ಬಾಂಗ್ಲಾದೇಶದಲ್ಲಿನ ಹಿಂದೂಗಳ ಪರಿಸ್ಥಿತಿ ಭಾರತದಲ್ಲಿ ಬರದಿರಲಿ: ರಾಜಶೇಖರಾನಂದ ಶ್ರೀ

Published : Dec 14, 2024, 07:54 PM ISTUpdated : Dec 18, 2024, 08:18 AM IST
ಬಾಂಗ್ಲಾದೇಶದಲ್ಲಿನ ಹಿಂದೂಗಳ ಪರಿಸ್ಥಿತಿ ಭಾರತದಲ್ಲಿ ಬರದಿರಲಿ:  ರಾಜಶೇಖರಾನಂದ ಶ್ರೀ

ಸಾರಾಂಶ

ಬಾಂಗ್ಲಾದ ಜೈಲಿನಲ್ಲಿದ್ದ ಉಗ್ರಗಾಮಿ ಸಂಘಟನೆಯ ವ್ಯಕ್ತಿಯನ್ನು ಬಿಡುಗಡೆಗೊಳಿಸಲಾಗಿದೆ. ಭಾರತ ಎಲ್ಲವನ್ನೂ ಸೂಕ್ಷ್ಮವಾಗಿ ವೀಕ್ಷಿಸುತ್ತಿದ್ದು, ಹಿಂದೂಗಳ ಮೇಲೆ ಬಾಂಗ್ಲಾದಲ್ಲಿ " ದೌರ್ಜನ್ಯ ಅತಿರೇಕಕ್ಕೆ ಹೋದರೆ ಭಾರತ ಖಂಡಿತ ಸುಮ್ಮನಿರುವುದಿಲ್ಲ:  ರಾಜಶೇಖರಾನಂದ ಸ್ವಾಮೀಜಿ 

ಭಟ್ಕಳ(ಡಿ.14):  ಹಿಂದೂ ಸಮಾಜವನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬೇಡಿ. ಬಾಂಗ್ಲಾದ ಹಿಂದೂ ಸಮಾಜದ ರಕ್ಷಣೆಗೆ ಭಾರತದ ಹಿಂದೂಗಳು ನಿರಂತರ ಬೆಂಬಲ ಸೂಚಿಸಬೇಕು. ಬಾಂಗ್ಲಾದಲ್ಲಿ ಹಿಂದೂಗಳ ಪರಿಸ್ಥಿತಿ ಆದಂತೆ ಭಾರತದಲ್ಲಿ ಎಂದಿಗೂ ಆಗಲು ಬಿಡಬಾರದು ಎಂದು ಮಂಗಳೂರು ಗುರುಪುರದ ವಜ್ರದೇಹಿ ಸಂಸ್ಥಾನದ ರಾಜಶೇಖರಾನಂದ ಸ್ವಾಮೀಜಿ ತಿಳಿಸಿದರು. 

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಶುಕ್ರವಾರ ಪಟ್ಟಣದ ರಿಕ್ಷಾ ಚಾಲಕರು. ಮಾಲೀಕರು ಗಣೇಶೋತ್ಸವ ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಏರ್ಪಡಿಸಿದ್ದ ಬೃಹತ್‌ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿ, ಬಾಂಗ್ಲಾದಲ್ಲಿ ನಿರಂತರವಾಗಿ ಹಿಂದೂಗಳ ಮೇಲೆ ದೌರ್ಜನ್ಯ, ಅತ್ಯಾಚಾರದಂತಹ ಪ್ರಕರಣ ನಡೆಯುತ್ತಿದೆ. ಹೊಸ ಅಧ್ಯಕ್ಷ ಅಧಿಕಾರ ವಹಿಸಿಕೊಂಡ ನಂತರ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಶಾಂತಿಮಂತ್ರ ಹೇಳಿದ. ಊಟ ಹಾಕಿದ ಇಸ್ತಾನ್ ಮುಖ್ಯಸ್ಥರನ್ನೇ ಬಾಂಗ್ಲಾದಲ್ಲಿ ಭಯೋತ್ಪಾದಕರೆಂಬ ಹಣೆಪಟ್ಟಿ ಕಟ್ಟಿ ಬಂಧಿಸಲಾಗಿದೆ. ದೌರ್ಜನ್ಯ ನಡೆಸುವ ಅಲ್ಲಿನ ಜನರಿಗೆ ಮತ್ತು ಸರ್ಕಾರಕ್ಕೆ ಪಾಠ ಕಲಿಸದೇ ಬಿಡುವುದಿಲ್ಲ ಎಂದ ಸ್ವಾಮೀಜಿ, ಹಿಂದೂಗಳು ಒಗ್ಗಟ್ಟಾಗಿ ಸದೃಢರಾಗಬೇಕು. ಭಾರತದಲ್ಲಿ ನಾವು ಎಂದಿಗೂ ಅಲ್ಪಸಂಖ್ಯಾತರಾಗಬಾರದು ಎಂದರು. 

