆ ಅಂತಿದ್ರು, ಈಗ ಅಲೆಯುತ್ತಿದ್ದಾರೆ..' ಶಾಮನೂರು ಕುಟುಂಬಕ್ಕೆ ಜೆಡಿಎಸ್‌ ಮಾಜಿ ಶಾಸಕ ಟಾಂಗ್‌!

ದಾವಣಗೆರೆ ರಾಜಕಾರಣದಲ್ಲಿ ಶಾಮನೂರು ಕುಟುಂಬದ ಪ್ರಾಬಲ್ಯದ ಕುರಿತು ಜೆಡಿಎಸ್ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ವ್ಯಂಗ್ಯವಾಡಿದ್ದಾರೆ. ಒಂದು ಕಾಲದಲ್ಲಿ ಬಿ-ಫಾರಂ ಮನೆಗೆ ಬರುತ್ತಿತ್ತು, ಈಗ ಅದಕ್ಕಾಗಿ ಅಲೆಯುವಂತಾಗಿದೆ ಎಂದು ಟೀಕಿಸಿದ್ದಾರೆ.

Read Full Story

02:05 PM (IST) Mar 21

ನಟಿ ಭಾವನಾ ರಾಮಣ್ಣ ಮಗಳ ನಾಮಕರಣ ಸಂಭ್ರಮ - ಶಾಸ್ತ್ರದ ಕ್ಯೂಟ್​ ಫೋಟೋಗಳು ವೈರಲ್​

ನಟಿ ಭಾವನಾ ರಾಮಣ್ಣ ಅವರು ಐವಿಎಫ್ ಮೂಲಕ ಪಡೆದ ತಮ್ಮ ಮುದ್ದಿನ ಮಗಳಿಗೆ ನಾಮಕರಣ ಶಾಸ್ತ್ರ ನೆರವೇರಿಸಿದ್ದಾರೆ. ಆಪ್ತರ ಸಮ್ಮುಖದಲ್ಲಿ ನಡೆದ ಈ ಸಮಾರಂಭದಲ್ಲಿ, ತಮ್ಮ ಅಜ್ಜಿಯ ನೆನಪಿನಲ್ಲಿ ಮಗಳಿಗೆ 'ರುಕ್ಮಿಣಿ' ಎಂದು ಹೆಸರಿಟ್ಟಿದ್ದಾರೆ. ಈ ಕುರಿತಾದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
Read Full Story

01:19 PM (IST) Mar 21

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ! 10ಕ್ಕೂ ಹೆಚ್ಚು ಜನರಿಗೆ ಗಾಯ

ರಂಜಾನ್ ಸಾಮೂಹಿಕ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿಯಿಂದಾಗಿ 10 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ದಾವಣಗೆರೆ ತಾಲೂಕಿನ ಆನಗೋಡು ಈದ್ಗಾ ಮೈದಾನದಲ್ಲಿ ನಡೆದಿದೆ.

 

Read Full Story

12:38 PM (IST) Mar 21

ಬುರ್ಖಾ ಧರಿಸಿ ಬಸ್​ ಏರಿದ್ದ ಸಚಿವ ಜಮೀರ್ ಅಹ್ಮದ್ - ಆ ದಿನದ ಘಟನೆ ನೆನೆದ ಮಗ Zaid Khan

ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ನಟ ಝೈದ್ ಖಾನ್, ತಮ್ಮ ತಂದೆಯ ಜೀವನದ ಒಂದು ಹಾಸ್ಯ ಪ್ರಸಂಗವನ್ನು ಹಂಚಿಕೊಂಡಿದ್ದಾರೆ. ತಮ್ಮ ಟ್ರಾವೆಲ್ ಬಿಸಿನೆಸ್‌ನಲ್ಲಿ ಮೋಸ ಮಾಡುತ್ತಿದ್ದ ಚಾಲಕನನ್ನು ಹಿಡಿಯಲು ಜಮೀರ್ ಅವರು ಬುರ್ಖಾ ಧರಿಸಿ ಪ್ರಯಾಣಿಕರಂತೆ ಬಸ್ ಹತ್ತಿದ ಘಟನೆಯನ್ನು ಝೈದ್ ವಿವರಿಸಿದ್ದಾರೆ.
Read Full Story

