ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!

ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!

Published : Apr 11, 2026, 10:16 PM IST
ಕರ್ನಾಟಕ ಪ್ರವಾಸಕ್ಕೆ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ, ಚಿಕ್ಕಮಗಳೂರಿನ ಮಾಣಿಕ್ಯಾಧಾರ ಬಳಿ ನಾಪತ್ತೆಯಾಗಿದ್ದಳು. ಮೂರು ದಿನಗಳ ಹುಡುಕಾಟದ ನಂತರ ಆಕೆಯ ಮೃತದೇಹ ಪ್ರಪಾತದಲ್ಲಿ ಪತ್ತೆಯಾಗಿದ್ದು, ರೀಲ್ಸ್ ಹುಚ್ಚು ಅಥವಾ ತಂದೆಯ ಬೈಗುಳದಿಂದಾದ ಸಾವೇ ಎಂಬ ಅನುಮಾನ ವ್ಯಕ್ತವಾಗಿದೆ.

ಚಿಕ್ಕಮಗಳೂರು: ಪ್ರವಾಸಕ್ಕೆಂದು ನಗುನಗುತ ಬಂದಿದ್ದ ಕರುಳ ಕುಡಿ ಹೆಣವಾಗಿ ಹೋದರೆ ಆ ಹೆತ್ತವರ ಸಂಕಟ ಹೇಳತೀರದು. ಕೇರಳದಿಂದ ಕರ್ನಾಟಕ ಪ್ರವಾಸಕ್ಕೆ ಬಂದಿದ್ದ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀನಂದಾ ಸಾವು ಈಗ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಮೂರು ದಿನಗಳ ಕಾಲ ನಡೆದ ಸತತ ಹುಡುಕಾಟದ ನಂತರ, ಇಂದು ಮಾಣಿಕ್ಯಾಧಾರದ ಆಳವಾದ ಪ್ರಪಾತದಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.

ಘಟನೆಯ ಹಿನ್ನೆಲೆ:

ಕೇರಳ ಮೂಲದ ಈ ಕುಟುಂಬ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸಕ್ಕೆ ಬಂದಿತ್ತು. ಹಂಪಿಯ ಸೌಂದರ್ಯ ಸವಿದು, ಮೂರು ದಿನಗಳ ಹಿಂದೆ ಚಿಕ್ಕಮಗಳೂರಿಗೆ ಭೇಟಿ ನೀಡಿತ್ತು. ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಬಾಬಾಬುಡನ್ ಗಿರಿಯ ಮಾಣಿಕ್ಯಾಧಾರ ಜಲಪಾತದ ಬಳಿ ಈ ಕುಟುಂಬ ಹೋಗಿದ್ದಾಗ, ಬಾಲಕಿ ಶ್ರೀನಂದಾ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಎಲ್ಲಿ ಹುಡುಕಿದರೂ ಸಿಗದಿದ್ದಾಗ ಕಿಡ್ನ್ಯಾಪ್ ಆಗಿರಬಹುದು ಎಂದು ಹೆತ್ತವರು ಆತಂಕಗೊಂಡಿದ್ದರು.

ಪ್ರಪಾತದಲ್ಲಿ ಸಿಕ್ಕಿದ ಮೃತದೇಹ:

ಬಾಲಕಿ ನಾಪತ್ತೆಯಾದ ತಕ್ಷಣ ಪೊಲೀಸರು ಮತ್ತು ಸ್ಥಳೀಯ ರಕ್ಷಣಾ ತಂಡಗಳು ಕಾರ್ಯಾಚರಣೆ ಆರಂಭಿಸಿದ್ದವು. ಮೂರು ದಿನಗಳ ಸುದೀರ್ಘ ಹುಡುಕಾಟದ ಬಳಿಕ, ಮಾಣಿಕ್ಯಾಧಾರದ ನೂರಾರು ಅಡಿ ಆಳದ ಕಂದಕದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಪ್ರಪಾತದಿಂದ ಮೃತದೇಹವನ್ನು ಮೇಲೆತ್ತಲು ತಂಡವು ಹರಸಾಹಸ ಪಡಬೇಕಾಯಿತು.

ಸಾವು ತಂದ ಫೋನ್ ಚಟ ಮತ್ತು ಅಪ್ಪನ ಕೋಪ?

ಪ್ರಾಥಮಿಕ ಮಾಹಿತಿಯ ಪ್ರಕಾರ, ಶ್ರೀನಂದಾ ಫೋನ್‌ನಲ್ಲಿ ಸದಾ ಬ್ಯುಸಿಯಾಗಿರುತ್ತಿದ್ದಳು. ಮಾಣಿಕ್ಯಾಧಾರಕ್ಕೆ ಹೋದಾಗಲೂ ಆಕೆ ಸೋಷಿಯಲ್ ಮೀಡಿಯಾ ರೀಲ್ಸ್ ಮಾಡುವುದರಲ್ಲಿ ಮಗ್ನಳಾಗಿದ್ದಳು. ಇದನ್ನು ಕಂಡು ಅಪ್ಪ, ಸಂಬಂಧಿಕರ ಮುಂದೆ ಆಕೆಗೆ ಬೈದಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಶ್ರೀನಂದಾ 'ಐ ಹೇಟ್ ಯೂ ಅಪ್ಪ' ಎನ್ನುವ ಮನಸ್ಥಿತಿಯಲ್ಲಿ ಪ್ರಪಾತಕ್ಕೆ ಜಿಗಿದು ಆತ್ಮ*ಹತ್ಯೆ ಮಾಡಿಕೊಂಡಿರಬಹುದು ಎಂಬುದು ಒಂದು ವಾದ. ಆದರೆ, ಫೋಟೋ ಅಥವಾ ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹುದು ಎಂಬ ಶಂಕೆಯೂ ಇದೆ.

ಕಿಡ್ನ್ಯಾಪ್ ಅಲ್ಲ, ಸಾವು ನಿಗೂಢ:

ಆರಂಭದಲ್ಲಿ ಯಾರೋ ಅಪಹರಣ ಮಾಡಿದ್ದಾರೆ ಎಂದು ದೂರು ನೀಡಿದ್ದ ಪೋಷಕರು, ಮೃತದೇಹ ಸಿಕ್ಕಿದ ಮೇಲೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹುದು ಎನ್ನುತ್ತಿದ್ದಾರೆ. ಆದರೆ ಪೊಲೀಸರು ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿಸಿದ್ದಾರೆ. ರೀಲ್ಸ್ ಹುಚ್ಚು ಮತ್ತು ಕ್ಷಣಿಕ ಕೋಪ ಇಂದು ಒಂದು ತುಂಬು ಜೀವವನ್ನು ಬಲಿಪಡೆದಿದೆ. ನಗುನಗುತ ಕರ್ನಾಟಕ ನೋಡಲು ಬಂದಿದ್ದ ಮಗಳು ಶವವಾಗಿ ಮರಳುತ್ತಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more