ಬನ್ನೇರುಘಟ್ಟ ಸಫಾರಿ ಬಸ್‌ನ ಕಿಟಕಿ ಹಿಡಿದು ನೇತಾಡಿದ ಚಿರತೆ: ಕಕ್ಕಾಬಿಕ್ಕಿಯಾದ ಪ್ರವಾಸಿಗರು!

Published : Oct 08, 2024, 07:49 AM IST
ಬನ್ನೇರುಘಟ್ಟ ಸಫಾರಿ ಬಸ್‌ನ ಕಿಟಕಿ ಹಿಡಿದು ನೇತಾಡಿದ ಚಿರತೆ: ಕಕ್ಕಾಬಿಕ್ಕಿಯಾದ ಪ್ರವಾಸಿಗರು!

ಸಾರಾಂಶ

ಒಂದು ಚಿರತೆ ಬಸ್ ಮೇಲೆ ಏರಿ ಕಿಟಕಿಗಳಲ್ಲಿ ಪ್ರವಾಸಿಗರನ್ನು ನೋಡಿ ಗುರ್ ಎಂದಿದೆ. ನಂತರ ಚಾಲಕ ಬಸ್ಸನ್ನು ನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆ ಬಸ್‌ನಿಂದ ಕೆಳಕ್ಕೆ ಹಾರಿ ಹೋಗಿದೆ. ಚಿರತೆಗಳು ಬಸ್, ಜೀಪ್ ಬಳಿ ಬರುವುದು, ಕೆಲವು ಬಾರಿ ಬಸ್, ಜೀಪ್‌ಗಳ ಮೇಲೆ ಹತ್ತುವುದು ಸಾಮಾನ್ಯವಾಗಿದ್ದು, ಇನ್ನೊಂದು ವ್ಯಾನ್‌ನಲ್ಲಿದ್ದ ಪ್ರವಾಸಿಗರು ಚಿತರೆ ಬಸ್‌ ಮೇಲೆ ಎಗರುವ ಫೋಟೋ ಕ್ಲಿಕ್ಕಿಸಿದ್ದಾರೆ.

ಬೆಂಗಳೂರು ದಕ್ಷಿಣ(ಅ.08):  ಸಫಾರಿಗೆ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್‌ನ ಮೇಲೆ ಚಿರತೆ ಏರಲು ಪ್ರಯತ್ನ ನಡೆಸಿದ ಪರಿಣಾಮ ಪ್ರವಾಸಿಗರು ಕೆಲಕಾಲ ಆತಂಕಕ್ಕೀಡಾದ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಡೆದಿದೆ.

ಸಫಾರಿಯಲ್ಲಿ ಇತ್ತೀಚಿಗೆ ವಿಶಾಲವಾದ ತೆರೆದ ಆವರಣದಲ್ಲಿ ಚಿರತೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.19 ಚಿರತೆಗಳಿಗೆ ಆಶ್ರಯ ನೀಡಿ ಪ್ರತಿ ದಿನ 4 ಅಥವಾ 5 ಚಿರತೆಗಳನ್ನು ಒಂದೊಂದು ತಂಡವನ್ನಾಗಿಸಿ ಸಫಾರಿಯಲ್ಲಿ ಪ್ರವಾಸಿಗರ ವೀಕ್ಷಣೆಗೆ ಬಿಡಲಾಗುತ್ತಿತ್ತು.

ಭದ್ರಾ ವನ್ಯಜೀವಿ ಅಭಯಾರಣ್ಯಕ್ಕೆ 25ರ ಸಂಭ್ರಮ: ಹುಲಿ, ಆನೆಗಳ ಎಷ್ಟಿದೆ ಗೊತ್ತಾ?

ಒಂದು ಚಿರತೆ ಬಸ್ ಮೇಲೆ ಏರಿ ಕಿಟಕಿಗಳಲ್ಲಿ ಪ್ರವಾಸಿಗರನ್ನು ನೋಡಿ ಗುರ್ ಎಂದಿದೆ. ನಂತರ ಚಾಲಕ ಬಸ್ಸನ್ನು ನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆ ಬಸ್‌ನಿಂದ ಕೆಳಕ್ಕೆ ಹಾರಿ ಹೋಗಿದೆ. ಚಿರತೆಗಳು ಬಸ್, ಜೀಪ್ ಬಳಿ ಬರುವುದು, ಕೆಲವು ಬಾರಿ ಬಸ್, ಜೀಪ್‌ಗಳ ಮೇಲೆ ಹತ್ತುವುದು ಸಾಮಾನ್ಯವಾಗಿದ್ದು, ಇನ್ನೊಂದು ವ್ಯಾನ್‌ನಲ್ಲಿದ್ದ ಪ್ರವಾಸಿಗರು ಚಿತರೆ ಬಸ್‌ ಮೇಲೆ ಎಗರುವ ಫೋಟೋ ಕ್ಲಿಕ್ಕಿಸಿದ್ದಾರೆ.

PREV
Read more Articles on
click me!

Recommended Stories

Exclusive Interview: ಜೀವನದ ದಿಕ್ಕೇ ಬದಲಿಸಿ 'ಮಿಸ್​ ಯೂನಿವರ್ಸ್​ ಕರ್ನಾಟಕ' ಪಟ್ಟ ಕೊಟ್ಟ ಆ ಗಾಯ
ಕಾಂಗ್ರೆಸ್‌ ವಿರುದ್ಧ ಮುಸ್ಲಿಂ ಸಂಘಟನೆಗಳ ಆಕ್ರೋಶ, ಜಂಟಿ ಹೇಳಿಕೆಯಲ್ಲಿ 'ಕೈ'ಗೆ ಎಚ್ಚರಿಕೆ, ಮುಂದಿನ ನಡೆ ಏನು?