Published : Dec 05, 2025, 06:49 AM ISTUpdated : Dec 05, 2025, 11:27 PM IST

Karnataka News Live: ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ? - ಪೂಜೆಗೆ ಇದೇ ಸರಿಯಾದ ದಿನ!

ಸಾರಾಂಶ

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಜಾನುವಾರು ಸಾಗಣೆ ಸಮಯದಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಬ್ಯಾಂಕ್‌ ಖಾತರಿ ಬದಲು ನಷ್ಟ ಭರ್ತಿ ಮುಚ್ಚಳಿಕೆ (ಇಂಡೆಮ್ನಿಟಿ ಬಾಂಡ್) ನೀಡಿ ಬಿಡಿಸಿಕೊಳ್ಳಲು ಅನುವಾಗುವಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ- 2020ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈಗ ಇರುವ ನಿಯಮದ ಪ್ರಕಾರ ಜಾನುವಾರುಗಳ ಅನಧಿಕೃತ ಸಾಗಣೆ ವೇಳೆ ಸಿಕ್ಕಿಬಿದ್ದ ವಾಹನಗಳನ್ನೂ ಬ್ಯಾಂಕ್‌ ಗ್ಯಾರಂಟಿ ನೀಡಿ ಮಾತ್ರ ಬಿಡಿಸಿಕೊಳ್ಳಬೇಕು. 3 ರಿಂದ 5 ಲಕ್ಷ ರು. ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ಬ್ಯಾಂಕ್‌ ಖಾತರಿ ನೀಡುವುದು ಕಡ್ಡಾಯವಾಗಿತ್ತು. ಇದರಿಂದ ಸಣ್ಣಪುಟ್ಟ ವಾಹನ ಮಾಲೀಕರಿಗೆ ಸಮಸ್ಯೆಯಾಗುತ್ತಿತ್ತು. ವಾಹನಗಳ ಬಾಡಿಗೆಯಿಂದಲೇ ಜೀವನ ನಡೆಸುತ್ತಿರುವ ಕುಟುಂಬಗಳಿಗೆ ಕಷ್ಟವಾಗುತ್ತದೆ ಎಂಬ ಕಾರಣದಿಂದ ವಿಧೇಯಕಕ್ಕೆ ತಿದ್ದುಪಡಿ ತರಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ.

Henna Plant

11:27 PM (IST) Dec 05

ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ? - ಪೂಜೆಗೆ ಇದೇ ಸರಿಯಾದ ದಿನ!

ಶ್ರೀರಾಮ ನವಮಿಯ ಹಿಂದಿನ ದಿನವಾದ ಅಶೋಕಾಷ್ಟಮಿಯಂದು ಮೆಹಂದಿ ಗಿಡವನ್ನು ಪೂಜಿಸುವುದು ಒಂದು ವಿಶೇಷ ಆಚರಣೆ. ಈ ಪೂಜೆಯು ದುಃಖಗಳನ್ನು ದೂರ ಮಾಡಿ, ಮನಸ್ಸಿಗೆ ಶಾಂತಿ, ಕುಟುಂಬಕ್ಕೆ ಒಳಿತು ತರುವುದಲ್ಲದೆ, ಆರೋಗ್ಯವನ್ನೂ ಸುಧಾರಿಸುತ್ತದೆ ಎಂದು ನಂಬಲಾಗಿದೆ.

Read Full Story

11:12 PM (IST) Dec 05

ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?

ಇಸೈಜ್ಞಾನಿ ಇಳಯರಾಜಾ, ಕಮಲ್ ಹಾಸನ್ ಅವರ ಸೂಪರ್ ಹಿಟ್ ಚಿತ್ರಕ್ಕಾಗಿ ಒಂದು ಹಾಡನ್ನು ಕಂಪೋಸ್ ಮಾಡುವಾಗ ಸಖತ್ ಖುಷಿಯಿಂದ ಕುಣಿದು ಕುಪ್ಪಳಿಸಿ ಸಂಯೋಜನೆ ಮಾಡಿದ್ದರಂತೆ. ಅದು ಯಾವ ಹಾಡು ಅಂತ ಈ ಲೇಖನದಲ್ಲಿ ನೋಡೋಣ.

Read Full Story

11:09 PM (IST) Dec 05

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು

ಕೊಪ್ಪಳದಲ್ಲಿ 28 ವರ್ಷದ ಯುವಕ ಸಂದೇಶ್, ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಾದಬ್ರಹ್ಮ ಇಡ್ಲಿ ಸೆಂಟರ್ ಮಾಲೀಕರಾಗಿದ್ದ ಇವರು, ಕೋವಿಡ್ ನಂತರ ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳಿಗೆ ಮತ್ತೊಂದು ಸೇರ್ಪಡೆಯಾಗಿದ್ದಾರೆ.
Read Full Story

11:06 PM (IST) Dec 05

Lakshmi Nivasa - ಇವಳೇ ಅವಳು, ಮನೆಯಲಿ ಇಷ್ಟುದಿನ ಇದ್ದವಳು! ಸತ್ಯ ರಿವೀಲ್​ ಆಗೋಯ್ತು, ಬಾಯಿ ಬಿಡ್ತಾಳಾ ವಿಶ್ವನ ಅಮ್ಮ?

