ಕನ್ನಡ ಕಟ್ಟಲು ಕನ್ನಡದ ಪರಂಪರೆಯ ತಿಳುವಳಿಕೆ ಅಗತ್ಯ: ವೀರಪ್ಪ ಮೊಯ್ಲಿ

By Kannadaprabha NewsFirst Published Feb 3, 2024, 5:15 PM IST
Highlights

ಕನ್ನಡದ ಪರಂಪರೆ ತಿಳಿದವರಿಂದ ಕನ್ನಡ ಕಟ್ಟಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು. ಅವರು ಹೆಬ್ರಿ ತಾಲೂಕಿನ ಮುದ್ರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಬಾತನಯ ಮುದ್ರಾಡಿ ವೇದಿಕೆಯಲ್ಲಿ ಆಯೋಜಿಸಲಾದ ನಾಲ್ಕನೇ ಸಾಹಿತ್ಯ ಸಮ್ಮೇಳನ ‘ಚೈತ್ರ ನಂದನ’ ಉದ್ಘಾಟಿಸಿ ಮಾತನಾಡಿದರು.
 

ಕಾರ್ಕಳ (ಫೆ.03): ಕನ್ನಡದ ಪರಂಪರೆ ತಿಳಿದವರಿಂದ ಕನ್ನಡ ಕಟ್ಟಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು. ಅವರು ಹೆಬ್ರಿ ತಾಲೂಕಿನ ಮುದ್ರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಬಾತನಯ ಮುದ್ರಾಡಿ ವೇದಿಕೆಯಲ್ಲಿ ಆಯೋಜಿಸಲಾದ ನಾಲ್ಕನೇ ಸಾಹಿತ್ಯ ಸಮ್ಮೇಳನ ‘ಚೈತ್ರ ನಂದನ’ ಉದ್ಘಾಟಿಸಿ ಮಾತನಾಡಿದರು. ಜ್ಞಾನದ ಮನೋವೇದಿಕೆ ತೆರೆಡಿಡುವ ಭಾವ ಕನ್ನಡಕ್ಕಿದೆ.‌ ಕನ್ನಡಕ್ಕೆ ಪ್ರಪಂಚದ ಜ್ಞಾನದ ಬೆಳಕು ಬಿದ್ದಾಗ ವಿಶ್ವಮಾನ್ಯವಾಗುತ್ತದೆ. ವಿಶ್ವ ಭಾವನೆಯ ಮನೋವೇದಿಕೆ ಬೆಳೆಸಿಕೊಳ್ಳಬೇಕು. ಭಾಷೆ ಬೇರೆ ಬೇರೆಯಾದರೂ ಭಾವವೊಂದೆಯಾಗಿದೆ. 

ಭಾಷೆ ಮಾನವ ನಿರ್ಮಿತವಾಗಿದೆ. ಸಾಹಿತ್ಯಕ್ಕೆ ಜಾತಿ‌ ವರ್ಣ ಮತವನ್ನು ಅಂಟಿಸಬೇಡಿ. ಅಸ್ಪೃಶ್ಯತೆ ಬೇಡ ಎಂದು ಕಿವಿಮಾತು ಹೇಳಿದರು. ಕಬ್ಬಿನಾಲೆ ಬಾಲಕೃಷ್ಣ ಹೆಬ್ಬಾರ್ ಅಧ್ಯಕ್ಷತೆ ವಹಿಸಿ, ಸಂಸ್ಕೃತಿ ಎಂದರೆ ಕೇವಲ ಕನ್ನಡ ಸಂಸ್ಕೃತಿಯಲ್ಲ. ಅದು ನಮ್ಮೊಳಗಿನ ಬಹುಭಾಷಾ ಸಂಸ್ಕೃತಿ. ಅಲ್ಲಿ ಕುಂದಗನ್ನಡ, ಹವಿಗನ್ನಡವಿದೆ, ತುಳು, ಕೊಂಕಣಿ ಇದೆ. ಇವೆಲ್ಲ ಇದ್ದರೂ ನಾವು ನಮ್ಮನ್ನು ಕನ್ನಡಿಗರೆಂದೇ ಹೇಳಿಕೊಂಡು ಬಂದಿದ್ದೇವೆ. ಇದು ನಿಜವಾದ ಕನ್ನಡಿಗನ ಭಾಷಾ ಪ್ರೀತಿ. ಈ ಏಕತೆ ನಮ್ಮ ನೀರಿಗಾಗಿಯೂ, ಭೂಮಿಗಾಗಿಯೂ ಒಂದಾಗಬೇಕು. ನಮ್ಮ ಜಲ ಸಂಪತ್ತು ಮೊದಲು ನಮ್ಮ ಉಳಿವಿಗಾಗಿ ಸಲ್ಲಬೇಕು ಎಂದರು.

