ತುಮಕೂರು: ಬಸ್‌ನಲ್ಲಿದ್ದ ಮಹಿಳೆಗೆ ಉಸಿರಾಟ ಸಮಸ್ಯೆ, ಆಸ್ಪತ್ರೆಗೆ ದಾಖಲಿಸಿ ಕರುಣಾಮಯಿಯಾದ ಕೆಎಸ್ಆರ್‌ಟಿಸಿ ಸಿಬ್ಬಂದಿ

Published : Oct 28, 2023, 11:28 AM IST
ತುಮಕೂರು: ಬಸ್‌ನಲ್ಲಿದ್ದ ಮಹಿಳೆಗೆ ಉಸಿರಾಟ ಸಮಸ್ಯೆ, ಆಸ್ಪತ್ರೆಗೆ ದಾಖಲಿಸಿ ಕರುಣಾಮಯಿಯಾದ ಕೆಎಸ್ಆರ್‌ಟಿಸಿ ಸಿಬ್ಬಂದಿ

ಸಾರಾಂಶ

ಕೆಎಸ್ಆರ್‌ಟಿಸಿ ಬಸ್‌ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿದ್ದ ಸುಮಾರು 47 ವರ್ಷದ ಮಹಿಳೆಗೆ ಶ್ವಾಸಕೋಶದ ಸಮಸ್ಯೆಯಿಂದ ಉಸಿರಾಟದಲ್ಲಿ ಏರುಪೇರು ಆಗಿತ್ತು. ಇದನ್ನ ಕಂಡ ಚಾಲಕ ಶಾಂತಪ್ಪ ಅವರು ಮಹಿಳೆಯನ್ನ ಕೂಡಲೇ ಆಸ್ಪತ್ರೆ ದಾಖಲಿಸಿ ಮಾನವೀಯತೆ ಮರೆದಿದ್ದಾರೆ.  

ತುಮಕೂರು(ಅ.28):  ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ಕೆಎಸ್ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಕರುಣಾಮಯಿಯಾಗಿದ್ದಾರೆ. ಹೌದು, ಕೆಎಸ್ಆರ್‌ಟಿಸಿ ಬಸ್‌ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿದ್ದ ಸುಮಾರು 47 ವರ್ಷದ ಮಹಿಳೆಗೆ ಶ್ವಾಸಕೋಶದ ಸಮಸ್ಯೆಯಿಂದ ಉಸಿರಾಟದಲ್ಲಿ ಏರುಪೇರು ಆಗಿತ್ತು. 

ಇದನ್ನ ಕಂಡ ಚಾಲಕ ಶಾಂತಪ್ಪ ಅವರು ಕೂಡಲೇ ಆಸ್ಪತ್ರೆಯತ್ತ ಬಸ್ ಚಲಾಯಿಸಿದ್ದರು. ತುಮಕೂರಿನ ಶಿರಾ ಗೇಟ್ ಸಮೀಪದ ಶ್ರೀದೇವಿ ಆಸ್ಪತ್ರೆಗೆ ಮಹಿಳೆಯನ್ನ ದಾಖಲಿಸಿ ಚಾಲಕ ಮತ್ತು ನಿರ್ವಾಹಕ ಮಾನವೀಯತೆ ಮೆರೆದಿದ್ದಾರೆ. 

ಹುಲಿ ಉಗುರು ಪ್ರಕರಣ; ತುಮಕೂರಿನ ಮತ್ತೊಬ್ಬ ಸ್ವಯಂಘೋಷಿತ ಗುರೂಜಿಗೆ ಸಂಕಷ್ಟ!

ನಿನ್ನೆ ತಡರಾತ್ರಿ ಘಟನೆ ನಡೆದಿದೆ. ಬಸ್ ಚಾಲಕ ಮತ್ತು ನಿರ್ವಾಹಕನ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ‌ ವ್ಯಕ್ತಪಡಿಸಿದ್ದಾರೆ. 

PREV
Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!