ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಜಾನುವಾರು ಸಾಗಣೆ ಸಮಯದಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಬ್ಯಾಂಕ್ ಖಾತರಿ ಬದಲು ನಷ್ಟ ಭರ್ತಿ ಮುಚ್ಚಳಿಕೆ (ಇಂಡೆಮ್ನಿಟಿ ಬಾಂಡ್) ನೀಡಿ ಬಿಡಿಸಿಕೊಳ್ಳಲು ಅನುವಾಗುವಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ- 2020ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈಗ ಇರುವ ನಿಯಮದ ಪ್ರಕಾರ ಜಾನುವಾರುಗಳ ಅನಧಿಕೃತ ಸಾಗಣೆ ವೇಳೆ ಸಿಕ್ಕಿಬಿದ್ದ ವಾಹನಗಳನ್ನೂ ಬ್ಯಾಂಕ್ ಗ್ಯಾರಂಟಿ ನೀಡಿ ಮಾತ್ರ ಬಿಡಿಸಿಕೊಳ್ಳಬೇಕು. 3 ರಿಂದ 5 ಲಕ್ಷ ರು. ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ಬ್ಯಾಂಕ್ ಖಾತರಿ ನೀಡುವುದು ಕಡ್ಡಾಯವಾಗಿತ್ತು. ಇದರಿಂದ ಸಣ್ಣಪುಟ್ಟ ವಾಹನ ಮಾಲೀಕರಿಗೆ ಸಮಸ್ಯೆಯಾಗುತ್ತಿತ್ತು. ವಾಹನಗಳ ಬಾಡಿಗೆಯಿಂದಲೇ ಜೀವನ ನಡೆಸುತ್ತಿರುವ ಕುಟುಂಬಗಳಿಗೆ ಕಷ್ಟವಾಗುತ್ತದೆ ಎಂಬ ಕಾರಣದಿಂದ ವಿಧೇಯಕಕ್ಕೆ ತಿದ್ದುಪಡಿ ತರಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ.

11:27 PM (IST) Dec 05
ಶ್ರೀರಾಮ ನವಮಿಯ ಹಿಂದಿನ ದಿನವಾದ ಅಶೋಕಾಷ್ಟಮಿಯಂದು ಮೆಹಂದಿ ಗಿಡವನ್ನು ಪೂಜಿಸುವುದು ಒಂದು ವಿಶೇಷ ಆಚರಣೆ. ಈ ಪೂಜೆಯು ದುಃಖಗಳನ್ನು ದೂರ ಮಾಡಿ, ಮನಸ್ಸಿಗೆ ಶಾಂತಿ, ಕುಟುಂಬಕ್ಕೆ ಒಳಿತು ತರುವುದಲ್ಲದೆ, ಆರೋಗ್ಯವನ್ನೂ ಸುಧಾರಿಸುತ್ತದೆ ಎಂದು ನಂಬಲಾಗಿದೆ.
11:12 PM (IST) Dec 05
ಇಸೈಜ್ಞಾನಿ ಇಳಯರಾಜಾ, ಕಮಲ್ ಹಾಸನ್ ಅವರ ಸೂಪರ್ ಹಿಟ್ ಚಿತ್ರಕ್ಕಾಗಿ ಒಂದು ಹಾಡನ್ನು ಕಂಪೋಸ್ ಮಾಡುವಾಗ ಸಖತ್ ಖುಷಿಯಿಂದ ಕುಣಿದು ಕುಪ್ಪಳಿಸಿ ಸಂಯೋಜನೆ ಮಾಡಿದ್ದರಂತೆ. ಅದು ಯಾವ ಹಾಡು ಅಂತ ಈ ಲೇಖನದಲ್ಲಿ ನೋಡೋಣ.
11:09 PM (IST) Dec 05
11:06 PM (IST) Dec 05
10:47 PM (IST) Dec 05
ಕರ್ನಾಟಕದಲ್ಲಿ ಅತಿಹೆಚ್ಚು ಆನೆಗಳಿರುವುದು ಖುಷಿಯ ವಿಚಾರ. ಮಾನವ- ಆನೆಗಳ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.
10:44 PM (IST) Dec 05
10:24 PM (IST) Dec 05
ತೀವ್ರ ಬೆಳೆ ನಷ್ಟದಿಂದ ಬಳಲುತ್ತಿರುವ ಕರ್ನಾಟಕದ ಅಡಿಕೆ ಬೆಳೆಗಾರರಿಗೆ, ಅದರಲ್ಲೂ ವಿಶೇಷವಾಗಿ, ಮಲೆನಾಡು ಪ್ರದೇಶದ ಅಡಿಕೆ ಬೆಳೆಗಾರರ ನೆರವಿಗಾಗಿ ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಒತ್ತಾಯಿಸಿದರು.