ವಿಶ್ವನ ಮನೆಯಿಂದ ಚಿನ್ನುಮರಿ ನಾಪತ್ತೆಯಾಗಿದ್ದಾಳೆ. ಅವಳನ್ನು ಹುಡುಕಲು ಬಂದ ಜಯಂತ್ ವಿಫಲನಾಗುತ್ತಾನೆ. ಇನ್ನೊಂದೆಡೆ, ಜಾಹ್ನವಿಯ ಮನೆಗೆ ಹೋದ ವಿಶ್ವನ ತಾಯಿ, ಫೋಟೋ ನೋಡಿ ಚಿನ್ನುಮರಿಯೇ ಜಾಹ್ನವಿ ಎಂಬ ಸತ್ಯ ತಿಳಿದು ಆಘಾತಕ್ಕೊಳಗಾಗುತ್ತಾಳೆ.
Read Full Story

10:47 PM (IST) Dec 05

ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು - ಮಾಜಿ ಸಂಸದ ಪ್ರತಾಪ್ ಸಿಂಹ

ಕರ್ನಾಟಕದಲ್ಲಿ ಅತಿಹೆಚ್ಚು ಆನೆಗಳಿರುವುದು ಖುಷಿಯ ವಿಚಾರ. ಮಾನವ- ಆನೆಗಳ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.

Read Full Story

10:44 PM (IST) Dec 05

Naa Ninna Bidalaare - ಗಂಡ ಬೇರೊಬ್ಬಳನ್ನು ಅಪ್ಪಿಕೊಂಡ್ರೆ ಖುಷಿ ಪಡುವ ಜಗತ್ತಿನ ಏಕೈಕ ಹೆಂಡ್ತಿ ಈಕೆ!

ನಾ ನಿನ್ನ ಬಿಡಲಾರೆ ಧಾರಾವಾಹಿಯಲ್ಲಿ, ಅಂಬಿಕಾ ಕಾಣಿಸಿಕೊಳ್ಳುವ ಸತ್ಯ ತಿಳಿದ ಮಾಳವಿಕಾ ದುರ್ಗಾಳನ್ನು ಮುಗಿಸಲು ಸಂಚು ರೂಪಿಸುತ್ತಿದ್ದಾಳೆ. ಇನ್ನೊಂದೆಡೆ, ಅಪ್ಪ-ಮಗಳನ್ನು ಒಂದು ಮಾಡಲು ಯತ್ನಿಸುತ್ತಿರುವ ದುರ್ಗಾಳಿಗೆ ಶರತ್‌ನಿಂದ ಅಪ್ಪುಗೆ ಸಿಕ್ಕಿದ್ದು, ಇದು ದುರ್ಗಾಳ ಪ್ರಾಣಕ್ಕೆ ಅಪಾಯವನ್ನು ತಂದೊಡ್ಡಿದೆ.
Read Full Story

10:24 PM (IST) Dec 05

ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ - ಸಂಸದ ಬಿ.ವೈ.ರಾಘವೇಂದ್ರ

ತೀವ್ರ ಬೆಳೆ ನಷ್ಟದಿಂದ ಬಳಲುತ್ತಿರುವ ಕರ್ನಾಟಕದ ಅಡಿಕೆ ಬೆಳೆಗಾರರಿಗೆ, ಅದರಲ್ಲೂ ವಿಶೇಷವಾಗಿ, ಮಲೆನಾಡು ಪ್ರದೇಶದ ಅಡಿಕೆ ಬೆಳೆಗಾರರ ನೆರವಿಗಾಗಿ ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಒತ್ತಾಯಿಸಿದರು.

Read Full Story

10:21 PM (IST) Dec 05

ಬರಿಗೈಯಲ್ಲಿ ಟಾಯ್ಲೆಟ್​ ತೊಳೆದ Bigg Boss ಡಾಗ್​ ಸತೀಶ್​​ - ನಿಮ್ಮ ಮನೆಗೂ ಬೇಕಾದ್ರೆ ಬರ್ತಾರಂತೆ!

