LIVE NOW
Published : Jan 02, 2026, 05:34 AM ISTUpdated : Jan 02, 2026, 11:15 PM IST

Karnataka News Live: ಸಿನೆಮಾ ಅಲ್ಲ, ಇದು ರಣರಂಗ! ಹೊಯ್ಸಳ ಸಾಮ್ರಾಜ್ಯದ ಕಥೆ ಗೊತ್ತೇ? ಮೊಘಲರ ಆಕ್ರಮಣದ ಕರಾಳ ಇತಿಹಾಸ ಹೇಳಲು ಬರ್ತಿದೆ 'ದ್ರೌಪದಿ 2'

ಸಾರಾಂಶ

ಬಳ್ಳಾರಿ: ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಸಂಬಂಧ ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿಯಲ್ಲಿ ರಾದ್ಧಾಂತವೇ ನಡೆದು ಹೋಗಿದೆ. ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ಸಾವಿರಾರು ಬೆಂಬಲಿಗರು ಬಡಿಗೆ, ಕಬ್ಬಿಣದ ರಾಡ್, ಕಲ್ಲು ಹಿಡಿದು ಬಡಿದಾಡಿಕೊಂಡಿದ್ದಾರೆ. ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಅಂಗರಕ್ಷಕರು ಗುಂಡು ಹಾರಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಆರು ಸುತ್ತುಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಗೋಲಿಬಾರ್ ನಡೆಸಿದ್ದಾರೆ. ಈ ವೇಳೆ ಗುಂಡೇಟಿಗೆ ಓರ್ವಯುವಕ ಬಲಿಯಾಗಿದ್ದಾನೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಬಳ್ಳಾರಿ ಹುಸೇನ ನಗರದ ರಾಜಶೇಖರ (28) ಎಂದು ಹೇಳಲಾಗಿದೆ. ಆತ ತಮ್ಮ ಬೆಂಬಲಿಗ ಎಂದು ಕಾಂಗ್ರೆಸ್ ಶಾಸಕ ನಾರಾ ಭರತರೆಡ್ಡಿ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಬಿಜೆಪಿ ಶಾಸಕ ಜನಾರ್ದನ ರಡ್ಡಿ ಮನೆ ಬಳಿ ಈ ಘಟನೆ ನಡೆದಿದೆ. ಆದರೆ ಈತ ಬಲಿಯಾಗಿದ್ದು ಪೊಲೀಸರ ಗುಂಡೇಟಿಗೋ? ಸತೀಶ್ ರೆಡ್ಡಿ ಖಾಸಗಿ ಅಂಗರಕ್ಷಕರ ಗುಂಡೇಟಿಗೋ ಎಂಬುದು ಗೊತ್ತಾಗಿಲ್ಲ.

11:16 PM (IST) Jan 02

ಸಿನೆಮಾ ಅಲ್ಲ, ಇದು ರಣರಂಗ! ಹೊಯ್ಸಳ ಸಾಮ್ರಾಜ್ಯದ ಕಥೆ ಗೊತ್ತೇ? ಮೊಘಲರ ಆಕ್ರಮಣದ ಕರಾಳ ಇತಿಹಾಸ ಹೇಳಲು ಬರ್ತಿದೆ 'ದ್ರೌಪದಿ 2'

ದ್ರೌಪದಿ' ಯಶಸ್ಸಿನ ನಂತರ, ನಿರ್ದೇಶಕ ಮೋಹನ್ ಜಿ ಅವರ 'ದ್ರೌಪದಿ 2' ಬಿಡುಗಡೆಗೆ ಸಜ್ಜಾಗಿದೆ. ಹೊಯ್ಸಳ ಚಕ್ರವರ್ತಿ ವೀರ ಬಲ್ಲಾಳ III ಮತ್ತು ಮೊಘಲ್ ಆಕ್ರಮಣದ ನೈಜ ಇತಿಹಾಸ ಆಧಾರಿತ ಈ ಐತಿಹಾಸಿಕ ಚಿತ್ರದಲ್ಲಿ, ಚಿರಾಗ್ ಜಾನಿ ಮೊಹಮ್ಮದ್ ಬಿನ್ ತುಘಲಕ್ ಎಂಬ ಕ್ರೂರ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ.

Read Full Story

10:27 PM (IST) Jan 02

ಜನವರಿ 30ರ ಒಳಗೆ ಸಿಎಂ ಖುರ್ಚಿ ಯಾರ ಪಾಲಾಗಲಿದೆ? ಖ್ಯಾತ ಜ್ಯೋತಿಷಿ ದ್ವಾರಕನಾಥ್‌ ಭವಿಷ್ಯವೇನು?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿರುವ ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಈ ನಡುವೆ, ಪ್ರಭಾವಿ ಜ್ಯೋತಿಷಿ ದ್ವಾರಕಾನಾಥ್ ಅವರು ಜನವರಿ 5 ರಿಂದ 30ರೊಳಗೆ ಡಿಕೆಶಿ ಜೀವನದಲ್ಲಿನ ಬದಲಾವಣೆ ಬಗ್ಗೆ ಹೇಳಿದ್ದಾರೆ.

Read Full Story

09:27 PM (IST) Jan 02

ಮನೆಯೆಂದು ಮಸೀದಿ ಕಟ್ಟಿದ್ರಾ ಸಾರವಾಡ್ ಬ್ರದರ್ಸ್? ಹುಬ್ಬಳ್ಳಿಯಲ್ಲಿ ಹಿಂದೂಗಳ ಬೃಹತ್ ಪ್ರತಿಭಟನೆ, ಸ್ಫೋಟಕ ತಿರುವು!