10:21 PM (IST) Dec 05
10:18 PM (IST) Dec 05
09:55 PM (IST) Dec 05
ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಎಂಎನ್ಸಿ ಉದ್ಯೋಗಿ ಯುವರಾಜ್ ಅವರ ಶವ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 10 ದಿನಗಳ ಹಿಂದೆ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
09:48 PM (IST) Dec 05
ನಂದಮೂರಿ ಬಾಲಕೃಷ್ಣ ಅಭಿಮಾನಿಗಳಿಗೆ ಶಾಕ್ ಕೊಟ್ಟು ಅಖಂಡ 2 ಬಿಡುಗಡೆ ನಿಂತುಹೋಗಿದೆ. ಬಾಲಯ್ಯ ಸಿನಿಮಾಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ. ಅಷ್ಟಕ್ಕೂ ಅಖಂಡ 2 ರಿಲೀಸ್ ನಿಲ್ಲಲು ಕಾರಣವೇನು? ಮತ್ತೆ ಯಾವಾಗ ಬಿಡುಗಡೆಯಾಗುವ ಸಾಧ್ಯತೆ ಇದೆ?
09:37 PM (IST) Dec 05
09:21 PM (IST) Dec 05
ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು ಹೋಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಗಬ್ಬೆದ್ದು ಹೋಗಿವೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಹೊಲಸು ರಾಜಕೀಯ ನಾನು ಹಿಂದೆಂದು ನೋಡಿಲ್ಲ.
09:14 PM (IST) Dec 05
09:04 PM (IST) Dec 05
ಬಿಗ್ಬಾಸ್ ಮನೆಯಲ್ಲಿ 'ಗಿಲ್ಲಿ' ನಟ ಒಂಟಿಯಾಗಿದ್ದು, ಸ್ನೇಹಿತರೇ ಅವರಿಗೆ ಮುಳುವಾಗಿದ್ದಾರೆ. ಹಿಂದೆ ಡಾನ್ಸ್ ವೇದಿಕೆಯಲ್ಲಿ 'ಹೋಗೋರಿಗೆ ದಾರಿಬಿಡಿ' ಎಂದಿದ್ದ ಗಿಲ್ಲಿ, ಇದೀಗ ಸ್ನೇಹಿತೆ ಕಾವ್ಯಾ ವಿಚಾರದಲ್ಲಿ ಅದೇ ಮಾತನ್ನು ಪಾಲಿಸಲು ವಿಫಲರಾಗಿದ್ದಾರೆ.
08:57 PM (IST) Dec 05
ಸಿಎಂ ಕುರ್ಚಿಗೆ ಪೈಪೋಟಿ ಹೆಚ್ಚಾಗಿದೆ. ಇದೀಗ ತೋರಿಕೆಗಾಗಿ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಯುತ್ತಿದೆ ಅಷ್ಟೇ. ಇದರ ಹೊರತಾಗಿ ಯಾವುದೇ ಸಮಸ್ಯೆಗಳನ್ನು ಹೋಗಲಾಡಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
08:51 PM (IST) Dec 05
ಕರ್ನಾಟಕದಲ್ಲಿ ಶೇ.63ರಷ್ಟು ಭ್ರಷ್ಟಾಚಾರ ಇದೆ ಎಂದು ಉಪಲೋಕಾಯುಕ್ತರು ಹೇಳಿದ್ದಾರೆ. ಹೀಗಾಗಿ, ಈ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
08:41 PM (IST) Dec 05
ಮಕ್ಕಳಿಗೆ ನೆಗಡಿ, ಕೆಮ್ಮು ಇದ್ದಾಗ ಯಾವ ಆಹಾರ ಕೊಡಬೇಕು, ಯಾವುದು ಕೊಡಬಾರದು ಅಂತ ಗೊತ್ತಾಗದೆ ತುಂಬಾ ಪೋಷಕರು ಗೊಂದಲಕ್ಕೊಳಗಾಗುತ್ತಾರೆ. ಮುಖ್ಯವಾಗಿ ಬಾಳೆಹಣ್ಣು ಮತ್ತು ಮೊಸರು ಕೊಡಬಹುದಾ ಇಲ್ವಾ ಅನ್ನೋ ಡೌಟ್ ತುಂಬಾ ಜನರಲ್ಲಿ ಇರುತ್ತೆ. ಹಾಗಾದ್ರೆ ಈ ಬಗ್ಗೆ ತಜ್ಞರು ಏನು ಹೇಳ್ತಾರೆ ಅಂತ ಇಲ್ಲಿ ನೋಡೋಣ.
