ಸುಮಲತಾಗೆ ರಾಜಕೀಯ ಅನುಭವ ಇಲ್ಲ : ನಿಖಿಲ್

Kannadaprabha News   | Asianet News
Published : Jul 09, 2021, 07:47 AM ISTUpdated : Jul 09, 2021, 08:01 AM IST
ಸುಮಲತಾಗೆ ರಾಜಕೀಯ ಅನುಭವ ಇಲ್ಲ : ನಿಖಿಲ್

ಸಾರಾಂಶ

ಸಂಸದೆ ಸುಮಲತಾ ಅವರಿಗೆ ರಾಜಕೀಯವಾಗಿ ಅನುಭವದ ಕೊರತೆ ಟೀಕಿಸುವುದನ್ನು ಬಿಟ್ಟು ಮೊದಲು ಮಂಡ್ಯ ಜನರ ಋುಣ ತೀರಿಸಲಿ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಕೋಲಾರ (ಜು.09): ಸಂಸದೆ ಸುಮಲತಾ ಅವರಿಗೆ ರಾಜಕೀಯವಾಗಿ ಅನುಭವದ ಕೊರತೆಯಿದೆ. ಅವರು ವೈಯಕ್ತಿಕ ಲಾಭಕ್ಕೆ ಟೀಕಿಸುವುದನ್ನು ಬಿಟ್ಟು ಮೊದಲು ಮಂಡ್ಯ ಜನರ ಋುಣ ತೀರಿಸಲಿ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

ತಾಲೂಕಿನ ಕೊಂಡರಾಜನಹಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಆರ್‌ಎಸ್‌ ಜಲಾಶಯ ಬಿರುಕು ಬಿಟ್ಟಿದ್ದರೆ ಆ ಬಗ್ಗೆ ತಾಂತ್ರಿಕ ಸಮಿತಿ ಅಥವಾ ಸರ್ಕಾರ ಉತ್ತರ ಕೊಡಲಿ.

ನಿಮ್ಮ ರಾಜಕಾರಣದ ಡ್ರಾಮಾ ಇನ್ಮುಂದೆ ನಡೆಯಲ್ಲ: ಎಚ್‌ಡಿಕೆಗೆ ಸುಮಲತಾ ತಿರುಗೇಟು . 

ಆದರೆ, ಸುಮಲತಾ ಅವರು ಕೆಆರ್‌ಎಸ್‌ ಡ್ಯಾಂ ಬಿರುಕು ಬಿಟ್ಟಿದೆ ಎಂದು ಗೊಂದಲ ಸೃಷ್ಟಿಸುವುದು ಸರಿಯಲ್ಲ. ಜಲಾಶಯದ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಎಷ್ಟೇ ಪ್ರಭಾವಿಗಳಾದರೂ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಹೇಳಿದರು.

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು