ಪ್ರಭಾವಿ ಕಾಂಗ್ರೆಸಿಗರ ವಿರುದ್ಧ ತೊಡೆ ತಟ್ಟಿದ ಮುನಿಯಪ್ಪ

Published : Aug 28, 2019, 01:31 PM IST
ಪ್ರಭಾವಿ ಕಾಂಗ್ರೆಸಿಗರ ವಿರುದ್ಧ ತೊಡೆ ತಟ್ಟಿದ ಮುನಿಯಪ್ಪ

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗ ಮುನಿಸ್ವಾಮಿ ವಿರುದ್ಧ ಪರಾಭವಗೊಂಡಿದ್ದ ಕಾಂಗ್ರೆಸ್ ನಾಯಕ ಕೆ.ಎಚ್.ಮುನಿಯಪ್ಪ ಇದೀಗ ಪ್ರಭಾವಿ ಕಾಂಗ್ರೆಸ್ ನಾಯಕರ ವಿರುದ್ಧವೇ ತೊಡೆ ತಟ್ಟಿದ್ದಾರೆ. 

ಕೋಲಾರ [ಆ.28] : ಕೋಲಾರದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದಮಾಜಿ ಸಚಿವ ಕೆ.ಎಚ್ ಮುನಿಯಪ್ಪ ಇದೀಗ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಕಾರ್ಯಕರ್ತರಿಗೆ ಖಡಕ್  ಸೂಚನೆ ನೀಡಿದ್ದಾರೆ. ಬಿಜೆಪಿ ಪರವಾಗಿ ಕೆಲಸ ಮಾಡಿರುವವರನ್ನು ಉಚ್ಛಾಟನೆ ಮಾಡಬೇಕು ಎಂದು ಹೇಳಿದ್ದಾರೆ. ಯಾರೇ ಬಿಜೆಪಿ ಪರ ಕೆಲಸ ಮಾಡಿದರೂ ತಿಳಿಸುವಂತೆ ಈ ವೇಳೆ ಬಹಿರಂಗ ಸೂಚನೆ ನೀಡಿದ್ದಾರೆ.

ರಾಜ್ಯ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನೀವು ಕೊಡುವ ಅಭಿಪ್ರಾಯ ದೆಹಲಿಗೆ ಹೋಗುತ್ತದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವರದಿಯಲ್ಲಿ ದೆಹಲಿಗೆ ಕಳುಹಿಸುತ್ತಾರೆ. ಆದ್ದರಿಂದ ಎಲ್ಲವನ್ನು ಧೈರ್ಯವಾಗಿ ಹೇಳಿ ಎಂದು ಮುನಿಯಪ್ಪ ಹೇಳಿದರು.

ಪರೋಕ್ಷವಾಗಿ ಇಲ್ಲಿನ ಪ್ರಭಾವಿ ಕಾಂಗ್ರೆಸ್ ಮುಖಂಡರಾದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೋಲಾರ ಶಾಸಕ ಶ್ರೀನಿವಾಸ್ ಗೌಡ, ಮಾಜಿ ಶಾಸಕರಾದ ಕೊತ್ತೂರು ಮಂಜು ಹಾಗೂ ಮಂಜುನಾಥ್ ಗೌಡ ವಿರುದ್ಧ ಅಖಾಡಕ್ಕೆ ಇಳಿದರಾ ಎನ್ನುವ ಶಂಕೆ ಮೂಡಿದೆ.

PREV
click me!

Recommended Stories

LPG Gas Crisis: ರಾಜ್ಯದಲ್ಲಿ ಮತ್ತೆ ಗ್ಯಾಸ್ ಟ್ರಬಲ್: ಏಜೆನ್ಸಿಗಳಿಂದಲೇ ಕಾಳಸಂತೇಲಿ ಮಾರಾಟ, ರಾಯಚೂರು, ಯಾದಗಿರಿ, ಹಾಸನ ಜನರು ಹೈರಾಣು
Anjanadri Temple: ತಾಪಮಾನ ಏರಿದರೂ ಭಕ್ತಿ ಕಡಿಮೆ ಆಗಲಿಲ್ಲ; ಒಂದೇ ದಿನ ಅಂಜನಾದ್ರಿಗೆ 25 ಸಾವಿರ ಭಕ್ತರ ಭೇಟಿ!