ರಾಮನಗರ: ಮಾಗಡಿಯಲ್ಲಿ ಬೋನಿಗೆ ಬಿದ್ದ 10ನೇ ಚಿರತೆ

Kannadaprabha News   | Asianet News
Published : May 22, 2020, 03:19 PM IST
ರಾಮನಗರ: ಮಾಗಡಿಯಲ್ಲಿ ಬೋನಿಗೆ ಬಿದ್ದ 10ನೇ ಚಿರತೆ

ಸಾರಾಂಶ

ಗಂಗಮ್ಮ ಎಂಬ ವೃದ್ಧೆಯನ್ನು ಚಿರತೆ ಹೊತ್ತು ಕೊಂಡು ಹೋಗಿದ್ದ ಚಿರತೆ| ಕೊತ್ತಗಾನಹಳ್ಳಿಯ ಬಳಿ ಚಿರತೆಗಳನ್ನು ಸೆರೆ ಹಿಡಿಯಲು ಇಟ್ಟ ಬೋನ್‌| ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 2 ವರ್ಷದ ಹೆಣ್ಣು ಚಿರತೆ ಸೆರೆ| 

ಮಾಗಡಿ (ಮೇ.22): ಸೋಲೂರು ಹೋಬಳಿ ಕೊತ್ತಗಾನಹಳ್ಳಿ ಬಳಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ 2 ವರ್ಷ ವಯಸ್ಸಿನ ಹೆಣ್ಣು ಚಿರತೆ ಸೆರೆಯಾಗಿದೆ. 

ತಾಲೂಕಿನ ಸೊಲೂರು ಹೋಬಳಿ ಕೊತ್ತಗಾನಹಳ್ಳಿ ಗ್ರಾಮದಲ್ಲಿ ಕಳೆದ ಶನಿವಾರ ಬೆಳಿಗ್ಗೆ 5.30ರ ಸಮಯದಲ್ಲಿ ಮನೆಯ ಕಾಂಪೌಂಡ್‌ನಲ್ಲಿದ್ದ ಗಂಗಮ್ಮ ಎಂಬ ವೃದ್ಧೆಯನ್ನು ಚಿರತೆ ಹೊತ್ತು ಕೊಂಡು ಹೋಗಿತ್ತು. ಈ ಸ್ಥಳಕ್ಕೆ ಅರಣ್ಯ ಸಚಿವ ಆನಂದ್‌ ಸಿಂಗ್‌, ಮಾಗಡಿ ಹಾಗೂ ನೆಲಮಂಗಲ ಶಾಸಕರು ಭೇಟಿ ನೀಡಿದ್ದರು. 

ಚಿರತೆ ದಾಳಿ: ಮೃತರ ಕುಟುಂಬಕ್ಕೆ 7.5 ಲಕ್ಷ ರೂ. ಪರಿಹಾರ, DCM ಅಶ್ವತ್ಥನಾರಾಯಣ

ಕೊತ್ತಗಾನಹಳ್ಳಿಯ ಬಳಿ ಚಿರತೆಗಳನ್ನು ಸೆರೆ ಹಿಡಿಯಲು ಬೋನ್‌ ಇಡುವುದರ ಜೊತೆಗೆ ಸಿಸಿ ಕ್ಯಾಮೆರಾಗಳನ್ನು ಆಳವಡಿಸಲಾಗಿತ್ತು. ಗುರುವಾರ ಬೆಳಿಗ್ಗೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 2 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.
 

PREV
click me!

Recommended Stories

NEET: ನೀಟ್‌ ಬರೆದಿದ್ದ ಕಲಬುರಗಿ ಹುಡ್ಗಿ ಸಾವಿಗೆ ಶರಣು; ಪರೀಕ್ಷೆ ರದ್ದಾದ ಬಳಿಕ ರಾಜ್ಯದಲ್ಲಿ 2ನೇಬಲಿ!
ಇದು ತೊಗಲುಗೊಂಬೆ ಸರ್ಕಾರ, ಯಾವಾಗ ತೊಲಗುತ್ತೋ ಗೊತ್ತಿಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