ಹುಬ್ಬಳ್ಳಿಯ ನೇಕಾರ ನಗರದಲ್ಲಿ ವಸತಿ ಉದ್ದೇಶಕ್ಕೆ ಅನುಮತಿ ಪಡೆದ ಕಟ್ಟಡವನ್ನು ಅಕ್ರಮವಾಗಿ ಪ್ರಾರ್ಥನಾ ಮಂದಿರವಾಗಿ ಪರಿವರ್ತಿಸಲಾಗಿದೆ ಎಂದು ಆರೋಪಿಸಿ ಸ್ಥಳೀಯರು ಮತ್ತು ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೆರವಿಗೆ ಗಡುವು

Read Full Story

09:08 PM (IST) Jan 02

Bigg Bossನಿಂದ ಇದನ್ನೆಲ್ಲಾ ಕಲಿತೆ ಎಂದ ಕಿಚ್ಚ ಸುದೀಪ್, ಕೆಲ​ ವೀಕ್ಷಕರ ಬಗ್ಗೆ ಮರುಕ ಪಟ್ಟುಕೊಂಡದ್ದೇಕೆ?

ಬಿಗ್‌ಬಾಸ್‌ ಷೋ ಬಗ್ಗೆ ಹಲವು ಅಭಿಪ್ರಾಯಗಳಿದ್ದರೂ, ನಿರೂಪಕ ಕಿಚ್ಚ ಸುದೀಪ್‌ ಅವರಿಗಾಗಿ ನೋಡುವವರೇ ಹೆಚ್ಚು. ಈ ಷೋ ತನಗೆ ತಾಳ್ಮೆಯನ್ನು ಕಲಿಸಿದೆ ಎಂದು ಸುದೀಪ್‌ ಅವರೇ ಹೇಳಿಕೊಂಡಿದ್ದಾರೆ. ಅಲ್ಲದೆ, ಇದನ್ನು ಟೀಕಿಸುವವರನ್ನು ಪ್ರಶ್ನಿಸಿದ್ದಾರೆ.

Read Full Story

08:29 PM (IST) Jan 02

ವಿದ್ಯಾರ್ಥಿ ರಾಜಕಾರಣಕ್ಕೆ ಗ್ರೀನ್ ಸಿಗ್ನಲ್? ಪಠ್ಯದ ಜೊತೆ ರಾಜಕೀಯ ಪಾಠ? ಉನ್ನತ ಶಿಕ್ಷಣ ಸಚಿವರ ಸ್ಫೋಟಕ ಸುಳಿವು, ಹೇಳಿದ್ದೇನು?

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಕಾಲೇಜು ಹಂತದಲ್ಲಿ ಚುನಾವಣೆ ನಡೆಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷರು ರಚಿಸಿರುವ ಸಮಿತಿಯ ಮೊದಲ ಸಭೆ ಜನವರಿ 13 ರಂದು ನಡೆಯಲಿದ್ದು, ಚುನಾವಣೆ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

Read Full Story

08:17 PM (IST) Jan 02

ಅಮೂಲ್‌ಗೆ ಗೇಟ್‌ಪಾಸ್‌, ಆರ್‌ಸಿಬಿಗೆ ಬಲಗಾಲಿಟ್ಟು ಬರುವ ಹಾದಿಯಲ್ಲಿ ಕೆಎಂಎಫ್‌ ನಂದಿನಿ!

KMF Nandini Likely to Sponsor RCB in IPL 2026: Replaces Amul ಕರ್ನಾಟಕ ಹಾಲು ಒಕ್ಕೂಟವು ಐಪಿಎಲ್ 2026 ಗಾಗಿ ತನ್ನ ನಂದಿನಿ ಬ್ರ್ಯಾಂಡ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಪ್ರಾಯೋಜಕತ್ವದ ಒಪ್ಪಂದದ ಬಗ್ಗೆ ಯೋಚನೆ ಮಾಡಿದೆ.

Read Full Story

08:00 PM (IST) Jan 02

ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ; ಅಧಿಕಾರ ಸ್ವೀಕರಿಸಿ 1 ದಿನಕ್ಕೆ ವರಿಷ್ಠಾಧಿಕಾರಿ ಪವನ್ ನೆಜ್ಜೂರು ಸಸ್ಪೆಂಡ್!

ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ಪ್ರತಿಷ್ಠಾಪನೆ ವೇಳೆ ನಡೆದ ಹಿಂಸಾಚಾರ ಮತ್ತು ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪದ ಆರೋಪದ ಮೇಲೆ ಜಿಲ್ಲಾ ಎಸ್‌ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಲಾಗಿದೆ. ಇನ್ನು ಅಧಿಕಾರ ಸ್ವೀಕರಿಸಿ 1 ದಿನಕ್ಕೆ ಅಮಾನತ್ತಾಗಿದ್ದಾರೆ.

Read Full Story

07:47 PM (IST) Jan 02

ಕೋಗಿಲು ಲೇಔಟ್‌ನಲ್ಲಿ 167 ಮನೆಗಳು ನೆಲಸಮ - ಆದ್ರೆ ಹೊಸ ಫ್ಲ್ಯಾಟ್‌ ಪಡೆಯಲು 250 ಅರ್ಜಿ ಸಲ್ಲಿಕೆ!

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ 167 ಮನೆ ತೆರವು ಕಾರ್ಯಾಚರಣೆ ಬಳಿಕ ಪರಿಹಾರಕ್ಕಾಗಿ 250ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ! ನಿಜವಾದ ಸಂತ್ರಸ್ತರು ಯಾರು? ಈ ಗೊಂದಲದ ಸಂಪೂರ್ಣ ವರದಿ ಓದಿ.