ಬಿಗ್‌ಬಾಸ್‌ನಿಂದ ಖ್ಯಾತರಾದ ಡಾಗ್ ಸತೀಶ್ ಇದೀಗ ಅಚ್ಚರಿಯ ಕಾರಣಕ್ಕೆ ಸುದ್ದಿಯಾಗಿದ್ದಾರೆ. ಅವರು ಬ್ರಷ್ ಬಳಸದೆ, ಬರಿಗೈಯಲ್ಲೇ ಟಾಯ್ಲೆಟ್ ಕ್ಲೀನ್ ಮಾಡಿ ಎಲ್ಲರನ್ನೂ ಬೆರಗುಗೊಳಿಸಿದ್ದಾರೆ. ಸ್ವಚ್ಛತೆಗೆ ಹೇಸಿಗೆ ಏಕೆ ಎಂದು ಪ್ರಶ್ನಿಸಿರುವ ಅವರು, ಕೈ ಉರಿಯುತ್ತಿದ್ದರೂ ಈ ಕೆಲಸ ಮಾಡಿದ್ದಾರೆ.
Read Full Story

10:18 PM (IST) Dec 05

ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ ಅವರು ಕಾರಿನೊಳಗೆ ಸಿಲುಕಿ ಸಜೀವ ದಹನವಾಗಿದ್ದಾರೆ.
Read Full Story

09:55 PM (IST) Dec 05

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಎಂಎನ್‌ಸಿ ಉದ್ಯೋಗಿ ಯುವರಾಜ್ ಅವರ ಶವ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 10 ದಿನಗಳ ಹಿಂದೆ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

Read Full Story

09:48 PM (IST) Dec 05

ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?

ನಂದಮೂರಿ ಬಾಲಕೃಷ್ಣ ಅಭಿಮಾನಿಗಳಿಗೆ ಶಾಕ್ ಕೊಟ್ಟು ಅಖಂಡ 2 ಬಿಡುಗಡೆ ನಿಂತುಹೋಗಿದೆ. ಬಾಲಯ್ಯ ಸಿನಿಮಾಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ. ಅಷ್ಟಕ್ಕೂ ಅಖಂಡ 2 ರಿಲೀಸ್ ನಿಲ್ಲಲು ಕಾರಣವೇನು? ಮತ್ತೆ ಯಾವಾಗ ಬಿಡುಗಡೆಯಾಗುವ ಸಾಧ್ಯತೆ ಇದೆ?

Read Full Story

09:37 PM (IST) Dec 05

Karna - ಎಲ್ಲವೂ ಸರಿ ಹೋಗತ್ತೆ ಅಂದುಕೊಂಡಾಗ್ಲೇ ನಿಧಿಯ ಈ ನಿರ್ಧಾರ ಸರಿನಾ? ನಿತ್ಯಾ ಮುಂದೆ ಆಗಿದ್ದೇನು?

ಕರ್ಣ ಮತ್ತು ನಿಧಿಯ ಸಂಬಂಧದ ಸತ್ಯವನ್ನು ಹೇಳಲು ಕರ್ಣ ಪ್ರಯತ್ನಿಸುತ್ತಿರುವಾಗ, ನಿಧಿ ತನ್ನ ಪ್ರೀತಿ ಮುಗಿದುಹೋದ ಕಥೆ ಎಂದು ಮನೆಯವರಿಗೆ ಸುಳ್ಳು ಹೇಳುತ್ತಾಳೆ. ನಿತ್ಯಾಳ ಗರ್ಭದ ಸತ್ಯ ತಿಳಿದಿರುವ ನಿಧಿ, ಎಲ್ಲವೂ ಸರಿಯಾಗುವ ಹೊತ್ತಲ್ಲಿ ಈ ನಿರ್ಧಾರ ತೆಗೆದುಕೊಳ್ಳುತ್ತಾಳೆ.
Read Full Story

09:21 PM (IST) Dec 05

ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ - ಕೆ.ಎಸ್.ಈಶ್ವರಪ್ಪ

ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು ಹೋಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಗಬ್ಬೆದ್ದು ಹೋಗಿವೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಹೊಲಸು ರಾಜಕೀಯ ನಾನು ಹಿಂದೆಂದು ನೋಡಿಲ್ಲ.

Read Full Story

09:14 PM (IST) Dec 05

Bigg Boss ಗಿಲ್ಲಿ ನಟನಿಗೆ ಶಾಕ್​ - ಒಂದ್​ ಸಲ ನೋಡ್ತೀನಿ, 2 ಸಲ ನೋಡ್ತೀನಿ ಆಮೇಲೆ ನನ್​ ಭಾಷೆ ಬರತ್ತೆ!