ಉತ್ತರಕನ್ನಡದಲ್ಲಿ ಮತ್ತೊಂದು ಅವಘಡ: ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಂಚಾಲಕ ಕಾರ್ಕಳದ ಶ್ರೀಕಾಂತ ಶೆಟ್ಟಿ ಮಾತನಾಡಿ, ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಅತ್ಯಾಚಾರ, ಕೊಲೆ, ಸುಲಿಗೆ, ದೌರ್ಜನ್ಯ ನಡೆಯುತ್ತಿದ್ದರೂ ಮಾನವ ಹಕ್ಕು ಸಂಘಟನೆಗಳು, ಸೆಲೆಬ್ರೆಟಿಗಳು ಬಾಯಿ ಮುಚ್ಚಿಕೊಂಡು ಕುಳಿತಿದ್ದಾರೆ. ಬಾಂಗ್ಲಾದ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಹಿಂದೂ ಸಂಘಟನೆಗಳು ಮಾತ್ರ ಖಂಡಿಸುತ್ತಿವೆ. ಅಲ್ಲಿನ ಹಿಂದೂಗಳಿಗೆ ಪ್ರತ್ಯೇಕ ದೇಶಕ್ಕೆ ಒತ್ತಾಯಿಸಬೇಕು ಎಂದರು. 

ಅಧ್ಯಕ್ಷತೆ ವಹಿಸಿದ್ದ ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ಗೋವಿಂದ ಖಾರ್ವಿ ಮಾತನಾಡಿದರು. ಯಮುನಾ ದಿನೇಶ ನಾಯ್ಕ ಪ್ರಾರ್ಥಿಸಿದರು. ಉಮೇಶ ಮುಂಡಳ್ಳಿ ಸಂಘಟನಾ ಗೀತೆ ಹಾಡಿದರು. ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ರಾಮಕೃಷ್ಣ ನಾಯ್ಕ ಸ್ವಾಗತಿಸಿದರು. 

ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಜಯಂತ ನಾಯ್ಕ ಬೆಣಂದೂರು ವಂದಿಸಿದರು. ಹಿಂದೂ ಜಾಗರಣಾ ವೇದಿಕೆಯ ಸಹಸಂಚಾಲಕ ನಾಗೇಶ ನಾಯ್ಕ ಮನವಿ ಓದಿದರು. ಶಿಕ್ಷಕ ನಾರಾಯಣ ನಾಯ್ಕ ನಿರೂಪಿಸಿದರು. ಸಭಾ ಕಾರ್ಯಕ್ರಮದ ಪೂರ್ವದಲ್ಲಿ ಚೆನ್ನಪಟ್ಟಣ ಹನುಮಂತ ದೇವಸ್ಥಾನದಿಂದ ಬೃಹತ್ ಮೆರವಣಿಗೆ ನಡೆಯಿತು. ಸಾವಿರಾರು ಪಾಲ್ಗೊಂಡಿದ್ದರು. 

ಕರಾವಳಿಗೆ ಬಿಗ್‌ ನ್ಯೂಸ್‌. ಭಾರತೀಯ ರೈಲ್ವೇಸ್‌ನೊಂದಿಗೆ ಕೊಂಕಣ್‌ ರೈಲ್ವೇ ವಿಲೀನಕ್ಕೆ

ಹಿಂದೂಗಳು ಅಂಗಡಿಗಳು ಬಂದ್: 

ಪ್ರತಿಭಟನೆಯ ಹಿನ್ನೆಲೆ ಭಟ್ಕಳ ಪಟ್ಟಣ ಹಾಗೂ ಶಿರಾಲಿಯಲ್ಲಿ ಶುಕ್ರವಾರ ಹಿಂದೂಗಳು ಅಂಗಡಿಗಳನ್ನು ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. 

ಬಾಂಗ್ಲಾದ ಜೈಲಿನಲ್ಲಿದ್ದ ಉಗ್ರಗಾಮಿ ಸಂಘಟನೆಯ ವ್ಯಕ್ತಿಯನ್ನು ಬಿಡುಗಡೆಗೊಳಿಸಲಾಗಿದೆ. ಭಾರತ ಎಲ್ಲವನ್ನೂ ಸೂಕ್ಷ್ಮವಾಗಿ ವೀಕ್ಷಿಸುತ್ತಿದ್ದು, ಹಿಂದೂಗಳ ಮೇಲೆ ಬಾಂಗ್ಲಾದಲ್ಲಿ " ದೌರ್ಜನ್ಯ ಅತಿರೇಕಕ್ಕೆ ಹೋದರೆ ಭಾರತ ಖಂಡಿತ ಸುಮ್ಮನಿರುವುದಿಲ್ಲ ಎಂದು ರಾಜಶೇಖರಾನಂದ ಸ್ವಾಮೀಜಿ ತಿಳಿಸಿದ್ದಾರೆ. 

PREV
Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!