ಬಿಜೆಪಿಯಲ್ಲೂ ಮೂರು ಗುಂಪುಗಳು: ಜಾರಕಿಹೊಳಿ ಬಾಂಬ್‌..!

Kannadaprabha News   | Asianet News
Published : Nov 08, 2020, 02:22 PM ISTUpdated : Nov 08, 2020, 02:31 PM IST
ಬಿಜೆಪಿಯಲ್ಲೂ ಮೂರು ಗುಂಪುಗಳು: ಜಾರಕಿಹೊಳಿ ಬಾಂಬ್‌..!

ಸಾರಾಂಶ

ಪ್ರತಿಯೊಬ್ಬರು ತಮ್ಮ ನಾಯಕತ್ವದಲ್ಲಿ ಇರಲಿದ್ದಾರೆ. ಆದರೆ, ಪಕ್ಷ ಎಂದು ಬಂದಾಗ ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಾರೆ. ಶಿರಾ, ಆರ್‌ಆರ್‌ ನಗರ ಎರಡೂ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದ ಸತೀಶ್‌ ಜಾರಕಿಹೊಳಿ

ಬೆಳಗಾವಿ(ನ.08): ಎಲ್ಲ ಪಕ್ಷಗಳಲ್ಲಿಯೂ ಗುಂಪುಗಾರಿಕೆ ಇದ್ದೆ ಇರುತ್ತದೆ. ಅದೇನು ಹೊಸದಲ್ಲ. ಬಿಜೆಪಿಯಲ್ಲಿಯೂ ಮೂರು ಗುಂಪುಗಳಿವೆ. ದೆಹಲಿಯಲ್ಲಿ ಒಂದು, ಕರ್ನಾಟಕದಲ್ಲಿ ಎರಡು ಗುಂಪುಗಳಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. 

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರು ತಮ್ಮ ನಾಯಕತ್ವದಲ್ಲಿ ಇರಲಿದ್ದಾರೆ. ಆದರೆ, ಪಕ್ಷ ಎಂದು ಬಂದಾಗ ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಾರೆ. ಶಿರಾ, ಆರ್‌ಆರ್‌ ನಗರ ಎರಡೂ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದರು.

'ಸಿಎಂ ಬದಲಾವಣೆ ಸಾಧ್ಯವಿಲ್ಲ, ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ'

ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ:

ಹತ್ಯೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿರುವುದು ರಾಜಕೀಯ ಪ್ರೇರಿತವಾಗಿದೆ. ವಿನಯ್‌ ಕುಲಕರ್ಣಿ ಅವರನ್ನು ಬಿಜೆಪಿಯವರು ಮೊದಲಿನಿಂದಲೂ ಗುರಿಯಾಗಿಸಿಕೊಂಡು ಬಂದಿದ್ದರು. ಅವರು ಈಗ ಯಶಸ್ವಿಯಾಗಿದ್ದಾರೆ. ಆದರೆ, ಈ ವಿಚಾರವಾಗಿ ಆರೋಪ ಮಾಡುವುದರಿಂದ ಏನೂ ಪ್ರಯೋಜನವಿಲ್ಲ. ಈ ವಿಚಾರದಲ್ಲಿ ಕೋರ್ಟ್‌ ತೀರ್ಪು ಅಂತಿಮವಾಗಿರುತ್ತದೆ ಎಂದು ಹೇಳಿದರು.
 

PREV
click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