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟನನ್ನು ಇತರ ಸ್ಪರ್ಧಿಗಳು ಟಾರ್ಗೆಟ್ ಮಾಡುತ್ತಿದ್ದು, ಈ ವಾರ ಅವರಿಗೆ ಕಳಪೆ ಪಟ್ಟ ನೀಡಿದ್ದಾರೆ. ಚೈತ್ರಾ ಕುಂದಾಪುರರಂತಹ ಸ್ಪರ್ಧಿಗಳು ತೀವ್ರವಾಗಿ ಎಚ್ಚರಿಕೆ ನೀಡಿದ್ದರೂ, ಮನೆಯ ಹೊರಗೆ ಗಿಲ್ಲಿ ನಟನೇ ವಿನ್ನರ್ ಎಂಬ ಮಾತುಗಳು ಕೇಳಿಬರುತ್ತಿವೆ.
Read Full Story

09:04 PM (IST) Dec 05

'ಬಂದವ್ರಿಗೆ ದಾರಿಕೊಡಿ, ಹೋಗೋರಿಗೆ ದಾರಿಬಿಡಿ..'ಜೀ ಕನ್ನಡ ವೇದಿಕೆಯಲ್ಲಿ ಹೇಳಿದ್ದ ಮಾತನ್ನೇ ಬಿಗ್‌ಬಾಸ್‌ನಲ್ಲಿ ಮರೆತ್ರಾ ಗಿಲ್ಲಿ ನಟ!

ಬಿಗ್‌ಬಾಸ್ ಮನೆಯಲ್ಲಿ 'ಗಿಲ್ಲಿ' ನಟ ಒಂಟಿಯಾಗಿದ್ದು, ಸ್ನೇಹಿತರೇ ಅವರಿಗೆ ಮುಳುವಾಗಿದ್ದಾರೆ. ಹಿಂದೆ ಡಾನ್ಸ್ ವೇದಿಕೆಯಲ್ಲಿ 'ಹೋಗೋರಿಗೆ ದಾರಿಬಿಡಿ' ಎಂದಿದ್ದ ಗಿಲ್ಲಿ, ಇದೀಗ ಸ್ನೇಹಿತೆ ಕಾವ್ಯಾ ವಿಚಾರದಲ್ಲಿ ಅದೇ ಮಾತನ್ನು ಪಾಲಿಸಲು ವಿಫಲರಾಗಿದ್ದಾರೆ. 

Read Full Story

08:57 PM (IST) Dec 05

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ - ಬಿ.ವೈ.ವಿಜಯೇಂದ್ರ ಟೀಕೆ

ಸಿಎಂ ಕುರ್ಚಿಗೆ ಪೈಪೋಟಿ ಹೆಚ್ಚಾಗಿದೆ. ಇದೀಗ ತೋರಿಕೆಗಾಗಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಯುತ್ತಿದೆ ಅಷ್ಟೇ. ಇದರ ಹೊರತಾಗಿ ಯಾವುದೇ ಸಮಸ್ಯೆಗಳನ್ನು ಹೋಗಲಾಡಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

Read Full Story

08:51 PM (IST) Dec 05

ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ - ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌

ಕರ್ನಾಟಕದಲ್ಲಿ ಶೇ.63ರಷ್ಟು ಭ್ರಷ್ಟಾಚಾರ ಇದೆ ಎಂದು ಉಪಲೋಕಾಯುಕ್ತರು ಹೇಳಿದ್ದಾರೆ. ಹೀಗಾಗಿ, ಈ ಭ್ರಷ್ಟಾಚಾರ ಪ್ರಕರಣ‍ವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.

Read Full Story

08:41 PM (IST) Dec 05

ನೆಗಡಿ, ಕೆಮ್ಮು ಇದ್ದಾಗ ಮಕ್ಕಳಿಗೆ ಬಾಳೆಹಣ್ಣು, ಮೊಸರು ಕೊಡಬಹುದಾ? ಕೊಟ್ಟರೆ ಏನಾಗುತ್ತೆ?

ಮಕ್ಕಳಿಗೆ ನೆಗಡಿ, ಕೆಮ್ಮು ಇದ್ದಾಗ ಯಾವ ಆಹಾರ ಕೊಡಬೇಕು, ಯಾವುದು ಕೊಡಬಾರದು ಅಂತ ಗೊತ್ತಾಗದೆ ತುಂಬಾ ಪೋಷಕರು ಗೊಂದಲಕ್ಕೊಳಗಾಗುತ್ತಾರೆ. ಮುಖ್ಯವಾಗಿ ಬಾಳೆಹಣ್ಣು ಮತ್ತು ಮೊಸರು ಕೊಡಬಹುದಾ ಇಲ್ವಾ ಅನ್ನೋ ಡೌಟ್ ತುಂಬಾ ಜನರಲ್ಲಿ ಇರುತ್ತೆ. ಹಾಗಾದ್ರೆ ಈ ಬಗ್ಗೆ ತಜ್ಞರು ಏನು ಹೇಳ್ತಾರೆ ಅಂತ ಇಲ್ಲಿ ನೋಡೋಣ.

Read Full Story

07:45 PM (IST) Dec 05

ಹೀರೋ ಆಗುವ ಮುನ್ನ ಶಾಕ್ ಕೊಟ್ಟ ಅಕೀರಾ ನಂದನ್ - ರೇಣು ದೇಸಾಯಿ ಫೋನ್ ಮಾಡಿದಾಗ ಪವನ್ ನಕ್ಕಿದ್ದೇಕೆ?

