ಬೆಂಗಳೂರು: ಕಡಿಮೆ ಬೆಲೆಗೆ ಗಾಂಜಾ ಮಾರಾಟ, ಕೇರಳ ಮೂಲದ ಆರೋಪಿಗಳ ಬಂಧನ

Kannadaprabha News   | Asianet News
Published : Feb 22, 2020, 11:21 AM ISTUpdated : Feb 22, 2020, 12:35 PM IST
ಬೆಂಗಳೂರು: ಕಡಿಮೆ ಬೆಲೆಗೆ ಗಾಂಜಾ ಮಾರಾಟ, ಕೇರಳ ಮೂಲದ ಆರೋಪಿಗಳ ಬಂಧನ

ಸಾರಾಂಶ

ಗಾಂಜಾ ಮಾರಾಟ ಹಾಗೂ ಚರ್ಚ್‌ಗಳಲ್ಲಿ ಕಳ್ಳತನ|  ಕೇರಳ ಮೂಲದ ಮೂವರು ಆರೋಪಿಗಳ ಬಂಧನ|  ಕಡಿಮೆ ಬೆಲೆಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಂಧಿತ ಆರೋಪಿಗಳು| 

ಬೆಂಗಳೂರು(ಫೆ.22): ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಚರ್ಚ್‌ಗಳಲ್ಲಿ ಕಳ್ಳತನ ಮಾಡುತ್ತಿದ್ದ ಕೇರಳ ಮೂಲದ ಮೂವರು ಆರೋಪಿಗಳನ್ನು ಆರ್‌ಎಂಸಿ ಯಾರ್ಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೇರಳದ ಅಲೆಕ್ಸ್‌ (28), ದೀಪು ರಾಜ್‌ (29) ಮತ್ತು ಮೊಹಮ್ಮದ್‌ ಮುಕ್ತಾರ್‌ (27) ಬಂಧಿತರು. ಆರೋಪಿಗಳಿಂದ 6.1 ಕೆ.ಜಿ. ಗಾಂಜಾ, 100 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆರೋಪಿಗಳು ಹೊರಗಿನಿಂದ ಗಾಂಜಾ ತರಿಸಿಕೊಂಡು ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದರು. ಅಲ್ಲದೆ, ಈ ಹಿಂದೆ ಮಂಗಳೂರಿನ ಅಲೋಶಿಯಸ್‌ ಕಾಲೇಜಿನ ಬಳಿಯ ಚಚ್‌ರ್‍ ಮತ್ತು ಕೆಂಗೇರಿ ಉಪನಗರದ ಬೆಥೇಸ್ತಾ ಚಚ್‌ರ್‍ನ ಬಾಗಿಲು ಮುರಿದು ಕಳವು ಮಾಡಿದ್ದರು. ನಗರದ ಕೆಎಲ್‌ಇ ಡೆಂಟಲ್‌ ಕಾಲೇಜಿನ ಹಿಂಭಾಗದಲ್ಲಿ ಆರೋಪಿಗಳು ಗಾಂಜಾ ಮಾರಾಟ ಮಾಡಲು ಯತ್ನಿಸುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"

PREV
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