ಮಣಿಪಾಲ ಆಸ್ಪತ್ರೆಯಲ್ಲಿ ಬಿ.ಸಿ.ಪಾಟೀಲ್‌ಗೆ ಮಂಡಿ ಶಸ್ತ್ರಚಿಕಿತ್ಸೆ

Published : Nov 23, 2022, 09:00 AM IST
ಮಣಿಪಾಲ ಆಸ್ಪತ್ರೆಯಲ್ಲಿ ಬಿ.ಸಿ.ಪಾಟೀಲ್‌ಗೆ ಮಂಡಿ ಶಸ್ತ್ರಚಿಕಿತ್ಸೆ

ಸಾರಾಂಶ

ಸಚಿವರು ಆರೋಗ್ಯವಾಗಿದ್ದು, ಕೆಲ ದಿನಗಳು ಆಸ್ಪತ್ರೆ, ಆ ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

ಬೆಂಗಳೂರು(ನ.23): ಮಂಡಿ ನೋವಿನ ಹಿನ್ನೆಲೆ ನಗರದ ಮಣಿಪಾಲ್‌ ಆಸ್ಪತ್ರೆ ದಾಖಲಾಗಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರಿಗೆ ಮಂಡಿಚಿಪ್ಪಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಸೋಮವಾರ ಆಸ್ಪತ್ರೆ ದಾಖಲಾಗಿದ್ದರು. ಮಂಗಳವಾರ ಡಾ.ಕಿರಣ್‌ ನೇತೃತ್ವದ ವೈದ್ಯರ ತಂಡವು ಎರಡು ಕಾಲುಗಳ ಮಂಡಿಚಿಪ್ಪಿನ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. 

ಸಚಿವರು ಆರೋಗ್ಯವಾಗಿದ್ದು, ಕೆಲ ದಿನಗಳು ಆಸ್ಪತ್ರೆ, ಆ ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

 

ಯುಬಿ ಬಣಕಾರ್ ವಿರುದ್ಧ 4ನೇ ಬಾರಿಯೂ ಕುಸ್ತಿ ಗೆಲ್ಲುತ್ತೇನೆ: ಬಿ.ಸಿ. ಪಾಟೀಲ್

ಇತ್ತ ಸಚಿವರು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಶಸ್ತ್ರಚಿಕಿತ್ಸೆಯಾದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ‘ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಗುಣಮುಖವಾಗುತ್ತಿದ್ದೇನೆ’ ಎಂದಿದ್ದಾರೆ.
 

PREV
Read more Articles on
click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!