ಪವನ್ ಕಲ್ಯಾಣ್ ಪುತ್ರ ಅಕೀರಾ ನಂದನ್ ಹೀರೋ ಆಗಿ ಎಂಟ್ರಿ ಕೊಡುವ ಪ್ಲಾನ್ ನಡೆಯುತ್ತಿರುವಾಗಲೇ ಒಂದು ಇಂಟ್ರೆಸ್ಟಿಂಗ್ ವಿಷಯ ಹೊರಬಿದ್ದಿದೆ. ಅಕೀರಾ ಈಗಾಗಲೇ ಒಂದು ಸಿನಿಮಾ ಮಾಡಿದ್ದಾನೆ. ಅದು ಯಾವುದು ನೋಡೋಣ.

Read Full Story

07:38 PM (IST) Dec 05

ದಾವಣಗೆರೆ ರಾಟ್‌ವೀಲರ್ ನಾಯಿಗಳ ಡೆಡ್ಲಿ ಅಟ್ಯಾಕ್; 50ಕ್ಕೂ ಹೆಚ್ಚು ಕಡೆ ಕಚ್ಚಿಸಿಕೊಂಡ ಮಹಿಳೆ ದುರ್ಮರಣ

ದಾವಣಗರ ತಾಲೂಕಿನಲ್ಲಿ ರಾತ್ರಿ ವೇಳೆ ಒಂಟಿಯಾಗಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ರಾಟ್‌ ವೀಲರ್ ನಾಯಿಗಳು ಮಾರಣಾಂತಿಕ ದಾಳಿ ನಡೆಸಿವೆ. ಈ ಘಟನೆಯಲ್ಲಿ ಅನಿತಾ ಎಂಬ ಮಹಿಳೆ ಗಾಯಗೊಂಡು ಸಾವನ್ನಪ್ಪಿದ್ದಾರೆ.

Read Full Story

07:33 PM (IST) Dec 05

ಮದುವೆ ಮುಂದೂಡಿಕೆ ಆದ 12 ದಿನಗಳ ಬಳಿಕ ಸೋಶಿಯಲ್‌ ಮೀಡಿಯಾದಲ್ಲಿ ಮೊದಲ ಪೋಸ್ಟ್‌ ಮಾಡಿದ ಸ್ಮೃತಿ, ಕೈಯಲ್ಲಿದ್ದ ರಿಂಗ್‌ ಮಾಯ!

Smriti Mandhana Social Media Post: ಸ್ಮೃತಿ ಮಂಧಾನ ತಮ್ಮ ಮದುವೆ ಮುಂದೂಡಿಕೆ ಆದ 12 ದಿನಗಳ ನಂತರ ಮೊದಲ ಬಾರಿಗೆ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಮೂಲಕ ಸ್ಮೃತಿ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡ ಮಾಹಿತಿ ಇಲ್ಲಿದೆ.

 

Read Full Story

07:26 PM (IST) Dec 05

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ - ಸಂಸದ ಡಾ.ಕೆ.ಸುಧಾಕರ್‌ ಮನವಿ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಳ ಮತ್ತು ಸಾಮಾಜಿಕ ಭದ್ರತೆ ವಿಷಯ ಕುರಿತು ಸಂಸದ ಡಾ.ಕೆ.ಸುಧಾಕರ್‌ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.

Read Full Story

07:20 PM (IST) Dec 05

ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ - ಆರಗ ಜ್ಞಾನೇಂದ್ರ ತಿರುಗೇಟು

ಬಂಗಾರಪ್ಪ ಅವರ ಹೆಸರನ್ನು ಇಟ್ಟುಕೊಂಡರೆ ಮಾತ್ರ ಸಾಲುವುದಿಲ್ಲ, ಬದಲಾಗಿ ಅವರ ತಂದೆಯವರು ಹೊಂದಿದ್ದ ಉತ್ತಮ ಮಾತು ಮತ್ತು ಸೌಜನ್ಯದ ನಡವಳಿಕೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ತಿರುಗೇಟು ನೀಡಿದರು.

Read Full Story

07:14 PM (IST) Dec 05

ಸಮಸ್ಯೆಗಳ ನಿವಾರಣೆ, ಸವಾಲುಗಳಿಗೆ ಧಾರ್ಮಿಕ ಗುರುಗಳಿಂದ ಪರಿಹಾರ - ಬಿ.ವೈ.ವಿಜಯೇಂದ್ರ

ರಾಜ್ಯದ ಜ್ವಲಂತ ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸಲು ಮಠ-ಮಾನ್ಯಗಳ ಗುರುಗಳು ನಡೆಸುವ ಧರ್ಮ ಸಭೆಗಳಿಂದ ಪರಿಹಾರ ಸಿಗುತ್ತಿದೆ. ಈ ಕಾರಣಕ್ಕಾಗಿ ಪ್ರತಿಯೊಬ್ಬರು ಧಾರ್ಮಿಕ ಗುರುಗಳತ್ತ ಎದುರು ನೋಡುತ್ತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

