ಹಾಸನ: ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತ, ಬೆಂಗಳೂರು- ಮಂಗಳೂರು ರೈಲು ಸಂಚಾರ ಬಂದ್..!

By Girish GoudarFirst Published Jul 26, 2024, 10:53 PM IST
Highlights

ಬೆಂಗಳೂರು-ಹಾಸನ-ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರವನ್ನ ಬಂದ್ ಮಾಡಲಾಗಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ರೈಲ್ವೆ ಇಲಾಖೆ ಅಧಿಕಾರಿಗಳು ರೈಲು ಮಾರ್ಗ ಬದಲಿಸಿದ್ದಾರೆ. 

ಹಾಸನ(ಜು.26):  ಮಲೆನಾಡು ‌ಭಾಗದಲ್ಲಿ ವರುಣನ ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾದ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಕಡಗರವಳ್ಳಿ-ಯಡಕುಮರಿ ಮಧ್ಯೆ ಇಂದು(ಶುಕ್ರವಾರ) ನಡೆದಿದೆ. 

ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದಿದ್ದರಿಂದ ಈ ಮಾರ್ಗದ ಎಲ್ಲಾ ರೈಲುಗಳ‌ ಸಂಚಾರ ಬಂದ್ ಮಾಡಲಾಗಿದೆ. ಕಿಲೋಮೀಟರ್ ನಂಬರ್ 63 ರಲ್ಲಿ ರೈಲ್ವೆ ಹಳಿಯ ಮೇಲೆ‌ ಮಣ್ಣು ಕುಸಿದಿದೆ. 

Latest Videos

ಚಿಕ್ಕಮಗಳೂರು: ಭಾರೀ ಮಳೆಗೆ ಧರೆಗುರುಳಿದ ಬೃಹತ್‌ ಮರ, ಪವಾಡ ಸದೃಶ ರೀತಿಯಲ್ಲಿ ಚಾಲಕರು ಪಾರು..!

ಬೆಂಗಳೂರು-ಹಾಸನ-ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರವನ್ನ ಬಂದ್ ಮಾಡಲಾಗಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ರೈಲ್ವೆ ಇಲಾಖೆ ಅಧಿಕಾರಿಗಳು ರೈಲು ಮಾರ್ಗ ಬದಲಿಸಿದ್ದಾರೆ. 

click me!