Read Full Story

07:38 PM (IST) Jan 02

Ballari Banner row - ಬಿಜೆಪಿಯವರಿಂದಲೇ ಬಳ್ಳಾರಿ ಬಿಹಾರವಾಗಿದೆ! - ಜನಾರ್ದನ ರೆಡ್ಡಿ ವಿರುದ್ಧ ನಾಗೇಂದ್ರ ಕಿಡಿ

ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಹಿಂಸಾಚಾರಕ್ಕೆ ಬಿಜೆಪಿಯೇ ಕಾರಣ ಎಂದು ಶಾಸಕ ಬಿ. ನಾಗೇಂದ್ರ ಆರೋಪಿಸಿದ್ದು, ಬಳ್ಳಾರಿಯನ್ನು ಮತ್ತೆ 'ರಿಪಬ್ಲಿಕ್ ಆಫ್ ಬಳ್ಳಾರಿ' ಮಾಡಲು ಸಂಚು ರೂಪಿಸಲಾಗಿದೆ ಎಂದು ಗಂಭೀರ ಆರೋಪ 

Read Full Story

07:19 PM (IST) Jan 02

ಬ್ಯಾಂಕ್‌ಗೆ ಬಂದ ವೃದ್ಧನ ನಡವಳಿಕೆಯಿಂದ ಅನುಮಾನ; ಜೀವ, ಜೀವನಮಾನದ ಹಣ ಉಳಿಸಿದ ಮ್ಯಾನೇಜರ್!

ಸೈಬರ್ ವಂಚಕರ ವರ್ಚುವಲ್ ಅರೆಸ್ಟ್‌ನಲ್ಲಿದ್ದ 74 ವರ್ಷದ ವೃದ್ಧನನ್ನು ಪೊಲೀಸರು ರಕ್ಷಿಸಿದ್ದಾರೆ. ಮುಂಬೈ ಪೊಲೀಸರ ಸೋಗಿನಲ್ಲಿ ವಂಚಕರು,  10 ಲಕ್ಷ ರೂ. ವರ್ಗಾಯಿಸಲು ಯತ್ನಿಸಿದಾಗ ಬ್ಯಾಂಕ್ ಮ್ಯಾನೇಜರ್ ಅನುಮಾನದಿಂದ ಪೊಲೀಸರಿಗೆ ಮಾಹಿತಿ ನೀಡಿದರು. ಮಧ್ಯಸ್ಥಿಕೆಯಿಂದ ವೃದ್ಧರ ಪ್ರಾಣ, ಹಣ ಎರಡೂ ಉಳಿದಿದೆ.

Read Full Story

06:53 PM (IST) Jan 02

ಸಿದ್ದರಾಮಯ್ಯ ರಾಜಕೀಯ ಶತ್ರು, ಆದರೆ ಇವರು ಕೊಲೆಗೂ ಎಸದ ಕ್ರಿಮಿನಲ್ಸ್ - ಭರತ್ ರೆಡ್ಡಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

ಬಳ್ಳಾರಿಯಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಮೇಲೆ ಹಲ್ಲೆ ಹಾಗೂ ಕೊಲೆ ಯತ್ನ ನಡೆದಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆಯು ರಾಜಕೀಯ ವೈಷಮ್ಯದಿಂದ ನಡೆದಿದೆ ಎಂದು ಆರೋಪಿಸಿ, ಅವರು ಪೊಲೀಸರಿಗೆ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ. 

Read Full Story

06:47 PM (IST) Jan 02

ಕೊನೆಗೂ ನಾಂದೇಡ-ಬೆಂಗಳೂರು ರೈಲು ನಿಲುಗಡೆ, ಕಮಲನಗರಕ್ಕೆ ಸಂಭ್ರಮ, ಕಲಬುರ್ಗಿಗೆ ವಿಮಾನ ಚಿಂತೆ

ಸಾರ್ವಜನಿಕರ ನಿರಂತರ ಹೋರಾಟ ಮತ್ತು ಪತ್ರಿಕಾ ವರದಿಯ ಫಲವಾಗಿ ಕಮಲನಗರದಲ್ಲಿ ನಾಂದೇಡ-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿಲುಗಡೆ ಆರಂಭವಾಗಿದೆ. ಮತ್ತೊಂದೆಡೆ, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆಗಳು ಸ್ಥಗಿತಗೊಂಡಿದೆ.

Read Full Story

06:30 PM (IST) Jan 02

ಕಬ್ಜಾ ಶರಣುಗೆ ಮಾಗಡಿ ಜನರ ಗೂಸಾ - ಕಣ್ಣೀರುಡುತ್ತಲೇ 200K ಫಾಲೋವರ್ಸ್ ಇರುವ ಸೋಶಿಯಲ್ ಮಿಡಿಯಾಗೆ ಗುಡ್‌ಬೈ!

ರಾಮನಗರದಲ್ಲಿ ನಡೆದ ಹಲ್ಲೆಯ ನಂತರ, ಕಬ್ಜಾ ಶರಣು ಕಣ್ಣೀರು ಹಾಕುತ್ತಾ ಸೋಶಿಯಲ್ ಮೀಡಿಯಾಗೆ ವಿದಾಯ ಹೇಳಿದ್ದಾರೆ. ತಾನು ನಿರಪರಾಧಿ ಎಂದಿರುವ ಅವರು, ಹುಡುಗಿಯೊಬ್ಬಳಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಗೆ ಹೋದಾಗ ಜನರ ಗುಂಪು ತನ್ನ ಮೇಲೆ ಹಲ್ಲೆ ನಡೆಸಿತು ಎಂದು ವಿವರಿಸಿದ್ದಾರೆ.
Read Full Story

06:24 PM (IST) Jan 02

ಇನ್ನೂ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದ್ಯಾಕೆ? ಗುಟ್ಟು ಬಿಚ್ಚಿಟ್ಟ Rakshita Shetty

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ವಾರ-ವಾರವೂ ಎಲಿಮಿನೇಶನ್‌ ಇದ್ದೇ ಇರುತ್ತದೆ. ಕಳೆದ ಬಾರಿ ಮಾಳು ನಿಪನಾಳ ಅವರು ಎಲಿಮಿನೇಟ್‌ ಆಗಿದ್ದರು, ಆದರೆ ಸ್ಪಂದನಾ ಸೋಮಣ್ಣ ಹೊರಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಸ್ಪಂದನಾ ಯಾಕೆ ಹೊರಹೋಗಲಿಲ್ಲ ಎಂದು ರಕ್ಷಿತಾ ಕಾರಣ ನೀಡಿದ್ದಾರೆ.

 

Read Full Story

06:23 PM (IST) Jan 02

Bengaluru - ಚಲ್ಲಘಟ್ಟ ಮೆಟ್ರೋ ಸ್ಟೇಷನ್‌ ಬಳಿಕ ಸ್ಕೈಡೆಕ್‌ಗೆ 45 ಎಕರೆ ಜಾಗ ಫಿಕ್ಸ್ ಮಾಡಿದ ಬಿಡಿಎ!

BDA Finalises 45-Acre Land Near Challaghatta for Bengaluru Skydeck ಮೇಜರ್ ಆರ್ಟೀರಿಯಲ್ ರಸ್ತೆ (MAR) ಗೆ ಹತ್ತಿರದಲ್ಲಿರುವ ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ಪ್ರಾಧಿಕಾರವು 46 ಎಕರೆ ಭೂಮಿಯನ್ನು ಗುರುತಿಸಿದೆ.

 

Read Full Story

06:18 PM (IST) Jan 02

ರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ, ಭರತ್ ತಂದೆ ಶ್ರೀರಾಮುಲು ಕೊಲೆಗೆ ಯತ್ನಿಸಿದ್ರು  ಜನಾರ್ದನ ರೆಡ್ಡಿ ಗಂಭೀರ ಆರೋಪ!

ಬಳ್ಳಾರಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಜನಾರ್ದನ ರೆಡ್ಡಿ ತಮ್ಮ ಮೇಲೆ ನಡೆದಿದ್ದು ಪೂರ್ವನಿಯೋಜಿತ ದಾಳಿ ಎಂದು ಆರೋಪಿಸಿದ್ದಾರೆ. ತಮ್ಮ ನಿವಾಸದ ಬಳಿ ಪತ್ತೆಯಾದ ಮತ್ತೊಂದು ಬುಲೆಟ್ ಪ್ರದರ್ಶಿಸಿ, ಶಾಸಕ ಭರತ್ ರೆಡ್ಡಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

Read Full Story

05:17 PM (IST) Jan 02

ಬಳ್ಳಾರಿ ಸಂಸ್ಕೃತಿ ಹಾಳು ಮಾಡಬೇಡಿ - ಗಲಭೆಕೋರರ ವಿರುದ್ಧ ಸಚಿವ ಸಂತೋಷ್ ಲಾಡ್ ಗರಂ, ದಮ್ ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ಮಾಡಿ ಸವಾಲು

ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಘಟನೆಯನ್ನು ತೀವ್ರವಾಗಿ ಖಂಡಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಇದು ರಾಜ್ಯಕ್ಕೆ ಒಳ್ಳೆಯ ಸಂಸ್ಕೃತಿಯಲ್ಲ ಎಂದಿದ್ದಾರೆ. ಇದೇ ವೇಳೆ, ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಿದ ಅವರು, ಪಾರದರ್ಶಕತೆಗಾಗಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಬಿಜೆಪಿಗೆ ಸವಾಲು ಹಾಕಿದರು.
Read Full Story

04:55 PM (IST) Jan 02

ಬಳ್ಳಾರಿ ಫೈರಿಂಗ್ ಖಂಡಿಸಿದ ಸಿಎಂ, ಭರತ್‌ ರೆಡ್ಡಿ ಜತೆ ಮಾತಾಡಿ ಎಂದಿದ್ದಕ್ಕೆ ಸಚಿವ ಜಮೀರ್ ಮೇಲೆ ಸಿದ್ದರಾಮಯ್ಯ ಗರಂ

ಬಳ್ಳಾರಿ ಫೈರಿಂಗ್ ಮತ್ತು ಕಾರ್ಯಕರ್ತನ ಸಾವಿನ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್  ತರಾಟೆ ತೆಗೆದುಕೊಂಡ ಅವರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ ಮತ್ತು ಪರಿಸ್ಥಿತಿ ನಿಯಂತ್ರಿಸುವಂತೆ ಸೂಚನೆ ನೀಡಿದ್ದಾರೆ.

Read Full Story

04:54 PM (IST) Jan 02

ಗಿಲ್ಲಿ ನಟನಿಂದ ಬಿಗ್ ಬಾಸ್ ಮನೆ ಮಂದಿಗೆಲ್ಲಾ ಅಂಟಿದ ರೋಗ; ಯಾರಿಗೂ ನೆಟ್ಟಗೆ ಕೂತ್ಕೋಳಕ್ಕಾಗ್ತಿಲ್ಲ!

ಬಿಗ್ ಬಾಸ್ ಮನೆ ಅಂದಮೇಲೆ ಅಲ್ಲಿ ಕಿತ್ತಾಟ, ಪ್ರೀತಿ, ಕುತಂತ್ರಗಳ ಜೊತೆಗೆ ವಿಚಿತ್ರ ವರ್ತನೆಗಳೂ ಸುದ್ದಿಯಾಗುವುದು ಸಾಮಾನ್ಯ. ಆದರೆ ಈ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ 'ಸಹವಾಸ ದೋಷ' ಎಂಬ ಪೋಸ್ಟರ್ ಒಂದು ಭಾರಿ ವೈರಲ್ ಆಗುತ್ತಿದೆ.

