ಬೆಂಗ್ಳೂರಿನ ಜಿಗಣಿಯಲ್ಲಿ ಚಿರತೆ ಓಡಾಟ: ಮನೆಯಿಂದ ಹೊರಬಾರದೆ ಜನರ ಪೀಕಲಾಟ..!

Published : Sep 01, 2024, 07:29 PM IST
ಬೆಂಗ್ಳೂರಿನ ಜಿಗಣಿಯಲ್ಲಿ ಚಿರತೆ ಓಡಾಟ: ಮನೆಯಿಂದ ಹೊರಬಾರದೆ ಜನರ ಪೀಕಲಾಟ..!

ಸಾರಾಂಶ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕ್ಯಾಲಸನಹಳ್ಳಿ ಗ್ರಾಮದಲ್ಲಿ. ಜಿಗಣಿ ಸಮೀಪದ ಕ್ಯಾಲಸನಹಳ್ಳಿಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಖಾಸಗಿ ಲೇಔಟ್‌ನಲ್ಲಿ ಚಿರತೆ ಓಡಾಡಿದೆ. ನಸುಕಿನ ಜಾವ 3 ಗಂಟೆಯ ಸುಮಾರಿಗೆ ಚಿರತೆ ಓಡಾಡಿದೆ. ನಾಯಿಗಳು ಬೊಗಳೋ ಶಬ್ಧ ಕೇಳಿ ಸಿಸಿಟಿವಿ ಪರಿಶೀಲನೆ ವೇಳೆ ಚಿರತೆ ಓಡಾಟ ದೃಶ್ಯ ಕಂಡುಬಂದಿದೆ. 

ಬೆಂಗಳೂರು(ಸೆ.01):  ಚಿರತೆಯೊಂದು ಕಾಡಿನಿಂದ ನಾಡಿಗೆ ಬಂದಿದೆ. ಹೌದು, ಗ್ರಾಮದ ಖಾಸಗಿ ಬಡಾವಣೆಯಲ್ಲಿ ಚಿರತೆ ಬಿಂದಾಸ್ ಆಗಿ ಓಡಾಟ ನಡೆಸಿದೆ. ಸಿಸಿಟಿವಿಯಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ. ಚಿರತೆಯ ಬಿಂದಾಸ್‌ ಓಡಾಟ ಕಂಡು ಜನರು ಬೆಚ್ಚಿಬಿದ್ದಿದ್ದಾರೆ. 

ಈ ಘಟನೆ ನಡೆದಿರೋದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕ್ಯಾಲಸನಹಳ್ಳಿ ಗ್ರಾಮದಲ್ಲಿ. ಜಿಗಣಿ ಸಮೀಪದ ಕ್ಯಾಲಸನಹಳ್ಳಿಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. 

ಚಾಮರಾಜನಗರದಲ್ಲಿ ಚಿರತೆ ದಾಳಿಗೆ ಹಸು ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಖಾಸಗಿ ಲೇಔಟ್‌ನಲ್ಲಿ ಚಿರತೆ ಓಡಾಡಿದೆ. ನಸುಕಿನ ಜಾವ 3 ಗಂಟೆಯ ಸುಮಾರಿಗೆ ಚಿರತೆ ಓಡಾಡಿದೆ. ನಾಯಿಗಳು ಬೊಗಳೋ ಶಬ್ಧ ಕೇಳಿ ಸಿಸಿಟಿವಿ ಪರಿಶೀಲನೆ ವೇಳೆ ಚಿರತೆ ಓಡಾಟ ದೃಶ್ಯ ಕಂಡುಬಂದಿದೆ. 

ಚಿರತೆ ಭಯದಲ್ಲಿರುವ ಗ್ರಾಮಸ್ಥರು ಮನೆಯಿಂದ ಹೊರಬಾರದೆ ಆತಂಕದಲ್ಲಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ದೌಡಾಯಿಸಿದ್ದಾರೆ. 

PREV
Read more Articles on
click me!

Recommended Stories

Phone Tapping: ಡಿಕೆಶಿ ಮೇಲೆ ಕಣ್ಣಿಟ್ಟಿಲ್ಲ, ಇದೆಲ್ಲಾ ವಿಪಕ್ಷಗಳ ಹತಾಶೆಯ ಹೇಳಿಕೆ - ಸಿದ್ದರಾಮಯ್ಯ ಗರಂ
ಮುಳ್ಳಯ್ಯನಗಿರಿ ಮರಗಳಲ್ಲಿ ನೇತಾಡುತ್ತಿವೆ ಮಡಿಕೆ; ಗುಡ್ಡದಲ್ಲಿ ಕಲ್ಲಿನ ಗೋಪುರ ಕಟ್ಟುವ ಬದಲು, ಮರಗಳಿಗೆ ಮಡಿಕೆ ಕಟ್ಟಿ!