ಹುಟ್ಟೂರು ಮಂಡ್ಯದ ನೆರವಿಗೆ ಮುಂದಾದ ಕೆಜಿಎಫ್‌ ನಿರ್ಮಾಪಕ

Kannadaprabha News   | Asianet News
Published : May 11, 2021, 07:29 AM IST
ಹುಟ್ಟೂರು ಮಂಡ್ಯದ ನೆರವಿಗೆ ಮುಂದಾದ ಕೆಜಿಎಫ್‌ ನಿರ್ಮಾಪಕ

ಸಾರಾಂಶ

ಮಂಡ್ಯದ ನೆರವಿಗೆ ‘ಕೆಜಿಎಫ್‌’ ನಿರ್ಮಾಪಕ ವಿಜಯ್‌ ಕಿರಗಂದೂರು ಕೊರೋನಾ ಸೋಂಕಿತರಿಗೆ ಅನುಕೂಲವಾಗುವ ವ್ಯವಸ್ಥೆ ಕಲ್ಪಿಸಲು ಡೀಸಿಗೆ ಪತ್ರ  ‘ಹೊಂಬಾಳೆ ಗ್ರೂಫ್ಸ್‌’ ಮೂಲಕ ಹುಟ್ಟೂರಿಗೆ ನೆರವು

ಮಂಡ್ಯ (ಮೇ.11): ಬಹುಭಾಷೆಗಳಲ್ಲಿ ಬಿಡುಗಡೆಯಾಗಿ ಸೂಪರ್‌ ಹಿಟ್‌ ಚಲನಚಿತ್ರ ‘ಕೆಜಿಎಫ್‌’ ನಿರ್ಮಾಪಕ ವಿಜಯ್‌ ಕಿರಗಂದೂರು ಇದೀಗ ಮಂಡ್ಯದ ಕೊರೋನಾ ಸೋಂಕಿತರಿಗೆ ಅನುಕೂಲವಾಗುವಂತೆ 500 ಎಲ್‌ಪಿಎಂ ಸಾಮರ್ಥ್ಯದ 2 ಆಕ್ಸಿಜನ್‌ ಘಟಕ ಅಥವಾ ಸಕಲ ವ್ಯವಸ್ಥೆಯನ್ನೊಳಗೊಂಡ 50 ಐಸಿಯು ಬೆಡ್‌ ವ್ಯವಸ್ಥೆ ಮಾಡಿಕೊಡಲು ತೀರ್ಮಾನಿಸಿದ್ದಾರೆ. 

ತಮ್ಮ ಚಿತ್ರನಿರ್ಮಾಣ ಸಂಸ್ಥೆ ‘ಹೊಂಬಾಳೆ ಗ್ರೂಫ್ಸ್‌’ ಮೂಲಕ ಹುಟ್ಟೂರಿಗೆ ನೆರವಾಗುವುದಾಗಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಈ ವಿಷಯ ತಿಳಿಸಿದ್ದಾರೆ.

ಸ್ವಂತ ದುಡ್ಡಿನಲ್ಲಿ ಪ್ರತಿದಿನ ಆಕ್ಸಿಜನ್.. ಮಂಡ್ಯ ಸಂಸದೆ ಮಾದರಿ ಹೆಜ್ಜೆ .

ನಮ್ಮ ಸಂಸ್ಥೆಯಿಂದ ಸುಸಜ್ಜಿತವಾದ 50 ಐಸಿಯು ಬೆಡ್‌ ಅಥವಾ ಎರಡು 500 ಎಲ್‌ಪಿಎಂ ಸಾಮರ್ಥ್ಯದ ಆಕ್ಸಿಜನ್‌ ಪ್ಲಾಂಟ್‌ ಇವುಗಳಲ್ಲಿ ಯಾವುದು ಅಗತ್ಯವಿದೆಯೋ ಅದನ್ನು ಒದಗಿಸಲು ಬದ್ಧವಾಗಿದ್ದೇವೆ. ಪರಿಸ್ಥಿತಿ ಸುಧಾರಿಸುವವರೆಗೂ ನೆರವು ನೀಡುವುದಾಗಿ ವಿಜಯ್‌ ಭರವಸೆ ನೀಡಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ಮುಂದಿನ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ
Bengaluru: ಗಾನವಿ ಕುಟುಂಬಸ್ಥರ ವಿರುದ್ಧ ದಾಖಲಾಯ್ತು ದೂರು; ಕಂಪ್ಲೇಂಟ್ ಕೊಟ್ಟೋರು ಯಾರು?