ಗ್ರಾಮ ಪಂಚಾಯತ್ ಅಧ್ಯಕ್ಷ ಕೋವಿಡ್‌ಗೆ ಬಲಿ

By Kannadaprabha NewsFirst Published May 5, 2021, 7:44 AM IST
Highlights

ಕೊರೋನಾ ಮಹಾಮಾರಿ ಅಟ್ಟಹಾಸ ದಿನದಿಂದ ದಿನಕ್ಕೆ ಎರಿಕೆಯಾಗುತ್ತಲೇ ಇದ್ದು  ಸಾವು ನೋವುಗಳು ಏರಿಕೆಯಾಗುತ್ತಿದೆ. ಮಂಡ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರೋರ್ವರು ಕೋವಿಡ್‌ಗೆ ಬಲಿಯಾಗಿದ್ದಾರೆ. 

ಕೆ.ಆರ್‌.ಪೇಟೆ (ಮೇ.05): ಕೊರೋನಾ ಸೋಂಕಿನಿಂದ ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಬಳ್ಳೇಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್‌.ವಿ.ವೆಂಕಟರಾಮು(45) ಸಾವನ್ನಪ್ಪಿದ್ದಾರೆ.

ಕಳೆದ 5-6 ದಿನಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದ ವೆಂಕಟರಾಮು ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿಗೆ ಕಳುಹಿಸಲು ಏರ್ಪಾಡು ಮಾಡಲಾಗಿತ್ತು.

ಮಂಗಳೂರು : ಏಳು ತಿಂಗಳ ಗರ್ಭಿಣಿ ವೈದ್ಯೆ ಕೋವಿಡ್‌ಗೆ ಬಲಿ ...

 ಆದರೆ, ಮೈಸೂರಿಗೆ ಹೋಗುವಷ್ಟರಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ನಾರ್ಗೊನಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆಯಿತು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!