ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸರ್ಕಾರದ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ 17 ಮಹಿಳೆಯರೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

10:51 PM (IST) Mar 27
'ಅಮೃತಧಾರೆ' ಖ್ಯಾತಿಯ ರಾಣವ್ ಗೌಡ ಅವರನ್ನು ವರಿಸಲಿರುವ 'ಭಾರ್ಗವಿ ಎಲ್ಎಲ್ಬಿ' ನಟಿ ರಾಧಾ ಭಗವತಿ, ತಮ್ಮ ಸಿನಿಮಾ ವೃತ್ತಿಜೀವನದ ಬಗ್ಗೆ ಮಾತನಾಡಿದ್ದಾರೆ. ಮದುವೆಯ ನಂತರ ಸಿನಿಮಾಗಳಲ್ಲಿ ರೊಮ್ಯಾನ್ಸ್, ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸುವ ಬಗ್ಗೆ ಪ್ರಶ್ನೆ ಎದುರಾದಾಗ ನಟಿ ಹೇಳಿದ್ದೇನು?
10:42 PM (IST) Mar 27
ಮೈಸೂರಿನ ಶಿಕ್ಷಕಿ ಜ್ಯೋತಿ ಅವರು, ಪತಿಯ ನಿಧನದ ದುಃಖದ ನಡುವೆಯೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಗಣಿತ ಪರೀಕ್ಷಾ ಸಿದ್ಧತೆಗಾಗಿ ಶಾಲೆಗೆ ಹಾಜರಾಗಿದ್ದಾರೆ. ತಮ್ಮ ವೈಯಕ್ತಿಕ ನೋವಿಗಿಂತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಆದ್ಯತೆ ನೀಡಿದ ಅವರ ಈ ಕರ್ತವ್ಯನಿಷ್ಠೆಯು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.
08:04 PM (IST) Mar 27
06:36 PM (IST) Mar 27
ನನ್ನ ಮಗಳಿಗೆ ಡೆವಲಪ್ಮೆಂಟಲ್ ಡಿಸ್ಪ್ಲಾಸಿಯಾ ಆಫ್ ದಿ ಹಿಪ್ ಇತ್ತು. ಇದರಲ್ಲಿ ಸೊಂಟದ ಮೂಳೆ ಜಾರಿಕೊಳ್ಳುತ್ತದೆ. ಒಂದು ಕಾಲು ಉದ್ದ, ಇನ್ನೊಂದು ಗಿಡ್ಡ ಆಗಿ ನಡಿಗೆಯಲ್ಲಿ ವ್ಯತ್ಯಾಸವಾಗುತ್ತದೆ ಎಂದು ವರುಣ್ ಹೇಳಿದ್ದಾರೆ.
06:31 PM (IST) Mar 27
ಬೆಂಗಳೂರಿನ ಅನಿಲ್ ಕುಂಬ್ಳೆ ವೃತ್ತದಲ್ಲಿ ಲ್ಯಾಂಬೋರ್ಗಿನಿ ಕಾರನ್ನು ಅಪಾಯಕಾರಿಯಾಗಿ ಡ್ರಿಫ್ಟಿಂಗ್ ಮಾಡಿದ್ದ ಮುತ್ತಪ್ಪ ರೈ ಪುತ್ರ ರಿಕಿ ರೈ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖೆ ವೇಳೆ, ಸಂಚಾರ ದಂಡ ತಪ್ಪಿಸಲು ಗುಜರಾತ್ ಮೂಲದ ಕಾರಿಗೆ ನಕಲಿ ನಂಬರ್ ಪ್ಲೇಟ್ ಬಳಸಿರುವುದು ಪತ್ತೆಯಾಗಿದೆ.
05:49 PM (IST) Mar 27
'ಕಾಂತಾರ' ಖ್ಯಾತಿಯ ರಿಷಬ್ ಶೆಟ್ಟಿ ಅವರು ಹೊಂಬಾಳೆ ಫಿಲ್ಮ್ಸ್ ನಂತರ ತಮ್ಮ ಆಪ್ತ ಗೆಳೆಯ ರಾಜ್ ಬಿ. ಶೆಟ್ಟಿ ಮತ್ತು ನಟಿ ರುಕ್ಮಿಣಿ ವಸಂತ್ ಅವರನ್ನು ಇನ್ಸ್ಟಾಗ್ರಾಮ್ನಲ್ಲಿ ಅನ್ಫಾಲೋ ಮಾಡಿರುವುದು ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ.