Read Full Story

04:43 PM (IST) Jan 02

ಬಳ್ಳಾರಿ ಫೈರಿಂಗ್ ಕೇಸ್ - ಇವರು ಹೇಳಿಬಿಟ್ರೆ ಆಯ್ತಾ? ಜನಾರ್ದನ ರೆಡ್ಡಿ ಟಾರ್ಗೆಟ್ ಆರೋಪಕ್ಕೆ ಸಚಿವ ಮಹದೇವಪ್ಪ ತಿರುಗೇಟು

ಬಳ್ಳಾರಿಯಲ್ಲಿ ನಡೆದ ಬ್ಯಾನರ್ ವಿವಾದ ಮತ್ತು ಸಂಘರ್ಷದ ಕುರಿತು ಸಚಿವ ಎಚ್.ಸಿ. ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ತನಿಖೆಯಾಗದೆ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದ ಅವರು, ಕಾನೂನು ಸುವ್ಯವಸ್ಥೆ ಕುರಿತ ಬಿಜೆಪಿಯ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. 

Read Full Story

04:38 PM (IST) Jan 02

BBK 12 - ನನ್ನ ಹಣೆಬರಹ ಸರಿ ಇಲ್ಲ, ಕಿಚ್ಚ ಸುದೀಪ್‌ ಅವ್ರು ಉಗಿದು ಉಪ್ಪಿನಕಾಯಿ ಹಾಕ್ತಾರೆ - ಗಿಲ್ಲಿ ನಟ

BBK 12 Episode: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಟಾಸ್ಕ್‌ ಆಡೋಕೆ ಬರೋದಿಲ್ಲ ಎಂಬ ಆರೋಪದ ಮಧ್ಯೆ ಗಿಲ್ಲಿ ನಟ ಅವರು ಅಶ್ವಿನಿ ಗೌಡ ವಿರುದ್ಧ ಟಾಸ್ಕ್‌ ಆಡಿ ಕ್ಯಾಪ್ಟನ್‌ ಆದರು. ಈಗ ಕಿಚ್ಚ ಸುದೀಪ್‌ ಅವರು ಬೈತಾರೆ ಎಂದು ಸಹಸ್ಪರ್ಧಿಗಳ ಜೊತೆ ಚರ್ಚೆ ಮಾಡಿದ್ದಾರೆ. ಹಾಗಾದರೆ ಮಾಡಿದ ತಪ್ಪೇನು?

 

Read Full Story

03:43 PM (IST) Jan 02

ಕೊನೆಗೂ ಸಾಕ್ಷಿ ಸಮೇತ ರಕ್ಷಿತಾ ಶೆಟ್ಟಿ ಅಸಲಿ ಗುಣ ಬಿಚ್ಚಿಟ್ಟ BBK 12 ಧನುಷ್‌ ಗೌಡ! ಹೀಗೂ ಇದಾರಾ?

Bigg Boss Kannada Season 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ರಕ್ಷಿತಾ ಅವರಿಗೆ ಗಿಲ್ಲಿ ನಟನ ವಿಚಾರದಲ್ಲಿ ಪೊಸೆಸ್ಸಿವ್‌ ಆಗಿದ್ದಾರೆ ಎನ್ನಲಾಗಿತ್ತು. ಈಗ ಧನುಷ್‌ ಗೌಡ, ರಾಶಿಕಾ ಇನ್ನೊಂದು ಸಾಕ್ಷಿ ನೀಡಿದ್ದಾರೆ. ಹಾಗಾದರೆ ಏನದು? 

Read Full Story

03:24 PM (IST) Jan 02

ಬಳ್ಳಾರಿ ಶೂಟೌಟ್ - ಸಿಬಿಐ ತನಿಖೆಗೆ ಶ್ರೀರಾಮುಲು ಆಗ್ರಹ; ಸಿನಿಮಾ ಸ್ಟೈಲ್ ಫೈರಿಂಗ್ ಎಂದ ರೆಡ್ಡಿ!

ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ವಿಚಾರವಾಗಿ ನಡೆದ ಗಲಭೆಯಲ್ಲಿ ಫೈರಿಂಗ್‌ನಿಂದ ಯುವಕ ಮೃತಪಟ್ಟಿದ್ದಾನೆ. ಈ ಘಟನೆಗೆ ಶಾಸಕ ಭರತ್ ರೆಡ್ಡಿ ಬೆಂಬಲಿಗರೇ ಕಾರಣ ಎಂದು ಆರೋಪಿಸಿರುವ ಮಾಜಿ ಸಚಿವ ಶ್ರೀರಾಮುಲು, ಸಿಬಿಐ ಅಥವಾ ಹೈಕೋರ್ಟ್ ಜಡ್ಜ್ ವಹಿಸಲು ಆಗ್ರಹಿಸಿದ್ದಾರೆ.

Read Full Story

03:15 PM (IST) Jan 02

BBK 12 - ಕೆರಳಿ ಕೆಂಡವಾದ ಗಿಲ್ಲಿ ನಟ; ಇದು ಎಂದೂ ನೋಡಿರದ ಅವತಾರ; ಕಿಚ್ಚ ಸುದೀಪ್‌ ಬಳಿ ಕ್ಲಾಸ್‌ ಇರುತ್ತಾ?

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋ ಗ್ರ್ಯಾಂಡ್‌ ಫಿನಾಲೆ ಹತ್ತಿರ ಬರುತ್ತಿದ್ದಂತೆ, ಗಿಲ್ಲಿ ನಟ, ಸರಿಯಾದ ನಿರ್ಧಾರಗಳನ್ನು ತಗೊಳೋದಿಲ್ಲ, ಪರ್ಸನಲ್‌ ಆಗಿ ಹೋಗಿ ಮಾತಾಡ್ತಾರೆ, ಕಾವ್ಯ ಪರ ಫೇವರಿಸಂ ಮಾಡ್ತಾರೆ ಎಂಬ ಆರೋಪ ಇದೆ. ಸೋಶಿಯಲ್‌ ಮೀಡಿಯಾದಲ್ಲಿ ಕೂಡ ಗಿಲ್ಲಿ ನಟನ ಆಟದ ಬಗ್ಗೆ ಚರ್ಚೆ ಆಗುತ್ತಿದೆ.

 

Read Full Story

02:50 PM (IST) Jan 02

ಕೆಸಿಇಟಿ 2026 ದಿನಾಂಕ ಪ್ರಕಟ, ಏಪ್ರಿಲ್ 23, 24ರಂದು ಪರೀಕ್ಷೆ, ವಿದ್ಯಾರ್ಥಿಗಳಿಗಾಗಿ ಕಿರು ಹೊತ್ತಿಗೆ ಬಿಡುಗಡೆ

 KEA 2026ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲು ದಿನಾಂಕ ಪ್ರಕಟಿಸಿದೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು 'ಸಿಇಟಿ ದಿಕ್ಸೂಚಿ' ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಲಾಗಿದ್ದು, ಪಿಜಿಸಿಇಟಿ, ಡಿಸಿಇಟಿ ಸೇರಿದಂತೆ ಇತರೆ ಪರೀಕ್ಷೆಗಳ ವೇಳಾಪಟ್ಟಿಯನ್ನೂ ಸಹ ಘೋಷಿಸಲಾಗಿದೆ.

Read Full Story

02:35 PM (IST) Jan 02

ಬಳ್ಳಾರಿ - 'ಕೈ ಕಾರ್ಯಕರ್ತನ ಎದೆ ಸೀಳಿದ ಬುಲೆಟ್ ಬಿಜೆಪಿಯದ್ದಾ, ಕಾಂಗ್ರೆಸ್‌ನದ್ದಾ?' ಸಿಎಂ ಸಿದ್ದರಾಮಯ್ಯ ಪ್ರಶ್ನೆ!

ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ. ಈ ಘಟನೆಯು ರಾಜಕೀಯ ಸಮರಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

Read Full Story

02:22 PM (IST) Jan 02

BBK 12 ಗ್ರ್ಯಾಂಡ್‌ ಫಿನಾಲೆ ಹತ್ತಿರವಿದ್ದಾಗ ಗಿಲ್ಲಿ ನಟನಿಗೆ ನೆಗೆಟಿವ್‌ ಆಗ್ತಿರೋದು ಯಾಕೆ? ಕಂಪೆನಿ HR ಹೇಳಿದ್ದೇನು?

BBK 12 Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್‌ ಆಗಿದ್ದು, ಸರಿಯಾದ ನಿರ್ಧಾರಗಳನ್ನು ತಗೊಳ್ಳೋದಿಲ್ಲ, ಕಾವ್ಯ ಶೈವ ಅವರಿಗೆ ಫೇವರ್‌ ಆಗಿರುತ್ತಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಖಾಸಗಿ ಕಂಪೆನಿ HR ಬರೆದ ಬರೆಹ ಇಲ್ಲಿದೆ. 

Read Full Story

01:33 PM (IST) Jan 02

ವಿಡಿಯೋ ಕಾಲ್‌ ಆಂಟಿಯ ಭೇಟಿಗೆ ಹೊರಟಿದ್ದ ತುಂಟ ಪ್ರೇಮಿ; ಮಧ್ಯರಾತ್ರಿ ಮರಕ್ಕೆ ಕಟ್ಟಿ ಥಳಿಸಿದ ಮಹಿಳೆ ಮನೆಯವರು!

ಬೆಳಗಾವಿಯ ಚಿಕ್ಕೋಡಿಯಲ್ಲಿ, ಹೊಸ ವರ್ಷದಂದು ವಿವಾಹಿತ ಪ್ರಿಯತಮೆಯನ್ನು ಭೇಟಿಯಾಗಲು ಹೋದ ಯುವಕನೊಬ್ಬ ಆಕೆಯ ಪತಿ ಮತ್ತು ಸಹೋದರರಿಂದ ತೀವ್ರ ಹಲ್ಲೆಗೊಳಗಾಗಿದ್ದಾನೆ. ನಾಲ್ಕು ವರ್ಷಗಳ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಯುವಕನನ್ನು ಮರಕ್ಕೆ ಕಟ್ಟಿ ಥಳಿಸಲಾಗಿದೆ.

Read Full Story

01:33 PM (IST) Jan 02

Amruthadhaare Serial - ಭೂಮಿಕಾ ಆಗ ಹಾಗೆ ಹೇಳಿ, ಈಗ ಹೀಗೆ ಹೇಳೋದ್ಯಾಕೆ? ಡೈರೆಕ್ಟರ್‌ ಸರ್‌, ಉತ್ತರ ಕೊಡಿ ಪ್ಲೀಸ್..!

Amruthadhaare Kannada Serial Episode: ಅಮೃತಧಾರೆ ಧಾರಾವಾಹಿಯಲ್ಲಿ ಭೂಮಿಕಾ ಹಾಗೂ ಗೌತಮ್‌ ಒಂದಾಗುತ್ತಾರೆ ಎನ್ನುವಷ್ಟರಲ್ಲಿ ಜಯದೇವ್‌ ಎಂಟ್ರಿ ಆಯ್ತು, ಈಗ ಭೂಮಿಕಾ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ವೀಕ್ಷಕರಿಗೆ ಪ್ರಶ್ನೆ ಇದೆ. ಏನದು?