07:45 PM (IST) Dec 05
ಪವನ್ ಕಲ್ಯಾಣ್ ಪುತ್ರ ಅಕೀರಾ ನಂದನ್ ಹೀರೋ ಆಗಿ ಎಂಟ್ರಿ ಕೊಡುವ ಪ್ಲಾನ್ ನಡೆಯುತ್ತಿರುವಾಗಲೇ ಒಂದು ಇಂಟ್ರೆಸ್ಟಿಂಗ್ ವಿಷಯ ಹೊರಬಿದ್ದಿದೆ. ಅಕೀರಾ ಈಗಾಗಲೇ ಒಂದು ಸಿನಿಮಾ ಮಾಡಿದ್ದಾನೆ. ಅದು ಯಾವುದು ನೋಡೋಣ.
07:38 PM (IST) Dec 05
ದಾವಣಗರ ತಾಲೂಕಿನಲ್ಲಿ ರಾತ್ರಿ ವೇಳೆ ಒಂಟಿಯಾಗಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ರಾಟ್ ವೀಲರ್ ನಾಯಿಗಳು ಮಾರಣಾಂತಿಕ ದಾಳಿ ನಡೆಸಿವೆ. ಈ ಘಟನೆಯಲ್ಲಿ ಅನಿತಾ ಎಂಬ ಮಹಿಳೆ ಗಾಯಗೊಂಡು ಸಾವನ್ನಪ್ಪಿದ್ದಾರೆ.
07:33 PM (IST) Dec 05
Smriti Mandhana Social Media Post: ಸ್ಮೃತಿ ಮಂಧಾನ ತಮ್ಮ ಮದುವೆ ಮುಂದೂಡಿಕೆ ಆದ 12 ದಿನಗಳ ನಂತರ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಮೂಲಕ ಸ್ಮೃತಿ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡ ಮಾಹಿತಿ ಇಲ್ಲಿದೆ.
07:26 PM (IST) Dec 05
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಳ ಮತ್ತು ಸಾಮಾಜಿಕ ಭದ್ರತೆ ವಿಷಯ ಕುರಿತು ಸಂಸದ ಡಾ.ಕೆ.ಸುಧಾಕರ್ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.
07:20 PM (IST) Dec 05
ಬಂಗಾರಪ್ಪ ಅವರ ಹೆಸರನ್ನು ಇಟ್ಟುಕೊಂಡರೆ ಮಾತ್ರ ಸಾಲುವುದಿಲ್ಲ, ಬದಲಾಗಿ ಅವರ ತಂದೆಯವರು ಹೊಂದಿದ್ದ ಉತ್ತಮ ಮಾತು ಮತ್ತು ಸೌಜನ್ಯದ ನಡವಳಿಕೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ತಿರುಗೇಟು ನೀಡಿದರು.
07:14 PM (IST) Dec 05
ರಾಜ್ಯದ ಜ್ವಲಂತ ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸಲು ಮಠ-ಮಾನ್ಯಗಳ ಗುರುಗಳು ನಡೆಸುವ ಧರ್ಮ ಸಭೆಗಳಿಂದ ಪರಿಹಾರ ಸಿಗುತ್ತಿದೆ. ಈ ಕಾರಣಕ್ಕಾಗಿ ಪ್ರತಿಯೊಬ್ಬರು ಧಾರ್ಮಿಕ ಗುರುಗಳತ್ತ ಎದುರು ನೋಡುತ್ತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
07:09 PM (IST) Dec 05
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ, ಮುಸ್ಲಿಂ ವ್ಯಕ್ತಿಯೊಬ್ಬನಿಂದ ಮತಾಂತರಕ್ಕೆ ಒತ್ತಾಯ ಮತ್ತು ಅನೈತಿಕ ಸಂಬಂಧ ಮುಂದುವರಿಸುವಂತೆ ಕಿರುಕುಳ ಹಾಗೂ ಕೊಲೆ ಬೆದರಿಕೆಗೆ ಒಳಗಾಗಿದ್ದ ವಿವಾಹಿತೆಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ.