05:16 PM (IST) Mar 27
04:50 PM (IST) Mar 27
ಕಥೆಗಾರನಿಗೆ ತನ್ನ ಕಥೆಯ ಬಗ್ಗೆ ಎಷ್ಟು ಗೌರವ ಇರುತ್ತೆ ಅನ್ನೋದು ಮುಖ್ಯ ಅಂಶ. ನನಗೆ ಎಷ್ಟೋ ಜನ ಇನ್ಸ್ಟಾಗ್ರಾಂನಂಥ ಕಡೆಗಳಲ್ಲಿ ಕಥೆ ಕಳಿಸುತ್ತಾರೆ. ಛೇ, ತಮ್ಮ ಕಥೆಯ ಬಗ್ಗೆ ಕಿಂಚಿತ್ ಗೌರವವೂ ಇಲ್ಲವಲ್ಲ ಅನಿಸುತ್ತದೆ.
04:40 PM (IST) Mar 27
04:35 PM (IST) Mar 27
ನಿರ್ಮಾಪಕರು ಸೋತು ಸುಣ್ಣವಾಗುತ್ತಿದ್ದಾರೆ. ಗೆಲುವಿಗೆ ತತ್ವಾರ ಉಂಟಾಗಿದೆ. ಈ ಎಲ್ಲಾ ಸಮಸ್ಯೆಗಲಿಗೂ ತಾತ್ವಿಕ ಪರಿಹಾರ ಕಂಡುಕೊಳ್ಳಲು ಸಂಬಂಧ ಪಟ್ಟವರು ಯಾರೂ ಮುಂದಾಗದೇ ಇರುವುದಕ್ಕೆ ಸುದೀರ್ಘ ನಿಟ್ಟುಸಿರು.
04:28 PM (IST) Mar 27
ಗುಜರಾತ್ನ 'ವಂತಾರಾ' ವನ್ಯಜೀವಿ ಕೇಂದ್ರಕ್ಕೆ ಕರ್ನಾಟಕದ ಅರಣ್ಯಾಧಿಕಾರಿಗಳು ಭೇಟಿ ನೀಡುತ್ತಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಭೇಟಿಗಳ ಬಗ್ಗೆ 7 ದಿನಗಳಲ್ಲಿ ವರದಿ ನೀಡಲು ಆದೇಶಿಸಿದೆ.
04:12 PM (IST) Mar 27
03:36 PM (IST) Mar 27
03:13 PM (IST) Mar 27
ಇದು ನಂಬಲಾಗದ ಸಂಗತಿ! ಆದರೆ ಈ ಪಯಣದಲ್ಲಿ ನನ್ನ ಗೆಳತಿಯರು ನನಗೆ 'ರಕ್ಷಾ ಕವಚ'ದಂತೆ ನಿಂತರು. ಮದುವೆಯಾಗಬೇಕು ಎಂದು ನಿರ್ಧರಿಸಿದ ಕ್ಷಣದಿಂದ ಇಂದಿನವರೆಗೆ ಅವರ ಸಾಥ್ ಅದ್ಭುತ. ಈ ಪ್ರೀತಿ ಶಾಶ್ವತವಾದದ್ದು," ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.
02:01 PM (IST) Mar 27
ಮಂಗಳೂರು ವಿಶ್ವವಿದ್ಯಾಲಯವು ತನ್ನ 44ನೇ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಘೋಷಿಸಿದೆ. ಶಿಕ್ಷಣ ಸೇವೆಗಾಗಿ ಪದ್ಮಶ್ರೀ ಹರೇಕಳ ಹಾಜಬ್ಬ, ಯಕ್ಷಗಾನ ಕ್ಷೇತ್ರಕ್ಕೆ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಮತ್ತು ದೈವ ನರ್ತನ ,ಶಿಕ್ಷಣಕ್ಕಾಗಿ ಡಾ. ರವೀಶ್ ಪಡುಮಲೆ ಈ ಗೌರವಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧಕರನ್ನು ಗೌರವಿಸುವ ಮೂಲಕ ವಿವಿಯು ಶಿಕ್ಷಣ, ಸಂಸ್ಕೃತಿ ಮತ್ತು ಸಮಾಜ ಸೇವೆಯ ಮಹತ್ವವನ್ನು ಎತ್ತಿ ಹಿಡಿದಿದೆ.
