
ಗದಗ: ಬಹುದಿನಗಳ ಬೇಡಿಕೆಯಾಗಿರುವ ಗದಗ-ಯಲವಿಗಿ ರೈಲು ಮಾರ್ಗ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕಾಮಗಾರಿಗೆ ವೇಗ ನೀಡಬೇಕು ಎಂದು ಗುರುವಾರ ಶಿರಹಟ್ಟಿ ಫಕೀರೇಶ್ವರ ಮಠದಲ್ಲಿ ನೂತನ ಸಭಾಪತಿ ಜಿ.ಎಸ್. ಪಾಟೀಲ ಅವರಿಗೆ ಗದಗ-ಶಿರಹಟ್ಟಿ-ಯಲವಿಗಿ ರೈಲ್ವೆ ಮಾರ್ಗ ಹೋರಾಟ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ವೇಳೆ ರೈಲ್ವೆ ಮಾರ್ಗ ಹೋರಾಟ ಸಮಿತಿ ಅಧ್ಯಕ್ಷ ಈರಣ್ಣ ಕೋಟಿ ಹಾಗೂ ಉಪಾಧ್ಯಕ್ಷ ರಾಯೇಸಾಬ್ ಢಾಲಯತ ಮಾತನಾಡಿ, 2021-22ನೇ ಸಾಲಿನ ಬಜೆಟ್ನಲ್ಲಿ ಅಂದಿನ ಮುಖ್ಯಮಂತ್ರಿಗಳು ಗದಗ ಯಲವಿಗಿ ರೈಲು ಮಾರ್ಗ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಗೆ ಅನುಮೋದನೆ ಘೋಷಿಸಿದ್ದರು. ಆದರೆ ಆರ್ಥಿಕ ಅನುಮೋದನೆ ದೊರೆತು 4-5 ವರ್ಷಗಳೆ ಗತಿಸಿದರೂ ಭೂ ಸ್ವಾಧೀನ ಪ್ರಕ್ರಿಯೆ ಕಾರ್ಯರೂಪಕ್ಕೆ ಬಂದಿಲ್ಲ. ಕಾರಣ ತಮ್ಮ ಅನುಭವ ಮತ್ತು ಮಾರ್ಗದರ್ಶನದ ಮೂಲಕ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಯೋಜನೆ ಅನುಷ್ಠಾನದ ಅಗತ್ಯತೆ ಮನವರಿಕೆ ಮಾಡಿಕೊಡುವ ಮೂಲಕ ಈ ಭಾಗದ ಜನರ ದಶಕಗಳ ಆಸೆಗೆ ಕಾರ್ಯರೂಪ ನೀಡಬೇಕು ಎಂದರು.
ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳದಿರುವುದರಿಂದ ಕಾಮಗಾರಿಯ ಪ್ರಗತಿಗೆ ಅಡಚಣೆಯಾಗುತ್ತಿದೆ. ಭೂಮಿಯನ್ನು ತ್ವರಿತವಾಗಿ ಸ್ವಾಧೀನಪಡಿಸಿಕೊಂಡು, ಭೂಮಾಲೀಕರಿಗೆ ನಿಯಮಾನುಸಾರ ಪರಿಹಾರ ಒದಗಿಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ..
ಇದನ್ನೂ ಓದಿ: ತದಡಿ-ಅಘನಾಶಿನಿ ಬಾರ್ಜ್ನ ಪ್ರಯಾಣದ ದರ ಪಟ್ಟಿ ಅಳವಡಿಸಲು ಸಿದ್ಧತೆ; ಪ್ರಯಾಣಿಕರಲ್ಲಿ ಗೊಂದಲ
ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಮುಖಂಡರಾದ ವಿ.ವಿ. ಕಪ್ಪತ್ತನವರ, ಹುಮಾಯೂನ ಮಾಗಡಿ, ಸಿ.ಸಿ. ನೂರಶೆಟ್ಟರ, ಬಾಬಣ್ಣ ಮುಂಡವಾಡ, ಡಾ. ಸುನೀಲ ಬುರಬುರೆ ಹಾಗೂ ರೈಲು ಮಾರ್ಗ ಹೋರಾಟ ಸಮಿತಿ ಸದಸ್ಯರು ಇದ್ದರು.
ಇದನ್ನೂ ಓದಿ: ಬಿ ನಾಗೇಂದ್ರ ರಾಜೀನಾಮೆ ಆಯ್ತು, ಕೆಪಿಎಸ್ಸಿ ಎಇಇ ನೇಮಕಾತಿ ಹಗರಣದಲ್ಲಿ ಈಗ ಪ್ರಿಯಾಂಕ್ ಖರ್ಗೆ ಸರದಿ! ಹೆಚ್ಡಿಕೆ ಗಂಭೀರ ಆರೋಪ!