07:07 PM (IST) Dec 05
ವೈವಿಧ್ಯತೆಯಲ್ಲಿ ಏಕತೆ ಸಾಧಿಸಬೇಕು ಎಂದು ಜನರಿಗೆ ಹೇಳುತ್ತೇವೆ. ವೈವಿಧ್ಯತೆಯಲ್ಲಿ ಏಕತೆ ಇಲ್ಲದೇ ಹೋದರೆ ಪ್ರಯೋಜನವಿಲ್ಲ. ವೈಚಾರಿಕತೆ, ವೈಜ್ಞಾನಿಕತೆ ಇರುವ ಹಾಗೂ ಜಾತಿ ವ್ಯವಸ್ಥೆಗೆ ಪರಿಹಾರ ರೂಪದಲ್ಲಿರುವ ವಿದ್ಯೆ ಬೇಕಿದೆ ಎಂದು ಸಿದ್ದರಾಮಯ್ಯಹೇಳಿದ್ದಾರೆ.
07:05 PM (IST) Dec 05
ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ, ತಾಯಿ ಮಗ ರಾತ್ರಿ ಹಣದ ವಿಚಾರವಾಗಿ ಜಗಳವಾಗಿದೆ. ಬಳಿಕ ಇಬ್ಬರು ಪ್ರತ್ಯೇಕ ಕೋಣೆಯಲ್ಲಿ ಮಲಗಿದ್ದಾರೆ. ಬೆಳಗ್ಗೆ ನೋಡಿದಾ ದುರಂತ ಬೆಳಕಿಗೆ ಬಂದಿದೆ.
06:09 PM (IST) Dec 05
2025ರ ಮೋಸ್ಟ್ ಪಾಪುಲರ್ ಇಂಡಿಯನ್ ಸ್ಟಾರ್ಸ್ ಹೆಸರಿನಲ್ಲಿ ಐಎಂಡಿಬಿ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ ‘ಕಾಂತಾರ 1’ ಚಿತ್ರದ ನಾಯಕ ನಟ ರಿಷಬ್ ಶೆಟ್ಟಿ 10ನೇ ಸ್ಥಾನ ಪಡೆದುಕೊಂಡಿದ್ದಾರೆ.
05:53 PM (IST) Dec 05
ಟಾಕ್ಸಿಕ್ನ ಟೀಸರ್ಗೆ ರವಿ ಬಸ್ರೂರು ಹಿನ್ನೆಲೆ ಸಂಗೀತವಿತ್ತು. ಆದರೆ ಇಡೀ ಸಿನಿಮಾದ ಸಂಗೀತ ನಿರ್ದೇಶನವನ್ನು ಅನಿರುದ್ಧ್ ರವಿಚಂದರ್ ಮಾಡುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಅವರು ಈ ಸಿನಿಮಾದ ಭಾಗವಾಗಿಲ್ಲ.
05:07 PM (IST) Dec 05
ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕೆಡವುತ್ತೇವೆ ಎಂದರೆ ನಾವು ಕೈಬಳೆ ತೊಟ್ಟು ಕುಳಿತಿದ್ದೀವಾ? ಪ್ರಚೋದನಕಾರಿ ಭಾಷಣ ಮಾಡಿದವರ ಮೇಲೆ ಎಫ್ಐಆರ್ ದಾಖಲಿಸಬೇಕು ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಸವಾಲು ಹಾಕಿದರು.
05:05 PM (IST) Dec 05
ಈ ಚಿತ್ರವು ನೇರ ಹಿಂದಿ ಆವೃತ್ತಿಯಾಗಲಿದೆ ಮತ್ತು ಡಬ್ ಮಾಡಲಾಗಿಲ್ಲ. ಬದಲಾಗಿ ಸರಿಯಾದ ಹಿಂದಿ ರಿಮೇಕ್ ಆಗಿರುತ್ತದೆ. ಅಧಿಕೃತ ಹಿಂದಿ ಸಂಭಾಷಣೆ ಮತ್ತು ಸಾಹಿತ್ಯವನ್ನು ರಚಿಸಲು ತಜ್ಞರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎಂದು ಗಣೇಶ್ ಹೇಳಿದರು.
04:44 PM (IST) Dec 05
ಈ ಚಿತ್ರಕ್ಕೆ ವಿರೋಧ ಮಾಡಿದ್ದೆ. ಆ ನಂತರ ಚಿತ್ರತಂಡದವರು ಬಂದು ನಾನು ಹೇಳಿದ ಮಾಹಿತಿಗಳನ್ನೇ ಸಿನಿಮಾ ಮಾಡುತ್ತೇವೆ ಎಂದರು. ಹೀಗಾಗಿ ಒಪ್ಪಿಕೊಂಡೆ. ಈ ಚಿತ್ರದಲ್ಲಿ ನನ್ನ ಪಾತ್ರವನ್ನು ಶಿವಣ್ಣ ಮಾಡುತ್ತಿದ್ದಾರೆ ಎಂದು ಗೊತ್ತಾಯಿತು.
