ರೈಲು ನಿಲ್ದಾಣಕ್ಕೆ ಪೇಜಾವರಶ್ರೀ ಹೆಸರು: ಕೇಂದ್ರ ಸಚಿವರಿಗೆ ಕೋಟ ಶಿಫಾರಸು

Kannadaprabha News   | Asianet News
Published : Jan 14, 2020, 02:03 PM IST
ರೈಲು ನಿಲ್ದಾಣಕ್ಕೆ ಪೇಜಾವರಶ್ರೀ ಹೆಸರು: ಕೇಂದ್ರ ಸಚಿವರಿಗೆ ಕೋಟ ಶಿಫಾರಸು

ಸಾರಾಂಶ

ರೈಲು ನಿಲ್ದಾಣಕ್ಕೆ ‘ಪೇಜಾವರ ರೈಲು ನಿಲ್ದಾಣ’ ಎಂದು ನಾಮಕರಣ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೆ ಸಚಿವರಿಗೆ ಶಿಫಾರಸು ಪತ್ರ ಬರೆದಿದ್ದಾರೆ.

ಮಂಗಳೂರು(ಜ.14): ಕೊಂಕಣ ರೈಲುಮಾರ್ಗ ವ್ಯಾಪ್ತಿಯಲ್ಲಿರುವ ಜೋಕಟ್ಟೆ ರೈಲು ನಿಲ್ದಾಣಕ್ಕೆ ‘ಪೇಜಾವರ ರೈಲು ನಿಲ್ದಾಣ’ ಎಂದು ನಾಮಕರಣ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೆ ಸಚಿವರಿಗೆ ಶಿಫಾರಸು ಪತ್ರ ಬರೆದಿದ್ದಾರೆ.

ಉಡುಪಿ ಪೇಜಾವರ ಮಠದ ಮೂಲಮಠ ಕೆಂಜಾರಿನಲ್ಲಿದ್ದು, ಇಲ್ಲಿರುವ ರೈಲು ನಿಲ್ದಾಣಕ್ಕೆ ಪೇಜಾವರ ಶ್ರೀಗಳ ಹೆಸರಿಡುವಂತೆ ಸ್ಥಳೀಯ ಗ್ರಾಮ ವಾಸಿಗಳು ಹಾಗೂ ರೈಲ್ವೆ ಹೋರಾಟಗಾರರ ಬೇಡಿಕೆಯಂತೆ ಈ ಶಿಫಾರಸು ಪತ್ರವನ್ನು ಸಲ್ಲಿಸಲಾಗಿದೆ.

ಚುಕುಬುಕು ರೈಲಿನಲ್ಲೇ ಕುಳಿತು ಪಾಠ ಕೇಳಲಿದ್ದಾರೆ ಸರ್ಕಾರಿ ಶಾಲೆ ಮಕ್ಕಳು..!

2016ರಲ್ಲಿ ಜೋಕಟ್ಟೆರೈಲು ನಿಲ್ದಾಣ ನಿರ್ಮಾಣವಾದಂದಿನಿಂದಲೂ ಈ ಬೇಡಿಕೆ ಕೇಳಿಬರುತ್ತಿದೆ. ಇದೀಗ ಬೇಡಿಕೆಗೆ ಸ್ಪಂದಿಸಿರುವ ಕೋಟ ಶ್ರೀನಿವಾಸ ಪೂಜಾರಿ ರೈಲ್ವೆ ಸಚಿವರಿಗೆ ಶಿಫಾರಸು ಪತ್ರ ಬರೆದಿದ್ದಾರೆ.

'ಖಾಸಗಿ ರೈಲು ಅಪಘಾತಕ್ಕೀಡಾದರೆ ರೈಲ್ವೆ ಪರಿಹಾರ ಇಲ್ಲ'

PREV
click me!

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ
ಉಡುಪಿಯಲ್ಲಿ ಮಿನಿ ಕುಂಭ.. ಶ್ರೀಲ ಪ್ರಭುಪಾದರಿಗೆ 'ವಿಶ್ವಗುರು' ಗೌರವ: ಪುತ್ತಿಗೆ ಮಠದಲ್ಲಿ ಐತಿಹಾಸಿಕ ಕ್ಷಣ