Latest Videos

ರಾಜಕಾರಣಿಗಳು ಪರಿಜ್ಞಾನ ಇಟ್ಟು ಮಾತನಾಡಬೇಕು: ವಿನಯ್‌ ಗುರೂಜಿ

ಹೆಬ್ರಿ ಕಸಾಪ ಅಧ್ಯಕ್ಷ ಶ್ರೀ ನಿವಾಸ ಭಂಡಾರಿ ಪ್ರಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಪೂರ್ಣಿಮಾ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್‌ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಅನುದಾನಿತ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ಕೊರತೆಯಿದ್ದು, ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು. ಕನ್ನಡ ಶಾಲೆಗಳನ್ನು ಉಳಿಸಲು ಪ್ರಯತ್ನಿಸುವಂತೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನು ಒತ್ತಾಯಿಸಿದರು.

ಶಿರ್ವ ಕಸಾಪ ಅಧ್ಯಕ್ಷ ಪುಂಡಲೀಕ ಮರಾಠೆ, ಹೆಬ್ರಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಲೀಲಾವತಿ, ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಬಾಯರಿ,‌ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶುಭದರ ಶೆಟ್ಟಿ, ಉಡುಪಿ ಕಸಾಪ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರ ಕುಮಾರ್ ಕೋಟ, ಮನೋಹರ ಪಿ., ಆನಂದ ಸಾಲಿಗ್ರಾಮ, ಕಾರ್ಕಳ ಶಿಕ್ಷಕರ ಸಂಘ ಅಧ್ಯಕ್ಷ ರಮಾನಂದ ಶೆಟ್ಟಿ, ಕಾರ್ಕಳ ಕಸಾಪ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ, ಕನ್ನಡ ಪರ ಸಂಘಟಕ ಅಣ್ಣಪ್ಪ ಕುಲಾಲ್ ಮಂಡಾಡಿಜೆಡ್ಡು.

ಬಿಜೆಪಿಗರು ಸರ್ಕಾರ ಪತನಗೊಳಿಸುವಲ್ಲಿ ನಿಸ್ಸಿಮರು: ಸಚಿವ ಸಂತೋಷ್ ಲಾಡ್

ಉದ್ಯಮಿಗಳಾದ ಗೋಪಿನಾಥ್ ಭಟ್ ಮುನಿಯಾಲು, ಗಣೇಶ್ ಕಿಣಿ, ದಿನೇಶ್ ಪೈ, ಭಾಸ್ಕರ ಜೋಯಿಸ್, ಎಸ್.ಆರ್. ಕಾಲೇಜಿನ ಅಧ್ಯಕ್ಷ ನಾಗರಾಜ ಶೆಟ್ಟಿ, ಹೆಬ್ರಿ ಠಾಣೆ ಠಾಣಾಧಿಕಾರಿ ಮಹೇಶ್ ಟಿ.ಎಂ., ಜವಳಿ ವರ್ತಕರ ಸಂಘ ಅಧ್ಯಕ್ಷ ಯೋಗೇಶ್ ಭಟ್ ಹೆಬ್ರಿ, ಮುದ್ರಾಡಿ ಗ್ರಾ.ಪಂ. ಅಧ್ಯಕ್ಷ ತಾರನಾಥ ಬಂಗೇರ, ಉಡುಪಿ ಕಸಾಪ ಅಧ್ಯಕ್ಷ ರವಿರಾಜ ಎಚ್.ಪಿ. ಉಪಸ್ಥಿತರಿದ್ದರು. ನಿಕಟ ಪೂರ್ವ ಸಮ್ಮೇಳನ ಅಧ್ಯಕ್ಷ ಮುನಿಯಾಲು ಗಣೇಶ್ ಶೆಣೈ, ಸಾಹಿತ್ಯ ಸಮ್ಮೇಳನದ ಧ್ವಜ ಹಸ್ತಾಂತರಿಸಿದರು. ಗುರುಪ್ರಸಾದ್ ಸುಬ್ಬಣ್ಣ ಕಟ್ಟೆ, ಕಜ್ಕೆ ಮಂಜುನಾಥ ಕಾಮತ್, ಅಕ್ಕಮ್ಮ ಕೇಶವ ಶೆಟ್ಟಿಗಾರ್ ಅವರನ್ನು ಅಭಿನಂದಿಸಲಾಯಿತು. ಪ್ರಕಾಶ್ ಪೂಜಾರಿ ಮಾತಿಬೆಟ್ಟು, ಚಂದ್ರ ಶೇಖರ್ ಭಟ್, ಚೈತ್ರ ಕಬ್ಬಿನಾಲೆ ಕಾರ್ಯಕ್ರಮ ನಿರೂಪಿಸಿದರು. ಹೆಬ್ರಿ ಕಸಾಪ ಗೌರವ ಕಾರ್ಯದರ್ಶಿ ಮಂಜುನಾಥ ಕುಲಾಲ್ ವಂದಿಸಿದರು.

click me!