 

 

Read Full Story

01:28 PM (IST) Jan 02

ಉಗ್ರ ನಸೀರ್‌ಗೆ ಜೈಲಲ್ಲೇ ನೆರವು ಪ್ರಕರಣ, ಮತ್ತೆ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌ಐಎ!

ಲಷ್ಕರ್‌-ಎ-ತೊಯ್ಬಾ ಉಗ್ರ ಟೀ ನಸೀರ್‌ಗೆ ಜೈಲಿನಲ್ಲಿ ನೆರವು ನೀಡಿದ ಪ್ರಕರಣದಲ್ಲಿ ಎನ್‌ಐಎ ಮೂವರು ಹೊಸ ಆರೋಪಿಗಳ ವಿರುದ್ಧ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದೆ. ಸಿಎಆರ್ ಎಎಸ್‌ಐ, ಮನೋವೈದ್ಯ ಹಾಗೂ ಇನ್ನೊಬ್ಬ ಮಹಿಳೆ ಹಣಕಾಸಿನ ನೆರವು, ಮಾಹಿತಿ ಸೋರಿಕೆ ಮತ್ತು ಮೊಬೈಲ್ ಫೋನ್ ಪೂರೈಸಿದ ಆರೋಪವಿದೆ.

Read Full Story

01:05 PM (IST) Jan 02

ಉನ್ನತ ಶಿಕ್ಷಣಕ್ಕಾಗಿ ಜರ್ಮನಿಗೆ ಹೋಗಿದ್ದ ಭಾರತೀಯ ಯುವಕ ಕಟ್ಟಡದಿಂದ ಬಿದ್ದು ಸಾವು

ಡಿಸೆಂಬರ್ 31 ರ ಹೊಸ ವರ್ಷವನ್ನು ಸ್ವಾಗತಿಸುವ ರಾತ್ರಿ ಜರ್ಮನಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಭಾರತದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಆಘಾತಕಾರಿ ಘಟನೆ ಜರ್ಮನಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತೆಲಂಗಾಣದ ಹೃತಿಕ್ ರೆಡ್ಡಿ ಎಂದು ಗುರುತಿಸಲಾಗಿದೆ

Read Full Story

01:03 PM (IST) Jan 02

ತಾಯಿ ಹೇಳಿದ 'ಬುದ್ಧಿ ಮಾತು' ಮಗನ ಸಾವಿಗೆ ಕಾರಣವಾಯ್ತು? ಹೊಸ ವರ್ಷದ ದಿನ ವಿಷ ಸೇವಿಸಿದ್ದ ಯುವಕ ಸಾವು!

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ, ಹೊಸ ವರ್ಷದಿಂದ ಸರಿಯಾಗಿ ಕೆಲಸ ಮಾಡುವಂತೆ ತಾಯಿ ಹೇಳಿದ ಬುದ್ಧಿಮಾತಿಗೆ ಮನನೊಂದ 24 ವರ್ಷದ ಯುವಕ ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಈ ಘಟನೆ ಕುಟುಂಬದಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.

Read Full Story

12:41 PM (IST) Jan 02

ಬೆಂಗಳೂರು - 6 ತಿಂಗಳಾದ್ರೂ ಗುಂಡಿ ಮುಚ್ಚದ ಇಲಾಖೆ, ಸರ್ಕಾರಿ ಅಧಿಕಾರಿ ಬಿದ್ದ ಬಳಿಕವಾದ್ರೂ ಎಚ್ಚೆತ್ತುಕೊಳ್ಳುತ್ತಾ? !

ಬೆಂಗಳೂರಿನ ಶೇಷಾದ್ರಿಪುರಂ ಲಿಂಕ್ ರಸ್ತೆಯಲ್ಲಿ ಕೆಪಿಟಿಸಿಎಲ್ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಕಾರೊಂದು ಬಿದ್ದು ನಿವೃತ್ತ ಜಿಎಸ್‌ಟಿ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆರು ತಿಂಗಳಿಂದ ನಡೆಯುತ್ತಿರುವ ಕಾಮಗಾರಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ.

Read Full Story

12:41 PM (IST) Jan 02

Karna Serial - ಕರ್ಣನ ಖುಷಿಗೆ ಕೊಳ್ಳಿ ಇಡೋಕೆ ಸಜ್ಜಾದ ರಮೇಶ್;‌ ಬರೀ ಇದೇ ಆಯ್ತಲ್ರೋ...!

Karna Kannada Serial Today Episode: ಕರ್ಣ ಧಾರಾವಾಹಿಯಲ್ಲಿ ತೇಜಸ್, ನಿತ್ಯಾಗೆ ಮದುವೆ ಆದರೆ ಎಲ್ಲವೂ ಸರಿ ಹೋಗುತ್ತದೆ. ನನ್ನ-ನಿಧಿ ಜೀವನ ಸೆಟಲ್‌ ಆಗುತ್ತದೆ ಎಂದು ಕರ್ಣ ಅಂದುಕೊಂಡಿದ್ದಾನೆ. ಈಗ ಇನ್ನೊಂದು ಸಮಸ್ಯೆ ಆಗುವ ಥರ ಕಾಣ್ತಿದೆ. ಹಾಗಾದರೆ ಮುಂದೆ ಏನಾಗುವುದು? 

