ಮತ್ತೆ ರೆಸಾರ್ಟ್‌ ರಾಜಕಾರಣ ಶುರು: ಕಾದುನೋಡುವ ತಂತ್ರಕ್ಕೆ ಮೊರೆ..!

Kannadaprabha News   | Asianet News
Published : Jan 22, 2021, 12:24 PM ISTUpdated : Jan 22, 2021, 12:29 PM IST
ಮತ್ತೆ ರೆಸಾರ್ಟ್‌ ರಾಜಕಾರಣ ಶುರು: ಕಾದುನೋಡುವ ತಂತ್ರಕ್ಕೆ ಮೊರೆ..!

ಸಾರಾಂಶ

ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ 4 ಸದಸ್ಯರು| ಕೊಪ್ಪಳ ಜಿಲ್ಲೆಯ ಕಬ್ಬರಗಿ ಗ್ರಾಪಂ ಕೆಲವು ಸದಸ್ಯರು| ಕಾರವಾರ ತಾಲೂಕಿನ ಮಲ್ಲಾಪುರ ಸಮೀಪದ ಖಾಸಗಿ ಹೊಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಗ್ರಾಮ ಪಂಚಾಯತ್‌ ಸದಸ್ಯರು| 

ಕಾರವಾರ/ಕೊಪ್ಪಳ(ಜ.22): ಗ್ರಾಪಂ ಅಧಿಕಾರದ ಚುಕ್ಕಾಣಿ ಹಿಡಿಯಲು ರೆಸಾರ್ಟ್‌ ಸಂಸ್ಕೃತಿ ಪ್ರಾರಂಭವಾಗಿದೆ. ಕೊಪ್ಪಳ ಜಿಲ್ಲೆಯ ಕಬ್ಬರಗಿ ಗ್ರಾಪಂ ಕೆಲವು ಸದಸ್ಯರು ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಮೀಸಲಾತಿ ಪ್ರಕಟಿಸುವ ವೇಳೆ ಕಾರವಾರಕ್ಕೆ ಆಗಮಿಸಿದ್ದಾರೆ. 

ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ 4 ಸದಸ್ಯರು ತಮ್ಮ ಬೆಂಬಲಿಗರನ್ನು ತಾಲೂಕಿನ ಗ್ರಾಮೀಣ ಭಾಗಕ್ಕೆ ಕರೆತಂದಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯಲ್ಲಿ ಯಾವ ಮೀಸಲಾತಿ ಬರುತ್ತದೆ ಎನ್ನುವುದನ್ನು ನೋಡಿಕೊಂಡು ಆ ವರ್ಗದ ಆಕ್ಷಾಂಕಿಗೆ ತಮ್ಮ ಬೆಂಬಲ ನೀಡಲಿದ್ದಾರೆ. 

'ಯಡಿಯೂರಪ್ಪ ಲಿಂಗಾಯತರ ದೇವರಾಜು ಅರಸು ಆಗಲಿ'

ಅಧ್ಯಕ್ಷ ಹುದ್ದೆ ಆಕಾಂಕ್ಷಿಗಳು 4, ಬೆಂಬಲಿತರು 10, ಅವರನ್ನು ನೋಡಿಕೊಳ್ಳ 5 ಜನರು ಆಗಮಿಸಿದ್ದು, ತಾಲೂಕಿನ ಮಲ್ಲಾಪುರ ಸಮೀಪದ ಖಾಸಗಿ ಹೊಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ಕಬ್ಬರಗಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಮೀಸಲಾತಿ ಪ್ರಕಟವಾಗುವ ಸಾಧ್ಯತೆಯಿದ್ದು, ಬಳಿಕ ಕಾರವಾರದಿಂದ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
 

PREV
click me!

Recommended Stories

ಬೆಂಗಳೂರಿಂದ ಧರ್ಮಸ್ಥಳ - ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ ವೀಕೆಂಡ್ ಟೂರ್ ಪ್ಯಾಕೇಜ್, ವಿಶೇಷ ಶೀಘ್ರ ದರ್ಶನ!
Mangaluru Railway Updates: ಮಂಗಳೂರು ರೈಲು ಪ್ರಯಾಣಿಕರಿಗೆ ಒಂದು ಕಹಿ, ಒಂದು ಸಿಹಿ ಸುದ್ದಿ! ಜೂ.16ರಿಂದ ಬದಲಾವಣೆ