12:23 PM (IST) Mar 21

ಪ್ರಾಮಾಣಿಕತೆ ಮೆರೆದ ಬಿಎಂಟಿಸಿ ಸಿಬ್ಬಂದಿ; ₹10 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಪ್ರಯಾಣಿಕರಿಗೆ ವಾಪಾಸ್!

ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತುಹೋಗಿದ್ದ 10 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗನ್ನು, ಚಾಲಕ ಸಿದ್ದರಾಜು ಮತ್ತು ಕಂಡಕ್ಟರ್ ನಾಗೇಂದ್ರ ಅವರು ಪ್ರಾಮಾಣಿಕವಾಗಿ ಹಿಂತಿರುಗಿಸಿದ್ದಾರೆ. ಹಿರಿಯ ಅಧಿಕಾರಿಗಳ ಮೂಲಕ ವಾರಸುದಾರರಿಗೆ ಸುರಕ್ಷಿತವಾಗಿ ಹಸ್ತಾಂತರಿಸಲಾಯಿತು.

Read Full Story

11:49 AM (IST) Mar 21

ಜೈಲಲ್ಲಿ ದಚ್ಚುಗೆ ಮಂಗಳಾರತಿ; ಚಿತ್ರಮಂದಿರದಲ್ಲಿ ಸಾರಥಿಗೆ ಆರತಿ!

ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಹಿನ್ನೆಲೆಯಲ್ಲಿ, ಅವರ ಅಭಿಮಾನಿಗಳಿಗಾಗಿ 15 ವರ್ಷಗಳ ಹಿಂದಿನ ಬ್ಲಾಕ್ ಬಸ್ಟರ್ ಚಿತ್ರ 'ಸಾರಥಿ'ಯನ್ನು ಮರು ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಕಾಕತಾಳೀಯವೆಂದರೆ, 2011ರಲ್ಲಿ ಈ ಸಿನಿಮಾ ಬಿಡುಗಡೆಯಾದಾಗಲೂ ದರ್ಶನ್ ಜೈಲಿನಲ್ಲಿದ್ದರು.

Read Full Story

11:29 AM (IST) Mar 21

ರಾಜೀನಾಮೆ ನೀಡಲು ಮುಂದಾದ ಸಚಿವ ಜಮೀರ್ ಅಹಮ್ಮದ್, ಕಾಂಗ್ರೆಸ್‌ನಲ್ಲಿ ಹೊಸ ಬಾಂಬ್

ರಾಜೀನಾಮೆ ನೀಡಲು ಮುಂದಾದ ಸಚಿವ ಜಮೀರ್ ಅಹಮ್ಮದ್, ಕಾಂಗ್ರೆಸ್‌ನಲ್ಲಿ ಹೊಸ ಬಾಂಬ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ ಮುಂದೆ ಜಮೀರ್ ಅಹಮ್ಮದ್ ಬಾಂಬ್ ಸಿಡಿಸಿದ್ದಾರೆ. ಇದು ಕೋಲಾಹಲಕ್ಕೆ ಕಾರಣವಾಗಿದೆ.

 

Read Full Story

10:56 AM (IST) Mar 21

ಬಲ್ಕ್ ಡೀಸೆಲ್ ಬೆಲೆ 22 ರೂಪಾಯಿ ಏರಿಕೆ, KSRTC, ಬಿಎಂಟಿಸಿ ಟಿಕೆಟ್ ದರ ಏರಿಕೆ ಸಾಧ್ಯತೆ

ಬಲ್ಕ್ ಡೀಸೆಲ್ ಬೆಲೆ 22 ರೂಪಾಯಿ ಏರಿಕೆ, KSRTC, ಬಿಎಂಟಿಸಿ ಟಿಕೆಟ್ ದರ ಏರಿಕೆ ಸಾಧ್ಯತೆ, ಮಧ್ಯಪ್ರಾಚ್ಯ ಯುದ್ಧದಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ ಗೋಚರಿಸುತ್ತಿದೆ.

 

Read Full Story

10:37 AM (IST) Mar 21

'ಓವರ್ ಸ್ಮಾರ್ಟ್ ನನ್ನ ಹತ್ರ ತೋರಿಸ್ಬೇಡ' ರೌಡಿಶೀಟರ್‌ಗಳ ಬೆವರಿಳಿಸಿದ ಎಸ್‌ಪಿ ಜಾಹ್ನವಿ

ವಿಜಯನಗರ ಜಿಲ್ಲಾ ಪೊಲೀಸ್ ಇಲಾಖೆಯು ಹೊಸಪೇಟೆಯಲ್ಲಿ 220 ರೌಡಿಶೀಟರ್‌ಗಳ ವಿಶೇಷ ಪರೇಡ್ ನಡೆಸಿತು. ಎಸ್‌ಪಿ ಎಸ್.ಜಾಹ್ನವಿ ಅವರು ಅಪರಾಧ ಚಟುವಟಿಕೆಗಳನ್ನು ನಿಲ್ಲಿಸಿ ಸುಧಾರಿಸುವಂತೆ ಖಡಕ್ ಎಚ್ಚರಿಕೆ ನೀಡಿದ್ದು, ಸಮಾಜದಲ್ಲಿ ಶಾಂತಿ ಕಾಪಾಡಲು ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Read Full Story

10:17 AM (IST) Mar 21

ಅಧಿಕಾರಿಗಳ ವರ್ಗ ಇಲಾಖಾ ಹಂತದಲ್ಲೇ ಮುಗಿಯಬೇಕು - ಹೈಕೋರ್ಟ್‌ ಅಭಿಪ್ರಾಯ

ಬೆಸ್ಕಾಂ ಸಹಾಯಕ ಎಂಜಿನಿಯರ್ ಒಬ್ಬರ ಮೇಲ್ಮನವಿ ವಿಚಾರಣೆ ವೇಳೆ ಹೈಕೋರ್ಟ್‌ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ಸ್ವಾಮ್ಯದ ಉದ್ಯಮಗಳ ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿ ವಿಚಾರಗಳು ಸಂಬಂಧಪಟ್ಟ ಆಡಳಿತ ಇಲಾಖೆಯ ಹಂತದಲ್ಲೇ ಮುಗಿಯಬೇಕು ಎಂದು ಸ್ಪಷ್ಟಪಡಿಸಿದೆ

Read Full Story

10:03 AM (IST) Mar 21

ಗ್ಯಾಸ್, ಪೆಟ್ರೋಲ್ ಬೆನ್ನಲ್ಲೇ ಕರೆಂಟ್ ಶಾಕ್, ಮಾ.25ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿದೆಡೆ ವಿದ್ಯುತ್ ಕಡಿತ

ಗ್ಯಾಸ್, ಪೆಟ್ರೋಲ್ ಬೆನ್ನಲ್ಲೇ ಕರೆಂಟ್ ಶಾಕ್, ಮಾ.25ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿದೆಡೆ ವಿದ್ಯುತ್ ಕಡಿತ, ನಾಳೆಯಿಂದಲೇ ವಿದ್ಯುತ್ ಕಡಿತ ಶುರುವಾಗಲಿದೆ. ಎಲ್ಲೆಲ್ಲಾ ವಿದ್ಯುತ್ ಕಡಿತ ನಡೆಯಲಿದೆ, ಯಾವ ಸಮಯಕ್ಕೆ ಕಡಿತಗೊಳ್ಳಲಿದೆ?

 

Read Full Story

08:47 AM (IST) Mar 21

ರಾಜ್ಯಕ್ಕೆ ಹೆಚ್ಚು ಗ್ಯಾಸ್‌ ಕೊಡಿ - ಕೇಂದ್ರಕ್ಕೆ ಸಿಎಂ

ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯನ್ನು ನೀಗಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

Read Full Story

08:30 AM (IST) Mar 21

ನಿವೃತ್ತಿಗೆ ವಾರ ಇರುವಾಗಲೇ ಸಮಾಜ ಕಲ್ಯಾಣ ಅಧಿಕಾರಿ ಆತ್ಮ*ತ್ಯೆ, ಸಾವಿಗೂ ಮುನ್ನ ವಿಡಿಯೋ ರೆಕಾರ್ಡ್

ನಿವೃತ್ತಿಗೆ ವಾರ ಇರುವಾಗಲೇ ಸಮಾಜ ಕಲ್ಯಾಣ ಅಧಿಕಾರಿ ಆತ್ಮ*ತ್ಯೆ, ಸಾವಿಗೂ ಮುನ್ನ ವಿಡಿಯೋ ರೆಕಾರ್ಡ್, ತನ್ನ ಸಾವಿಗೆ ಕಾರಣ ಏನು ಅನ್ನೋದು ಬಹಿರಂಗಪಡಿಸಿದ್ದಾರೆ. ಆದರೆ ಅಧಿಕಾರಿ ತಂದೆಯ ಸಾವು ಹಾಗೂ ಈಗಿನ ನಿರ್ಧಾರಗಳು ಕೆಲ ಅನುಮಾನಕ್ಕೆ ಕಾರಣವಾಗಿದೆ.

Read Full Story

08:08 AM (IST) Mar 21

ದೀಪಾಂಜಲಿ ನಗರ ಜಂಕ್ಷನ್‌ನಿಂದ ನೈಸ್‌ ರಸ್ತೆಗೆ ಇನ್ನು ನೇರ ಸಂಚಾರ

ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿ ಪಿಇಎಸ್‌ ಕಾಲೇಜು ಸಮೀಪದ ನೈಸ್‌ ರಸ್ತೆಗೆ ಸಂಪರ್ಕ ಕಲ್ಪಿಸುವ ನಾಲ್ಕು ಪಥದ ಹೊಸ ಲಿಂಕ್‌ ರಸ್ತೆ ಸಂಚಾರಕ್ಕೆ ಮುಕ್ತಗೊಂಡಿದೆ.

Read Full Story

08:02 AM (IST) Mar 21

ಯುದ್ಧದಿಂದ ಜನರು ಕಂಗಾಲು, ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಬಂಕ್‌ನಲ್ಲಿ ಪೆಟ್ರೋಲ್ ಬೆಲೆ ಏರಿಕೆ

ಯುದ್ಧದಿಂದ ಜನರು ಕಂಗಾಲು, ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಬಂಕ್‌ನಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಪ್ರೀಮಿಯಂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾಗಿದೆ. ಮೊದಲು ಶೆಲ್ ಪೆಟ್ರೋಲ್ ದರ ಏರಿಕೆಯಾಗಿದ್ದು, ಇದೀಗ ಎಲ್ಲಾ ಬಂಕ್‌ನಲ್ಲಿ ಬೆಲೆ ಏರಿಕೆಯಾಗಿದೆ.

