13 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ ಮಾಡಿದ ಸ್ನೇಕ್‌ ಸೂರ್ಯಕೀರ್ತಿ

Kannadaprabha News   | Asianet News
Published : Jul 09, 2021, 01:31 PM IST
13 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ ಮಾಡಿದ ಸ್ನೇಕ್‌ ಸೂರ್ಯಕೀರ್ತಿ

ಸಾರಾಂಶ

 ನಗರದ ಉರಗತಜ್ಞ ಸ್ನೇಕ್‌ ಶ್ಯಾಮ್‌ ಅವರ ಪುತ್ರ ಸೂರ್ಯಕೀರ್ತಿ ಅವರಿಂದ ಕಾಳಿಂಗ ಸರ್ಪ ರಕ್ಷಣೆ ಕೊಡಗಿನಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪವನ್ನು ಪ್ರಥಮ ಬಾರಿಗೆ ರಕ್ಷಣೆ   ಟೈರಿನ ಮಧ್ಯಭಾಗದಲ್ಲಿ ಅಡಗಿಕೊಂಡಿದ್ದ   ಕಾಳಿಂಗ ಸರ್ಪ

ಮೈಸೂರು (ಜು.09):  ನಗರದ ಉರಗತಜ್ಞ ಸ್ನೇಕ್‌ ಶ್ಯಾಮ್‌ ಅವರ ಪುತ್ರ ಸೂರ್ಯಕೀರ್ತಿ ಇತ್ತೀಚೆಗೆ ಕೊಡಗಿನಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪವನ್ನು ಪ್ರಥಮ ಬಾರಿಗೆ ರಕ್ಷಣೆ ಮಾಡಿದ್ದಾರೆ.

ಕೊಡಗಿನ ಮೂರ್ನಾಡು ಸಮೀಪದ ಬೋಪಯ್ಯ ಎಂಬವರ ನಿವಾಸದಲ್ಲಿ ಟೈರಿನ ಮಧ್ಯಭಾಗದಲ್ಲಿ ಅಡಗಿಕೊಂಡಿದ್ದ ಈ ಕಾಳಿಂಗ ಸರ್ಪವನ್ನು ಸೂರ್ಯ ರಕ್ಷಿಸಿದರು. ನಂತರ ಬಾಗಮಂಡಲದ ಬಳಿ ಅರಣ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಈ ಕಾಳಿಂಗ ಸರ್ಪವನ್ನು ಬಿಡುಗಡೆ ಮಾಡಿದರು. 

12 ಅಡಿ ಕಾಳಿಂಗ ರಕ್ಷಣೆ : 326 ಹಾವುಗಳು ಕಾಡಿಗೆ ...

ಕೊಡಗಿನಲ್ಲಿ ಹಾವುಗಳನ್ನು ಸಂರಕ್ಷಣೆ ಮಾಡುವ ಪ್ರಜ್ವಲ್‌ ಅವರು ಸೂರ್ಯಕೀರ್ತಿಗೆ ಕರೆ ಮಾಡಿ ಕಾಳಿಂಗ ಸರ್ಪ ಇರುವ ಬಗ್ಗೆ ಮಾಹಿತಿ ನೀಡಿದರು. ನಂತರ ಸೂರ್ಯ ಅಲ್ಲಿಗೆ ತೆರಳಿ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. ಕಾಳಿಂಗ ಸರ್ಪ ಕಂಡು ಬಂದರೆ ನನಗೆ ತಿಳಿಸುವಂತೆ ಸೂರ್ಯ ಕೀರ್ತಿ ಅವರು ಪ್ರಜ್ವಲ್‌ ಅವರ ಬಳಿ ಮನವಿ ಮಾಡಿದ್ದರು.

(ಯಾವುದೇ ಹಾವುಗಳು ಕಂಡು ಬಂದಲ್ಲಿ ಹಾಗೂ ಹಾವು ಕಚ್ಚಿದಲ್ಲಿ ಕೂಡಲೇ ಸೂರ್ಯಕೀರ್ತಿ, ಮೊ. 7022042028 ಸಂಪರ್ಕಿಸಿ)

PREV
click me!

Recommended Stories

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