ಬಳ್ಳಾರಿ: ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಸಂಬಂಧ ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿಯಲ್ಲಿ ರಾದ್ಧಾಂತವೇ ನಡೆದು ಹೋಗಿದೆ. ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ಸಾವಿರಾರು ಬೆಂಬಲಿಗರು ಬಡಿಗೆ, ಕಬ್ಬಿಣದ ರಾಡ್, ಕಲ್ಲು ಹಿಡಿದು ಬಡಿದಾಡಿಕೊಂಡಿದ್ದಾರೆ. ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಅಂಗರಕ್ಷಕರು ಗುಂಡು ಹಾರಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಆರು ಸುತ್ತುಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಗೋಲಿಬಾರ್ ನಡೆಸಿದ್ದಾರೆ. ಈ ವೇಳೆ ಗುಂಡೇಟಿಗೆ ಓರ್ವಯುವಕ ಬಲಿಯಾಗಿದ್ದಾನೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಬಳ್ಳಾರಿ ಹುಸೇನ ನಗರದ ರಾಜಶೇಖರ (28) ಎಂದು ಹೇಳಲಾಗಿದೆ. ಆತ ತಮ್ಮ ಬೆಂಬಲಿಗ ಎಂದು ಕಾಂಗ್ರೆಸ್ ಶಾಸಕ ನಾರಾ ಭರತರೆಡ್ಡಿ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಬಿಜೆಪಿ ಶಾಸಕ ಜನಾರ್ದನ ರಡ್ಡಿ ಮನೆ ಬಳಿ ಈ ಘಟನೆ ನಡೆದಿದೆ. ಆದರೆ ಈತ ಬಲಿಯಾಗಿದ್ದು ಪೊಲೀಸರ ಗುಂಡೇಟಿಗೋ? ಸತೀಶ್ ರೆಡ್ಡಿ ಖಾಸಗಿ ಅಂಗರಕ್ಷಕರ ಗುಂಡೇಟಿಗೋ ಎಂಬುದು ಗೊತ್ತಾಗಿಲ್ಲ.
08:48 AM (IST) Jan 02
ನಾಡಿನಾದ್ಯಂತ ಬುಧವಾರ ರಾತ್ರಿ 12 ಗಂಟೆಗೆ ಭರ್ಜರಿಯಾಗಿ ಹೊಸ ವರ್ಷ ಸ್ವಾಗತಿಸಿ ಸಂಭ್ರಮಿಸಿದ ಜನತೆ ಹೊಸ ವರ್ಷದ ಮೊದಲ ದಿನ ಗುರುವಾರ ಬೆಳಗ್ಗೆ ದೇವಾಲಯಗಳಿಗೆ ಭೇಟಿ ನೀಡಿ ವರ್ಷಾದ್ಯಂತ ಸುಖ-ಶಾಂತಿ ಕೋರಿ ಪೂಜೆ ಸಲ್ಲಿಸಿದ್ದಾರೆ
08:28 AM (IST) Jan 02
ಡ್ರಗ್ಸ್ ಚಟಕ್ಕೆ ಬಿದ್ದವರನ್ನು ಶಿಕ್ಷೆಗೊಳಪಡಿಸುವುದಕ್ಕಿಂತ ಹೆಚ್ಚಾಗಿ ಅವರಿಗೆ ಮೊದಲು ಚಿಕಿತ್ಸೆ ಕೊಡಿಸುವ ಕೆಲಸ ಆಗಬೇಕು. ಯಾವ ಕಾರಣಕ್ಕೆ ಈ ಡ್ರಗ್ಸ್ ಚಟಕ್ಕೆ ಬಿದ್ದಿದ್ದಾರೆ ಎಂಬುದನ್ನು ಗುರುತಿಸಿ ಚಿಕಿತ್ಸೆ ನೀಡುವಂಥ ಕೆಲಸವಾಗಬೇಕಿದೆ
08:03 AM (IST) Jan 02
ಬಳ್ಳಾರಿಯಲ್ಲಿ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ನಡೆದ ಗಲಾಟೆಯಲ್ಲಿ ಗಾಯಗೊಂಡ ಶಾಸಕ ಭರತ್ ರೆಡ್ಡಿ ಆಪ್ತನನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿದಂತೆ 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
07:36 AM (IST) Jan 02
ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗುಂಪು ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಈ ಸಾವಿಗೆ ಜನಾರ್ದನ ರೆಡ್ಡಿಯೇ ಕಾರಣ ಎಂದು ಆರೋಪಿಸಿರುವ ಭರತ್ ರೆಡ್ಡಿ, ಅವರ ವಿರುದ್ಧ ಎಫ್ಐಆರ್ ದಾಖಲಾಗುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
07:08 AM (IST) Jan 02
ಹೊಸ ವರ್ಷದ ಸಂಭ್ರಮಾಚರಣೆ ನಡೆದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಕಮರ್ಷಿಲ್ ಸ್ಟ್ರೀಟ್ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಮದ್ಯದ ಬಾಟಲ್, ಚಪ್ಪಲಿ, ಶೂ, ಬಟ್ಟೆ ಸೇರಿದಂತೆ ಬರೋಬ್ಬರಿ ಒಂಬತ್ತು ಟನ್ನಷ್ಟು ಕಸ ರಾಶಿ ತೆರವುಗೊಳಿಸಲಾಗಿದೆ.