Read Full Story

07:09 PM (IST) Dec 05

ಇಸ್ಲಾಂ ಧರ್ಮಕ್ಕೆ ಮತಾಂತರವಾಗಲು ಮುಸ್ಲಿಂ ವ್ಯಕ್ತಿಯ ಕಿರುಕುಳ; ವಿವಾಹಿತ ಮಹಿಳೆ ಆತ್ಮ*ಹತ್ಯೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ, ಮುಸ್ಲಿಂ ವ್ಯಕ್ತಿಯೊಬ್ಬನಿಂದ ಮತಾಂತರಕ್ಕೆ ಒತ್ತಾಯ ಮತ್ತು ಅನೈತಿಕ ಸಂಬಂಧ ಮುಂದುವರಿಸುವಂತೆ ಕಿರುಕುಳ ಹಾಗೂ ಕೊಲೆ ಬೆದರಿಕೆಗೆ ಒಳಗಾಗಿದ್ದ ವಿವಾಹಿತೆಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ.

Read Full Story

07:07 PM (IST) Dec 05

ಜಾತಿ ವ್ಯವಸ್ಥೆಗೆ ಪರಿಹಾರ ರೂಪದ ವಿದ್ಯೆ ಅಗತ್ಯ - ಸಿಎಂ ಸಿದ್ದರಾಮಯ್ಯ

ವೈವಿಧ್ಯತೆಯಲ್ಲಿ ಏಕತೆ ಸಾಧಿಸಬೇಕು ಎಂದು ಜನರಿಗೆ ಹೇಳುತ್ತೇವೆ. ವೈವಿಧ್ಯತೆಯಲ್ಲಿ ಏಕತೆ ಇಲ್ಲದೇ ಹೋದರೆ ಪ್ರಯೋಜನವಿಲ್ಲ. ವೈಚಾರಿಕತೆ, ವೈಜ್ಞಾನಿಕತೆ ಇರುವ ಹಾಗೂ ಜಾತಿ ವ್ಯವಸ್ಥೆಗೆ ಪರಿಹಾರ ರೂಪದಲ್ಲಿರುವ ವಿದ್ಯೆ ಬೇಕಿದೆ ಎಂದು ಸಿದ್ದರಾಮಯ್ಯಹೇಳಿದ್ದಾರೆ.

Read Full Story

07:05 PM (IST) Dec 05

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ, ತಾಯಿ ಮಗ ರಾತ್ರಿ ಹಣದ ವಿಚಾರವಾಗಿ ಜಗಳವಾಗಿದೆ. ಬಳಿಕ ಇಬ್ಬರು ಪ್ರತ್ಯೇಕ ಕೋಣೆಯಲ್ಲಿ ಮಲಗಿದ್ದಾರೆ. ಬೆಳಗ್ಗೆ ನೋಡಿದಾ ದುರಂತ ಬೆಳಕಿಗೆ ಬಂದಿದೆ.

Read Full Story

06:09 PM (IST) Dec 05

ಐಎಂಡಿಬಿ 2025 ಪಟ್ಟಿಯಲ್ಲಿ ದಾಖಲೆ - ಮೂವರು ಕನ್ನಡದ ತಾರೆಗಳಿಗೆ ಟಾಪ್‌ 10ರಲ್ಲಿ ಸ್ಥಾನ!

2025ರ ಮೋಸ್ಟ್‌ ಪಾಪುಲರ್‌ ಇಂಡಿಯನ್‌ ಸ್ಟಾರ್ಸ್‌ ಹೆಸರಿನಲ್ಲಿ ಐಎಂಡಿಬಿ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ ‘ಕಾಂತಾರ 1’ ಚಿತ್ರದ ನಾಯಕ ನಟ ರಿಷಬ್‌ ಶೆಟ್ಟಿ 10ನೇ ಸ್ಥಾನ ಪಡೆದುಕೊಂಡಿದ್ದಾರೆ.

Read Full Story

05:53 PM (IST) Dec 05

ಟಾಕ್ಸಿಕ್‌ನಿಂದ ಅನಿರುದ್ಧ್ ರವಿಚಂದರ್ ಔಟ್‌.. ಕನ್ನಡಿಗನಿಗೆ ಆ ಅವಕಾಶ ಕೊಟ್ಟ ರಾಕಿಂಗ್ ಸ್ಟಾರ್ ಯಶ್!

ಟಾಕ್ಸಿಕ್‌ನ ಟೀಸರ್‌ಗೆ ರವಿ ಬಸ್ರೂರು ಹಿನ್ನೆಲೆ ಸಂಗೀತವಿತ್ತು. ಆದರೆ ಇಡೀ ಸಿನಿಮಾದ ಸಂಗೀತ ನಿರ್ದೇಶನವನ್ನು ಅನಿರುದ್ಧ್‌ ರವಿಚಂದರ್‌ ಮಾಡುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಅವರು ಈ ಸಿನಿಮಾದ ಭಾಗವಾಗಿಲ್ಲ.