01:39 PM (IST) Mar 27
12:48 PM (IST) Mar 27
12:11 PM (IST) Mar 27
12:01 PM (IST) Mar 27
newly mother died: ರಾಯಚೂರು ಜಿಲ್ಲೆಯ ಮಾನ್ವಿಯ ಖಾಸಗಿ ಆಸ್ಪತ್ರೆಯ ಮೇಲಿಂದ ಬಿದ್ದು 22 ವರ್ಷದ ಬಾಣಂತಿ ವಾಸವಿ ಸಾವನ್ನಪ್ಪಿದ್ದಾರೆ. ಅನಾರೋಗ್ಯಪೀಡಿತ ಮಗುವಿಗೆ ಹಾಲುಣಿಸಲು ಬಂದಿದ್ದ ಅವರ ಸಾವು ಅನುಮಾನಾಸ್ಪದವಾಗಿದ್ದು, ಆಸ್ಪತ್ರೆ ಆಡಳಿತದ ನಡೆ ಬಗ್ಗೆ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ.
11:44 AM (IST) Mar 27
ದೇಶದಲ್ಲಿ ಮತ್ತೆ ಲಾಕ್ಡೌನ್ ಜಾರಿಯಾಗಲಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಪಶ್ಚಿಮ ಏಷ್ಯಾ ಯುದ್ಧದ ಕುರಿತ ಪ್ರಧಾನಿ ಮೋದಿಯವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು, ಯಾವುದೇ 'ಎನರ್ಜಿ ಲಾಕ್ಡೌನ್' ಇರುವುದಿಲ್ಲ, ಅಗತ್ಯ ವಸ್ತುಗಳ ಪೂರೈಕೆ ಸುಗಮವಾಗಿದೆ ಎಂದು ಸ್ಪಷ್ಟಪಡಿಸಿದೆ.
11:26 AM (IST) Mar 27
11:24 AM (IST) Mar 27
10:59 AM (IST) Mar 27
10:42 AM (IST) Mar 27
ವಾಲ್ಮೀಕಿಯ 'ಕೋ ನ್ವಸ್ಮಿನ್' ಎಂಬ ಪ್ರಶ್ನೆಯಿಂದ ಪ್ರಾರಂಭಿಸಿ, ರಾಮಾಯಣದ ಆದರ್ಶ ಪುರುಷನ ಹುಡುಕಾಟವನ್ನು ಈ ಲೇಖನವು ವಿವರಿಸುತ್ತದೆ. ರಾಮನ ಸಂಕೀರ್ಣ ವ್ಯಕ್ತಿತ್ವ, ಸ್ವತಃ ರಾಮನೇ 'ತಾನು ಯಾರು?' ಎಂದು ಕೇಳಿದ ಸಂದರ್ಭ ಮತ್ತು ಅಂತಿಮವಾಗಿ ರಾಮನೇ ಪರಿಪೂರ್ಣ ಮಾನವನೆಂಬ ಸತ್ಯ ಎಂಬುದನ್ನು ಇದು ಚರ್ಚಿಸುತ್ತದೆ.
10:40 AM (IST) Mar 27
10:16 AM (IST) Mar 27
ಗ್ರೇಟರ್ ಬೆಂಗಳೂರು ಪ್ರಾಧಿಕಾರವು (GBA) ತನ್ನ ಹೊಸ ಲಾಂಛನವನ್ನು ಅನಾವರಣಗೊಳಿಸಲು ಸಜ್ಜಾಗಿದೆ. ಈ ಹೊಸ ಲೋಗೋದಲ್ಲಿ ಪಾರಂಪರಿಕ ಕೆಂಪೆಗೌಡ ಗೋಪುರದ ಜೊತೆಗೆ ಖಡ್ಗ ಹಿಡಿದ ಕೆಂಪೆಗೌಡರ ಚಿತ್ರಣವಿದ್ದು, ಮುಂಬರುವ ಬಜೆಟ್ ಪುಸ್ತಕದ ಮೇಲೆ ಇದು ಮುದ್ರಣಗೊಳ್ಳಲಿದೆ.
