ಮತ್ತೆ ರೆಸಾರ್ಟ್‌ ರಾಜಕಾರಣ ಶುರು: ಕಾದುನೋಡುವ ತಂತ್ರಕ್ಕೆ ಮೊರೆ..!

Kannadaprabha News   | Asianet News
Published : Jan 22, 2021, 12:24 PM ISTUpdated : Jan 22, 2021, 12:29 PM IST
ಮತ್ತೆ ರೆಸಾರ್ಟ್‌ ರಾಜಕಾರಣ ಶುರು: ಕಾದುನೋಡುವ ತಂತ್ರಕ್ಕೆ ಮೊರೆ..!

ಸಾರಾಂಶ

ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ 4 ಸದಸ್ಯರು| ಕೊಪ್ಪಳ ಜಿಲ್ಲೆಯ ಕಬ್ಬರಗಿ ಗ್ರಾಪಂ ಕೆಲವು ಸದಸ್ಯರು| ಕಾರವಾರ ತಾಲೂಕಿನ ಮಲ್ಲಾಪುರ ಸಮೀಪದ ಖಾಸಗಿ ಹೊಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಗ್ರಾಮ ಪಂಚಾಯತ್‌ ಸದಸ್ಯರು| 

ಕಾರವಾರ/ಕೊಪ್ಪಳ(ಜ.22): ಗ್ರಾಪಂ ಅಧಿಕಾರದ ಚುಕ್ಕಾಣಿ ಹಿಡಿಯಲು ರೆಸಾರ್ಟ್‌ ಸಂಸ್ಕೃತಿ ಪ್ರಾರಂಭವಾಗಿದೆ. ಕೊಪ್ಪಳ ಜಿಲ್ಲೆಯ ಕಬ್ಬರಗಿ ಗ್ರಾಪಂ ಕೆಲವು ಸದಸ್ಯರು ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಮೀಸಲಾತಿ ಪ್ರಕಟಿಸುವ ವೇಳೆ ಕಾರವಾರಕ್ಕೆ ಆಗಮಿಸಿದ್ದಾರೆ. 

ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ 4 ಸದಸ್ಯರು ತಮ್ಮ ಬೆಂಬಲಿಗರನ್ನು ತಾಲೂಕಿನ ಗ್ರಾಮೀಣ ಭಾಗಕ್ಕೆ ಕರೆತಂದಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯಲ್ಲಿ ಯಾವ ಮೀಸಲಾತಿ ಬರುತ್ತದೆ ಎನ್ನುವುದನ್ನು ನೋಡಿಕೊಂಡು ಆ ವರ್ಗದ ಆಕ್ಷಾಂಕಿಗೆ ತಮ್ಮ ಬೆಂಬಲ ನೀಡಲಿದ್ದಾರೆ. 

'ಯಡಿಯೂರಪ್ಪ ಲಿಂಗಾಯತರ ದೇವರಾಜು ಅರಸು ಆಗಲಿ'

ಅಧ್ಯಕ್ಷ ಹುದ್ದೆ ಆಕಾಂಕ್ಷಿಗಳು 4, ಬೆಂಬಲಿತರು 10, ಅವರನ್ನು ನೋಡಿಕೊಳ್ಳ 5 ಜನರು ಆಗಮಿಸಿದ್ದು, ತಾಲೂಕಿನ ಮಲ್ಲಾಪುರ ಸಮೀಪದ ಖಾಸಗಿ ಹೊಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ಕಬ್ಬರಗಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಮೀಸಲಾತಿ ಪ್ರಕಟವಾಗುವ ಸಾಧ್ಯತೆಯಿದ್ದು, ಬಳಿಕ ಕಾರವಾರದಿಂದ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
 

PREV
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು