ಧಾರವಾಡ: ಕೂಡಲೇ ಯುದ್ಧ ಘೋಷಣೆ ಮಾಡಿ, ರಕ್ತದಲ್ಲಿ ಮೋದಿಗೆ ಪತ್ರ ಬರೆದ ಯುವಕ

Published : Feb 16, 2019, 07:21 PM IST
ಧಾರವಾಡ: ಕೂಡಲೇ ಯುದ್ಧ ಘೋಷಣೆ ಮಾಡಿ, ರಕ್ತದಲ್ಲಿ ಮೋದಿಗೆ ಪತ್ರ ಬರೆದ ಯುವಕ

ಸಾರಾಂಶ

ಪಲ್ವಾಮಾದಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತಿ ದಾಳಿ ಆಗಲೇಬೇಕೆನ್ನುತ್ತಿರುವ ಭಾರತೀಯರ ರಕ್ತ ಕೊತ ಕೊತ ಅಂತ ಕುದಿಯುತ್ತಿದೆ. ಸೇಡಿಗೆ ಸೇಡು ಆಗಬೇಕೆಂದು ಭಾರತೀಯ ಕೂಗಾಗಿದೆ. ಇಲ್ಲೊಬ್ಬ ಯುವಕ  ರಕ್ತದಲ್ಲಿಯೇ ಪ್ರಧಾನಿಗೆ ಪತ್ರ ಬರೆದು ತನ್ನ ಆಕ್ರೋಶ ಹೊರಹಾಕಿದ್ದಾನೆ.

ಧಾರವಾಡ, [ಫೆ.16]:  ಜಮ್ಮು ಕಾಶ್ಮೀರದ ಪುಲ್ವಾಮ್ ದಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಹುತಾತ್ಮರಾದ ಯೋಧರಿಗಾಗಿ ನಾವು ನಮ್ಮ ರಕ್ತ ಹರಿಸಲು ಕೂಡ ಸಿದ್ದ ಎಂದು ಕುಂದಗೋಳದ ಯುವಕನೊಬ್ಬ ಪ್ರಧಾನಮಂತ್ರಿಗೆ ಪತ್ರ ಬರೆದಿದ್ದಾರೆ.

ರಾಯಚೂರಲ್ಲಿ ಬಣ್ಣ ಎರಚಿ, ಪಟಾಕಿ ಸಿಡಿಸಿ ಉಗ್ರ ದಾಳಿ ಸಂಭ್ರಮಿಸಿದ ಯುವಕರು

'ಮೂದಿಜೀಯವರೇ ಅವಶ್ಯಕತೆ ಬಿದ್ದರೆ ನಮ್ಮ ರಕ್ತ ಹರಿಸಲು ನಾವು ಸಿದ್ದ. ಯೋಧರ ಪ್ರಾರ್ಥೀವ ಶರೀರ ಕಂಡು ನಮ್ಮ ರಕ್ತ ಕುದಿಯುತ್ತಿದೇ. ಪಾಪಿ ಪಾಕಿಸ್ತಾನದ ರುಂಡ ಚಂಡಾಡಿ ಪ್ರತೀಕಾರ ತೀರಿಸಿಕೊಳ್ಳುವರಿಗೂ ನಮಗೆ  ಸಮಾಧಾನವಿಲ್ಲಾ. ಕೂಡಲೇ ಯುದ್ಧ ಘೋಷಣೆ ಮಾಡಿ' ಎಂದು  ರಕ್ತದಲ್ಲಿಯೇ ಪತ್ರ ಬರೆದು ತನ್ನ ದೇಶಾಭೀಮಾನ ಮೆರೆದಿದ್ದಾನೆ.

ಯೋಧರಿಗೆ ನಮನ ಸಲ್ಲಿಸುವಾಗಲೆ ಹಾವೇರಿಯಲ್ಲಿ ಪಾಕ್ ಪರ ಘೋಷಣೆ!

ತನ್ನ ರಕ್ತದಲ್ಲಿ ಪತ್ರ ಬರೆದು ಪ್ರಧಾನ ಮಂತ್ರಿಗಳ ಕಚೇರಿಗೆ ರವಾನೆ ಮಾಡಿದ್ದಾನೆ. ಅಂದ ಹಾಗೆ ಈ ಪತ್ರ ಬರೆದ ಯುವಕನ ಹೆಸರು ಗಿರೀಶಗೌಡ  ಎನ್ ಮುದೀಗೌಡರ. ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಯುವ ಹೋರಾಟಗಾರ.

ತನ್ನ ಸಾಮಾಜಿಕ ಕಾಳಜಿ, ಹೋರಾಟದಿಂದಲೇ ಜಿಲ್ಲೆಯ ಮನೆ ಮಾತಾಗಿರುವ ಗಿರೀಶಗೌಡರ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

PREV
click me!

Recommended Stories

ಉಂಡಿ ತಿಂದು ಜೋಕಾಲಿ ಜೀಕಿದ ಮಹಿಳೆಯರು; ಜಾನಪದ ಸಂಶೋಧನಾ ಸಂಸ್ಥೆಯಿಂದ ಹಬ್ಬದ ಸಂಭ್ರಮ
Khadi and Village Industries: ನಲುಗಿದ ಖಾದಿ ಗ್ರಾಮೋದ್ಯೋಗ, ಬೀದಿಗೆ ಬಿದ್ದ ಕಾರ್ಮಿಕರು: ₹150 ಕೋಟಿ ಪ್ರೋತ್ಸಾಹಧನ ನೀಡದೆ ಸತಾಯಿಸುತ್ತಿರುವ ಸರ್ಕಾರ!