04:22 PM (IST) Dec 05
ಡಿಸೆಂಬರ್ನಲ್ಲಿ ಕನ್ನಡದ ಮೂರು ಸ್ಟಾರ್ ಸಿನಿಮಾಗಳು ಬರಲಿವೆ. ದೊಡ್ಡ ಬಂಡವಾಳದ ಇವುಗಳ ಮೇಲೆ ಪಾನ್ ಇಂಡಿಯಾದ ಕಣ್ಣೂ ಬಿದ್ದಿದೆ. ಹೇಮಂತ ಮಾಸದ ಚಳಿ ಚುರುಕಾಗುತ್ತಿರುವಂತೆ ಆ್ಯಕ್ಷನ್, ಕಾಮಿಡಿಗಳ ಮೂಲಕ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಲು ಸ್ಯಾಂಡಲ್ವುಡ್ ಸಜ್ಜಾಗಿದೆ.
03:39 PM (IST) Dec 05
ಡಿ.ಕೆ. ಶಿವಕುಮಾರ್ ಐಷಾರಾಮಿ ವಾಚ್ ಕುರಿತ ಬಿಜೆಪಿ ಟೀಕೆಗೆ, ತಮ್ಮ ಲೋಕಾಯುಕ್ತ ಅಫಿಡವಿಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸುವ ಮೂಲಕ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
03:22 PM (IST) Dec 05
02:56 PM (IST) Dec 05
02:19 PM (IST) Dec 05
ದ್ವೇಷ ಭಾಷಣ ನಿಯಂತ್ರಣ ಮಸೂದೆ ಜಾರಿಗೆ ತರುವ ಕಾಂಗ್ರೆಸ್ ಸರ್ಕಾರದ ನಡೆಗೆ ಬಿಜೆಪಿ ನಾಯಕ ಸಿ.ಟಿ. ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸನಾತನ ಧರ್ಮದ ಬಗ್ಗೆ ವಿಷ ಕಾರಿದ ಡಿಎಂಕೆಯನ್ನು ಮೈತ್ರಿಕೂಟದಿಂದ ಹೊರಹಾಕಲಿ ದ್ವೇಷ ಕಲಿಸುವ ಮತ-ಗ್ರಂಥಗಳನ್ನು ನಿಷೇಧಿಸುವ ತಾಕತ್ತಿದೆಯೇ ಎಂದು ಸವಾಲು ಹಾಕಿದರು.
01:50 PM (IST) Dec 05
ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿರುವ ರಾಯಲ್ ಮೆನರ್ ಅಪಾರ್ಟ್ಮೆಂಟ್ನಲ್ಲಿ, ಓರ್ವ ವ್ಯಕ್ತಿ 16 ಕುಟುಂಬಗಳಿಗೆ ಮಾಟ-ಮಂತ್ರದ ಭಯ ಹುಟ್ಟಿಸಿ, ದೈಹಿಕ ಕಿರುಕುಳ ನೀಡುತ್ತಿದ್ದಾನೆ. ಈತನಿಂದ ನಿವಾಸಿಗಳು ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.
01:44 PM (IST) Dec 05
Justice Veerappa corruption statement: 'ಶೇ. 63ರಷ್ಟು ಭ್ರಷ್ಟಾಚಾರ' ಹೇಳಿಕೆ ಕುರಿತು ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆಯು 2019ರ ಇಂಡಿಯಾ ಕರೆಪ್ಷನ್ ಸರ್ವೆಯನ್ನು ಆಧರಿಸಿದ್ದು, ಯಾವುದೇ ನಿರ್ದಿಷ್ಟ ಸರ್ಕಾರವನ್ನು ಗುರಿಯಾಗಿಸಿಲ್ಲ ಎಂದು ತಿಳಿಸಿದ್ದಾರೆ.
01:08 PM (IST) Dec 05
ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳ ವಿಡಿಯೋ ವೈರಲ್ ನಂತರ, ಕುಖ್ಯಾತ ಅಪರಾಧಿ ಉಮೇಶ್ ರೆಡ್ಡಿ ತನ್ನನ್ನು ಬೇರೆ ಜೈಲಿಗೆ ವರ್ಗಾಯಿಸುವಂತೆ ಪತ್ರ ಬರೆದಿದ್ದಾನೆ. ತಾಯಿಯ ಅನಾರೋಗ್ಯದ ಕಾರಣ ನೀಡಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಮನವಿ ಮಾಡಿದ್ದಾರೆ.