 

Read Full Story

07:59 AM (IST) Mar 21

ಮನುಷ್ಯನ ಬದುಕಿಗೆ ರಂಜಾನ್‌ ಮಾಸದ ಪಾಠಗಳು - ಆತ್ಮಶುದ್ಧಿಯ ಈ ಪವಿತ್ರ ತಿಂಗಳ ಮಹತ್ವ ತಿಳಿಯಿರಿ

ರಂಜಾನ್ ಹಬ್ಬವು ಇಸ್ಲಾಂನ ಪವಿತ್ರ ಆಚರಣೆಯಾಗಿದ್ದು, ಉಪವಾಸ, ದಾನ, ಖುರಾನ್ ಪಠಣ ಮತ್ತು ಆತ್ಮಾವಲೋಕನದ ಮೂಲಕ ಮಾನವೀಯ ಮೌಲ್ಯಗಳನ್ನು ಸಾರುತ್ತದೆ. ಈ ತಿಂಗಳ ಆಚರಣೆಗಳು ಬಡವರ ಹಸಿವನ್ನು ಅರಿಯಲು, ಆತ್ಮಶುದ್ಧಿ ಮಾಡಿಕೊಳ್ಳಲು ಮತ್ತು ಈದ್-ಉಲ್-ಫಿತರ್ ಮೂಲಕ ಸಹಬಾಳ್ವೆಯ ಸಂದೇಶವನ್ನು ಸಾರಲು ಪ್ರೇರೇಪಿಸುತ್ತವೆ.
Read Full Story

07:39 AM (IST) Mar 21

ಚಿಕ್ಕಮಗಳೂರು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸರ್ಕಾರಿ ಬಸ್ ಪಲ್ಟಿ, 8 ಜನರಿಗೆ ಗಾಯ

ಚಿಕ್ಕಮಗಳೂರು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸರ್ಕಾರಿ ಬಸ್ ಪಲ್ಟಿ, 8 ಜನರಿಗೆ ಗಾಯ, ಕುಕ್ಕನೂರಿನಿಂದ-ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಅಪಘಾತಗೊಂಡಿದೆ. ಬಸ್‌ನಲ್ಲಿ 40 ಪ್ರಯಾಣಕರಿದ್ದರು.

Read Full Story

07:34 AM (IST) Mar 21

Karnataka By-Polls - ದಾವಣಗೆರೆಗೆ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ, ಎಸ್‌ಟಿ ಸಮುದಾಯದ ಶ್ರೀನಿವಾಸಗೆ ಟಿಕೆಟ್‌ ಯಾಕೆ?

ರಾಜ್ಯದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ನಿರೀಕ್ಷೆಯಂತೆ ಬಾಗಲಕೋಟೆಗೆ ವೀರಣ್ಣ ಚರಂತಿಮಠಗೆ ಟಿಕೆಟ್ ನೀಡಲಾಗಿದ್ದು, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ದಾಸಕರಿಯಪ್ಪ ಅವರನ್ನ ಆಯ್ಕೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ.

Read Full Story

07:32 AM (IST) Mar 21

ಬೆಂಗಳೂರು ರಸ್ತೆ ಬದಿಯಲ್ಲಿ ಬೇಕಾಬಿಟ್ಟಿ ವಾಹನ ನಿಲ್ಲಿಸ್ತೀರಾ - ಹುಷಾರ್ !

ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆಯಿಂದಾಗಿ ನಗರದ ಹೆಸರು ಹಾಳಾಗುತ್ತಿದೆ. ಇದಕ್ಕಾಗಿ ಸೂಕ್ತ ವಾಹನ ನಿಲುಗಡೆ ನೀತಿ ರೂಪಿಸಬೇಕಾಗಿದೆ. ರಸ್ತೆ ಬದಿಯಲ್ಲಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲುಗಡೆ ಮಾಡಿದರೆ ಟೋಯಿಂಗ್‌ ವ್ಯವಸ್ಥೆ ತರಲು ನಿರ್ಧಾರಿಸಲಾಗಿದೆ   

Read Full Story

07:15 AM (IST) Mar 21

Karnataka Bypolls - ಕರ್ನಾಟಕ ಜನರು ನಮ್ಮ ಪರ ಇದ್ದಾರೆ, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್‌ ಗೆಲ್ಲುತ್ತೆ - ಸುರ್ಜೇವಾಲಾ ವಿಶ್ವಾಸ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷದ ಆಂತರಿಕ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.

Read Full Story

More Trending News