Read Full Story

05:07 PM (IST) Dec 05

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕೆಡವುತ್ತೇವೆ ಎಂದರೆ ನಾವು ಕೈಬಳೆ ತೊಟ್ಟು ಕುಳಿತಿದ್ದೀವಾ? ಪ್ರಚೋದನಕಾರಿ ಭಾಷಣ ಮಾಡಿದವರ ಮೇಲೆ ಎಫ್‌ಐಆರ್ ದಾಖಲಿಸಬೇಕು ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಸವಾಲು ಹಾಕಿದರು.

Read Full Story

05:05 PM (IST) Dec 05

ಅರೆರೆ! ಗೋಲ್ಡನ್‌ ಸ್ಟಾರ್‌ ಗಣೇಶ್‌ಗೆ ಇದೇನಾಯ್ತು.. ಇದ್ದಕ್ಕಿದ್ದಂತೆ ಇಬ್ಬರು ನಟಿಯರ ಜೊತೆ ಬಾಲಿವುಡ್‌ಗೆ ಹೊರಟಿದ್ಯಾಕೆ?

ಈ ಚಿತ್ರವು ನೇರ ಹಿಂದಿ ಆವೃತ್ತಿಯಾಗಲಿದೆ ಮತ್ತು ಡಬ್ ಮಾಡಲಾಗಿಲ್ಲ. ಬದಲಾಗಿ ಸರಿಯಾದ ಹಿಂದಿ ರಿಮೇಕ್ ಆಗಿರುತ್ತದೆ. ಅಧಿಕೃತ ಹಿಂದಿ ಸಂಭಾಷಣೆ ಮತ್ತು ಸಾಹಿತ್ಯವನ್ನು ರಚಿಸಲು ತಜ್ಞರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎಂದು ಗಣೇಶ್ ಹೇಳಿದರು.

Read Full Story

04:44 PM (IST) Dec 05

ಗುಮ್ಮಡಿ ನರಸಯ್ಯ ಬಯೋಪಿಕ್‌ನಲ್ಲಿ ಶಿವಣ್ಣ - ಮೊದಲು ವಿರೋಧಿಸಿದ್ದ ನಾಯಕನೇ ಈಗ ಏನ್ ಹೇಳಿದ್ರು?

ಈ ಚಿತ್ರಕ್ಕೆ ವಿರೋಧ ಮಾಡಿದ್ದೆ. ಆ ನಂತರ ಚಿತ್ರತಂಡದವರು ಬಂದು ನಾನು ಹೇಳಿದ ಮಾಹಿತಿಗಳನ್ನೇ ಸಿನಿಮಾ ಮಾಡುತ್ತೇವೆ ಎಂದರು. ಹೀಗಾಗಿ ಒಪ್ಪಿಕೊಂಡೆ. ಈ ಚಿತ್ರದಲ್ಲಿ ನನ್ನ ಪಾತ್ರವನ್ನು ಶಿವಣ್ಣ ಮಾಡುತ್ತಿದ್ದಾರೆ ಎಂದು ಗೊತ್ತಾಯಿತು.

Read Full Story

04:22 PM (IST) Dec 05

ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ - ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ

ಡಿಸೆಂಬರ್‌ನಲ್ಲಿ ಕನ್ನಡದ ಮೂರು ಸ್ಟಾರ್ ಸಿನಿಮಾಗಳು ಬರಲಿವೆ. ದೊಡ್ಡ ಬಂಡವಾಳದ ಇವುಗಳ ಮೇಲೆ ಪಾನ್ ಇಂಡಿಯಾದ ಕಣ್ಣೂ ಬಿದ್ದಿದೆ. ಹೇಮಂತ ಮಾಸದ ಚಳಿ ಚುರುಕಾಗುತ್ತಿರುವಂತೆ ಆ್ಯಕ್ಷನ್‌, ಕಾಮಿಡಿಗಳ ಮೂಲಕ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಲು ಸ್ಯಾಂಡಲ್‌ವುಡ್‌ ಸಜ್ಜಾಗಿದೆ.

Read Full Story

03:39 PM (IST) Dec 05

ಐಷಾರಾಮಿ ಕಾರ್ಟಿಯರ್ ವಾಚ್‌ನ ಲೋಕಾಯುಕ್ತರ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!

