ನವಲಗುಂದದಲ್ಲಿ ನಿರಂತರ ಮಳೆಗೆ ಭೂಕುಸಿತ: ಆತಂಕದಲ್ಲಿ ಜನತೆ

Kannadaprabha News   | Asianet News
Published : Oct 14, 2020, 11:14 AM IST
ನವಲಗುಂದದಲ್ಲಿ ನಿರಂತರ ಮಳೆಗೆ ಭೂಕುಸಿತ: ಆತಂಕದಲ್ಲಿ ಜನತೆ

ಸಾರಾಂಶ

ಖುಲ್ಲಾ ಜಾಗೆಯಲ್ಲಿ ಭೂಕುಸಿತ| ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದ ಘಟನೆ| ಕಳೆದ ನಾಲ್ಕಾರು ದಿನಗಳಿಂದ ನಿರಂತರ ಮಳೆ, ಇದರಿಂದಾಗಿ ಭೂಕುಸಿದಿರಬಹುದು ಎಂಬ ಶಂಕೆ| 

ನವಲಗುಂದ(ಅ.14):  ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ರಾಮದೇವರ ಗುಡಿ ಓಣಿಯ ಖುಲ್ಲಾ ಜಾಗೆಯಲ್ಲಿ ಭೂಕುಸಿತವಾಗಿದೆ. ಇದರಿಂದ ಸುತ್ತಮುತ್ತಲಿನ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.

ಲೀಲಾ ಮದ್ವರಾಯನವರ ಎಂಬವರ ಮನೆಯ ಪಕ್ಕದಲ್ಲಿನ ಖುಲ್ಲಾ ಜಾಗೆಯಲ್ಲಿ ಏಕಾಏಕಿ ಮಂಗಳವಾರ ಸಂಜೆ ಭೂಕುಸಿತಗೊಂಡಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಎದುರಾಗಿದೆ.  

ನರಗುಂದದಲ್ಲಿ ನಿಲ್ಲದ ಭೂಕುಸಿತ: ಆತಂಕದಲ್ಲಿ ಜನತೆ

ಕಳೆದ ನಾಲ್ಕಾರು ದಿನಗಳಿಂದ ಆಗಾಗ ನಿರಂತರವಾಗಿ ಮಳೆ ಸುರಿಯುತ್ತಿತ್ತು. ಇದರಿಂದಾಗಿ ಭೂಕುಸಿದಿರಬಹುದು ಎಂದು ಶಂಕಿಸಲಾಗಿದೆ. ಆದರೆ ಭೂಕುಸಿತದಿಂದಾಗಿ ಪಕ್ಕದ ಮನೆಯ ಗೋಡೆಯೂ ಹಾನಿಗೊಳಗಾಗಬಹುದೆಂಬ ಆತಂಕ ಶುರುವಾಗಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಕಳೆದೊಂದು ವರ್ಷದಲ್ಲಿ ಸಾಕಷ್ಟು ಬಾರಿ ಭೂಕುಸಿತಗಳು ಉಂಟಾಗುತ್ತಿವೆ. 
 

PREV
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