ರಾಜ್ಯದ 12 ಜಿಲ್ಲೆಗಳಿಗೆ 'ಎಲ್ಲೋ ಅಲರ್ಟ್': ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ ಸಾಧ್ಯತೆ!

Published : Apr 16, 2026, 07:23 PM IST
delhi ncr weather alert rain hailstorm thunderstorm western disturbance imd warning wind speed storm india

ಸಾರಾಂಶ

ಭಾರತೀಯ ಹವಾಮಾನ ಇಲಾಖೆಯು (IMD) ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ 'ಎಲ್ಲೋ ಅಲರ್ಟ್' ಘೋಷಿಸಿದೆ. ಈ ಅವಧಿಯಲ್ಲಿ ಗುಡುಗು, ಮಿಂಚು, ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬೆಂಗಳೂರು (ಏ.16): ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಮೂರು ಗಂಟೆಗಳ ಕಾಲ 12 ಜಿಲ್ಲೆಗಳಲ್ಲಿ 'ಎಲ್ಲೋ ಅಲರ್ಟ್' ಘೋಷಿಸಿದೆ. ವಾತಾವರಣದಲ್ಲಿನ ದಿಢೀರ್ ಬದಲಾವಣೆಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಎಲ್ಲೆಲ್ಲಿ ಅಲರ್ಟ್ ಘೋಷಿಸಲಾಗಿದೆ?

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಈ ಎಚ್ಚರಿಕೆ ಅನ್ವಯವಾಗಲಿದೆ.

ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆ

ಕೇವಲ ಸಾಧಾರಣ ಮಳೆಯಲ್ಲದೆ, ಗಾಳಿಯ ವೇಗ ಹೆಚ್ಚಿರಲಿದ್ದು ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸಂಭವಿಸುವ ಸಾಧ್ಯತೆಯಿದೆ. ಇದರಿಂದ ಕೃಷಿ ಭೂಮಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗುವ ಭೀತಿ ಎದುರಾಗಿದೆ. ಗುಡುಗು ಸಹಿತ ಮಳೆ ಬರುವಾಗ ಸಾರ್ವಜನಿಕರು ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ. ಬಿರುಗಾಳಿಯ ತೀವ್ರತೆಗೆ ಹಳೆಯ ಕಟ್ಟಡಗಳು ಹಾಗೂ ದುರ್ಬಲ ಮರಗಳು ಉರುಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸಲು ಜಿಲ್ಲಾಡಳಿತಗಳು ಸೂಚಿಸಿವೆ.

PREV
Read more Articles on
click me!

Recommended Stories

ಬಿಡಿಎ ಆಯುಕ್ತರ 'ಸರ್ವಾಧಿಕಾರಿ' ಧೋರಣೆಗೆ ಕೆಂಪೇಗೌಡ ಬಡಾವಣೆ ನಿವೇಶನದಾರರು ಕಂಗಾಲು: ಸಭೆ ಬಹಿಷ್ಕರಿಸಿ ಡಿಸಿಎಂ ಮೊರೆ!
ಎಚ್‌ಡಿಕೆ ಚನ್ನಪಟ್ಟಣದಿಂದ ಸ್ಪರ್ಧಿಸಬೇಕೆಂಬುದು ಜನರ ಅಭಿಲಾಷೆ: ನಿಖಿಲ್ ಕುಮಾರಸ್ವಾಮಿ