06:53 AM (IST) Jan 02
ಹೊಸ ವರ್ಷಾಚರಣೆಯ ವೇಳೆ ಬುಧವಾರ ತಡರಾತ್ರಿ ನಗರದಲ್ಲಿ ಕೆಲವೊಂದು ಅವಾಂತರಗಳು ನಡೆದಿದ್ದು, ಕುಡಿದ ಮತ್ತಿನಲ್ಲಿ ಕೆಲವರು ಹೊಡೆದಾಡಿಕೊಂಡಿದ್ದರೆ ಮತ್ತೆ ಕೆಲವರು ಮದ್ಯದ ಅಮಲಿನಲ್ಲಿ ಅಪಘಾತ ಎಸಗಿ ಅಮಾಯಕರನ್ನು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ.
06:39 AM (IST) Jan 02
ಕೇಂದ್ರ ಸರ್ಕಾರ ಮನರೇಗಾ ಕಾಯ್ದೆ ಬದಲಾಗಿ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ (ವಿಬಿ ಜಿ ರಾಮ್ ಜಿ) ಜಾರಿ ತಂದಿರುವ ವಿರುದ್ಧ ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಸಾಧ್ಯತೆಗಳಿವೆ.
06:30 AM (IST) Jan 02
ತಮ್ಮ 70ನೇ ವಯಸ್ಸಿನಲ್ಲೂ ಬೆಂಗಳೂರಿನಿಂದ ಸುಮಾರು 655 ಕಿ.ಮೀ. ದೂರದ ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ನಡೆಸಿದ್ದಕ್ಕಾಗಿ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಸುರೇಶ್ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
06:22 AM (IST) Jan 02
ಬೆಂಗಳೂರಿನ ಯಲಹಂಕದ ಕೋಗಿಲು ಪ್ರದೇಶದಲ್ಲಿ ನಡೆದ ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯನ್ನು ‘ಬುಲ್ಡೋಜರ್ ನ್ಯಾಯ’ ಎಂದು ಟೀಕಿಸಿ, ಕರ್ನಾಟಕ ಸರ್ಕಾರದ ಆಕ್ರೋಶಕ್ಕೆ ಗುರಿಯಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ‘
06:12 AM (IST) Jan 02
ಕಳೆದ ನಾಲ್ಕು ವರ್ಷಗಳಿಂದ ಬಾಕಿ ಉಳಿದಿರುವ ಜಿಪಂ, ತಾಪಂ ಸೇರಿ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈ ವರ್ಷದಲ್ಲೇ ಮುಹೂರ್ತ ಫಿಕ್ಸ್ ಆಗುವುದು ನಿಶ್ಚಿತ ಎಂಬಂತಾಗಿದೆ. ಈ ಕುರಿತು ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಭರವಸೆ ನೀಡಿದ್ದಾರೆ.
06:03 AM (IST) Jan 02
ನಾಯಕತ್ವ ಬದಲಾವಣೆ ಗೊಂದಲದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಹಣಕಾಸು ವರ್ಷದ ಬಜೆಟ್ ಸಿದ್ಧತೆಗೆ ಅಣಿಯಾಗಿದ್ದು, ಜನವರಿ ಮೊದಲ ವಾರದಿಂದಲೇ ಬಜೆಟ್ ಸಿದ್ಧತಾ ಪೂರ್ವಭಾವಿ ಪ್ರಕ್ರಿಯೆಗಳು ಶುರುವಾಗಲಿವೆ.
05:54 AM (IST) Jan 02
ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಸಂಬಂಧ ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿಯಲ್ಲಿ ರಾದ್ಧಾಂತವೇ ನಡೆದುಹೋಗಿದೆ. ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ಸಾವಿರಾರು ಬೆಂಬಲಿಗರು ಬಡಿದಾಡಿಕೊಂಡಿದ್ದಾರೆ
05:45 AM (IST) Jan 02
ಶಬರಿಮಲೆ ದೇಗುಲದ ಚಿನ್ನಕ್ಕೆ ಕನ್ನ ಪ್ರಕರಣದಲ್ಲಿ ಪ್ರಸ್ತುತ ತಿಳಿದಿರುವುದಕ್ಕಿಂತ ಅಧಿಕ ಪ್ರಮಾಣದ ಹೊನ್ನು ಕಳುವಾಗಿದೆ ಎಂದು ವಿಶೇಷ ತನಿಖಾ ತಂಡ ತಿಳಿಸಿದೆ. 3 ಆರೋಪಿಗಳ ಕಸ್ಟಡಿಗೆ ಕೋರಿ ಕೊಲ್ಲಂ ವಿಚಕ್ಷಣಾ ಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ಹೀಗೆ ಹೇಳಲಾಗಿದೆ.