ಡಿ.ಕೆ. ಶಿವಕುಮಾರ್ ಐಷಾರಾಮಿ ವಾಚ್ ಕುರಿತ ಬಿಜೆಪಿ ಟೀಕೆಗೆ, ತಮ್ಮ ಲೋಕಾಯುಕ್ತ ಅಫಿಡವಿಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸುವ ಮೂಲಕ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

Read Full Story

03:22 PM (IST) Dec 05

ರಾಯಚೂರು - ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ, ಭೀಮೇಶ್ ಎಂಬ ಬೈಕ್ ಸವಾರನೊಬ್ಬ ರಸ್ತೆಯಲ್ಲಿ ಕಂಡ 6 ಅಡಿ ಉದ್ದದ ಹಾವನ್ನು ಹಿಡಿದು ಹುಚ್ಚಾಟ ಮೆರೆದಿದ್ದಾನೆ. ಈ ಅಪಾಯಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸವಾರನ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
Read Full Story

02:56 PM (IST) Dec 05

Farmer wins battle - ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ!

1995ರಲ್ಲಿ ವಶಪಡಿಸಿಕೊಂಡ ಜಮೀನಿನ ಪರಿಹಾರ ನೀಡದ ಕಾರಣ, ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಕಾರನ್ನು ಜಪ್ತಿ ಮಾಡಲು ನ್ಯಾಯಾಲಯ ಆದೇಶಿಸಿದೆ. ಬಾಕಿ ಮೊತ್ತ ಬಡ್ಡಿ ಸಮೇತ 95 ಲಕ್ಷ ರೂ. ತಲುಪಿದ್ದು, ನ್ಯಾಯಾಲಯದ ಆದೇಶದ ಹೊರತಾಗಿಯೂ ತಕ್ಷಣಕ್ಕೆ ಹಣ ಸಿಗದ ಕಾರಣ ರೈತ ನಂಜಪ್ಪ ಬೇಸರಗೊಂಡಿದ್ದಾರೆ.
Read Full Story

02:19 PM (IST) Dec 05

'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!

ದ್ವೇಷ ಭಾಷಣ ನಿಯಂತ್ರಣ ಮಸೂದೆ ಜಾರಿಗೆ ತರುವ ಕಾಂಗ್ರೆಸ್ ಸರ್ಕಾರದ ನಡೆಗೆ ಬಿಜೆಪಿ ನಾಯಕ ಸಿ.ಟಿ. ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸನಾತನ ಧರ್ಮದ ಬಗ್ಗೆ ವಿಷ ಕಾರಿದ ಡಿಎಂಕೆಯನ್ನು ಮೈತ್ರಿಕೂಟದಿಂದ ಹೊರಹಾಕಲಿ ದ್ವೇಷ ಕಲಿಸುವ ಮತ-ಗ್ರಂಥಗಳನ್ನು ನಿಷೇಧಿಸುವ ತಾಕತ್ತಿದೆಯೇ ಎಂದು ಸವಾಲು ಹಾಕಿದರು.

Read Full Story

01:50 PM (IST) Dec 05

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!

ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿರುವ ರಾಯಲ್ ಮೆನರ್ ಅಪಾರ್ಟ್‌ಮೆಂಟ್‌ನಲ್ಲಿ, ಓರ್ವ ವ್ಯಕ್ತಿ 16 ಕುಟುಂಬಗಳಿಗೆ ಮಾಟ-ಮಂತ್ರದ ಭಯ ಹುಟ್ಟಿಸಿ, ದೈಹಿಕ ಕಿರುಕುಳ ನೀಡುತ್ತಿದ್ದಾನೆ. ಈತನಿಂದ ನಿವಾಸಿಗಳು ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.

Read Full Story

01:44 PM (IST) Dec 05

'63% ಭ್ರಷ್ಟಾಚಾರ' ಹೇಳಿಕೆ ವಿವಾದ - 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ

Justice Veerappa corruption statement: 'ಶೇ. 63ರಷ್ಟು ಭ್ರಷ್ಟಾಚಾರ' ಹೇಳಿಕೆ ಕುರಿತು ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆಯು 2019ರ ಇಂಡಿಯಾ ಕರೆಪ್ಷನ್ ಸರ್ವೆಯನ್ನು ಆಧರಿಸಿದ್ದು, ಯಾವುದೇ ನಿರ್ದಿಷ್ಟ ಸರ್ಕಾರವನ್ನು ಗುರಿಯಾಗಿಸಿಲ್ಲ ಎಂದು ತಿಳಿಸಿದ್ದಾರೆ.

Read Full Story

01:08 PM (IST) Dec 05

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್ - ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳ ವಿಡಿಯೋ ವೈರಲ್ ನಂತರ, ಕುಖ್ಯಾತ ಅಪರಾಧಿ ಉಮೇಶ್ ರೆಡ್ಡಿ ತನ್ನನ್ನು ಬೇರೆ ಜೈಲಿಗೆ ವರ್ಗಾಯಿಸುವಂತೆ ಪತ್ರ ಬರೆದಿದ್ದಾನೆ. ತಾಯಿಯ ಅನಾರೋಗ್ಯದ ಕಾರಣ ನೀಡಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಮನವಿ ಮಾಡಿದ್ದಾರೆ.

Read Full Story

More Trending News