ಗಂಗಾವತಿ: ಅಡುಗೆಭಟ್ಟನನ್ನ ತಿಂದು ತೇಗಿದ್ದ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು..!

Suvarna News   | Asianet News
Published : Jan 18, 2021, 09:49 AM ISTUpdated : Jan 18, 2021, 09:50 AM IST
ಗಂಗಾವತಿ: ಅಡುಗೆಭಟ್ಟನನ್ನ ತಿಂದು ತೇಗಿದ್ದ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು..!

ಸಾರಾಂಶ

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ| ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದುರ್ಗಾಬೆಟ್ಟದ ಬಳಿ ಚಿರತೆ ಸೆರೆ| ಈ ಹಿಂದೆ ಚಿರತೆ ಹಿಡಿಯಲು ಅರಣ್ಯ ಇಲಾಖೆ ಗಜ ಪಡೆಯಿಂದ ನಡೆಸಿದ್ದ ಕಾರ್ಯಾಚರಣೆ ವಿಫಲವಾಗಿತ್ತು| 

ಗಂಗಾವತಿ(ಜ.18): ಕಳೆದ ಕೆಲವು ತಿಂಗಳುಗಳಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜನರ ನಿದ್ದೆಗಡೆಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಇದರಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ. 

ಇಂದು(ಸೋಮವಾರ) ಬೆಳಗಿನಜಾವ ತಾಲೂಕಿನ ಆನೆಗೊಂದಿ ದುರ್ಗಾಬೆಟ್ಟದ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 6 ವರ್ಷದ ಗಂಡು ಚಿರತೆ ಬಿದ್ದಿದೆ ಎಂದು ತಿಳಿದು ಬಂದಿದೆ. 

'ಸಿಎಂ ಯಡಿಯೂರಪ್ಪ ವಚನಭ್ರಷ್ಟ ಆಗ್ತಾರೆ ಅನ್ನೋ ಅನುಮಾನ ಇದೆ'

ಕಳೆದ ಎರಡು ತಿಂಗಳ ಹಿಂದೆ ದುರ್ಗಾಬೆಟ್ಟದಲ್ಲಿ ದೇವಸ್ಥಾನದ ಅಡುಗೆದಾರನನ್ನು ಈ ಚಿರತೆ ತಿಂದು ಹಾಕಿತ್ತು. ಇಂದು ಬೆಳಗಿನ ಜಾವ ಚಿರತೆ ಬೋನಿಗೆ ಬಿದ್ದಿದೆ. ಈ ಹಿಂದೆ ಚಿರತೆಯನ್ನ ಹಿಡಿಯಲು ಅರಣ್ಯ ಇಲಾಖೆಯವರು ಗಜ ಪಡೆಯಿಂದ ನಡೆಸಿದ್ದ ಕಾರ್ಯಾಚರಣೆ ವಿಫಲವಾಗಿತ್ತು. ಚಿರತೆಯಿಂದ ಗ್ರಾಮಸ್ಥರಲ್ಲಿ ಭಯ ಮೂಡಿಸಿತ್ತು.
 

PREV
click me!

Recommended Stories

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸುವವರಿಗೆ ಬಿಗ್ ಶಾಕ್, 8 ಲಕ್ಷಕ್ಕೂ ಅಧಿಕ ದಂಡ ವಸೂಲಿ!
ಮತ್ತೆ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಚಿಂತನೆ, ಪ್ರಯಾಣಿಕರ ಆಕ್ರೋಶ, ಹೋರಾಟದ ಎಚ್ಚರಿಕೆ ಕೊಟ್ಟ ಸಂಸದ ಸೂರ್ಯ