 

Read Full Story

12:25 PM (IST) Jan 02

ಕಿಚ್ಚ ಸುದೀಪ್‌ರ 'ಮ್ಯಾಕ್ಸ್‌' ಕಲೆಕ್ಷನ್ ಎಷ್ಟು? ಗಾಯಕಿಯಾಗಿ ಸಾನ್ವಿ ಸಕ್ಸಸ್; ಇಲ್ಲಿದೆ ಸಂಪೂರ್ಣ ವರದಿ

ಕಿಚ್ಚ ಸುದೀಪ್ 'ಮ್ಯಾಕ್ಸ್‌' ಚಿತ್ರದ ಕಲೆಕ್ಷನ್ ಎಷ್ಟು? ಗಾಯಕಿಯಾಗಿ ಪಾದಾರ್ಪಣೆ ಮಾಡಿದ ಪುತ್ರಿ ಸಾನ್ವಿ ಸುದೀಪ್ ಹಾಡಿದ 'ಮಸ್ತ್ ಮಲೈಕಾ' ಹಾಡು ಹಿಟ್ ಆಯ್ತಾ? ಸಂಪೂರ್ಣ ಮಾಹಿತಿ ತಿಳಿಯಿರಿ.

Read Full Story

12:03 PM (IST) Jan 02

Upcoming Movies - ಕಡಿಮೆ ಹಣದಿಂದ ಸಿನಿಮಾ ಯಶಸ್ಸು ಕಾಣಲು, ಬಾಕ್ಸ್‌ ಆಫೀಸ್‌ ಕಲೆಕ್ಷನ್‌ಗೆ 10 ಸಲಹೆಗಳಿವು!

Suggestion For Upcoming Kannada Cinema Success: ಹೊಸ ವರ್ಷದಲ್ಲಿ ಹಳೆಯ ತಪ್ಪು ಮರುಕಳಿಸದಿರಲಿ ಎಂಬುದು ಆಶಯ. ಸ್ಯಾಂಡಲ್‌ವುಡ್ ಕ್ರಮಿಸಬೇಕಾದ ಬಹುದೂರದ ಹಾದಿಗೆ ದಿಕ್ಕೂಚಿಯಂತೆ ತಪ್ಪು-ಒಪ್ಪುಗಳ ಈ ಬರಹ.

 

Read Full Story

11:58 AM (IST) Jan 02

ಬಳ್ಳಾರಿ ವಾಲ್ಮೀಕಿ ಬ್ಯಾನರ್ ಗಲಭೆ - ಮೃತ ಕಾಂಗ್ರೆಸ್ ಕಾರ್ಯಕರ್ತನ ದೇಹದಲ್ಲಿದ್ದದ್ದು ಖಾಸಗಿ ಬುಲೆಟ್- ಎಸ್ಪಿ ಮಾಹಿತಿ!

ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವಿನ ಬ್ಯಾನರ್ ವಿವಾದ ಗಲಭೆಗೆ ತಿರುಗಿ, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಈ ಸಾವು ಖಾಸಗಿ ವ್ಯಕ್ತಿಯ ರಿವಾಲ್ವಾರ್‌ನಿಂದ ನಡೆದಿದೆ ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.

Read Full Story

11:57 AM (IST) Jan 02

ನ್ಯೂ ಇಯರ್ ರಾತ್ರಿ ಮಾಲ್ ಆಫ್ ಏಷ್ಯಾದಲ್ಲಿ ಭೀಕರ ಘಟನೆ, ಎಣ್ಣೆ ಏಟಲ್ಲಿ ಜನರ ಮೇಲೆ ಕಾರು ಹತ್ತಿಸಿದ ಭೂಪ, 4 ಮಂದಿ ಗಂಭೀರ!

ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ, ಮದ್ಯದ ಅಮಲಿನಲ್ಲಿದ್ದ ಚಾಲಕನೊಬ್ಬ ಹೆಬ್ಬಾಳದ ಮಾಲ್ ಆಫ್ ಏಷ್ಯಾ ಬಳಿ ಪಾದಚಾರಿಗಳ ಮೇಲೆ ಕಾರು ಹತ್ತಿಸಿದ್ದಾನೆ. ಈ ಭೀಕರ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸಂಜಯನಗರ ಸಂಚಾರ ಪೊಲೀಸರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read Full Story

11:37 AM (IST) Jan 02

ಅವಾಚ್ಯ ಪದಗಳಿಂದ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ನಿಂದನೆ, ಇಬ್ಬರು ಕಿಡಿಗೇಡಿಗಳು ಅರೆಸ್ಟ್, ವೃತ್ತಿಯಲ್ಲಿ ಇಂಜಿನಿಯರ್!

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆಯ ಇಂಜಿನಿಯರ್ ಹಾಗೂ ಬೆಂಗಳೂರಿನ ಆಟೋ ಚಾಲಕನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.
Read Full Story

11:20 AM (IST) Jan 02

ಈ ಬಾರಿ BBK 12 ಕ್ಯಾಪ್ಟನ್‌ ಆದವ್ರಿಗೆ ಬಂಪರ್‌ ಅವಕಾಶ; ಟಿಕೆಟ್‌ ಟು ಫಿನಾಲೆ ಪಡೆದವರು ಯಾರು?

Bigg Boss Kannada Season 12 Episode: ಈ ವಾರ ಯಾರು ಮನೆಯ ಕ್ಯಾಪ್ಟನ್‌ ಆಗುತ್ತಾರೆ ಎನ್ನುವ ಪ್ರಶ್ನೆ ಎದ್ದಿದೆ. ಗ್ರ್ಯಾಂಡ್‌ ಫಿನಾಲೆ ಹತ್ತಿರ ಇರೋದರಿಂದ ಈ ವಾರ ಕ್ಯಾಪ್ಟನ್ ಆಗೋದು ಬಹಳಷ್ಟು ಪ್ಲಸ್‌ ಪಾಯಿಂಟ್‌ ಆಗುವುದು. ಹಾಗಾದರೆ ಯಾರದು?

Read Full Story

More Trending News