ಅಂಗಳದಲ್ಲಿ ಕಟ್ಟಿದ ಹಸು ಹೊತ್ತೊಯ್ದ ಚಿರತೆ

Published : Aug 06, 2018, 01:30 PM IST
ಅಂಗಳದಲ್ಲಿ ಕಟ್ಟಿದ ಹಸು ಹೊತ್ತೊಯ್ದ ಚಿರತೆ

ಸಾರಾಂಶ

ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹಲವೆಡೆ ಚಿರತೆ ದಾಳಿ ಮಿತಿ ಮೀರುತ್ತಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇದೀಗ ಮತ್ತೊಂದು ಹಸುವನ್ನು ಚಿರತೆ ಹಿಡಿದಿದ್ದು, ಕೂಡಲೇ ಈ ಚಿರತೆಯನ್ನು ತಕ್ಷಣವೇ ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕೆಆರ್ ಪೇಟೆ: ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಮನೆಯಂಗಳದಲ್ಲಿ ಕಟ್ಟಿದ ಹಸುವೊಂದನ್ನು ಚಿರತೆಯೊಂದು ಎಳೆದೊಯ್ದಿದೆ.

ಹಸುವಿನ ಕಳೇಬರ ಸಮೀಪದ ಜಮೀನಿನಲ್ಲಿ ಪತ್ತೆಯಾಗಿದ್ದು, ತಾಲೂಕಿನ ಸಂತೆಬಾಚಹಳ್ಳಿ ಹೋಬಳಿಯ ಗೊರವಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಹರಿಗೌಡರ ಮಗ ಬಲರಾಮೇಗೌಡರಿಗೆಗೆ ಸೇರಿದ ಹಸುವಿದೆ.

ತೋಟದ ಮನೆಯಲ್ಲಿ ಬಲರಾಮೇಗೌಡರ ಕುಟುಂಬ ವಾಸಿಸುತ್ತಿದ್ದು, ರಾತ್ರಿ ಹಸುವನ್ನು ಮನೆಯ ಹೊರ ಭಾಗದಲ್ಲಿಕಟ್ಟಿ ಹಾಕಿದ್ದರು. ರಾತ್ರಿ 12ರ ಸಮಯದಲ್ಲಿ ಹಸುವಿನ ಆಕ್ರಂದನ ಕೇಳಿದ್ದರೂ, ಭಯಗೊಂಡ ಕುಟುಂಬ ಮನೆಯಿಂದ ಹೊರಬಂದು ನೋಡುವ ಧೈರ್ಯ ಮಾಡಲಿಲ್ಲ. ಬೆಳಗ್ಗೆ ಎದ್ದು ನೋಡಿದರೆ, ಹಸುವನ್ನು ಚಿರತೆ ತಿಂದುಹಾಕಿತ್ತು.

ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ಚಿರತೆಯನ್ನು ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಮನವಿ ಮಾಡಿದ್ದಾರೆ.

PREV
click me!

Recommended Stories

ರೈತರಿಗೆ ಹೆಣ್ಣು ಸಿಗ್ತಿಲ್ಲ; ಬಾಸಿಂಗ ತೊಟ್ಟು, ತಾಂಬೂಲ ಹಿಡಿದು ಡಿಸಿ ಆಫೀಸಿಗೆ ಹೆಣ್ಣು ಕೇಳಲು ಬಂದ ಯುವಕರು!
ಮೈಸೂರು, ಮಂಡ್ಯದಲ್ಲಿ ಬಾಲ್ಯ ವಿವಾಹಕ್ಕೆ ಗಣನೀಯ ಇಳಿಕೆ, ಸರ್ಕಾರದಿಂದ ಸಿಕ್ಕಿತು ನೆಮ್ಮದಿಯ ಸುದ್ದಿ