09:56 AM (IST) Mar 27
ಮಧುಮೇಹ(ಟೈಪ್-1) ಚಿಕಿತ್ಸೆಯು ವೈದ್ಯಕೀಯ ತಂತ್ರಜ್ಞಾನದಲ್ಲಿ ಮಹತ್ತರ ಪ್ರಗತಿ ಸಾಧಿಸಿದ್ದರೂ, ಎಲ್ಲಾ ವರ್ಗದ ಜನರಿಗೆ ಈ ಸೇವೆಗಳು ಸಮಾನವಾಗಿ ಲಭ್ಯವಾಗುವಂತೆ ಮಾಡುವುದು ಒಂದು ದೊಡ್ಡ ಸವಾಲಾಗಿದೆ
09:56 AM (IST) Mar 27
09:53 AM (IST) Mar 27
ಮಧುಮೇಹ(ಟೈಪ್-1) ಚಿಕಿತ್ಸೆಯು ವೈದ್ಯಕೀಯ ತಂತ್ರಜ್ಞಾನದಲ್ಲಿ ಮಹತ್ತರ ಪ್ರಗತಿ ಸಾಧಿಸಿದ್ದರೂ, ಎಲ್ಲಾ ವರ್ಗದ ಜನರಿಗೆ ಈ ಸೇವೆಗಳು ಸಮಾನವಾಗಿ ಲಭ್ಯವಾಗುವಂತೆ ಮಾಡುವುದು ಒಂದು ದೊಡ್ಡ ಸವಾಲಾಗಿದೆ
08:48 AM (IST) Mar 27
disabled person struggles at station: ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಎಸ್ಕಲೇಟರ್ ಮತ್ತು ಲಿಫ್ಟ್ ಉದ್ಘಾಟನೆಯಾಗದ ಕಾರಣ, ಚಿಕಿತ್ಸೆಗಾಗಿ ಬಂದ ವಿಶೇಷಚೇತನ ವ್ಯಕ್ತಿಯೊಬ್ಬರು ಮೆಟ್ಟಿಲುಗಳ ಮೇಲೆ ತೆವಳುತ್ತಾ ಸಾಗಬೇಕಾದ ದಯನೀಯ ಸ್ಥಿತಿ ನಿರ್ಮಾಣವಾಗಿತ್ತು.
08:46 AM (IST) Mar 27
Karnataka By Elections ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್, ಬೆಳಗಾವಿಯ ಪ್ರಭಾವಿ ನಾಯಕರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಲಕ್ಷ್ಮಣ ಸವದಿಗೆ ಮಹತ್ವದ ಜವಾಬ್ದಾರಿ ನೀಡಿದೆ.
08:28 AM (IST) Mar 27
ಬೆಂಗಳೂರು ನಗರ ಅಭಿವೃದ್ಧಿ ಚರ್ಚೆಯ ವೇಳೆ ವಿಧಾನಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮುನಿರತ್ನ ನಡುವೆ ತೀವ್ರ ವಾಗ್ವಾದ ನಡೆಯಿತು. 'ತಾಕತ್ ಇಲ್ಲ' ಎಂಬ ಮುನಿರತ್ನರ ಸವಾಲಿಗೆ ಕೆರಳಿದ ಡಿಕೆಶಿ, ಅವರನ್ನು 'ಪುಡಿ ರೌಡಿ, ರೇ ಪಿಸ್ಟ್' ಎಂದು ನಿಂದಿಸಿದ್ದು ಕೋಲಾಹಲಕ್ಕೆ ಕಾರಣವಾಯಿತು.
08:09 AM (IST) Mar 27
ಶಾಲೆಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಕಡ್ಡಾಯವಾಗಿ ಹಾಡಬೇಕೆಂಬ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ.. ಇದೇ ರೀತಿಯ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿರುವ ಹಿನ್ನೆಲೆ ಹೈಕೋರ್ಟ್ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿದೆ.
07:59 AM (IST) Mar 27
Tablet Arif murder case: ಮಂಗಳೂರು ಹೊರವಲಯದ ತೊಕ್ಕೊಟ್ಟು ಫ್ಲೈಓವರ್ನಲ್ಲಿ ರೌಡಿಶೀಟರ್ ಆರಿಫ್ ಯಾನೆ ಟಾಬ್ಲೆಟ್ ಆರಿಫ್ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೈಕ್ನಲ್ಲಿ ಹೋಗುತ್ತಿದ್ದ ಆರಿಫ್ಗೆ ಕಾರ್ನಿಂದ ಡಿಕ್ಕಿ ಹೊಡೆದು, ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ.
07:53 AM (IST) Mar 27
ಏ.9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಗುರುವಾರ ಕೊನೆಯ ದಿನವಾಗಿದ್ದು, ಅಲ್ಪಸಂಖ್ಯಾತರು ಸೇರಿ 11 ಪಕ್ಷೇತರರು ನಾಮಪತ್ರ ಹಿಂಪಡೆದಿದ್ದಾರೆ. ಅಂತಿಮವಾಗಿ 31 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
07:51 AM (IST) Mar 27
ಮುಡಾ ಸೈಟ್ ಅಕ್ರಮ ಹಂಚಿಕೆ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ 'ಬಿ' ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ಕೋರ್ಟ್ ಅಂಗೀಕರಿಸಿತ್ತು. ಈ ಕ್ರಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಹಿನ್ನೆಲೆ, ಹೈಕೋರ್ಟ್ ಇದೀಗ ಸಿಎಂ ಸಿದ್ದರಾಮಯ್ಯಗೆ ನೋಟೀಸ್ ನೀಡಿದೆ.